Homeಎಕಾನಮಿನೋಟು ಅಮಾನ್ಯೀಕರಣಕ್ಕೆ 4 ವರ್ಷ!; #SpeakUpAgainstDeMoDisaster ಟ್ರೆಂಡಿಂಗ್!

ನೋಟು ಅಮಾನ್ಯೀಕರಣಕ್ಕೆ 4 ವರ್ಷ!; #SpeakUpAgainstDeMoDisaster ಟ್ರೆಂಡಿಂಗ್!

ಕಪ್ಪ ಹಣ ಇಟ್ಟುಕೊಂಡಿರುವ ಕುಳಗಳಿಗೆ ಕಷ್ಟವಾಗಲಿದೆ ಎಂದು ಹೇಳಿಕೊಂಡು ಜಾರಿ ಮಾಡಿದ ಈ 'ಡಿಮೊನೋಟೈಸೇಷನ್' ಮಧ್ಯಮವರ್ಗ ಮತ್ತು ಕೆಳವರ್ಗದ ಬಡವರ ಬದುಕನ್ನು ಬೀದಿಗೆಳೆದಿತ್ತು

- Advertisement -
- Advertisement -

ನರೇಂದ್ರ ಮೋದಿ ನೇತೃತ್ವದ ಘನ ಸರ್ಕಾರ ನೋಟು ಅಮಾನ್ಯೀಕರಣ ಮಾಡಿ ಇಂದಿಗೆ 4 ವರ್ಷಗಳು ತುಂಬಿದೆ. ಹಳೆಯ ನೋಟುಗಳನ್ನು ಅಮಾನ್ಯ ಮಾಡಿದ ಘಟನೆ ಹಳತಾಗಿರಬಹುದು, ಆದರೆ ಅದರ ಪರಿಣಾಮಗಳು ಇನ್ನೂ ಮಾಸಿಲ್ಲ. ಕಪ್ಪ ಹಣ ಇಟ್ಟುಕೊಂಡಿರುವ ಕುಳಗಳಿಗೆ ಕಷ್ಟವಾಗಲಿದೆ ಎಂದು ಹೇಳಿಕೊಂಡು ಜಾರಿ ಮಾಡಿದ ಈ ‘ಡಿಮೊನೋಟೈಸೇಷನ್’, ಮಧ್ಯಮವರ್ಗ ಮತ್ತು ಕೆಳವರ್ಗದ ಬಡವರ ಬದುಕನ್ನು ಬೀದಿಗೆಳೆದಿತ್ತು.

ಈಗಾಗಲೇ ಬೀದಿಯಲ್ಲಿದ್ದ ಜನರಂತೂ ಇನ್ನೂ ಸಂಕಷ್ಟಕ್ಕೆ ಸಿಲುಕಬೇಕಾಯಿತು. ಇವರೆಲ್ಲಾ ಒಂದೊತ್ತು ಕೂಳಿಗೂ ಕಾಸಿಲ್ಲದೇ ಪರದಾಡುತ್ತಿರುವಾಗ ನಿಜವಾಗಿಯೂ ಕಪ್ಪು ಹಣ ಇಟ್ಟಿದ್ದವರು ರಾಜಾರೋಷವಾಗಿ 500 ಕೋಟಿ ಖರ್ಚು ಮಾಡಿ ಮದುವೆ, ಸಮಾರಂಭ ಮಾಡಿದರು. ಇನ್ನೂ ಕೆಲವರ ಮನೆಯಲ್ಲಿ ಕಂತೆ ಕಂತೆ ಹೊಸ ನೊಟುಗಳೇ ಪತ್ತೆಯಾದವು. ಈ ಕಾರಣಕ್ಕೆ ಜಾಗತಿಕ ಮಟ್ಟದಲ್ಲಿ ವ್ಯಾಪಕ ವಿರೋಧ ಮತ್ತು ಟೀಕೆಗೆ ಗುರಿಯಾಗಿತ್ತು. ಜೊತೆಗೆ ಇದರಿಂದ ಭಾರತದ ಆರ್ಥಿಕತೆ ಬಲಗೊಳ್ಳುತ್ತದೆ, ಕಪ್ಪು ಹಣ ಹೊರಬರುತ್ತದೆ ಎಂದು ಆಶಾಭಾವನೆ ವ್ಯಕ್ತಪಡಿಸಿ ಬೆಂಬಲಿಸುವವರೂ ಇದ್ದರು.

ಇದನ್ನೂ ಓದಿ: ನೋಟು ನಿಷೇಧದಿಂದ ಉದ್ಯಮಿಯೊಬ್ಬ ಟೀ ಮಾರುವ ಪರಿಸ್ಥಿತಿಗೆ ಬಂದ ಕಥೆ…

ಆದರೆ ಆಗ, ‘ಇದರಿಂದಾದ ಸಮಸ್ಯೆಗಳು ಇನ್ನು 50 ದಿನಗಳಲ್ಲಿ ಬಗೆಹರಿಯದಿದ್ದರೆ ನನ್ನನ್ನು ಜೀವಂತ ಸುಟ್ಟುಬಿಡಿ’ ಎಂದು ಪ್ರಧಾನಿಗಳು ಸ್ಫೋಟಕ ಹೇಳಿಕೆ ನೀಡಿದ್ದರು. ಆಗ ಜನ ನಂಬಿದರು. ಈಗ 4 ವರ್ಷಗಳು ಕಳೆದಿವೆ. ಆದರೆ ಬಡವರು ಇನ್ನಷ್ಟು ಬಡವರಾಗಿದ್ದು ಬಿಟ್ಟರೆ ಇದರಿಂದ ಎಳ್ಳಷ್ಟೂ ಉಪಯೋಗವಾಗಲಿಲ್ಲ ಎಂದು ಆರ್ಥಿಕ ತಜ್ಞರೇ ಹೇಳುತ್ತಾರೆ.

ನೋಟು ಅಮಾನ್ಯೀಕರಣ ಮಾಡಿದ ಈ ದಿನವನ್ನು ಅಂದಿನಿಂದಲೂ ಪ್ರತಿವರ್ಷವೂ ಕರಾಳದಿನವನ್ನಾಗಿ ನೆನಪಿಸಿಕೊಳ್ಳಲಾಗುತ್ತಿದೆ. ಇದರ ಭಾಗವಾಗಿಯೇ ಇಂದು ಟ್ವಿಟ್ಟರ್‌ನಲ್ಲಿ #DeMonetisation, #Black_Day_India_Economy, #SpeakUpAgainstDeMoDisaster  ಎಂದು ಟ್ರೆಂಡಿಂಗ್ ಆಗುತ್ತಿದೆ.

ಇದನ್ನೂ ಓದಿ: ‘ನೋಟು ನಿಷೇಧದಿಂದ ಭಾರತದ ಆರ್ಥಿಕತೆಗೆ ಬಹುದೊಡ್ಡ ಪೆಟ್ಟು’: ನೊಬೆಲ್ ಪುರಸ್ಕೃತೆ ಎಸ್ತಾರ್ ಡುಫ್ಲೋ

ಈ ಹ್ಯಾಶ್‌ಟ್ಯಾಗ್‌ಗಳನ್ನು ಬಳಸಿ ಸಾವಿರಾರು ಜನ ಟ್ವೀಟ್ ಮಾಡಿದ್ದು, ಅಮಾನ್ಯೀಕರಣದ ಸಂದರ್ಭದಲ್ಲಿ ಜನತೆ ಅನುಭವಿಸಿದ ಸಂಕಷ್ಟಗಳನ್ನು ನೆನಪಿಸುವ ವಿಷಯಗಳನ್ನು ಹಂಚಿಕೊಂಡಿದ್ದಾರೆ.

ವಿಜಯ್ ಪ್ರಕಾಶ್ ಎಂಬುವವರು ಟ್ವೀಟ್ ಮಾಡಿ, “ಇದುವರೆಗೂ ಜಗತ್ತು ಕಂಡರಿಯದ ಮೋದಿ ನಿರ್ಮಿತ ಅಮಾನ್ಯೀಕರಣ ವಿಕೋಪದ 4 ನೇ ವರ್ಷದ ವಾರ್ಷಿಕೋತ್ಸವವನ್ನು ನಮ್ಮ ದೇಶ ಆಚರಿಸುತ್ತಿದೆ” ಎಂದು ಬರೆದಿದ್ದಾರೆ.

ಇದನ್ನೂ ಓದಿ: ಮತದಾರರ ಆಲೋಚನಾ ಶಕ್ತಿಯನ್ನು ಕಸಿದುಕೊಂಡ ಮೋದಿ: ಎಚ್ ಎಸ್ ದೊರೆಸ್ವಾಮಿ

ಆಮ್ ಆದ್ಮಿ ಪಕ್ಷ ಟ್ವೀಟ್ ಮಾಡಿ, “ನೆನಪಿಸಿಕೊಳ್ಳಿ, ನವೆಂಬರ್ 8ನ್ನು ನೆನಪಿಸಿಕೊಳ್ಳಿ” ಎಂದು, ‘ಶ್ರೀಮಂತರು ಮಾತ್ರ ಅಳುತ್ತಾರೆ ಎಂದು ಅವರು ಹೇಳಿದ್ದರು’ ಎನ್ನುವ ಶೀರ್ಷಿಕೆಯಿರುವ ವೃದ್ಧರೊಬ್ಬರು ಅಳುತ್ತಿರುವ ಚಿತ್ರವನ್ನು ಹಂಚಿಕೊಂಡಿದೆ.

ರೋಹನ್ ಗುಪ್ತಾ ಟ್ವೀಟ್ ಮಾಡಿ, “ಡಿಮೊನೋಟೈಸೇಷನ್ ಯಶಸ್ವಿಯಾಗಿದ್ದರೆ ಮೋದಿ ಸರ್ಕಾರ ಅದನ್ನು ಏಕೆ ಸಂಭ್ರಮಿಸುತ್ತಿಲ್ಲ?” ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಮೋದಿಯ ಈ ಮೂರು ವೈಫಲ್ಯಗಳ ಕುರಿತು ಹಾರ್ವಡ್ ಬ್ಯುಸಿನೆಸ್ ಸ್ಕೂಲ್ ಅಧ್ಯಯನ ಮಾಡುತ್ತದೆ: ರಾಹುಲ್

ಹೀಗೆ ಸಾವಿರಾರು ಜನರು ತಮ್ಮ ಆಕ್ರೋಶವನ್ನು ಹೊರಹಾಕಿದ್ದಾರೆ. ಆದರೆ ಇಂದಿಗೂ ಇದನ್ನು ಸುಳ್ಳು ಅಂಕಿ ಅಂಶಗಳ ಮೂಲಕ ಸಮರ್ಥಿಸಿಕೊಳ್ಳುವವರಿದ್ದಾರೆ ಎಂದರೆ ಇದಕ್ಕಿಂತಲೂ ದುಸ್ಥಿತಿ ಬೇರೊಂದಿಲ್ಲ.

ನೋಟು ಅಮಾನ್ಯೀಕರಣದ ಫಲಿತಾಂಶಗಳ ವರದಿ ನೀಡಿದ ಆರ್‌ಬಿಐ 99.3% ನೋಟುಗಳು ಬ್ಯಾಂಕಿಗೆ ಬಂದಿದೆ ಎಂದು ಹೇಳಿತ್ತು. ಅಂದರೆ ಕಪ್ಪು ಹಣ ಎಲ್ಲಿ ಸಂಗ್ರಹವಾಗಿದೆ? ಅದು ಯಾಕೆ ಹೊರಬರಲಿಲ್ಲ? ಇದಕ್ಕೆ ಕಾರಣವೇನು ಎನ್ನುವ ಯಾವ ಪ್ರಶ್ನೆಗಳಿಗೂ ನಮ್ಮ ಬಳಿ ಉತ್ತರವಿಲ್ಲ. ಭ್ರಷ್ಟಾಚಾರ ನಿಂತಿದೆಯೇ? ಭಯೋತ್ಪಾದನೆ ನಿಗ್ರಹವಾಗಿದೆಯೇ? ಎಂದರೆ, ಇಲ್ಲ ಹಿಂದೆಂದಿಗಿಂತಲೂ ಹೆಚ್ಚಾಗಿದೆ ಎನ್ನುವುದಕ್ಕೆ ನಮ್ಮ ಮುಂದೆ ಸಾಕಷ್ಟು ಉದಾಹರಣೆಗಳಿವೆ.


ಇದನ್ನೂ ಓದಿ: ಇಂದಿನ ಆಡಳಿತಕ್ಕೆ ಹೋಲಿಸಿದರೆ ತುರ್ತು ಪರಿಸ್ಥಿತಿ ಏನೇನೂ ಅಲ್ಲ: ಪಿ. ಸಾಯಿನಾಥ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...