Homeಎಕಾನಮಿನೋಟು ಅಮಾನ್ಯೀಕರಣಕ್ಕೆ 4 ವರ್ಷ!; #SpeakUpAgainstDeMoDisaster ಟ್ರೆಂಡಿಂಗ್!

ನೋಟು ಅಮಾನ್ಯೀಕರಣಕ್ಕೆ 4 ವರ್ಷ!; #SpeakUpAgainstDeMoDisaster ಟ್ರೆಂಡಿಂಗ್!

ಕಪ್ಪ ಹಣ ಇಟ್ಟುಕೊಂಡಿರುವ ಕುಳಗಳಿಗೆ ಕಷ್ಟವಾಗಲಿದೆ ಎಂದು ಹೇಳಿಕೊಂಡು ಜಾರಿ ಮಾಡಿದ ಈ 'ಡಿಮೊನೋಟೈಸೇಷನ್' ಮಧ್ಯಮವರ್ಗ ಮತ್ತು ಕೆಳವರ್ಗದ ಬಡವರ ಬದುಕನ್ನು ಬೀದಿಗೆಳೆದಿತ್ತು

- Advertisement -
- Advertisement -

ನರೇಂದ್ರ ಮೋದಿ ನೇತೃತ್ವದ ಘನ ಸರ್ಕಾರ ನೋಟು ಅಮಾನ್ಯೀಕರಣ ಮಾಡಿ ಇಂದಿಗೆ 4 ವರ್ಷಗಳು ತುಂಬಿದೆ. ಹಳೆಯ ನೋಟುಗಳನ್ನು ಅಮಾನ್ಯ ಮಾಡಿದ ಘಟನೆ ಹಳತಾಗಿರಬಹುದು, ಆದರೆ ಅದರ ಪರಿಣಾಮಗಳು ಇನ್ನೂ ಮಾಸಿಲ್ಲ. ಕಪ್ಪ ಹಣ ಇಟ್ಟುಕೊಂಡಿರುವ ಕುಳಗಳಿಗೆ ಕಷ್ಟವಾಗಲಿದೆ ಎಂದು ಹೇಳಿಕೊಂಡು ಜಾರಿ ಮಾಡಿದ ಈ ‘ಡಿಮೊನೋಟೈಸೇಷನ್’, ಮಧ್ಯಮವರ್ಗ ಮತ್ತು ಕೆಳವರ್ಗದ ಬಡವರ ಬದುಕನ್ನು ಬೀದಿಗೆಳೆದಿತ್ತು.

ಈಗಾಗಲೇ ಬೀದಿಯಲ್ಲಿದ್ದ ಜನರಂತೂ ಇನ್ನೂ ಸಂಕಷ್ಟಕ್ಕೆ ಸಿಲುಕಬೇಕಾಯಿತು. ಇವರೆಲ್ಲಾ ಒಂದೊತ್ತು ಕೂಳಿಗೂ ಕಾಸಿಲ್ಲದೇ ಪರದಾಡುತ್ತಿರುವಾಗ ನಿಜವಾಗಿಯೂ ಕಪ್ಪು ಹಣ ಇಟ್ಟಿದ್ದವರು ರಾಜಾರೋಷವಾಗಿ 500 ಕೋಟಿ ಖರ್ಚು ಮಾಡಿ ಮದುವೆ, ಸಮಾರಂಭ ಮಾಡಿದರು. ಇನ್ನೂ ಕೆಲವರ ಮನೆಯಲ್ಲಿ ಕಂತೆ ಕಂತೆ ಹೊಸ ನೊಟುಗಳೇ ಪತ್ತೆಯಾದವು. ಈ ಕಾರಣಕ್ಕೆ ಜಾಗತಿಕ ಮಟ್ಟದಲ್ಲಿ ವ್ಯಾಪಕ ವಿರೋಧ ಮತ್ತು ಟೀಕೆಗೆ ಗುರಿಯಾಗಿತ್ತು. ಜೊತೆಗೆ ಇದರಿಂದ ಭಾರತದ ಆರ್ಥಿಕತೆ ಬಲಗೊಳ್ಳುತ್ತದೆ, ಕಪ್ಪು ಹಣ ಹೊರಬರುತ್ತದೆ ಎಂದು ಆಶಾಭಾವನೆ ವ್ಯಕ್ತಪಡಿಸಿ ಬೆಂಬಲಿಸುವವರೂ ಇದ್ದರು.

ಇದನ್ನೂ ಓದಿ: ನೋಟು ನಿಷೇಧದಿಂದ ಉದ್ಯಮಿಯೊಬ್ಬ ಟೀ ಮಾರುವ ಪರಿಸ್ಥಿತಿಗೆ ಬಂದ ಕಥೆ…

ಆದರೆ ಆಗ, ‘ಇದರಿಂದಾದ ಸಮಸ್ಯೆಗಳು ಇನ್ನು 50 ದಿನಗಳಲ್ಲಿ ಬಗೆಹರಿಯದಿದ್ದರೆ ನನ್ನನ್ನು ಜೀವಂತ ಸುಟ್ಟುಬಿಡಿ’ ಎಂದು ಪ್ರಧಾನಿಗಳು ಸ್ಫೋಟಕ ಹೇಳಿಕೆ ನೀಡಿದ್ದರು. ಆಗ ಜನ ನಂಬಿದರು. ಈಗ 4 ವರ್ಷಗಳು ಕಳೆದಿವೆ. ಆದರೆ ಬಡವರು ಇನ್ನಷ್ಟು ಬಡವರಾಗಿದ್ದು ಬಿಟ್ಟರೆ ಇದರಿಂದ ಎಳ್ಳಷ್ಟೂ ಉಪಯೋಗವಾಗಲಿಲ್ಲ ಎಂದು ಆರ್ಥಿಕ ತಜ್ಞರೇ ಹೇಳುತ್ತಾರೆ.

ನೋಟು ಅಮಾನ್ಯೀಕರಣ ಮಾಡಿದ ಈ ದಿನವನ್ನು ಅಂದಿನಿಂದಲೂ ಪ್ರತಿವರ್ಷವೂ ಕರಾಳದಿನವನ್ನಾಗಿ ನೆನಪಿಸಿಕೊಳ್ಳಲಾಗುತ್ತಿದೆ. ಇದರ ಭಾಗವಾಗಿಯೇ ಇಂದು ಟ್ವಿಟ್ಟರ್‌ನಲ್ಲಿ #DeMonetisation, #Black_Day_India_Economy, #SpeakUpAgainstDeMoDisaster  ಎಂದು ಟ್ರೆಂಡಿಂಗ್ ಆಗುತ್ತಿದೆ.

ಇದನ್ನೂ ಓದಿ: ‘ನೋಟು ನಿಷೇಧದಿಂದ ಭಾರತದ ಆರ್ಥಿಕತೆಗೆ ಬಹುದೊಡ್ಡ ಪೆಟ್ಟು’: ನೊಬೆಲ್ ಪುರಸ್ಕೃತೆ ಎಸ್ತಾರ್ ಡುಫ್ಲೋ

ಈ ಹ್ಯಾಶ್‌ಟ್ಯಾಗ್‌ಗಳನ್ನು ಬಳಸಿ ಸಾವಿರಾರು ಜನ ಟ್ವೀಟ್ ಮಾಡಿದ್ದು, ಅಮಾನ್ಯೀಕರಣದ ಸಂದರ್ಭದಲ್ಲಿ ಜನತೆ ಅನುಭವಿಸಿದ ಸಂಕಷ್ಟಗಳನ್ನು ನೆನಪಿಸುವ ವಿಷಯಗಳನ್ನು ಹಂಚಿಕೊಂಡಿದ್ದಾರೆ.

ವಿಜಯ್ ಪ್ರಕಾಶ್ ಎಂಬುವವರು ಟ್ವೀಟ್ ಮಾಡಿ, “ಇದುವರೆಗೂ ಜಗತ್ತು ಕಂಡರಿಯದ ಮೋದಿ ನಿರ್ಮಿತ ಅಮಾನ್ಯೀಕರಣ ವಿಕೋಪದ 4 ನೇ ವರ್ಷದ ವಾರ್ಷಿಕೋತ್ಸವವನ್ನು ನಮ್ಮ ದೇಶ ಆಚರಿಸುತ್ತಿದೆ” ಎಂದು ಬರೆದಿದ್ದಾರೆ.

ಇದನ್ನೂ ಓದಿ: ಮತದಾರರ ಆಲೋಚನಾ ಶಕ್ತಿಯನ್ನು ಕಸಿದುಕೊಂಡ ಮೋದಿ: ಎಚ್ ಎಸ್ ದೊರೆಸ್ವಾಮಿ

ಆಮ್ ಆದ್ಮಿ ಪಕ್ಷ ಟ್ವೀಟ್ ಮಾಡಿ, “ನೆನಪಿಸಿಕೊಳ್ಳಿ, ನವೆಂಬರ್ 8ನ್ನು ನೆನಪಿಸಿಕೊಳ್ಳಿ” ಎಂದು, ‘ಶ್ರೀಮಂತರು ಮಾತ್ರ ಅಳುತ್ತಾರೆ ಎಂದು ಅವರು ಹೇಳಿದ್ದರು’ ಎನ್ನುವ ಶೀರ್ಷಿಕೆಯಿರುವ ವೃದ್ಧರೊಬ್ಬರು ಅಳುತ್ತಿರುವ ಚಿತ್ರವನ್ನು ಹಂಚಿಕೊಂಡಿದೆ.

ರೋಹನ್ ಗುಪ್ತಾ ಟ್ವೀಟ್ ಮಾಡಿ, “ಡಿಮೊನೋಟೈಸೇಷನ್ ಯಶಸ್ವಿಯಾಗಿದ್ದರೆ ಮೋದಿ ಸರ್ಕಾರ ಅದನ್ನು ಏಕೆ ಸಂಭ್ರಮಿಸುತ್ತಿಲ್ಲ?” ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಮೋದಿಯ ಈ ಮೂರು ವೈಫಲ್ಯಗಳ ಕುರಿತು ಹಾರ್ವಡ್ ಬ್ಯುಸಿನೆಸ್ ಸ್ಕೂಲ್ ಅಧ್ಯಯನ ಮಾಡುತ್ತದೆ: ರಾಹುಲ್

ಹೀಗೆ ಸಾವಿರಾರು ಜನರು ತಮ್ಮ ಆಕ್ರೋಶವನ್ನು ಹೊರಹಾಕಿದ್ದಾರೆ. ಆದರೆ ಇಂದಿಗೂ ಇದನ್ನು ಸುಳ್ಳು ಅಂಕಿ ಅಂಶಗಳ ಮೂಲಕ ಸಮರ್ಥಿಸಿಕೊಳ್ಳುವವರಿದ್ದಾರೆ ಎಂದರೆ ಇದಕ್ಕಿಂತಲೂ ದುಸ್ಥಿತಿ ಬೇರೊಂದಿಲ್ಲ.

ನೋಟು ಅಮಾನ್ಯೀಕರಣದ ಫಲಿತಾಂಶಗಳ ವರದಿ ನೀಡಿದ ಆರ್‌ಬಿಐ 99.3% ನೋಟುಗಳು ಬ್ಯಾಂಕಿಗೆ ಬಂದಿದೆ ಎಂದು ಹೇಳಿತ್ತು. ಅಂದರೆ ಕಪ್ಪು ಹಣ ಎಲ್ಲಿ ಸಂಗ್ರಹವಾಗಿದೆ? ಅದು ಯಾಕೆ ಹೊರಬರಲಿಲ್ಲ? ಇದಕ್ಕೆ ಕಾರಣವೇನು ಎನ್ನುವ ಯಾವ ಪ್ರಶ್ನೆಗಳಿಗೂ ನಮ್ಮ ಬಳಿ ಉತ್ತರವಿಲ್ಲ. ಭ್ರಷ್ಟಾಚಾರ ನಿಂತಿದೆಯೇ? ಭಯೋತ್ಪಾದನೆ ನಿಗ್ರಹವಾಗಿದೆಯೇ? ಎಂದರೆ, ಇಲ್ಲ ಹಿಂದೆಂದಿಗಿಂತಲೂ ಹೆಚ್ಚಾಗಿದೆ ಎನ್ನುವುದಕ್ಕೆ ನಮ್ಮ ಮುಂದೆ ಸಾಕಷ್ಟು ಉದಾಹರಣೆಗಳಿವೆ.


ಇದನ್ನೂ ಓದಿ: ಇಂದಿನ ಆಡಳಿತಕ್ಕೆ ಹೋಲಿಸಿದರೆ ತುರ್ತು ಪರಿಸ್ಥಿತಿ ಏನೇನೂ ಅಲ್ಲ: ಪಿ. ಸಾಯಿನಾಥ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...