Homeಎಕಾನಮಿನೋಟು ಅಮಾನ್ಯೀಕರಣಕ್ಕೆ 4 ವರ್ಷ!; #SpeakUpAgainstDeMoDisaster ಟ್ರೆಂಡಿಂಗ್!

ನೋಟು ಅಮಾನ್ಯೀಕರಣಕ್ಕೆ 4 ವರ್ಷ!; #SpeakUpAgainstDeMoDisaster ಟ್ರೆಂಡಿಂಗ್!

ಕಪ್ಪ ಹಣ ಇಟ್ಟುಕೊಂಡಿರುವ ಕುಳಗಳಿಗೆ ಕಷ್ಟವಾಗಲಿದೆ ಎಂದು ಹೇಳಿಕೊಂಡು ಜಾರಿ ಮಾಡಿದ ಈ 'ಡಿಮೊನೋಟೈಸೇಷನ್' ಮಧ್ಯಮವರ್ಗ ಮತ್ತು ಕೆಳವರ್ಗದ ಬಡವರ ಬದುಕನ್ನು ಬೀದಿಗೆಳೆದಿತ್ತು

- Advertisement -
- Advertisement -

ನರೇಂದ್ರ ಮೋದಿ ನೇತೃತ್ವದ ಘನ ಸರ್ಕಾರ ನೋಟು ಅಮಾನ್ಯೀಕರಣ ಮಾಡಿ ಇಂದಿಗೆ 4 ವರ್ಷಗಳು ತುಂಬಿದೆ. ಹಳೆಯ ನೋಟುಗಳನ್ನು ಅಮಾನ್ಯ ಮಾಡಿದ ಘಟನೆ ಹಳತಾಗಿರಬಹುದು, ಆದರೆ ಅದರ ಪರಿಣಾಮಗಳು ಇನ್ನೂ ಮಾಸಿಲ್ಲ. ಕಪ್ಪ ಹಣ ಇಟ್ಟುಕೊಂಡಿರುವ ಕುಳಗಳಿಗೆ ಕಷ್ಟವಾಗಲಿದೆ ಎಂದು ಹೇಳಿಕೊಂಡು ಜಾರಿ ಮಾಡಿದ ಈ ‘ಡಿಮೊನೋಟೈಸೇಷನ್’, ಮಧ್ಯಮವರ್ಗ ಮತ್ತು ಕೆಳವರ್ಗದ ಬಡವರ ಬದುಕನ್ನು ಬೀದಿಗೆಳೆದಿತ್ತು.

ಈಗಾಗಲೇ ಬೀದಿಯಲ್ಲಿದ್ದ ಜನರಂತೂ ಇನ್ನೂ ಸಂಕಷ್ಟಕ್ಕೆ ಸಿಲುಕಬೇಕಾಯಿತು. ಇವರೆಲ್ಲಾ ಒಂದೊತ್ತು ಕೂಳಿಗೂ ಕಾಸಿಲ್ಲದೇ ಪರದಾಡುತ್ತಿರುವಾಗ ನಿಜವಾಗಿಯೂ ಕಪ್ಪು ಹಣ ಇಟ್ಟಿದ್ದವರು ರಾಜಾರೋಷವಾಗಿ 500 ಕೋಟಿ ಖರ್ಚು ಮಾಡಿ ಮದುವೆ, ಸಮಾರಂಭ ಮಾಡಿದರು. ಇನ್ನೂ ಕೆಲವರ ಮನೆಯಲ್ಲಿ ಕಂತೆ ಕಂತೆ ಹೊಸ ನೊಟುಗಳೇ ಪತ್ತೆಯಾದವು. ಈ ಕಾರಣಕ್ಕೆ ಜಾಗತಿಕ ಮಟ್ಟದಲ್ಲಿ ವ್ಯಾಪಕ ವಿರೋಧ ಮತ್ತು ಟೀಕೆಗೆ ಗುರಿಯಾಗಿತ್ತು. ಜೊತೆಗೆ ಇದರಿಂದ ಭಾರತದ ಆರ್ಥಿಕತೆ ಬಲಗೊಳ್ಳುತ್ತದೆ, ಕಪ್ಪು ಹಣ ಹೊರಬರುತ್ತದೆ ಎಂದು ಆಶಾಭಾವನೆ ವ್ಯಕ್ತಪಡಿಸಿ ಬೆಂಬಲಿಸುವವರೂ ಇದ್ದರು.

ಇದನ್ನೂ ಓದಿ: ನೋಟು ನಿಷೇಧದಿಂದ ಉದ್ಯಮಿಯೊಬ್ಬ ಟೀ ಮಾರುವ ಪರಿಸ್ಥಿತಿಗೆ ಬಂದ ಕಥೆ…

ಆದರೆ ಆಗ, ‘ಇದರಿಂದಾದ ಸಮಸ್ಯೆಗಳು ಇನ್ನು 50 ದಿನಗಳಲ್ಲಿ ಬಗೆಹರಿಯದಿದ್ದರೆ ನನ್ನನ್ನು ಜೀವಂತ ಸುಟ್ಟುಬಿಡಿ’ ಎಂದು ಪ್ರಧಾನಿಗಳು ಸ್ಫೋಟಕ ಹೇಳಿಕೆ ನೀಡಿದ್ದರು. ಆಗ ಜನ ನಂಬಿದರು. ಈಗ 4 ವರ್ಷಗಳು ಕಳೆದಿವೆ. ಆದರೆ ಬಡವರು ಇನ್ನಷ್ಟು ಬಡವರಾಗಿದ್ದು ಬಿಟ್ಟರೆ ಇದರಿಂದ ಎಳ್ಳಷ್ಟೂ ಉಪಯೋಗವಾಗಲಿಲ್ಲ ಎಂದು ಆರ್ಥಿಕ ತಜ್ಞರೇ ಹೇಳುತ್ತಾರೆ.

ನೋಟು ಅಮಾನ್ಯೀಕರಣ ಮಾಡಿದ ಈ ದಿನವನ್ನು ಅಂದಿನಿಂದಲೂ ಪ್ರತಿವರ್ಷವೂ ಕರಾಳದಿನವನ್ನಾಗಿ ನೆನಪಿಸಿಕೊಳ್ಳಲಾಗುತ್ತಿದೆ. ಇದರ ಭಾಗವಾಗಿಯೇ ಇಂದು ಟ್ವಿಟ್ಟರ್‌ನಲ್ಲಿ #DeMonetisation, #Black_Day_India_Economy, #SpeakUpAgainstDeMoDisaster  ಎಂದು ಟ್ರೆಂಡಿಂಗ್ ಆಗುತ್ತಿದೆ.

ಇದನ್ನೂ ಓದಿ: ‘ನೋಟು ನಿಷೇಧದಿಂದ ಭಾರತದ ಆರ್ಥಿಕತೆಗೆ ಬಹುದೊಡ್ಡ ಪೆಟ್ಟು’: ನೊಬೆಲ್ ಪುರಸ್ಕೃತೆ ಎಸ್ತಾರ್ ಡುಫ್ಲೋ

ಈ ಹ್ಯಾಶ್‌ಟ್ಯಾಗ್‌ಗಳನ್ನು ಬಳಸಿ ಸಾವಿರಾರು ಜನ ಟ್ವೀಟ್ ಮಾಡಿದ್ದು, ಅಮಾನ್ಯೀಕರಣದ ಸಂದರ್ಭದಲ್ಲಿ ಜನತೆ ಅನುಭವಿಸಿದ ಸಂಕಷ್ಟಗಳನ್ನು ನೆನಪಿಸುವ ವಿಷಯಗಳನ್ನು ಹಂಚಿಕೊಂಡಿದ್ದಾರೆ.

ವಿಜಯ್ ಪ್ರಕಾಶ್ ಎಂಬುವವರು ಟ್ವೀಟ್ ಮಾಡಿ, “ಇದುವರೆಗೂ ಜಗತ್ತು ಕಂಡರಿಯದ ಮೋದಿ ನಿರ್ಮಿತ ಅಮಾನ್ಯೀಕರಣ ವಿಕೋಪದ 4 ನೇ ವರ್ಷದ ವಾರ್ಷಿಕೋತ್ಸವವನ್ನು ನಮ್ಮ ದೇಶ ಆಚರಿಸುತ್ತಿದೆ” ಎಂದು ಬರೆದಿದ್ದಾರೆ.

ಇದನ್ನೂ ಓದಿ: ಮತದಾರರ ಆಲೋಚನಾ ಶಕ್ತಿಯನ್ನು ಕಸಿದುಕೊಂಡ ಮೋದಿ: ಎಚ್ ಎಸ್ ದೊರೆಸ್ವಾಮಿ

ಆಮ್ ಆದ್ಮಿ ಪಕ್ಷ ಟ್ವೀಟ್ ಮಾಡಿ, “ನೆನಪಿಸಿಕೊಳ್ಳಿ, ನವೆಂಬರ್ 8ನ್ನು ನೆನಪಿಸಿಕೊಳ್ಳಿ” ಎಂದು, ‘ಶ್ರೀಮಂತರು ಮಾತ್ರ ಅಳುತ್ತಾರೆ ಎಂದು ಅವರು ಹೇಳಿದ್ದರು’ ಎನ್ನುವ ಶೀರ್ಷಿಕೆಯಿರುವ ವೃದ್ಧರೊಬ್ಬರು ಅಳುತ್ತಿರುವ ಚಿತ್ರವನ್ನು ಹಂಚಿಕೊಂಡಿದೆ.

ರೋಹನ್ ಗುಪ್ತಾ ಟ್ವೀಟ್ ಮಾಡಿ, “ಡಿಮೊನೋಟೈಸೇಷನ್ ಯಶಸ್ವಿಯಾಗಿದ್ದರೆ ಮೋದಿ ಸರ್ಕಾರ ಅದನ್ನು ಏಕೆ ಸಂಭ್ರಮಿಸುತ್ತಿಲ್ಲ?” ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಮೋದಿಯ ಈ ಮೂರು ವೈಫಲ್ಯಗಳ ಕುರಿತು ಹಾರ್ವಡ್ ಬ್ಯುಸಿನೆಸ್ ಸ್ಕೂಲ್ ಅಧ್ಯಯನ ಮಾಡುತ್ತದೆ: ರಾಹುಲ್

ಹೀಗೆ ಸಾವಿರಾರು ಜನರು ತಮ್ಮ ಆಕ್ರೋಶವನ್ನು ಹೊರಹಾಕಿದ್ದಾರೆ. ಆದರೆ ಇಂದಿಗೂ ಇದನ್ನು ಸುಳ್ಳು ಅಂಕಿ ಅಂಶಗಳ ಮೂಲಕ ಸಮರ್ಥಿಸಿಕೊಳ್ಳುವವರಿದ್ದಾರೆ ಎಂದರೆ ಇದಕ್ಕಿಂತಲೂ ದುಸ್ಥಿತಿ ಬೇರೊಂದಿಲ್ಲ.

ನೋಟು ಅಮಾನ್ಯೀಕರಣದ ಫಲಿತಾಂಶಗಳ ವರದಿ ನೀಡಿದ ಆರ್‌ಬಿಐ 99.3% ನೋಟುಗಳು ಬ್ಯಾಂಕಿಗೆ ಬಂದಿದೆ ಎಂದು ಹೇಳಿತ್ತು. ಅಂದರೆ ಕಪ್ಪು ಹಣ ಎಲ್ಲಿ ಸಂಗ್ರಹವಾಗಿದೆ? ಅದು ಯಾಕೆ ಹೊರಬರಲಿಲ್ಲ? ಇದಕ್ಕೆ ಕಾರಣವೇನು ಎನ್ನುವ ಯಾವ ಪ್ರಶ್ನೆಗಳಿಗೂ ನಮ್ಮ ಬಳಿ ಉತ್ತರವಿಲ್ಲ. ಭ್ರಷ್ಟಾಚಾರ ನಿಂತಿದೆಯೇ? ಭಯೋತ್ಪಾದನೆ ನಿಗ್ರಹವಾಗಿದೆಯೇ? ಎಂದರೆ, ಇಲ್ಲ ಹಿಂದೆಂದಿಗಿಂತಲೂ ಹೆಚ್ಚಾಗಿದೆ ಎನ್ನುವುದಕ್ಕೆ ನಮ್ಮ ಮುಂದೆ ಸಾಕಷ್ಟು ಉದಾಹರಣೆಗಳಿವೆ.


ಇದನ್ನೂ ಓದಿ: ಇಂದಿನ ಆಡಳಿತಕ್ಕೆ ಹೋಲಿಸಿದರೆ ತುರ್ತು ಪರಿಸ್ಥಿತಿ ಏನೇನೂ ಅಲ್ಲ: ಪಿ. ಸಾಯಿನಾಥ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...