Homeಎಕಾನಮಿನೋಟು ಅಮಾನ್ಯೀಕರಣಕ್ಕೆ 4 ವರ್ಷ!; #SpeakUpAgainstDeMoDisaster ಟ್ರೆಂಡಿಂಗ್!

ನೋಟು ಅಮಾನ್ಯೀಕರಣಕ್ಕೆ 4 ವರ್ಷ!; #SpeakUpAgainstDeMoDisaster ಟ್ರೆಂಡಿಂಗ್!

ಕಪ್ಪ ಹಣ ಇಟ್ಟುಕೊಂಡಿರುವ ಕುಳಗಳಿಗೆ ಕಷ್ಟವಾಗಲಿದೆ ಎಂದು ಹೇಳಿಕೊಂಡು ಜಾರಿ ಮಾಡಿದ ಈ 'ಡಿಮೊನೋಟೈಸೇಷನ್' ಮಧ್ಯಮವರ್ಗ ಮತ್ತು ಕೆಳವರ್ಗದ ಬಡವರ ಬದುಕನ್ನು ಬೀದಿಗೆಳೆದಿತ್ತು

- Advertisement -
- Advertisement -

ನರೇಂದ್ರ ಮೋದಿ ನೇತೃತ್ವದ ಘನ ಸರ್ಕಾರ ನೋಟು ಅಮಾನ್ಯೀಕರಣ ಮಾಡಿ ಇಂದಿಗೆ 4 ವರ್ಷಗಳು ತುಂಬಿದೆ. ಹಳೆಯ ನೋಟುಗಳನ್ನು ಅಮಾನ್ಯ ಮಾಡಿದ ಘಟನೆ ಹಳತಾಗಿರಬಹುದು, ಆದರೆ ಅದರ ಪರಿಣಾಮಗಳು ಇನ್ನೂ ಮಾಸಿಲ್ಲ. ಕಪ್ಪ ಹಣ ಇಟ್ಟುಕೊಂಡಿರುವ ಕುಳಗಳಿಗೆ ಕಷ್ಟವಾಗಲಿದೆ ಎಂದು ಹೇಳಿಕೊಂಡು ಜಾರಿ ಮಾಡಿದ ಈ ‘ಡಿಮೊನೋಟೈಸೇಷನ್’, ಮಧ್ಯಮವರ್ಗ ಮತ್ತು ಕೆಳವರ್ಗದ ಬಡವರ ಬದುಕನ್ನು ಬೀದಿಗೆಳೆದಿತ್ತು.

ಈಗಾಗಲೇ ಬೀದಿಯಲ್ಲಿದ್ದ ಜನರಂತೂ ಇನ್ನೂ ಸಂಕಷ್ಟಕ್ಕೆ ಸಿಲುಕಬೇಕಾಯಿತು. ಇವರೆಲ್ಲಾ ಒಂದೊತ್ತು ಕೂಳಿಗೂ ಕಾಸಿಲ್ಲದೇ ಪರದಾಡುತ್ತಿರುವಾಗ ನಿಜವಾಗಿಯೂ ಕಪ್ಪು ಹಣ ಇಟ್ಟಿದ್ದವರು ರಾಜಾರೋಷವಾಗಿ 500 ಕೋಟಿ ಖರ್ಚು ಮಾಡಿ ಮದುವೆ, ಸಮಾರಂಭ ಮಾಡಿದರು. ಇನ್ನೂ ಕೆಲವರ ಮನೆಯಲ್ಲಿ ಕಂತೆ ಕಂತೆ ಹೊಸ ನೊಟುಗಳೇ ಪತ್ತೆಯಾದವು. ಈ ಕಾರಣಕ್ಕೆ ಜಾಗತಿಕ ಮಟ್ಟದಲ್ಲಿ ವ್ಯಾಪಕ ವಿರೋಧ ಮತ್ತು ಟೀಕೆಗೆ ಗುರಿಯಾಗಿತ್ತು. ಜೊತೆಗೆ ಇದರಿಂದ ಭಾರತದ ಆರ್ಥಿಕತೆ ಬಲಗೊಳ್ಳುತ್ತದೆ, ಕಪ್ಪು ಹಣ ಹೊರಬರುತ್ತದೆ ಎಂದು ಆಶಾಭಾವನೆ ವ್ಯಕ್ತಪಡಿಸಿ ಬೆಂಬಲಿಸುವವರೂ ಇದ್ದರು.

ಇದನ್ನೂ ಓದಿ: ನೋಟು ನಿಷೇಧದಿಂದ ಉದ್ಯಮಿಯೊಬ್ಬ ಟೀ ಮಾರುವ ಪರಿಸ್ಥಿತಿಗೆ ಬಂದ ಕಥೆ…

ಆದರೆ ಆಗ, ‘ಇದರಿಂದಾದ ಸಮಸ್ಯೆಗಳು ಇನ್ನು 50 ದಿನಗಳಲ್ಲಿ ಬಗೆಹರಿಯದಿದ್ದರೆ ನನ್ನನ್ನು ಜೀವಂತ ಸುಟ್ಟುಬಿಡಿ’ ಎಂದು ಪ್ರಧಾನಿಗಳು ಸ್ಫೋಟಕ ಹೇಳಿಕೆ ನೀಡಿದ್ದರು. ಆಗ ಜನ ನಂಬಿದರು. ಈಗ 4 ವರ್ಷಗಳು ಕಳೆದಿವೆ. ಆದರೆ ಬಡವರು ಇನ್ನಷ್ಟು ಬಡವರಾಗಿದ್ದು ಬಿಟ್ಟರೆ ಇದರಿಂದ ಎಳ್ಳಷ್ಟೂ ಉಪಯೋಗವಾಗಲಿಲ್ಲ ಎಂದು ಆರ್ಥಿಕ ತಜ್ಞರೇ ಹೇಳುತ್ತಾರೆ.

ನೋಟು ಅಮಾನ್ಯೀಕರಣ ಮಾಡಿದ ಈ ದಿನವನ್ನು ಅಂದಿನಿಂದಲೂ ಪ್ರತಿವರ್ಷವೂ ಕರಾಳದಿನವನ್ನಾಗಿ ನೆನಪಿಸಿಕೊಳ್ಳಲಾಗುತ್ತಿದೆ. ಇದರ ಭಾಗವಾಗಿಯೇ ಇಂದು ಟ್ವಿಟ್ಟರ್‌ನಲ್ಲಿ #DeMonetisation, #Black_Day_India_Economy, #SpeakUpAgainstDeMoDisaster  ಎಂದು ಟ್ರೆಂಡಿಂಗ್ ಆಗುತ್ತಿದೆ.

ಇದನ್ನೂ ಓದಿ: ‘ನೋಟು ನಿಷೇಧದಿಂದ ಭಾರತದ ಆರ್ಥಿಕತೆಗೆ ಬಹುದೊಡ್ಡ ಪೆಟ್ಟು’: ನೊಬೆಲ್ ಪುರಸ್ಕೃತೆ ಎಸ್ತಾರ್ ಡುಫ್ಲೋ

ಈ ಹ್ಯಾಶ್‌ಟ್ಯಾಗ್‌ಗಳನ್ನು ಬಳಸಿ ಸಾವಿರಾರು ಜನ ಟ್ವೀಟ್ ಮಾಡಿದ್ದು, ಅಮಾನ್ಯೀಕರಣದ ಸಂದರ್ಭದಲ್ಲಿ ಜನತೆ ಅನುಭವಿಸಿದ ಸಂಕಷ್ಟಗಳನ್ನು ನೆನಪಿಸುವ ವಿಷಯಗಳನ್ನು ಹಂಚಿಕೊಂಡಿದ್ದಾರೆ.

ವಿಜಯ್ ಪ್ರಕಾಶ್ ಎಂಬುವವರು ಟ್ವೀಟ್ ಮಾಡಿ, “ಇದುವರೆಗೂ ಜಗತ್ತು ಕಂಡರಿಯದ ಮೋದಿ ನಿರ್ಮಿತ ಅಮಾನ್ಯೀಕರಣ ವಿಕೋಪದ 4 ನೇ ವರ್ಷದ ವಾರ್ಷಿಕೋತ್ಸವವನ್ನು ನಮ್ಮ ದೇಶ ಆಚರಿಸುತ್ತಿದೆ” ಎಂದು ಬರೆದಿದ್ದಾರೆ.

ಇದನ್ನೂ ಓದಿ: ಮತದಾರರ ಆಲೋಚನಾ ಶಕ್ತಿಯನ್ನು ಕಸಿದುಕೊಂಡ ಮೋದಿ: ಎಚ್ ಎಸ್ ದೊರೆಸ್ವಾಮಿ

ಆಮ್ ಆದ್ಮಿ ಪಕ್ಷ ಟ್ವೀಟ್ ಮಾಡಿ, “ನೆನಪಿಸಿಕೊಳ್ಳಿ, ನವೆಂಬರ್ 8ನ್ನು ನೆನಪಿಸಿಕೊಳ್ಳಿ” ಎಂದು, ‘ಶ್ರೀಮಂತರು ಮಾತ್ರ ಅಳುತ್ತಾರೆ ಎಂದು ಅವರು ಹೇಳಿದ್ದರು’ ಎನ್ನುವ ಶೀರ್ಷಿಕೆಯಿರುವ ವೃದ್ಧರೊಬ್ಬರು ಅಳುತ್ತಿರುವ ಚಿತ್ರವನ್ನು ಹಂಚಿಕೊಂಡಿದೆ.

ರೋಹನ್ ಗುಪ್ತಾ ಟ್ವೀಟ್ ಮಾಡಿ, “ಡಿಮೊನೋಟೈಸೇಷನ್ ಯಶಸ್ವಿಯಾಗಿದ್ದರೆ ಮೋದಿ ಸರ್ಕಾರ ಅದನ್ನು ಏಕೆ ಸಂಭ್ರಮಿಸುತ್ತಿಲ್ಲ?” ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಮೋದಿಯ ಈ ಮೂರು ವೈಫಲ್ಯಗಳ ಕುರಿತು ಹಾರ್ವಡ್ ಬ್ಯುಸಿನೆಸ್ ಸ್ಕೂಲ್ ಅಧ್ಯಯನ ಮಾಡುತ್ತದೆ: ರಾಹುಲ್

ಹೀಗೆ ಸಾವಿರಾರು ಜನರು ತಮ್ಮ ಆಕ್ರೋಶವನ್ನು ಹೊರಹಾಕಿದ್ದಾರೆ. ಆದರೆ ಇಂದಿಗೂ ಇದನ್ನು ಸುಳ್ಳು ಅಂಕಿ ಅಂಶಗಳ ಮೂಲಕ ಸಮರ್ಥಿಸಿಕೊಳ್ಳುವವರಿದ್ದಾರೆ ಎಂದರೆ ಇದಕ್ಕಿಂತಲೂ ದುಸ್ಥಿತಿ ಬೇರೊಂದಿಲ್ಲ.

ನೋಟು ಅಮಾನ್ಯೀಕರಣದ ಫಲಿತಾಂಶಗಳ ವರದಿ ನೀಡಿದ ಆರ್‌ಬಿಐ 99.3% ನೋಟುಗಳು ಬ್ಯಾಂಕಿಗೆ ಬಂದಿದೆ ಎಂದು ಹೇಳಿತ್ತು. ಅಂದರೆ ಕಪ್ಪು ಹಣ ಎಲ್ಲಿ ಸಂಗ್ರಹವಾಗಿದೆ? ಅದು ಯಾಕೆ ಹೊರಬರಲಿಲ್ಲ? ಇದಕ್ಕೆ ಕಾರಣವೇನು ಎನ್ನುವ ಯಾವ ಪ್ರಶ್ನೆಗಳಿಗೂ ನಮ್ಮ ಬಳಿ ಉತ್ತರವಿಲ್ಲ. ಭ್ರಷ್ಟಾಚಾರ ನಿಂತಿದೆಯೇ? ಭಯೋತ್ಪಾದನೆ ನಿಗ್ರಹವಾಗಿದೆಯೇ? ಎಂದರೆ, ಇಲ್ಲ ಹಿಂದೆಂದಿಗಿಂತಲೂ ಹೆಚ್ಚಾಗಿದೆ ಎನ್ನುವುದಕ್ಕೆ ನಮ್ಮ ಮುಂದೆ ಸಾಕಷ್ಟು ಉದಾಹರಣೆಗಳಿವೆ.


ಇದನ್ನೂ ಓದಿ: ಇಂದಿನ ಆಡಳಿತಕ್ಕೆ ಹೋಲಿಸಿದರೆ ತುರ್ತು ಪರಿಸ್ಥಿತಿ ಏನೇನೂ ಅಲ್ಲ: ಪಿ. ಸಾಯಿನಾಥ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...