Homeಕರ್ನಾಟಕ40% ಕಮಿಷನ್‌ ನಿಜ; 25,000 ಕೋಟಿ ರೂ. ಪೆಂಡಿಂಗ್ ಬಿಲ್ ಇದೆ: ಗುತ್ತಿಗೆದಾರರ ಸಂಘದ ಅಧ್ಯಕ್ಷರ...

40% ಕಮಿಷನ್‌ ನಿಜ; 25,000 ಕೋಟಿ ರೂ. ಪೆಂಡಿಂಗ್ ಬಿಲ್ ಇದೆ: ಗುತ್ತಿಗೆದಾರರ ಸಂಘದ ಅಧ್ಯಕ್ಷರ ಗಂಭೀರ ಆರೋಪ

- Advertisement -
- Advertisement -

ಬೆಳಗಾವಿಯ ಗುತ್ತಿಗೆದಾರ ಸಂತೋಷ್ ಪಾಟೀಲ್‌ ಅವರು ಉಡುಪಿಯಲ್ಲಿ ಆತ್ಮಹತ್ಯೆಗೆ ಶರಣಾದ ಬಳಿಕ ಗುತ್ತಿಗೆದಾರರ ಸಮಸ್ಯೆಗಳು ಹೊರಬೀಳತೊಡಗಿವೆ. ಸರ್ಕಾರ ಹಾಗೂ ಸಚಿವರ ಮೇಲೆ ಗುತ್ತಿಗೆದಾರರು ಆರೋಪಗಳನ್ನು ಮಾಡುತ್ತಿದ್ದು, ರಾಜ್ಯದಲ್ಲಿ ಅಭಿವೃದ್ಧಿ ಸಾಧ್ಯವಾಗುತ್ತಿಲ್ಲ ಎಂದು ತಿಳಿಸಿದ್ದಾರೆ.

‘ನಾನುಗೌರಿ.ಕಾಂ’ ಜೊತೆ ಮಾತನಾಡಿದ ರಾಜ್ಯ ಗುತ್ತಿಗೆದಾರರಸಂಘದ ಅಧ್ಯಕ್ಷ ಡಿ.ಕೆಂಪಣ್ಣ, “ಗುತ್ತಿಗೆದಾರರಿಂದ 40% ಕಮಿಷನ್‌ ಪಡೆಯುತ್ತಿರುವುದು ನಿಜ. ಈ ಕುರಿತು ಈ ಹಿಂದೆಯೇ ಪತ್ರ ಬರೆಯಲಾಗಿತ್ತು. ಇಷ್ಟು ದಿನವಾದರೂ ಮುಖ್ಯಮಂತ್ರಿಯವರು ನಮ್ಮನ್ನು ಕರೆದು ಮಾತನಾಡಲಿಲ್ಲ. ಸರ್ಕಾರದ ಸ್ಪಷ್ಟ ನಿಲವು ಕೂಡ ವ್ಯಕ್ತವಾಗಿಲ್ಲ. ಈಗಲಾದರೂ ನಿಲುವು ತಾಳುತ್ತಾರೋ ಗೊತ್ತಿಲ್ಲ” ಎಂದು ವಿಷಾದಿಸಿದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಸಂತೋಷ್‌ ಪಾಟೀಲ್‌ ಆತ್ಮಹತ್ಯೆಗೆ ಸಂತಾಪ ಸೂಚಿಸಿದ ಅವರು, “ಸುಪ್ರೀಂ ಕೋರ್ಟ್ ಅಥವಾ ಹೈಕೋರ್ಟ್ ನ್ಯಾಯಮೂರ್ತಿಯವರ ನೇತೃತ್ವದಲ್ಲಿ ಸಂತೋಷ್‌ ಪಾಟೀಲ್‌ ಪ್ರಕರಣದ ಸ್ವತಂತ್ರ ತನಿಖೆ ನಡೆಸಬೇಕು. ಇಲ್ಲದಿದ್ದರೆ ಸತ್ಯ ಹೊರಬರುವುದಿಲ್ಲ. ಸಂತೋಷ ಅವರ ಪತ್ನಿ ಜಯಶ್ರೀ ಅವರಿಗೆ ಎರಡು ಕೋಟಿ ರೂ. ಪರಿಹಾರ ಕೊಡಬೇಕು. ಉಳಿಕೆ ಬಿಲ್‌ಗಳನ್ನೆಲ್ಲ ಕ್ಲಿಯರ್‌ ಮಾಡಿಕೊಡಬೇಕು. ಜಯಶ್ರೀಯವರಿಗೆ ಒಂದು ಸರ್ಕಾರಿ ಉದ್ಯೋಗವನ್ನು ನೀಡಬೇಕು” ಎಂದು ಆಗ್ರಹಿಸಿದರು.

ಇದನ್ನೂ ಓದಿರಿ: ಇವರದೊಂದು ಜನ್ಮನಾ, ನಾಯಿ ಜನ್ಮ: ಈಶ್ವರಪ್ಪ ವಿರುದ್ಧ ಸಂತೋಷ್‌ ಪತ್ನಿ ಆಕ್ರೋಶ

“ಸಂತೋಷ್ ಪಾಟೀಲ್ ಯಾರೆಂದೇ ಗೊತ್ತೇ ಇಲ್ಲ, ಕಾಮಗಾರಿಗಳನ್ನು ಮಾಡಿಯೇ ಇಲ್ಲ” ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್‌.ಈಶ್ವರಪ್ಪ ಹೇಳಿಕೆ ನೀಡಿರುವ ಕುರಿತು ಪ್ರತಿಕ್ರಿಯೆ ನೀಡಿದ ಅವರು, “ಘಟನೆಯಾದ ಬಳಿಕ ಎಲ್ಲರೂ ಹಾಗೆಯೇ ಹೇಳುತ್ತಿದ್ದಾರೆ. ಸಂತೋಷ್‌ ಪಾಟೀಲ್‌ ಅವರು ಈಶ್ವರಪ್ಪನವರ ಜೊತೆ ಫೋಟೋ ತೆಗೆಸಿಕೊಂಡಿದ್ದಾರೆ, ಅವರಿಗೆ ಲೆಟರ್‌ಗಳನ್ನು ಕೊಟ್ಟಿದ್ದಾರೆ. ಇವುಗಳಿಗೆಲ್ಲ ದಾಖಲೆ ಇವೆ. ಕಳ್ಳರು ಯಾವತ್ತಾದರೂ ಒಪ್ಪಿಕೊಳ್ಳುತ್ತಾರಾ?” ಎಂದು ಪ್ರಶ್ನಿಸಿದರು.

“ಅಭಿವೃದ್ಧಿ ಕೆಲಸಗಳು ಸಂಪೂರ್ಣ ಕುಂಠಿತವಾಗಿವೆ. 40 ಪರ್ಸೆಂಟ್‌ ಭ್ರಷ್ಟಾಚಾರ ಮಾಡಿದರೆ ಅಭಿವೃದ್ಧಿ ಸಾಧ್ಯವೆ? 40% ಕಮಿಷನ್‌ ಪಡೆಯುತ್ತಿರುವುದು ಶೇ. 100ರಷ್ಟು ನಿಜ. ಅದಕ್ಕಾಗಿಯೇ ನಾವು ಸ್ವತಂತ್ರ ತನಿಖೆಗೆ ಆಗ್ರಹಿಸುತ್ತಿದ್ದೇವೆ” ಎಂದು ಮತ್ತೊಮ್ಮೆ ಆಗ್ರಹಿಸಿದರು.

ಗುತ್ತಿಗೆದಾರರ ನಿತ್ಯದ ನೋವುಗಳನ್ನು ಬಿಚ್ಚಿಟ್ಟ ಕೆಂಪಣ್ಣನವರು, “ಪೇಮೆಂಟ್‌ಗಾಗಿ ಗುತ್ತಿಗೆದಾರರು ಇಲಾಖೆಗಳನ್ನು ಅಲೆಯುತ್ತಿದ್ದಾರೆ. 25,000 ಕೋಟಿ ರೂ. ಪೆಂಡಿಂಗ್ ಬಿಲ್ ಇದೆ ಎಂದರೆ ಅಲೆದಾಟ ಎಷ್ಟಿರಬಹುದೆಂದು ಊಹಿಸಿ. 40% ಪರ್ಸೆಂಟ್‌ ಕಮಿಷನ್‌ ಕೊಟ್ಟು ನಾವು ಒಳ್ಳೆಯ ಕಾಮಗಾರಿಯನ್ನು ಮಾಡಲು ಸಾಧ್ಯವೇ?” ಎಂದು ಪ್ರಶ್ನಿಸಿದರು.

‘ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಕಾಂಗ್ರೆಸ್‌ ಏಜೆಂಟ್‌, ಅವರ ಮೇಲೆ ಮಾನನಷ್ಟ ಮೊಕದ್ದಮೆ ಹಾಕುತ್ತೇನೆ’ ಎಂದು ಆರೋಗ್ಯ ಸಚಿವ ಸುಧಾಕರ್‌ ಹೇಳಿರುವುದಕ್ಕೆ ಪ್ರತಿಕ್ರಿಯೆ ನೀಡಿದ ಅವರು, “ಬಹಳ ಸಂತೋಷ. ಕೇಸ್ ಹಾಕಿಕೊಳ್ಳಲಿ. ಆದರೆ ನಾನು ಕಾಂಗ್ರೆಸ್‌ನವನೆಂದು ಫ್ರೂವ್ ಮಾಡಲಿ. ನಿಜವಾಗಿ ಹೇಳುವುದಾದರೆ ಸುಧಾಕರ್‌ ಅವರೇ ಕಾಂಗ್ರೆಸ್‌ನವರು. ಈಗ ಬಿಜೆಪಿ, ಮುಂದೆ ಕಾಂಗ್ರೆಸ್ ಆಗುತ್ತಾರೆ” ಎಂದು ಭವಿಷ್ಯ ನುಡಿದರು.

ಮುಂದಿನ ನಡೆಯ ಬಗ್ಗೆ ತಿಳಿಸಿದ ಅವರು, “ಸರ್ಕಾರ ನಮ್ಮ ಸಮಸ್ಯೆಗಳನ್ನು ಬಗೆಹರಿಸದಿದ್ದರೆ ಹೋರಾಟ ಮಾಡುತ್ತೇವೆ” ಎಂದು ಎಚ್ಚರಿಸಿದರು.

ಈಶ್ವರಪ್ಪ ಮಾರ್ಯಾದೆ ಕೊಡುತ್ತಿರಲಿಲ್ಲ: ಗುತ್ತಿಗೆದಾರರ ಸಂಘದ ರಾಜ್ಯ ಸಂಘಟನಾ ಕಾರ್ಯದರ್ಶಿ ಜಗನ್ನಾಥ್‌ ಶೇಗಜಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದು, “ಗುತ್ತಿಗೆದಾರರು ಈಶ್ವರಪ್ಪನವರ ಮನೆಗೆ ಹೋದರೆ ಗೆಟ್‌ಔಟ್‌ ಎಂದು ಹೇಳುತ್ತಿದ್ದರು. ಗುತ್ತಿಗೆದಾರರಿಗೆ ಈಶ್ವರಪ್ಪ ಮರ್ಯಾದೆ ಕೊಡುತ್ತಿರಲಿಲ್ಲ” ಎಂದು ಆರೋಪಿಸಿದ್ದಾರೆ.

ಕಾಮಗಾರಿ ಬಿಲ್‌ಗಾಗಿ ಈಶ್ವರಪ್ಪನವರ ಮನೆಗೆ ಹೋದ್ರೆ ಗದರುತ್ತಿದ್ದರು. ಹಲವು ಇಲಾಖೆಗಳಲ್ಲಿ ಕಾಮಗಾರಿ ಬಿಲ್‌ಗಳು ಆಗಿಲ್ಲ. ಕಾಮಗಾರಿಗಳ ಆರಂಭಕ್ಕೂ ಮುನ್ನವೇ ಪರ್ಸೆಂಟೇಜ್‌ ಕೇಳಿದ್ದಕ್ಕೆ ಹಲವು ಕಾಮಗಾರಿಗಳಿಗೆ ಪೂಜೆಯೇ ಆಗಿಲ್ಲ. ಬಿಲ್ ಪಾಸ್ ಮಾಡಿಸಿಕೊಳ್ಳಲು ಎಲ್ಲರಿಗೂ ಲಂಚ ನೀಡಬೇಕು. ಅಧಿಕಾರಿಗಳಿಂದ ಜನಪ್ರತಿನಿಧಿಗಳವರೆಗೆ ಪರ್ಸೆಂಟೇಜ್‌ ನೀಡಬೇಕು ಎಂದು ‌ಅಳಲು ತೋಡಿಕೊಂಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others


ಇದನ್ನೂ ಓದಿರಿ: ಸಂತೋಷ್‌ ಸಾವು ಪ್ರಕರಣ: ಇಂತಹ ನೂರು ಕೇಸ್‌ ನೋಡಿದ್ದೇನೆ; ರಾಜೀನಾಮೆ ನೀಡುವ ಪ್ರಶ್ನೆಯೆ ಇಲ್ಲ: ಕೆ.ಎಸ್‌. ಈಶ್ವರಪ್ಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....