Homeಕರ್ನಾಟಕ40% ಕಮಿಷನ್‌ ನಿಜ; 25,000 ಕೋಟಿ ರೂ. ಪೆಂಡಿಂಗ್ ಬಿಲ್ ಇದೆ: ಗುತ್ತಿಗೆದಾರರ ಸಂಘದ ಅಧ್ಯಕ್ಷರ...

40% ಕಮಿಷನ್‌ ನಿಜ; 25,000 ಕೋಟಿ ರೂ. ಪೆಂಡಿಂಗ್ ಬಿಲ್ ಇದೆ: ಗುತ್ತಿಗೆದಾರರ ಸಂಘದ ಅಧ್ಯಕ್ಷರ ಗಂಭೀರ ಆರೋಪ

- Advertisement -
- Advertisement -

ಬೆಳಗಾವಿಯ ಗುತ್ತಿಗೆದಾರ ಸಂತೋಷ್ ಪಾಟೀಲ್‌ ಅವರು ಉಡುಪಿಯಲ್ಲಿ ಆತ್ಮಹತ್ಯೆಗೆ ಶರಣಾದ ಬಳಿಕ ಗುತ್ತಿಗೆದಾರರ ಸಮಸ್ಯೆಗಳು ಹೊರಬೀಳತೊಡಗಿವೆ. ಸರ್ಕಾರ ಹಾಗೂ ಸಚಿವರ ಮೇಲೆ ಗುತ್ತಿಗೆದಾರರು ಆರೋಪಗಳನ್ನು ಮಾಡುತ್ತಿದ್ದು, ರಾಜ್ಯದಲ್ಲಿ ಅಭಿವೃದ್ಧಿ ಸಾಧ್ಯವಾಗುತ್ತಿಲ್ಲ ಎಂದು ತಿಳಿಸಿದ್ದಾರೆ.

‘ನಾನುಗೌರಿ.ಕಾಂ’ ಜೊತೆ ಮಾತನಾಡಿದ ರಾಜ್ಯ ಗುತ್ತಿಗೆದಾರರಸಂಘದ ಅಧ್ಯಕ್ಷ ಡಿ.ಕೆಂಪಣ್ಣ, “ಗುತ್ತಿಗೆದಾರರಿಂದ 40% ಕಮಿಷನ್‌ ಪಡೆಯುತ್ತಿರುವುದು ನಿಜ. ಈ ಕುರಿತು ಈ ಹಿಂದೆಯೇ ಪತ್ರ ಬರೆಯಲಾಗಿತ್ತು. ಇಷ್ಟು ದಿನವಾದರೂ ಮುಖ್ಯಮಂತ್ರಿಯವರು ನಮ್ಮನ್ನು ಕರೆದು ಮಾತನಾಡಲಿಲ್ಲ. ಸರ್ಕಾರದ ಸ್ಪಷ್ಟ ನಿಲವು ಕೂಡ ವ್ಯಕ್ತವಾಗಿಲ್ಲ. ಈಗಲಾದರೂ ನಿಲುವು ತಾಳುತ್ತಾರೋ ಗೊತ್ತಿಲ್ಲ” ಎಂದು ವಿಷಾದಿಸಿದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಸಂತೋಷ್‌ ಪಾಟೀಲ್‌ ಆತ್ಮಹತ್ಯೆಗೆ ಸಂತಾಪ ಸೂಚಿಸಿದ ಅವರು, “ಸುಪ್ರೀಂ ಕೋರ್ಟ್ ಅಥವಾ ಹೈಕೋರ್ಟ್ ನ್ಯಾಯಮೂರ್ತಿಯವರ ನೇತೃತ್ವದಲ್ಲಿ ಸಂತೋಷ್‌ ಪಾಟೀಲ್‌ ಪ್ರಕರಣದ ಸ್ವತಂತ್ರ ತನಿಖೆ ನಡೆಸಬೇಕು. ಇಲ್ಲದಿದ್ದರೆ ಸತ್ಯ ಹೊರಬರುವುದಿಲ್ಲ. ಸಂತೋಷ ಅವರ ಪತ್ನಿ ಜಯಶ್ರೀ ಅವರಿಗೆ ಎರಡು ಕೋಟಿ ರೂ. ಪರಿಹಾರ ಕೊಡಬೇಕು. ಉಳಿಕೆ ಬಿಲ್‌ಗಳನ್ನೆಲ್ಲ ಕ್ಲಿಯರ್‌ ಮಾಡಿಕೊಡಬೇಕು. ಜಯಶ್ರೀಯವರಿಗೆ ಒಂದು ಸರ್ಕಾರಿ ಉದ್ಯೋಗವನ್ನು ನೀಡಬೇಕು” ಎಂದು ಆಗ್ರಹಿಸಿದರು.

ಇದನ್ನೂ ಓದಿರಿ: ಇವರದೊಂದು ಜನ್ಮನಾ, ನಾಯಿ ಜನ್ಮ: ಈಶ್ವರಪ್ಪ ವಿರುದ್ಧ ಸಂತೋಷ್‌ ಪತ್ನಿ ಆಕ್ರೋಶ

“ಸಂತೋಷ್ ಪಾಟೀಲ್ ಯಾರೆಂದೇ ಗೊತ್ತೇ ಇಲ್ಲ, ಕಾಮಗಾರಿಗಳನ್ನು ಮಾಡಿಯೇ ಇಲ್ಲ” ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್‌.ಈಶ್ವರಪ್ಪ ಹೇಳಿಕೆ ನೀಡಿರುವ ಕುರಿತು ಪ್ರತಿಕ್ರಿಯೆ ನೀಡಿದ ಅವರು, “ಘಟನೆಯಾದ ಬಳಿಕ ಎಲ್ಲರೂ ಹಾಗೆಯೇ ಹೇಳುತ್ತಿದ್ದಾರೆ. ಸಂತೋಷ್‌ ಪಾಟೀಲ್‌ ಅವರು ಈಶ್ವರಪ್ಪನವರ ಜೊತೆ ಫೋಟೋ ತೆಗೆಸಿಕೊಂಡಿದ್ದಾರೆ, ಅವರಿಗೆ ಲೆಟರ್‌ಗಳನ್ನು ಕೊಟ್ಟಿದ್ದಾರೆ. ಇವುಗಳಿಗೆಲ್ಲ ದಾಖಲೆ ಇವೆ. ಕಳ್ಳರು ಯಾವತ್ತಾದರೂ ಒಪ್ಪಿಕೊಳ್ಳುತ್ತಾರಾ?” ಎಂದು ಪ್ರಶ್ನಿಸಿದರು.

“ಅಭಿವೃದ್ಧಿ ಕೆಲಸಗಳು ಸಂಪೂರ್ಣ ಕುಂಠಿತವಾಗಿವೆ. 40 ಪರ್ಸೆಂಟ್‌ ಭ್ರಷ್ಟಾಚಾರ ಮಾಡಿದರೆ ಅಭಿವೃದ್ಧಿ ಸಾಧ್ಯವೆ? 40% ಕಮಿಷನ್‌ ಪಡೆಯುತ್ತಿರುವುದು ಶೇ. 100ರಷ್ಟು ನಿಜ. ಅದಕ್ಕಾಗಿಯೇ ನಾವು ಸ್ವತಂತ್ರ ತನಿಖೆಗೆ ಆಗ್ರಹಿಸುತ್ತಿದ್ದೇವೆ” ಎಂದು ಮತ್ತೊಮ್ಮೆ ಆಗ್ರಹಿಸಿದರು.

ಗುತ್ತಿಗೆದಾರರ ನಿತ್ಯದ ನೋವುಗಳನ್ನು ಬಿಚ್ಚಿಟ್ಟ ಕೆಂಪಣ್ಣನವರು, “ಪೇಮೆಂಟ್‌ಗಾಗಿ ಗುತ್ತಿಗೆದಾರರು ಇಲಾಖೆಗಳನ್ನು ಅಲೆಯುತ್ತಿದ್ದಾರೆ. 25,000 ಕೋಟಿ ರೂ. ಪೆಂಡಿಂಗ್ ಬಿಲ್ ಇದೆ ಎಂದರೆ ಅಲೆದಾಟ ಎಷ್ಟಿರಬಹುದೆಂದು ಊಹಿಸಿ. 40% ಪರ್ಸೆಂಟ್‌ ಕಮಿಷನ್‌ ಕೊಟ್ಟು ನಾವು ಒಳ್ಳೆಯ ಕಾಮಗಾರಿಯನ್ನು ಮಾಡಲು ಸಾಧ್ಯವೇ?” ಎಂದು ಪ್ರಶ್ನಿಸಿದರು.

‘ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಕಾಂಗ್ರೆಸ್‌ ಏಜೆಂಟ್‌, ಅವರ ಮೇಲೆ ಮಾನನಷ್ಟ ಮೊಕದ್ದಮೆ ಹಾಕುತ್ತೇನೆ’ ಎಂದು ಆರೋಗ್ಯ ಸಚಿವ ಸುಧಾಕರ್‌ ಹೇಳಿರುವುದಕ್ಕೆ ಪ್ರತಿಕ್ರಿಯೆ ನೀಡಿದ ಅವರು, “ಬಹಳ ಸಂತೋಷ. ಕೇಸ್ ಹಾಕಿಕೊಳ್ಳಲಿ. ಆದರೆ ನಾನು ಕಾಂಗ್ರೆಸ್‌ನವನೆಂದು ಫ್ರೂವ್ ಮಾಡಲಿ. ನಿಜವಾಗಿ ಹೇಳುವುದಾದರೆ ಸುಧಾಕರ್‌ ಅವರೇ ಕಾಂಗ್ರೆಸ್‌ನವರು. ಈಗ ಬಿಜೆಪಿ, ಮುಂದೆ ಕಾಂಗ್ರೆಸ್ ಆಗುತ್ತಾರೆ” ಎಂದು ಭವಿಷ್ಯ ನುಡಿದರು.

ಮುಂದಿನ ನಡೆಯ ಬಗ್ಗೆ ತಿಳಿಸಿದ ಅವರು, “ಸರ್ಕಾರ ನಮ್ಮ ಸಮಸ್ಯೆಗಳನ್ನು ಬಗೆಹರಿಸದಿದ್ದರೆ ಹೋರಾಟ ಮಾಡುತ್ತೇವೆ” ಎಂದು ಎಚ್ಚರಿಸಿದರು.

ಈಶ್ವರಪ್ಪ ಮಾರ್ಯಾದೆ ಕೊಡುತ್ತಿರಲಿಲ್ಲ: ಗುತ್ತಿಗೆದಾರರ ಸಂಘದ ರಾಜ್ಯ ಸಂಘಟನಾ ಕಾರ್ಯದರ್ಶಿ ಜಗನ್ನಾಥ್‌ ಶೇಗಜಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದು, “ಗುತ್ತಿಗೆದಾರರು ಈಶ್ವರಪ್ಪನವರ ಮನೆಗೆ ಹೋದರೆ ಗೆಟ್‌ಔಟ್‌ ಎಂದು ಹೇಳುತ್ತಿದ್ದರು. ಗುತ್ತಿಗೆದಾರರಿಗೆ ಈಶ್ವರಪ್ಪ ಮರ್ಯಾದೆ ಕೊಡುತ್ತಿರಲಿಲ್ಲ” ಎಂದು ಆರೋಪಿಸಿದ್ದಾರೆ.

ಕಾಮಗಾರಿ ಬಿಲ್‌ಗಾಗಿ ಈಶ್ವರಪ್ಪನವರ ಮನೆಗೆ ಹೋದ್ರೆ ಗದರುತ್ತಿದ್ದರು. ಹಲವು ಇಲಾಖೆಗಳಲ್ಲಿ ಕಾಮಗಾರಿ ಬಿಲ್‌ಗಳು ಆಗಿಲ್ಲ. ಕಾಮಗಾರಿಗಳ ಆರಂಭಕ್ಕೂ ಮುನ್ನವೇ ಪರ್ಸೆಂಟೇಜ್‌ ಕೇಳಿದ್ದಕ್ಕೆ ಹಲವು ಕಾಮಗಾರಿಗಳಿಗೆ ಪೂಜೆಯೇ ಆಗಿಲ್ಲ. ಬಿಲ್ ಪಾಸ್ ಮಾಡಿಸಿಕೊಳ್ಳಲು ಎಲ್ಲರಿಗೂ ಲಂಚ ನೀಡಬೇಕು. ಅಧಿಕಾರಿಗಳಿಂದ ಜನಪ್ರತಿನಿಧಿಗಳವರೆಗೆ ಪರ್ಸೆಂಟೇಜ್‌ ನೀಡಬೇಕು ಎಂದು ‌ಅಳಲು ತೋಡಿಕೊಂಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others


ಇದನ್ನೂ ಓದಿರಿ: ಸಂತೋಷ್‌ ಸಾವು ಪ್ರಕರಣ: ಇಂತಹ ನೂರು ಕೇಸ್‌ ನೋಡಿದ್ದೇನೆ; ರಾಜೀನಾಮೆ ನೀಡುವ ಪ್ರಶ್ನೆಯೆ ಇಲ್ಲ: ಕೆ.ಎಸ್‌. ಈಶ್ವರಪ್ಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...