Homeಮುಖಪುಟ40% ಕಮಿಷನ್ ಭ್ರಷ್ಟಾಚಾರದಿಂದ ಕರ್ನಾಟಕಕ್ಕೇನು ಕಾದಿದೆ?: ಸಂವಾದ ಕಾರ್ಯಕ್ರಮ ನಾಳೆ

40% ಕಮಿಷನ್ ಭ್ರಷ್ಟಾಚಾರದಿಂದ ಕರ್ನಾಟಕಕ್ಕೇನು ಕಾದಿದೆ?: ಸಂವಾದ ಕಾರ್ಯಕ್ರಮ ನಾಳೆ

ರಾಜ್ಯದ ಯಾವುದೇ ಕಾಮಗಾರಿಯ ಗುತ್ತಿಗೆ ಪಡೆಯಬೇಕಾದರೆ 40% ಕಮಿಷನ್ ನೀಡಬೇಕಾಗಿದೆ ಎಂದು ಗುತ್ತಿಗೆದಾರರ ಸಂಘದ ರಾಜ್ಯಾಧ್ಯಕ್ಷ ಡಿ.ಕೆಂಪಣ್ಣ ಆರೋಪಿಸಿದ್ದರು.

- Advertisement -
- Advertisement -

ರಾಜ್ಯದಲ್ಲಿ ಯಾವುದೇ ಕಾಮಗಾರಿಯ ಗುತ್ತಿಗೆ ಪಡೆಯಲು 40% ಕಮಿಷನ್ ನೀಡಬೇಕಾಗಿದೆ ಎಂದು ರಾಜ್ಯ ಗುತ್ತಿಗೆದಾರರ ಸಂಘದ ರಾಜ್ಯಾಧ್ಯಕ್ಷ ಡಿ.ಕೆಂಪಣ್ಣನವರು ಆರೋಪಿಸಿದ್ದರು. ಆ ನಂತರ ಈ ವಿಷಯ ರಾಜ್ಯ ಬಿಜೆಪಿ ಸರ್ಕಾರಕ್ಕೆ ಮುಜುಗರ ಉಂಟು ಮಾಡಿತ್ತು. ಈ ಕುರಿತು ಸದನದಲ್ಲಿ ಚರ್ಚಿಸಲು ಅವಕಾಶ ನೀಡಿಲ್ಲ ಎಂದು ವಿರೋಧ ಪಕ್ಷದ ಮುಖಂಡ ಸಿದ್ದರಾಮಯ್ಯನವರು ಶನಿವಾರ ಆಕ್ರೋಶ ವ್ಯಕ್ತಪಡಿಸಿದ್ದರು. ಈಗ ಇದೇ ವಿಷಯದ ಕುರಿತು ಜಾಗೃತ ಕರ್ನಾಟಕ ಸಂಘಟನೆಯು ಮಾರ್ಚ್ 27ರ ಭಾನುವಾರ ಸಂವಾದ ಕಾರ್ಯಕ್ರಮ ಹಮ್ಮಿಕೊಂಡಿದೆ.

“40% ಕಮಿಷನ್ – ಯಾರಿಗೂ ಆಘಾತ ತರದ ಭಾರೀ ಹಗರಣ: ಕರ್ನಾಟಕಕ್ಕೆ ಏನು ಕಾದಿದೆ” ಎಂಬ ಹೆಸರಿನಲ್ಲಿ ಜಾಗೃತ ಕರ್ನಾಟಕ ವೇದಿಕೆಯು ಭಾನುವಾರ ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಕ್ವೀನ್ಸ್‌ ರಸ್ತೆಯ ಇಸ್ಟಿಟ್ಯೂಟ್ ಆಫ್ ಅಗ್ರಿಕಲ್ಟರ್ ಟೆಕ್ನಾಲಾಜಿಸ್ಟ್ (ಐಎಐ ) ನಲ್ಲಿ ಸಂವಾದ ಕಾರ್ಯಕ್ರಮ ಏರ್ಪಡಿಸಿದೆ.

ಭ್ರಷ್ಟಾಚಾರ ನಿರ್ಮೂಲನಾ ಕ್ರಮಗಳ ಸಲಹಾಗಾರರು ಮತ್ತು ನಿವೃತ್ತ ಐಎಎಸ್ ಅಧಿಕಾರಿಗಳಾದ ಟಿ. ಅರ್. ರಘುನಂದನ್, ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷರಾದ ಡಿ. ಕೆಂಪಣ್ಣ ಮತ್ತು ಕಾರ್ಯನೀತಿ ವಿಶ್ಲೇಷಕರಾದ ಕೆ.ಸಿ. ರಘುರವರು ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಲಿದ್ದಾರೆ. ಶಾಶ್ವತ ನೀರಾವರಿ ಹೋರಾಟ ಸಮಿತಿಯ ಅಧ್ಯಕ್ಷರಾದ ಆರ್. ಆಂಜನೇಯ ರೆಡ್ಡಿಯವರು ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಜಾಗೃತ ಕರ್ನಾಟಕದ ಮುಖಂಡರಾದ ರಾಜಶೇಖರ್ ಅಕ್ಕಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

2019 ರಿಂದ ಗುತ್ತಿಗೆ ಪಡೆಯಲು ಕಮಿಷನ್ ನೀಡುವ ಭ್ರಷ್ಟಾಚಾರದಲ್ಲಿ ಭಾರೀ ಏರಿಕೆಯಾಗಿದೆಯೆಂದು ರಾಜ್ಯ ಗುತ್ತಿಗೆದಾರರ ಸಂಘದ ರಾಜ್ಯಾಧ್ಯಕ್ಷ ಡಿ.ಕೆಂಪಣ್ಣನವರು 2021ರ ಡಿಸೆಂಬರ್‌ನಲ್ಲಿ ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿ ಆರೋಪಿಸಿದ್ದರು. ಅಲ್ಲದೇ ರಾಜ್ಯದ ಯಾವುದೇ ಕಾಮಗಾರಿಯ ಗುತ್ತಿಗೆ ಪಡೆಯಬೇಕಾದರೆ 40% ಕಮಿಷನ್ ನೀಡಬೇಕಾಗಿದೆ ಎಂದು ಅಳಲು ತೋಡಿಕೊಂಡಿದ್ದರು. ಈ ಕುರಿತು ಕ್ರಮ ಕೈಗೊಳ್ಳುವಂತೆ ಪ್ರಧಾನಿ ನರೇಂದ್ರ ಮೋದಿ ಮತ್ತು ರಾಷ್ಟ್ರಪತಿಗಳಿಗೆ ಪತ್ರ ಬರೆದಿದ್ದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ದೂರಿದ್ದರು. ಅಷ್ಟು ಮಾತ್ರವಲ್ಲದೇ 40% ಕಮಿಷನ್ ಕೇಳುವ ಭ್ರಷ್ಟಾಚಾರ ನಿಲ್ಲದಿದ್ದರೆ ರಾಜ್ಯಾದ್ಯಂತ ಕಾಮಗಾರಿ ಕೆಲಸಗಳನ್ನು ಸ್ಥಗಿತಗೊಳಿಸಿ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದ್ದರು.

ಇನ್ನು ಸರ್ಕಾರ ಈ ವಿಷಯದಲ್ಲಿ ರಾಕೇಶ್‌ ಸಿಂಗ್‌ ಎಂಬುವವರ ನೇತೃತ್ವದಲ್ಲಿ ತನಿಖೆ ನಡೆಸಲು ಆದೇಶಿಸಿತ್ತು. ಅದನ್ನು ವಿರೋಧಿಸಿದ್ದ ಕೆಂಪಣ್ಣನವರು, “ನೀರಾವರಿ ಇಲಾಖೆಯಲ್ಲಿಯೂ ಭ್ರಷ್ಟಾಚಾರ ನಡೆಯುತ್ತಿದ್ದು, ಕಮಿಷನ್ ಕೇಳುತ್ತಿದ್ದಾರೆ. ಆ ಇಲಾಖೆಯ ಮುಖ್ಯಸ್ಥರನ್ನೆ ತನಿಖೆ ಮುಖ್ಯಸ್ಥರನ್ನಾಗಿ ನೇಮಿಸಿದರೆ ಪಾರದರ್ಶಕ, ನಿಷ್ಪಕ್ಷಪಾತ ತನಿಖೆ ನಡೆಯಲು ಸಾಧ್ಯವಿಲ್ಲ ಎಂದು ದೂರಿದ್ದರು. ಹಾಗಾಗಿ ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಯಬೇಕೆಂದು ಆಗ್ರಹಿಸಿದ್ದರು.

ಈ ಹಿಂದೆ 10-15% ಇದ್ದ ಕಮಿಷನ್ ಭ್ರಷ್ಟಾಚಾರ ಈಗ 40%ಗೆ ಏರಿಕೆಯಾಗಿದೆ. ಈ ಕುರಿತು ಎಲ್ಲಾ ದಾಖಲೆಗಳು ನಮ್ಮ ಬಳಿ ಇದ್ದು, ಕೋರ್ಟ್‌ನಲ್ಲಿಯೂ ಇದನ್ನು ಪ್ರಶ್ನಿಸುತ್ತೇವೆ ಎಂದು ಕೆಂಪಣ್ಣನವರು ಹೇಳಿದ್ದರು.


ಇದನ್ನೂ ಓದಿ : ಕರ್ನಾಟಕದಲ್ಲಿ ಕನ್ನಡಕ್ಕೆ ಭವಿಷ್ಯವಿದೆಯೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌...

ಬಾಂಗ್ಲಾ ಗಡಿಯಾಚೆಗೆ ತಳ್ಳಿದವರ ವಾಪಸಾತಿ: ಭಾರತೀಯರನ್ನೇ ಗಡಿಪಾರು ಮಾಡುತ್ತಿರುವ ಕೇಂದ್ರ?

ದಾಖಲೆರಹಿತ ವಲಸಿಗರೆಂದು ಆರೋಪಿಸಿ ಅಧಿಕಾರಿಗಳು ಬಾಂಗ್ಲಾದೇಶದ ಗಡಿಯಾಚೆಗೆ 'ತಳ್ಳಿದ್ದ' ಪಶ್ಚಿಮ ಬಂಗಾಳದ ನಿವಾಸಿಗಳನ್ನು ವಾಪಸ್ ಕರೆ ತರುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ (ಮೇ 22,2026) ಸುಪ್ರೀಂ ಕೋರ್ಟ್‌ಗೆ ವಾಗ್ದಾನ ಮಾಡಿದೆ ಎಂದು ವರದಿಯಾಗಿದೆ....

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...

ಪಶ್ಚಿಮ ಬಂಗಾಳ: ಬಿಜೆಪಿಗೆ ಉಲ್ಟಾ ಹೊಡೆಯುತ್ತಾ ಗೋ-ಹತ್ಯೆ ನಿಷೇಧ ಕಾಯ್ದೆ?

ಬಕ್ರೀದ್ (ಈದ್-ಉಲ್-ಅದ್ಹಾ) ಹಬ್ಬ ಹತ್ತಿರ ಬರುತ್ತಿದ್ದಂತೆ, ಪಶ್ಚಿಮ ಬಂಗಾಳದಲ್ಲಿ ಗೋ ಹತ್ಯೆ ನಿಯಂತ್ರಣ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುತ್ತಿರುವುದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಈ ಆಕ್ರೋಶ ಕೇವಲ ಧಾರ್ಮಿಕ ಕಾರಣಗಳಿಗಷ್ಟೇ ಸೀಮಿತವಾಗಿಲ್ಲ, ಬದಲಿಗೆ ವ್ಯಾಪಾರಿಗಳು,...

ಪ.ಬಂಗಾಳ: ಮಮತಾ ಸರ್ಕಾರ ಜಾರಿ ಮಾಡಿದ್ದ OBC ಮೀಸಲಾತಿಯನ್ನು ಕಿತ್ತೆಸೆದ ಸುವೇಂದು ನೇತೃತ್ವದ ಬಿಜೆಪಿ ಸರ್ಕಾರ

ಪಶ್ಚಿಮ ಬಂಗಾಳದ ಒಬಿಸಿ (ಇತರ ಹಿಂದುಳಿದ ವರ್ಗಗಳು) ಪಟ್ಟಿಯಲ್ಲಿದ್ದ ಮುಸ್ಲಿಂ ಸಮುದಾಯಗಳನ್ನು ಕೈಬಿಡುವ ಮೂಲಕ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರವು ಭಾರಿ ರಾಜಕೀಯ ಸಂಚಲನ ಸೃಷ್ಟಿಸಿದೆ. ಈ ಹಿಂದೆ...

ಸಾಮಾಜಿಕ ಹೋರಾಟಗಾರ ‘ಫರಿದುಲ್ ಇಸ್ಲಾಂ’ರನ್ನು ಸುಳ್ಳು ಪ್ರಕರಣದಲ್ಲಿ ಬಂಧಿಸಿದ ಕೋಲ್ಕತ್ತಾ ಪೊಲೀಸರು

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಇನ್ನು ಹತ್ತು ದಿನಗಳು ಕಳೆಯುವಷ್ಟರಲ್ಲೇ, ಸರ್ಕಾರದ ಆಡಳಿತವನ್ನು ಪ್ರಶ್ನಿಸುವವರ ಹಾಗೂ ಹೋರಾಟಗಾರರ ಧ್ವನಿಯನ್ನು ಹತ್ತಿಕ್ಕುವ ಕೆಲಸ ಆರಂಭವಾಗಿದೆ ಎಂಬ...

ಉಪ್ಪಿನಂಗಡಿ: ಸೂರ್ಯ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ, ಚಿಕಿತ್ಸೆಗೆಂದು ತೆರಳಿ ಶವವಾಗಿ ಮರಳಿದ ಬೀದಿಬದಿ ವ್ಯಾಪಾರಿ!

ಖಾಸಗಿ ಆಸ್ಪತ್ರೆಗಳ ಹಣದ ದಾಹ ಮತ್ತು ವೈದ್ಯಕೀಯ ಸಿಬ್ಬಂದಿಯ ಘೋರ ನಿರ್ಲಕ್ಷ್ಯಕ್ಕೆ ಮತ್ತೊಂದು ಬಡ ಜೀವ ಬಲಿಯಾಗಿದೆ. ಉಪ್ಪಿನಂಗಡಿಯ ಸೂರ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದ ಮೊಹಮ್ಮದ್ ಶರೀಫ್ (35) ಎಂಬ ಬೀದಿ ಬದಿ...