Homeಎಕಾನಮಿನೋಟು ಅಮಾನ್ಯೀಕರಣಕ್ಕೆ 4 ವರ್ಷ!; #SpeakUpAgainstDeMoDisaster ಟ್ರೆಂಡಿಂಗ್!

ನೋಟು ಅಮಾನ್ಯೀಕರಣಕ್ಕೆ 4 ವರ್ಷ!; #SpeakUpAgainstDeMoDisaster ಟ್ರೆಂಡಿಂಗ್!

ಕಪ್ಪ ಹಣ ಇಟ್ಟುಕೊಂಡಿರುವ ಕುಳಗಳಿಗೆ ಕಷ್ಟವಾಗಲಿದೆ ಎಂದು ಹೇಳಿಕೊಂಡು ಜಾರಿ ಮಾಡಿದ ಈ 'ಡಿಮೊನೋಟೈಸೇಷನ್' ಮಧ್ಯಮವರ್ಗ ಮತ್ತು ಕೆಳವರ್ಗದ ಬಡವರ ಬದುಕನ್ನು ಬೀದಿಗೆಳೆದಿತ್ತು

- Advertisement -
- Advertisement -

ನರೇಂದ್ರ ಮೋದಿ ನೇತೃತ್ವದ ಘನ ಸರ್ಕಾರ ನೋಟು ಅಮಾನ್ಯೀಕರಣ ಮಾಡಿ ಇಂದಿಗೆ 4 ವರ್ಷಗಳು ತುಂಬಿದೆ. ಹಳೆಯ ನೋಟುಗಳನ್ನು ಅಮಾನ್ಯ ಮಾಡಿದ ಘಟನೆ ಹಳತಾಗಿರಬಹುದು, ಆದರೆ ಅದರ ಪರಿಣಾಮಗಳು ಇನ್ನೂ ಮಾಸಿಲ್ಲ. ಕಪ್ಪ ಹಣ ಇಟ್ಟುಕೊಂಡಿರುವ ಕುಳಗಳಿಗೆ ಕಷ್ಟವಾಗಲಿದೆ ಎಂದು ಹೇಳಿಕೊಂಡು ಜಾರಿ ಮಾಡಿದ ಈ ‘ಡಿಮೊನೋಟೈಸೇಷನ್’, ಮಧ್ಯಮವರ್ಗ ಮತ್ತು ಕೆಳವರ್ಗದ ಬಡವರ ಬದುಕನ್ನು ಬೀದಿಗೆಳೆದಿತ್ತು.

ಈಗಾಗಲೇ ಬೀದಿಯಲ್ಲಿದ್ದ ಜನರಂತೂ ಇನ್ನೂ ಸಂಕಷ್ಟಕ್ಕೆ ಸಿಲುಕಬೇಕಾಯಿತು. ಇವರೆಲ್ಲಾ ಒಂದೊತ್ತು ಕೂಳಿಗೂ ಕಾಸಿಲ್ಲದೇ ಪರದಾಡುತ್ತಿರುವಾಗ ನಿಜವಾಗಿಯೂ ಕಪ್ಪು ಹಣ ಇಟ್ಟಿದ್ದವರು ರಾಜಾರೋಷವಾಗಿ 500 ಕೋಟಿ ಖರ್ಚು ಮಾಡಿ ಮದುವೆ, ಸಮಾರಂಭ ಮಾಡಿದರು. ಇನ್ನೂ ಕೆಲವರ ಮನೆಯಲ್ಲಿ ಕಂತೆ ಕಂತೆ ಹೊಸ ನೊಟುಗಳೇ ಪತ್ತೆಯಾದವು. ಈ ಕಾರಣಕ್ಕೆ ಜಾಗತಿಕ ಮಟ್ಟದಲ್ಲಿ ವ್ಯಾಪಕ ವಿರೋಧ ಮತ್ತು ಟೀಕೆಗೆ ಗುರಿಯಾಗಿತ್ತು. ಜೊತೆಗೆ ಇದರಿಂದ ಭಾರತದ ಆರ್ಥಿಕತೆ ಬಲಗೊಳ್ಳುತ್ತದೆ, ಕಪ್ಪು ಹಣ ಹೊರಬರುತ್ತದೆ ಎಂದು ಆಶಾಭಾವನೆ ವ್ಯಕ್ತಪಡಿಸಿ ಬೆಂಬಲಿಸುವವರೂ ಇದ್ದರು.

ಇದನ್ನೂ ಓದಿ: ನೋಟು ನಿಷೇಧದಿಂದ ಉದ್ಯಮಿಯೊಬ್ಬ ಟೀ ಮಾರುವ ಪರಿಸ್ಥಿತಿಗೆ ಬಂದ ಕಥೆ…

ಆದರೆ ಆಗ, ‘ಇದರಿಂದಾದ ಸಮಸ್ಯೆಗಳು ಇನ್ನು 50 ದಿನಗಳಲ್ಲಿ ಬಗೆಹರಿಯದಿದ್ದರೆ ನನ್ನನ್ನು ಜೀವಂತ ಸುಟ್ಟುಬಿಡಿ’ ಎಂದು ಪ್ರಧಾನಿಗಳು ಸ್ಫೋಟಕ ಹೇಳಿಕೆ ನೀಡಿದ್ದರು. ಆಗ ಜನ ನಂಬಿದರು. ಈಗ 4 ವರ್ಷಗಳು ಕಳೆದಿವೆ. ಆದರೆ ಬಡವರು ಇನ್ನಷ್ಟು ಬಡವರಾಗಿದ್ದು ಬಿಟ್ಟರೆ ಇದರಿಂದ ಎಳ್ಳಷ್ಟೂ ಉಪಯೋಗವಾಗಲಿಲ್ಲ ಎಂದು ಆರ್ಥಿಕ ತಜ್ಞರೇ ಹೇಳುತ್ತಾರೆ.

ನೋಟು ಅಮಾನ್ಯೀಕರಣ ಮಾಡಿದ ಈ ದಿನವನ್ನು ಅಂದಿನಿಂದಲೂ ಪ್ರತಿವರ್ಷವೂ ಕರಾಳದಿನವನ್ನಾಗಿ ನೆನಪಿಸಿಕೊಳ್ಳಲಾಗುತ್ತಿದೆ. ಇದರ ಭಾಗವಾಗಿಯೇ ಇಂದು ಟ್ವಿಟ್ಟರ್‌ನಲ್ಲಿ #DeMonetisation, #Black_Day_India_Economy, #SpeakUpAgainstDeMoDisaster  ಎಂದು ಟ್ರೆಂಡಿಂಗ್ ಆಗುತ್ತಿದೆ.

ಇದನ್ನೂ ಓದಿ: ‘ನೋಟು ನಿಷೇಧದಿಂದ ಭಾರತದ ಆರ್ಥಿಕತೆಗೆ ಬಹುದೊಡ್ಡ ಪೆಟ್ಟು’: ನೊಬೆಲ್ ಪುರಸ್ಕೃತೆ ಎಸ್ತಾರ್ ಡುಫ್ಲೋ

ಈ ಹ್ಯಾಶ್‌ಟ್ಯಾಗ್‌ಗಳನ್ನು ಬಳಸಿ ಸಾವಿರಾರು ಜನ ಟ್ವೀಟ್ ಮಾಡಿದ್ದು, ಅಮಾನ್ಯೀಕರಣದ ಸಂದರ್ಭದಲ್ಲಿ ಜನತೆ ಅನುಭವಿಸಿದ ಸಂಕಷ್ಟಗಳನ್ನು ನೆನಪಿಸುವ ವಿಷಯಗಳನ್ನು ಹಂಚಿಕೊಂಡಿದ್ದಾರೆ.

ವಿಜಯ್ ಪ್ರಕಾಶ್ ಎಂಬುವವರು ಟ್ವೀಟ್ ಮಾಡಿ, “ಇದುವರೆಗೂ ಜಗತ್ತು ಕಂಡರಿಯದ ಮೋದಿ ನಿರ್ಮಿತ ಅಮಾನ್ಯೀಕರಣ ವಿಕೋಪದ 4 ನೇ ವರ್ಷದ ವಾರ್ಷಿಕೋತ್ಸವವನ್ನು ನಮ್ಮ ದೇಶ ಆಚರಿಸುತ್ತಿದೆ” ಎಂದು ಬರೆದಿದ್ದಾರೆ.

ಇದನ್ನೂ ಓದಿ: ಮತದಾರರ ಆಲೋಚನಾ ಶಕ್ತಿಯನ್ನು ಕಸಿದುಕೊಂಡ ಮೋದಿ: ಎಚ್ ಎಸ್ ದೊರೆಸ್ವಾಮಿ

ಆಮ್ ಆದ್ಮಿ ಪಕ್ಷ ಟ್ವೀಟ್ ಮಾಡಿ, “ನೆನಪಿಸಿಕೊಳ್ಳಿ, ನವೆಂಬರ್ 8ನ್ನು ನೆನಪಿಸಿಕೊಳ್ಳಿ” ಎಂದು, ‘ಶ್ರೀಮಂತರು ಮಾತ್ರ ಅಳುತ್ತಾರೆ ಎಂದು ಅವರು ಹೇಳಿದ್ದರು’ ಎನ್ನುವ ಶೀರ್ಷಿಕೆಯಿರುವ ವೃದ್ಧರೊಬ್ಬರು ಅಳುತ್ತಿರುವ ಚಿತ್ರವನ್ನು ಹಂಚಿಕೊಂಡಿದೆ.

ರೋಹನ್ ಗುಪ್ತಾ ಟ್ವೀಟ್ ಮಾಡಿ, “ಡಿಮೊನೋಟೈಸೇಷನ್ ಯಶಸ್ವಿಯಾಗಿದ್ದರೆ ಮೋದಿ ಸರ್ಕಾರ ಅದನ್ನು ಏಕೆ ಸಂಭ್ರಮಿಸುತ್ತಿಲ್ಲ?” ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಮೋದಿಯ ಈ ಮೂರು ವೈಫಲ್ಯಗಳ ಕುರಿತು ಹಾರ್ವಡ್ ಬ್ಯುಸಿನೆಸ್ ಸ್ಕೂಲ್ ಅಧ್ಯಯನ ಮಾಡುತ್ತದೆ: ರಾಹುಲ್

ಹೀಗೆ ಸಾವಿರಾರು ಜನರು ತಮ್ಮ ಆಕ್ರೋಶವನ್ನು ಹೊರಹಾಕಿದ್ದಾರೆ. ಆದರೆ ಇಂದಿಗೂ ಇದನ್ನು ಸುಳ್ಳು ಅಂಕಿ ಅಂಶಗಳ ಮೂಲಕ ಸಮರ್ಥಿಸಿಕೊಳ್ಳುವವರಿದ್ದಾರೆ ಎಂದರೆ ಇದಕ್ಕಿಂತಲೂ ದುಸ್ಥಿತಿ ಬೇರೊಂದಿಲ್ಲ.

ನೋಟು ಅಮಾನ್ಯೀಕರಣದ ಫಲಿತಾಂಶಗಳ ವರದಿ ನೀಡಿದ ಆರ್‌ಬಿಐ 99.3% ನೋಟುಗಳು ಬ್ಯಾಂಕಿಗೆ ಬಂದಿದೆ ಎಂದು ಹೇಳಿತ್ತು. ಅಂದರೆ ಕಪ್ಪು ಹಣ ಎಲ್ಲಿ ಸಂಗ್ರಹವಾಗಿದೆ? ಅದು ಯಾಕೆ ಹೊರಬರಲಿಲ್ಲ? ಇದಕ್ಕೆ ಕಾರಣವೇನು ಎನ್ನುವ ಯಾವ ಪ್ರಶ್ನೆಗಳಿಗೂ ನಮ್ಮ ಬಳಿ ಉತ್ತರವಿಲ್ಲ. ಭ್ರಷ್ಟಾಚಾರ ನಿಂತಿದೆಯೇ? ಭಯೋತ್ಪಾದನೆ ನಿಗ್ರಹವಾಗಿದೆಯೇ? ಎಂದರೆ, ಇಲ್ಲ ಹಿಂದೆಂದಿಗಿಂತಲೂ ಹೆಚ್ಚಾಗಿದೆ ಎನ್ನುವುದಕ್ಕೆ ನಮ್ಮ ಮುಂದೆ ಸಾಕಷ್ಟು ಉದಾಹರಣೆಗಳಿವೆ.


ಇದನ್ನೂ ಓದಿ: ಇಂದಿನ ಆಡಳಿತಕ್ಕೆ ಹೋಲಿಸಿದರೆ ತುರ್ತು ಪರಿಸ್ಥಿತಿ ಏನೇನೂ ಅಲ್ಲ: ಪಿ. ಸಾಯಿನಾಥ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...