Homeಕರ್ನಾಟಕ40% ಕಮಿಷನ್‌ ನಿಜ; 25,000 ಕೋಟಿ ರೂ. ಪೆಂಡಿಂಗ್ ಬಿಲ್ ಇದೆ: ಗುತ್ತಿಗೆದಾರರ ಸಂಘದ ಅಧ್ಯಕ್ಷರ...

40% ಕಮಿಷನ್‌ ನಿಜ; 25,000 ಕೋಟಿ ರೂ. ಪೆಂಡಿಂಗ್ ಬಿಲ್ ಇದೆ: ಗುತ್ತಿಗೆದಾರರ ಸಂಘದ ಅಧ್ಯಕ್ಷರ ಗಂಭೀರ ಆರೋಪ

- Advertisement -
- Advertisement -

ಬೆಳಗಾವಿಯ ಗುತ್ತಿಗೆದಾರ ಸಂತೋಷ್ ಪಾಟೀಲ್‌ ಅವರು ಉಡುಪಿಯಲ್ಲಿ ಆತ್ಮಹತ್ಯೆಗೆ ಶರಣಾದ ಬಳಿಕ ಗುತ್ತಿಗೆದಾರರ ಸಮಸ್ಯೆಗಳು ಹೊರಬೀಳತೊಡಗಿವೆ. ಸರ್ಕಾರ ಹಾಗೂ ಸಚಿವರ ಮೇಲೆ ಗುತ್ತಿಗೆದಾರರು ಆರೋಪಗಳನ್ನು ಮಾಡುತ್ತಿದ್ದು, ರಾಜ್ಯದಲ್ಲಿ ಅಭಿವೃದ್ಧಿ ಸಾಧ್ಯವಾಗುತ್ತಿಲ್ಲ ಎಂದು ತಿಳಿಸಿದ್ದಾರೆ.

‘ನಾನುಗೌರಿ.ಕಾಂ’ ಜೊತೆ ಮಾತನಾಡಿದ ರಾಜ್ಯ ಗುತ್ತಿಗೆದಾರರಸಂಘದ ಅಧ್ಯಕ್ಷ ಡಿ.ಕೆಂಪಣ್ಣ, “ಗುತ್ತಿಗೆದಾರರಿಂದ 40% ಕಮಿಷನ್‌ ಪಡೆಯುತ್ತಿರುವುದು ನಿಜ. ಈ ಕುರಿತು ಈ ಹಿಂದೆಯೇ ಪತ್ರ ಬರೆಯಲಾಗಿತ್ತು. ಇಷ್ಟು ದಿನವಾದರೂ ಮುಖ್ಯಮಂತ್ರಿಯವರು ನಮ್ಮನ್ನು ಕರೆದು ಮಾತನಾಡಲಿಲ್ಲ. ಸರ್ಕಾರದ ಸ್ಪಷ್ಟ ನಿಲವು ಕೂಡ ವ್ಯಕ್ತವಾಗಿಲ್ಲ. ಈಗಲಾದರೂ ನಿಲುವು ತಾಳುತ್ತಾರೋ ಗೊತ್ತಿಲ್ಲ” ಎಂದು ವಿಷಾದಿಸಿದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಸಂತೋಷ್‌ ಪಾಟೀಲ್‌ ಆತ್ಮಹತ್ಯೆಗೆ ಸಂತಾಪ ಸೂಚಿಸಿದ ಅವರು, “ಸುಪ್ರೀಂ ಕೋರ್ಟ್ ಅಥವಾ ಹೈಕೋರ್ಟ್ ನ್ಯಾಯಮೂರ್ತಿಯವರ ನೇತೃತ್ವದಲ್ಲಿ ಸಂತೋಷ್‌ ಪಾಟೀಲ್‌ ಪ್ರಕರಣದ ಸ್ವತಂತ್ರ ತನಿಖೆ ನಡೆಸಬೇಕು. ಇಲ್ಲದಿದ್ದರೆ ಸತ್ಯ ಹೊರಬರುವುದಿಲ್ಲ. ಸಂತೋಷ ಅವರ ಪತ್ನಿ ಜಯಶ್ರೀ ಅವರಿಗೆ ಎರಡು ಕೋಟಿ ರೂ. ಪರಿಹಾರ ಕೊಡಬೇಕು. ಉಳಿಕೆ ಬಿಲ್‌ಗಳನ್ನೆಲ್ಲ ಕ್ಲಿಯರ್‌ ಮಾಡಿಕೊಡಬೇಕು. ಜಯಶ್ರೀಯವರಿಗೆ ಒಂದು ಸರ್ಕಾರಿ ಉದ್ಯೋಗವನ್ನು ನೀಡಬೇಕು” ಎಂದು ಆಗ್ರಹಿಸಿದರು.

ಇದನ್ನೂ ಓದಿರಿ: ಇವರದೊಂದು ಜನ್ಮನಾ, ನಾಯಿ ಜನ್ಮ: ಈಶ್ವರಪ್ಪ ವಿರುದ್ಧ ಸಂತೋಷ್‌ ಪತ್ನಿ ಆಕ್ರೋಶ

“ಸಂತೋಷ್ ಪಾಟೀಲ್ ಯಾರೆಂದೇ ಗೊತ್ತೇ ಇಲ್ಲ, ಕಾಮಗಾರಿಗಳನ್ನು ಮಾಡಿಯೇ ಇಲ್ಲ” ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್‌.ಈಶ್ವರಪ್ಪ ಹೇಳಿಕೆ ನೀಡಿರುವ ಕುರಿತು ಪ್ರತಿಕ್ರಿಯೆ ನೀಡಿದ ಅವರು, “ಘಟನೆಯಾದ ಬಳಿಕ ಎಲ್ಲರೂ ಹಾಗೆಯೇ ಹೇಳುತ್ತಿದ್ದಾರೆ. ಸಂತೋಷ್‌ ಪಾಟೀಲ್‌ ಅವರು ಈಶ್ವರಪ್ಪನವರ ಜೊತೆ ಫೋಟೋ ತೆಗೆಸಿಕೊಂಡಿದ್ದಾರೆ, ಅವರಿಗೆ ಲೆಟರ್‌ಗಳನ್ನು ಕೊಟ್ಟಿದ್ದಾರೆ. ಇವುಗಳಿಗೆಲ್ಲ ದಾಖಲೆ ಇವೆ. ಕಳ್ಳರು ಯಾವತ್ತಾದರೂ ಒಪ್ಪಿಕೊಳ್ಳುತ್ತಾರಾ?” ಎಂದು ಪ್ರಶ್ನಿಸಿದರು.

“ಅಭಿವೃದ್ಧಿ ಕೆಲಸಗಳು ಸಂಪೂರ್ಣ ಕುಂಠಿತವಾಗಿವೆ. 40 ಪರ್ಸೆಂಟ್‌ ಭ್ರಷ್ಟಾಚಾರ ಮಾಡಿದರೆ ಅಭಿವೃದ್ಧಿ ಸಾಧ್ಯವೆ? 40% ಕಮಿಷನ್‌ ಪಡೆಯುತ್ತಿರುವುದು ಶೇ. 100ರಷ್ಟು ನಿಜ. ಅದಕ್ಕಾಗಿಯೇ ನಾವು ಸ್ವತಂತ್ರ ತನಿಖೆಗೆ ಆಗ್ರಹಿಸುತ್ತಿದ್ದೇವೆ” ಎಂದು ಮತ್ತೊಮ್ಮೆ ಆಗ್ರಹಿಸಿದರು.

ಗುತ್ತಿಗೆದಾರರ ನಿತ್ಯದ ನೋವುಗಳನ್ನು ಬಿಚ್ಚಿಟ್ಟ ಕೆಂಪಣ್ಣನವರು, “ಪೇಮೆಂಟ್‌ಗಾಗಿ ಗುತ್ತಿಗೆದಾರರು ಇಲಾಖೆಗಳನ್ನು ಅಲೆಯುತ್ತಿದ್ದಾರೆ. 25,000 ಕೋಟಿ ರೂ. ಪೆಂಡಿಂಗ್ ಬಿಲ್ ಇದೆ ಎಂದರೆ ಅಲೆದಾಟ ಎಷ್ಟಿರಬಹುದೆಂದು ಊಹಿಸಿ. 40% ಪರ್ಸೆಂಟ್‌ ಕಮಿಷನ್‌ ಕೊಟ್ಟು ನಾವು ಒಳ್ಳೆಯ ಕಾಮಗಾರಿಯನ್ನು ಮಾಡಲು ಸಾಧ್ಯವೇ?” ಎಂದು ಪ್ರಶ್ನಿಸಿದರು.

‘ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಕಾಂಗ್ರೆಸ್‌ ಏಜೆಂಟ್‌, ಅವರ ಮೇಲೆ ಮಾನನಷ್ಟ ಮೊಕದ್ದಮೆ ಹಾಕುತ್ತೇನೆ’ ಎಂದು ಆರೋಗ್ಯ ಸಚಿವ ಸುಧಾಕರ್‌ ಹೇಳಿರುವುದಕ್ಕೆ ಪ್ರತಿಕ್ರಿಯೆ ನೀಡಿದ ಅವರು, “ಬಹಳ ಸಂತೋಷ. ಕೇಸ್ ಹಾಕಿಕೊಳ್ಳಲಿ. ಆದರೆ ನಾನು ಕಾಂಗ್ರೆಸ್‌ನವನೆಂದು ಫ್ರೂವ್ ಮಾಡಲಿ. ನಿಜವಾಗಿ ಹೇಳುವುದಾದರೆ ಸುಧಾಕರ್‌ ಅವರೇ ಕಾಂಗ್ರೆಸ್‌ನವರು. ಈಗ ಬಿಜೆಪಿ, ಮುಂದೆ ಕಾಂಗ್ರೆಸ್ ಆಗುತ್ತಾರೆ” ಎಂದು ಭವಿಷ್ಯ ನುಡಿದರು.

ಮುಂದಿನ ನಡೆಯ ಬಗ್ಗೆ ತಿಳಿಸಿದ ಅವರು, “ಸರ್ಕಾರ ನಮ್ಮ ಸಮಸ್ಯೆಗಳನ್ನು ಬಗೆಹರಿಸದಿದ್ದರೆ ಹೋರಾಟ ಮಾಡುತ್ತೇವೆ” ಎಂದು ಎಚ್ಚರಿಸಿದರು.

ಈಶ್ವರಪ್ಪ ಮಾರ್ಯಾದೆ ಕೊಡುತ್ತಿರಲಿಲ್ಲ: ಗುತ್ತಿಗೆದಾರರ ಸಂಘದ ರಾಜ್ಯ ಸಂಘಟನಾ ಕಾರ್ಯದರ್ಶಿ ಜಗನ್ನಾಥ್‌ ಶೇಗಜಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದು, “ಗುತ್ತಿಗೆದಾರರು ಈಶ್ವರಪ್ಪನವರ ಮನೆಗೆ ಹೋದರೆ ಗೆಟ್‌ಔಟ್‌ ಎಂದು ಹೇಳುತ್ತಿದ್ದರು. ಗುತ್ತಿಗೆದಾರರಿಗೆ ಈಶ್ವರಪ್ಪ ಮರ್ಯಾದೆ ಕೊಡುತ್ತಿರಲಿಲ್ಲ” ಎಂದು ಆರೋಪಿಸಿದ್ದಾರೆ.

ಕಾಮಗಾರಿ ಬಿಲ್‌ಗಾಗಿ ಈಶ್ವರಪ್ಪನವರ ಮನೆಗೆ ಹೋದ್ರೆ ಗದರುತ್ತಿದ್ದರು. ಹಲವು ಇಲಾಖೆಗಳಲ್ಲಿ ಕಾಮಗಾರಿ ಬಿಲ್‌ಗಳು ಆಗಿಲ್ಲ. ಕಾಮಗಾರಿಗಳ ಆರಂಭಕ್ಕೂ ಮುನ್ನವೇ ಪರ್ಸೆಂಟೇಜ್‌ ಕೇಳಿದ್ದಕ್ಕೆ ಹಲವು ಕಾಮಗಾರಿಗಳಿಗೆ ಪೂಜೆಯೇ ಆಗಿಲ್ಲ. ಬಿಲ್ ಪಾಸ್ ಮಾಡಿಸಿಕೊಳ್ಳಲು ಎಲ್ಲರಿಗೂ ಲಂಚ ನೀಡಬೇಕು. ಅಧಿಕಾರಿಗಳಿಂದ ಜನಪ್ರತಿನಿಧಿಗಳವರೆಗೆ ಪರ್ಸೆಂಟೇಜ್‌ ನೀಡಬೇಕು ಎಂದು ‌ಅಳಲು ತೋಡಿಕೊಂಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others


ಇದನ್ನೂ ಓದಿರಿ: ಸಂತೋಷ್‌ ಸಾವು ಪ್ರಕರಣ: ಇಂತಹ ನೂರು ಕೇಸ್‌ ನೋಡಿದ್ದೇನೆ; ರಾಜೀನಾಮೆ ನೀಡುವ ಪ್ರಶ್ನೆಯೆ ಇಲ್ಲ: ಕೆ.ಎಸ್‌. ಈಶ್ವರಪ್ಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...