Homeಕರ್ನಾಟಕ40% ಕಮಿಷನ್‌ ನಿಜ; 25,000 ಕೋಟಿ ರೂ. ಪೆಂಡಿಂಗ್ ಬಿಲ್ ಇದೆ: ಗುತ್ತಿಗೆದಾರರ ಸಂಘದ ಅಧ್ಯಕ್ಷರ...

40% ಕಮಿಷನ್‌ ನಿಜ; 25,000 ಕೋಟಿ ರೂ. ಪೆಂಡಿಂಗ್ ಬಿಲ್ ಇದೆ: ಗುತ್ತಿಗೆದಾರರ ಸಂಘದ ಅಧ್ಯಕ್ಷರ ಗಂಭೀರ ಆರೋಪ

- Advertisement -
- Advertisement -

ಬೆಳಗಾವಿಯ ಗುತ್ತಿಗೆದಾರ ಸಂತೋಷ್ ಪಾಟೀಲ್‌ ಅವರು ಉಡುಪಿಯಲ್ಲಿ ಆತ್ಮಹತ್ಯೆಗೆ ಶರಣಾದ ಬಳಿಕ ಗುತ್ತಿಗೆದಾರರ ಸಮಸ್ಯೆಗಳು ಹೊರಬೀಳತೊಡಗಿವೆ. ಸರ್ಕಾರ ಹಾಗೂ ಸಚಿವರ ಮೇಲೆ ಗುತ್ತಿಗೆದಾರರು ಆರೋಪಗಳನ್ನು ಮಾಡುತ್ತಿದ್ದು, ರಾಜ್ಯದಲ್ಲಿ ಅಭಿವೃದ್ಧಿ ಸಾಧ್ಯವಾಗುತ್ತಿಲ್ಲ ಎಂದು ತಿಳಿಸಿದ್ದಾರೆ.

‘ನಾನುಗೌರಿ.ಕಾಂ’ ಜೊತೆ ಮಾತನಾಡಿದ ರಾಜ್ಯ ಗುತ್ತಿಗೆದಾರರಸಂಘದ ಅಧ್ಯಕ್ಷ ಡಿ.ಕೆಂಪಣ್ಣ, “ಗುತ್ತಿಗೆದಾರರಿಂದ 40% ಕಮಿಷನ್‌ ಪಡೆಯುತ್ತಿರುವುದು ನಿಜ. ಈ ಕುರಿತು ಈ ಹಿಂದೆಯೇ ಪತ್ರ ಬರೆಯಲಾಗಿತ್ತು. ಇಷ್ಟು ದಿನವಾದರೂ ಮುಖ್ಯಮಂತ್ರಿಯವರು ನಮ್ಮನ್ನು ಕರೆದು ಮಾತನಾಡಲಿಲ್ಲ. ಸರ್ಕಾರದ ಸ್ಪಷ್ಟ ನಿಲವು ಕೂಡ ವ್ಯಕ್ತವಾಗಿಲ್ಲ. ಈಗಲಾದರೂ ನಿಲುವು ತಾಳುತ್ತಾರೋ ಗೊತ್ತಿಲ್ಲ” ಎಂದು ವಿಷಾದಿಸಿದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಸಂತೋಷ್‌ ಪಾಟೀಲ್‌ ಆತ್ಮಹತ್ಯೆಗೆ ಸಂತಾಪ ಸೂಚಿಸಿದ ಅವರು, “ಸುಪ್ರೀಂ ಕೋರ್ಟ್ ಅಥವಾ ಹೈಕೋರ್ಟ್ ನ್ಯಾಯಮೂರ್ತಿಯವರ ನೇತೃತ್ವದಲ್ಲಿ ಸಂತೋಷ್‌ ಪಾಟೀಲ್‌ ಪ್ರಕರಣದ ಸ್ವತಂತ್ರ ತನಿಖೆ ನಡೆಸಬೇಕು. ಇಲ್ಲದಿದ್ದರೆ ಸತ್ಯ ಹೊರಬರುವುದಿಲ್ಲ. ಸಂತೋಷ ಅವರ ಪತ್ನಿ ಜಯಶ್ರೀ ಅವರಿಗೆ ಎರಡು ಕೋಟಿ ರೂ. ಪರಿಹಾರ ಕೊಡಬೇಕು. ಉಳಿಕೆ ಬಿಲ್‌ಗಳನ್ನೆಲ್ಲ ಕ್ಲಿಯರ್‌ ಮಾಡಿಕೊಡಬೇಕು. ಜಯಶ್ರೀಯವರಿಗೆ ಒಂದು ಸರ್ಕಾರಿ ಉದ್ಯೋಗವನ್ನು ನೀಡಬೇಕು” ಎಂದು ಆಗ್ರಹಿಸಿದರು.

ಇದನ್ನೂ ಓದಿರಿ: ಇವರದೊಂದು ಜನ್ಮನಾ, ನಾಯಿ ಜನ್ಮ: ಈಶ್ವರಪ್ಪ ವಿರುದ್ಧ ಸಂತೋಷ್‌ ಪತ್ನಿ ಆಕ್ರೋಶ

“ಸಂತೋಷ್ ಪಾಟೀಲ್ ಯಾರೆಂದೇ ಗೊತ್ತೇ ಇಲ್ಲ, ಕಾಮಗಾರಿಗಳನ್ನು ಮಾಡಿಯೇ ಇಲ್ಲ” ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್‌.ಈಶ್ವರಪ್ಪ ಹೇಳಿಕೆ ನೀಡಿರುವ ಕುರಿತು ಪ್ರತಿಕ್ರಿಯೆ ನೀಡಿದ ಅವರು, “ಘಟನೆಯಾದ ಬಳಿಕ ಎಲ್ಲರೂ ಹಾಗೆಯೇ ಹೇಳುತ್ತಿದ್ದಾರೆ. ಸಂತೋಷ್‌ ಪಾಟೀಲ್‌ ಅವರು ಈಶ್ವರಪ್ಪನವರ ಜೊತೆ ಫೋಟೋ ತೆಗೆಸಿಕೊಂಡಿದ್ದಾರೆ, ಅವರಿಗೆ ಲೆಟರ್‌ಗಳನ್ನು ಕೊಟ್ಟಿದ್ದಾರೆ. ಇವುಗಳಿಗೆಲ್ಲ ದಾಖಲೆ ಇವೆ. ಕಳ್ಳರು ಯಾವತ್ತಾದರೂ ಒಪ್ಪಿಕೊಳ್ಳುತ್ತಾರಾ?” ಎಂದು ಪ್ರಶ್ನಿಸಿದರು.

“ಅಭಿವೃದ್ಧಿ ಕೆಲಸಗಳು ಸಂಪೂರ್ಣ ಕುಂಠಿತವಾಗಿವೆ. 40 ಪರ್ಸೆಂಟ್‌ ಭ್ರಷ್ಟಾಚಾರ ಮಾಡಿದರೆ ಅಭಿವೃದ್ಧಿ ಸಾಧ್ಯವೆ? 40% ಕಮಿಷನ್‌ ಪಡೆಯುತ್ತಿರುವುದು ಶೇ. 100ರಷ್ಟು ನಿಜ. ಅದಕ್ಕಾಗಿಯೇ ನಾವು ಸ್ವತಂತ್ರ ತನಿಖೆಗೆ ಆಗ್ರಹಿಸುತ್ತಿದ್ದೇವೆ” ಎಂದು ಮತ್ತೊಮ್ಮೆ ಆಗ್ರಹಿಸಿದರು.

ಗುತ್ತಿಗೆದಾರರ ನಿತ್ಯದ ನೋವುಗಳನ್ನು ಬಿಚ್ಚಿಟ್ಟ ಕೆಂಪಣ್ಣನವರು, “ಪೇಮೆಂಟ್‌ಗಾಗಿ ಗುತ್ತಿಗೆದಾರರು ಇಲಾಖೆಗಳನ್ನು ಅಲೆಯುತ್ತಿದ್ದಾರೆ. 25,000 ಕೋಟಿ ರೂ. ಪೆಂಡಿಂಗ್ ಬಿಲ್ ಇದೆ ಎಂದರೆ ಅಲೆದಾಟ ಎಷ್ಟಿರಬಹುದೆಂದು ಊಹಿಸಿ. 40% ಪರ್ಸೆಂಟ್‌ ಕಮಿಷನ್‌ ಕೊಟ್ಟು ನಾವು ಒಳ್ಳೆಯ ಕಾಮಗಾರಿಯನ್ನು ಮಾಡಲು ಸಾಧ್ಯವೇ?” ಎಂದು ಪ್ರಶ್ನಿಸಿದರು.

‘ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಕಾಂಗ್ರೆಸ್‌ ಏಜೆಂಟ್‌, ಅವರ ಮೇಲೆ ಮಾನನಷ್ಟ ಮೊಕದ್ದಮೆ ಹಾಕುತ್ತೇನೆ’ ಎಂದು ಆರೋಗ್ಯ ಸಚಿವ ಸುಧಾಕರ್‌ ಹೇಳಿರುವುದಕ್ಕೆ ಪ್ರತಿಕ್ರಿಯೆ ನೀಡಿದ ಅವರು, “ಬಹಳ ಸಂತೋಷ. ಕೇಸ್ ಹಾಕಿಕೊಳ್ಳಲಿ. ಆದರೆ ನಾನು ಕಾಂಗ್ರೆಸ್‌ನವನೆಂದು ಫ್ರೂವ್ ಮಾಡಲಿ. ನಿಜವಾಗಿ ಹೇಳುವುದಾದರೆ ಸುಧಾಕರ್‌ ಅವರೇ ಕಾಂಗ್ರೆಸ್‌ನವರು. ಈಗ ಬಿಜೆಪಿ, ಮುಂದೆ ಕಾಂಗ್ರೆಸ್ ಆಗುತ್ತಾರೆ” ಎಂದು ಭವಿಷ್ಯ ನುಡಿದರು.

ಮುಂದಿನ ನಡೆಯ ಬಗ್ಗೆ ತಿಳಿಸಿದ ಅವರು, “ಸರ್ಕಾರ ನಮ್ಮ ಸಮಸ್ಯೆಗಳನ್ನು ಬಗೆಹರಿಸದಿದ್ದರೆ ಹೋರಾಟ ಮಾಡುತ್ತೇವೆ” ಎಂದು ಎಚ್ಚರಿಸಿದರು.

ಈಶ್ವರಪ್ಪ ಮಾರ್ಯಾದೆ ಕೊಡುತ್ತಿರಲಿಲ್ಲ: ಗುತ್ತಿಗೆದಾರರ ಸಂಘದ ರಾಜ್ಯ ಸಂಘಟನಾ ಕಾರ್ಯದರ್ಶಿ ಜಗನ್ನಾಥ್‌ ಶೇಗಜಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದು, “ಗುತ್ತಿಗೆದಾರರು ಈಶ್ವರಪ್ಪನವರ ಮನೆಗೆ ಹೋದರೆ ಗೆಟ್‌ಔಟ್‌ ಎಂದು ಹೇಳುತ್ತಿದ್ದರು. ಗುತ್ತಿಗೆದಾರರಿಗೆ ಈಶ್ವರಪ್ಪ ಮರ್ಯಾದೆ ಕೊಡುತ್ತಿರಲಿಲ್ಲ” ಎಂದು ಆರೋಪಿಸಿದ್ದಾರೆ.

ಕಾಮಗಾರಿ ಬಿಲ್‌ಗಾಗಿ ಈಶ್ವರಪ್ಪನವರ ಮನೆಗೆ ಹೋದ್ರೆ ಗದರುತ್ತಿದ್ದರು. ಹಲವು ಇಲಾಖೆಗಳಲ್ಲಿ ಕಾಮಗಾರಿ ಬಿಲ್‌ಗಳು ಆಗಿಲ್ಲ. ಕಾಮಗಾರಿಗಳ ಆರಂಭಕ್ಕೂ ಮುನ್ನವೇ ಪರ್ಸೆಂಟೇಜ್‌ ಕೇಳಿದ್ದಕ್ಕೆ ಹಲವು ಕಾಮಗಾರಿಗಳಿಗೆ ಪೂಜೆಯೇ ಆಗಿಲ್ಲ. ಬಿಲ್ ಪಾಸ್ ಮಾಡಿಸಿಕೊಳ್ಳಲು ಎಲ್ಲರಿಗೂ ಲಂಚ ನೀಡಬೇಕು. ಅಧಿಕಾರಿಗಳಿಂದ ಜನಪ್ರತಿನಿಧಿಗಳವರೆಗೆ ಪರ್ಸೆಂಟೇಜ್‌ ನೀಡಬೇಕು ಎಂದು ‌ಅಳಲು ತೋಡಿಕೊಂಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others


ಇದನ್ನೂ ಓದಿರಿ: ಸಂತೋಷ್‌ ಸಾವು ಪ್ರಕರಣ: ಇಂತಹ ನೂರು ಕೇಸ್‌ ನೋಡಿದ್ದೇನೆ; ರಾಜೀನಾಮೆ ನೀಡುವ ಪ್ರಶ್ನೆಯೆ ಇಲ್ಲ: ಕೆ.ಎಸ್‌. ಈಶ್ವರಪ್ಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....