Homeಸಿನಿಮಾಕ್ರೀಡೆ4 ಎಸೆತಗಳಲ್ಲಿ 4 ವಿಕೆಟ್!: ದಾಖಲೆ ಬರೆದ ಕನ್ನಡದ ಹುಡುಗಿ ಅನುರಾಧ ದೊಡ್ಡಬಳ್ಳಾಪುರ

4 ಎಸೆತಗಳಲ್ಲಿ 4 ವಿಕೆಟ್!: ದಾಖಲೆ ಬರೆದ ಕನ್ನಡದ ಹುಡುಗಿ ಅನುರಾಧ ದೊಡ್ಡಬಳ್ಳಾಪುರ

ಅನುರಾಧ ದೊಡ್ಡಬಳ್ಳಾಪುರ 3 ಒವರ್‌ಗಳಲ್ಲಿ ಕೇವಲ 1 ರನ್ ನೀಡಿ  5 ವಿಕೆಟ್‌ಗಳನ್ನು ತನ್ನ ಬುಟ್ಟಿಗೆ ಹಾಕಿಕೊಂಡಿದ್ದಾರೆ. ಇದು ಕೂಡ ದಾಖಲೆ ಪಟ್ಟಿಗೆ ಸೇರಿದೆ.

- Advertisement -
- Advertisement -

ಕರ್ನಾಟಕದ ಮಾಜಿ ಆಟಗಾರ್ತಿ ಮತ್ತು ಹಾಲಿ ಜರ್ಮನಿ ತಂಡದ ನಾಯಕಿ ಅನುರಾಧ ದೊಡ್ಡಬಳ್ಳಾಪುರ ಆಸ್ಟ್ರಿಯಾ ವಿರುದ್ಧದ ಮಹಿಳಾ ಟಿ20 ಪಂದ್ಯದಲ್ಲಿ 4 ಎಸೆತಗಳಲ್ಲಿ 4 ವಿಕೆಟ್ ಗಳಿಸುವ ಮೂಲಕ ವಿಶ್ವದಾಖಲೆ ಸ್ಥಾಪಿಸಿದ್ದಾರೆ.

ಆಗಸ್ಟ್ 14ರಂದು ಲೋಯರ್ ಆಸ್ಟ್ರಿಯಾದಲ್ಲಿ ನಡೆದ ನಾಲ್ಕನೇ ಮಹಿಳಾ ಟಿ20 ಪಂದ್ಯದಲ್ಲಿ ಅವರು ಈ ಸಾಧನೆ ಮಾಡಿದ್ದಾರೆ. ಅವರ ಈ ಅಮೋಘ ಆಟದ ನೆರವಿನಿಂದ ಜರ್ಮನಿಯು ಆಸ್ಟ್ರಿಯಾವನ್ನು 137 ರನ್‌ಗಳಿಂದ ಮಣಿಸಿದೆ. ಆ ಮೂಲಕ 4 ಎಸೆತಗಳಲ್ಲಿ 4 ವಿಕೆಟ್ ಪಡೆದ ಪ್ರಥಮ ಮಹಿಳಾ ಆಟಗಾರ್ತಿ ಎಂಬ ಕೀರ್ತಿಗೆ ಅನುರಾಧ ದೊಡ್ಡಬಳ್ಳಾಪುರ ಭಾಜನರಾಗಿದ್ದಾರೆ.

ಶ್ರೀಲಂಕಾದ ಲಸಿತ್ ಮಾಲಿಂಗ ಮತ್ತು ಆಫ್ಘಾನಿಸ್ಥಾನದ ರಶೀದ್‌ ಖಾನ್‌ರವರ ಈ ಸಾಧನೆಯ ಅಪರೂಪದ ಪಟ್ಟಿಗೆ 33 ವರ್ಷದ ಅನುರಾಧ ದೊಡ್ಡಬಳ್ಳಾಪುರ ಸೇರಿದ್ದಾರೆ. ಲಸಿತ್ ಮಾಲಿಂಗ 2007ರ ಐಸಿಸಿ ವಿಶ್ವಕಪ್‌ ಸಂದರ್ಭದಲ್ಲಿ ದಕ್ಷಿಣ ಆಫ್ರಿಕಾ ತಂಡದ ವಿರುದ್ಧ 4 ಎಸೆತಗಳಲ್ಲಿ 4 ವಿಕೆಟ್ ಗಳಿಸಿ ಸಾಧನೆಗೈದರೆ, 2019ರ ಐರ್ಲೆಂಡ್ ವಿರುದ್ಧ ಟಿ20 ಪಂದ್ಯದಲ್ಲಿ ರಶೀದ್ ಖಾನ್ 4 ಎಸೆತಗಳಲ್ಲಿ 4 ವಿಕೆಟ್ ಪಡೆದಿದ್ದರು.

ಶುಕ್ರವಾರ ನಡೆದ ಪಂದ್ಯದಲ್ಲಿ ಜರ್ಮನಿ 20 ಓವರ್‌ಗಳಲ್ಲಿ ವಿಕೆಟ್ ನಷ್ಟವಿಲ್ಲದೆ 198 ರನ್ ಗಳಿಸಿದರೆ, ಉತ್ತರವಾಗಿ ಆಸ್ಟ್ರಿಯಾ 20 ಓವರ್‌ಗಳಲ್ಲಿ 9 ವಿಕೆಟ್ ಕಳೆದುಕೊಂಡು 61 ರನ್ ಗಳಿಸಲಷ್ಟೇ ಸಾಧ್ಯವಾಯಿತು. ಆಸ್ಟ್ರಿಯಾದ ಜೋ-ಆಂಟೊನೆಟ್ ಸ್ಟಿಗ್ಲಿಟ್ಜ್ (1), ಟಗ್ಸೆ ಕಜಾಂಸಿ (0), ಅನಿಷಾ ನೂಕಲಾ (0) ಮತ್ತು ಪ್ರಿಯಾ ಸಾಬು (0) ಅನುರಾಧ ದಾಳಿಗೆ ತತ್ತರಿಸಿದ ಆಟಗಾರರಾಗಿದ್ದಾರೆ.

ಅನುರಾಧ ದೊಡ್ಡಬಳ್ಳಾಪುರ 3 ಒವರ್‌ಗಳಲ್ಲಿ ಕೇವಲ 1 ರನ್ ನೀಡಿ  5 ವಿಕೆಟ್‌ಗಳನ್ನು ತನ್ನ ಬುಟ್ಟಿಗೆ ಹಾಕಿಕೊಂಡಿದ್ದಾರೆ. ಇದು ಕೂಡ ದಾಖಲೆ ಪಟ್ಟಿಗೆ ಸೇರಿದೆ.

ಈ ಹಿಂದೆ ಕರ್ನಾಟಕ ತಂಡದ ಪರವಾಗಿದ್ದ ಆಡಿದ್ದ ಅನುರಾಧ, ಮಧ್ಯಮವೇಗಿಯಾಗಿ ಹೆಸರು ಗಳಿಸಿದ್ದರು. ಈಗ ಜರ್ಮನಿ ತಂಡವನ್ನು ಮುನ್ನೆಡೆಸುತ್ತಿದ್ದು ವಿಶಿಷ್ಠ ಸಾಧನೆ ಮೂಲಕ ವಿಶ್ವದ ಗಮನ ಸೆಳೆದಿದ್ದಾರೆ.


ಇದನ್ನೂ ಓದಿ: ಅಂತರಾಷ್ಟ್ರೀಯ ಕ್ರಿಕೆಟ್‍ನಿಂದ ನಿವೃತ್ತಿ ಘೋಷಿಸಿದ ಧೋನಿ-ರೈನಾ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...