Homeಮುಖಪುಟ40% ಕಮಿಷನ್: ಬಿಜೆಪಿ ಸರ್ಕಾರದ ಮೇಲಿನ ಆರೋಪ ತೆರವುಗೊಳಿಸಿದ ಲೋಕಾಯುಕ್ತ

40% ಕಮಿಷನ್: ಬಿಜೆಪಿ ಸರ್ಕಾರದ ಮೇಲಿನ ಆರೋಪ ತೆರವುಗೊಳಿಸಿದ ಲೋಕಾಯುಕ್ತ

- Advertisement -
- Advertisement -

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿ ಗುತ್ತಿಗೆ ಪಡೆಯಲು ಲಂಚ ನೀಡಲಾಗಿದೆ ಎಂದು ಟಿವಿ ಸಂದರ್ಶನವೊಂದರಲ್ಲಿ ಹೇಳಿಕೊಂಡಿದ್ದ ಮೃತ ಗುತ್ತಿಗೆದಾರ ಆರ್.ಅಂಬಿಕಾಪತಿ ಅವರ ಆರೋಪವನ್ನು ಕರ್ನಾಟಕ ಲೋಕಾಯುಕ್ತ ತಳ್ಳಿಹಾಕಿದೆ.

2022ರವರೆಗೆ ಐದು ವರ್ಷಗಳ ಕಾಲ ಅಂಬಿಕಾಪತಿ ಅವರಿಗೆ ಯಾವುದೇ ಗುತ್ತಿಗೆ ನೀಡಿಲ್ಲ ಎಂದು ಲೋಕಾಯುಕ್ತ ತನಿಖೆಯಿಂದ ತಿಳಿದುಬಂದಿದೆ.

ನವೆಂಬರ್ 27, 2023 ರಂದು ಅಂಬಿಕಾಪತಿ ಅವರ ಸಾವಿನಿಂದಾಗಿ ಅವರ ಆರೋಪಗಳ ಕುರಿತು ಹೆಚ್ಚಿನ ವಿಚಾರಣೆಗೆ ಅಡ್ಡಿಯಾಯಿತು. ಅವರ ಮಗ ತನ್ನ ತಂದೆಯ ಕೆಲಸ-ಸಂಬಂಧಿತ ವ್ಯವಹಾರಗಳ ಬಗ್ಗೆ ಅವರಿಗೆ ಯಾವುದೇ ಅರಿವಿಲ್ಲ ಎಂದು ಹೇಳಿದರು.

ಆರೋಪಗಳಿಗೆ ಯಾವುದೇ ಪೂರಕ ಸಾಕ್ಷ್ಯಗಳಿಲ್ಲ ಎಂದು ಹೇಳುವ ಮೂಲಕ ಲೋಕಾಯುಕ್ತರು ಆರೋಪಗಳನ್ನು ನಿರಾಧಾರ ಎಂದು ತೀರ್ಮಾನಿಸಿದರು.

“40% ಕಮಿಷನ್ ಆರೋಪದ ಬಗ್ಗೆ ಅನೇಕ ಪ್ರಕರಣಗಳು ದಾಖಲಾಗಿವೆ. ದೂರುದಾರರಾದ ಅಂಬಿಕಾಪತಿ ಅವರ ಈ ನಿರ್ದಿಷ್ಟ ಪ್ರಕರಣವನ್ನು ದಾಖಲಿಸಲಾಗಿದೆ ಮತ್ತು ಜೂನ್‌ನಲ್ಲಿ ತನಿಖೆ ಪೂರ್ಣಗೊಂಡಿದೆ” ಎಂದು ಲೋಕಾಯುಕ್ತ ಕಚೇರಿ ಮಾಧ್ಯಮಗಳಿಗೆ ತಿಳಿಸಿದ್ದಾರೆ.

“ಗುತ್ತಿಗೆದಾರ ಅಂಬಿಕಾಪತಿ ಅವರು ಜೀವಂತವಾಗಿಲ್ಲ, ಅವರು 2022 ರವರೆಗೆ ಐದು ವರ್ಷಗಳವರೆಗೆ ಯಾವುದೇ ಸರ್ಕಾರಿ ಗುತ್ತಿಗೆಗಳನ್ನು ಪಡೆದಿಲ್ಲ. ಆದ್ದರಿಂದ, ಅವರ ಆರೋಪಗಳನ್ನು ಬೆಂಬಲಿಸಲು ಯಾವುದೇ ಪುರಾವೆಗಳಿಲ್ಲ” ಎಂದು ಹೇಳಿಕೆ ಸೇರಿಸಲಾಗಿದೆ.

“ಆದರೆ, ಡಿ.ಕೆಂಪಣ್ಣ ನೇತೃತ್ವದ ಗುತ್ತಿಗೆದಾರರ ಸಂಘ ಸಲ್ಲಿಸಿರುವ ಮತ್ತೊಂದು ದೂರಿನ ತನಿಖೆ ಇನ್ನೂ ನಡೆಯುತ್ತಿದೆ” ಎಂದು ಲೋಕಾಯುಕ್ತ ಕಚೇರಿ ಸ್ಪಷ್ಟಪಡಿಸಿದೆ. “ಆ ಪ್ರಕರಣದ ತನಿಖೆ ಇನ್ನೂ ನಡೆಯುತ್ತಿದೆ ಮತ್ತು ಮುಚ್ಚಲಾಗಿಲ್ಲ” ಎಂದು ತಿಳಿಸಿದ್ದಾರೆ ಎಂದು ‘ಇಂಡಿಯಾ ಟುಡೇ’ ವರದಿ ಮಾಡಿದೆ.

ಹಿಂದಿನ ಬಿಜೆಪಿ ಸರ್ಕಾರದ ‘40% ಕಮಿಷನ್’ ಹಗರಣದ ವಿರುದ್ಧದ ಹೋರಾಟದಲ್ಲಿ ಕರ್ನಾಟಕ ರಾಜ್ಯ ಗುತ್ತಿಗೆದಾರರ ಅಧ್ಯಕ್ಷರಾಗಿ ಮುಂಚೂಣಿಯಲ್ಲಿದ್ದ ಕೆಂಪಣ್ಣ ಅವರು ಸೆಪ್ಟೆಂಬರ್ 19, 2024 ರಂದು ಹೃದಯಾಘಾತದಿಂದ ನಿಧನರಾದರು. ಅವರು ಭ್ರಷ್ಟಾಚಾರ ಮತ್ತು ಲಂಚದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಮತ್ತು ಇತರ ಬಿಜೆಪಿ ಹಿರಿಯ ನಾಯಕರಿಗೆ ಪತ್ರವನ್ನೂ ಬರೆದಿದ್ದರು.

“ಹಿಂದಿನ ಬಿಜೆಪಿ ಸರ್ಕಾರದ ಮೇಲೆ ಕಾಂಗ್ರೆಸ್ ಹೊರಿಸಿದ್ದ ಆರೋಪ ಸಂಪೂರ್ಣ ಸುಳ್ಳು ಎಂದು ಸಾಬೀತಾಗಿದೆ. ಬಿಜೆಪಿ ಸರ್ಕಾರದ ಮೇಲೆ ಸುಳ್ಳು ಆರೋಪ ಹೊರಿಸಿ, ಈಗ ಆಡಳಿತಾರೂಢ ಕಾಂಗ್ರೆಸ್ ಸರ್ಕಾರ 100% ಸರ್ಕಾರ ಎಂಬ ಕುಖ್ಯಾತಿ ಪಡೆದಿದೆ. ಕಾಂಗ್ರೆಸ್ಸಿಗರು ಇನ್ನಾದರೂ ಸುಳ್ಳು ಹೇಳುವುದನ್ನು ಬಿಟ್ಟು ಭ್ರಷ್ಟಾಚಾರ ರಹಿತ ಆಡಳಿತ ನೀಡಲಿ” ಎಂದರು.

ಇದನ್ನೂ ಓದಿ; ಮಣಿಪುರ ಹಿಂಸಾಚಾರ: ಮೊತ್ತೋರ್ವ ಪ್ರತಿಭಟನಾಕಾರ ಸಾವು; ಬಿಜೆಪಿ-ಕಾಂಗ್ರೆಸ್ ಕಚೇರಿಗಳಿಗೆ ನುಗ್ಗಿದ ಗುಂಪು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...