Homeಕರ್ನಾಟಕ40% ಕಮಿಷನ್‌ ಸರ್ಕಾರದ ವಿರುದ್ಧ ಜನಜಾಗೃತಿಗೆ ರಾಜ್ಯ ಪ್ರವಾಸ: ಸಿದ್ದರಾಮಯ್ಯ ಘೋಷಣೆ

40% ಕಮಿಷನ್‌ ಸರ್ಕಾರದ ವಿರುದ್ಧ ಜನಜಾಗೃತಿಗೆ ರಾಜ್ಯ ಪ್ರವಾಸ: ಸಿದ್ದರಾಮಯ್ಯ ಘೋಷಣೆ

‘40% ಕಮಿಷನ್ ದಂಧೆಯ ಬಗ್ಗೆ ರಾಜ್ಯ ಗುತ್ತಿಗೆದಾರರ ಸಂಘವು ಪ್ರಧಾನಿಯವರಿಗೆ ಪತ್ರ ಬರೆದಿತ್ತು. ನರೇಂದ್ರ ಮೋದಿಯವರು ಸುಮ್ಮನಿರುವುದು ಏಕೆ? 40% ಕಮಿಷನ್ ನಲ್ಲಿ ಮೋದಿಯವರಿಗೂ ಪಾಲಿದೆಯಾ?’

- Advertisement -
- Advertisement -

ಸಂತೋಷ್ ಪಾಟೀಲ್ ಎಂಬ ಗುತ್ತಿಗೆದಾರನ ಬಲಿ ಪಡೆದ ಭ್ರಷ್ಟ 40% ಕಮಿಷನ್ ಸರ್ಕಾರದ ವಿರುದ್ಧ ಜನ ಜಾಗೃತಿ ಮೂಡಿಸಲು ನಾವು 5 ದಿನಗಳ ಕಾಲ ರಾಜ್ಯ ಪ್ರವಾಸ ಮಾಡುತ್ತೇವೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ರಾಜ್ಯದ ಪ್ರತಿ ಜಿಲ್ಲೆಗೂ ನಮ್ಮ ಪಕ್ಷದ ನಾಯಕರ ನೇತೃತ್ವದಲ್ಲಿ ತಂಡಗಳಾಗಿ ತೆರಳಿ, ಜನರ ಜೀವ ಮತ್ತು ರಾಜ್ಯದ ಮಾನ ಕಾಪಾಡಲು ಭ್ರಷ್ಟ ಬಿಜೆಪಿ ಸರ್ಕಾರವನ್ನು ಕಿತ್ತೊಗೆಯುವಂತೆ ಮನವಿ ಮಾಡುತ್ತೇವೆ ಎಂದು ಅವರು ಘೋಷಿಸಿದ್ದಾರೆ.

ನಾಳೆ ಬೆಳಿಗ್ಗೆ 10 ಗಂಟೆಗೆ ಮುಖ್ಯಮಂತ್ರಿಗಳಿಗೆ ಘೇರಾವ್ ಹಾಕುತ್ತೇವೆ. ಭ್ರಷ್ಟಾಚಾರದಲ್ಲಿ ಕರ್ನಾಟಕವನ್ನು ನಂಬರ್ 2 ಸ್ಥಾನಕ್ಕೇರಿಸಿದ್ದ ಮುಖ್ಯಮಂತ್ರಿಯೂ ಸೇರಿದಂತೆ ಸಾಲು ಸಾಲು ಸಚಿವರು ಜೈಲು ಸೇರಿದ್ದನ್ನು ದೇಶ ಕಂಡಿದೆ. ಈಗ ಈ ಭ್ರಷ್ಟರ ಎರಡನೇ‌ ಅಂಕ ಶುರುವಾಗಿದೆ. ಮತ್ತೆ ದೇಶದ ಮುಂದೆ ಕರ್ನಾಟಕ ತಲೆ ತಗ್ಗಿಸುವಂತಾಗಿದೆ ಎಂದಿದ್ದಾರೆ.

ಜಬಾಬ್ದಾರಿಯುತ ವಿರೋಧ ಪಕ್ಷವಾಗಿ ಸಂತೋಷ್ ಪಾಟೀಲ್ ಅವರ ಸಾವಿಗೆ ನ್ಯಾಯ ಕೊಡಿಸುವ ಪ್ರಾಮಾಣಿಕ ಪ್ರಯತ್ನವನ್ನು ನಾವು ಮಾಡುತ್ತೇವೆ. ಇದು ನಮ್ಮ ಕರ್ತವ್ಯ. ಬಿಜೆಪಿ ಸರ್ಕಾರದ ಕಮಿಷನ್ ಕಿರುಕುಳಕ್ಕೆ ಇನ್ನಷ್ಟು ಜೀವಗಳು ಬಲಿಯಾಗಬಾರದು ಎಂದು ಎಚ್ಚರಿಸಿದ್ದಾರೆ.

ಇದು ಕೇವಲ ಕಾಂಗ್ರೆಸ್ ಪಕ್ಷದ ರಾಜಕೀಯ ಪ್ರತಿಭಟನೆಯಾಗಬಾರದು. ಜನರ ಬೆವರ ಗಳಿಕೆಯ ತೆರಿಗೆ ಹಣವನ್ನು ಲೂಟಿ‌ ಮಾಡುತ್ತಿರುವ ಮತ್ತು ರಾಷ್ಟಮಟ್ಟದಲ್ಲಿ ರಾಜ್ಯದ ಮಾನ ಹರಾಜು ಹಾಕುತ್ತಿರುವ ಭ್ರಷ್ಟ ಬಿಜೆಪಿ‌ ಸರ್ಕಾರದ ವಿರುದ್ಧ ಪ್ರತಿಯೊಬ್ಬ ಕನ್ನಡಿಗನೂ ಬೀದಿಗಿಳಿಯಬೇಕಾಗಿದೆ ಎಂದು ಆಶಿಸಿದ್ದಾರೆ.

ಇದನ್ನೂ ಓದಿರಿ: 40% ಕಮಿಷನ್‌ ನಿಜ; 25,000 ಕೋಟಿ ರೂ. ಪೆಂಡಿಂಗ್ ಬಿಲ್ ಇದೆ: ಗುತ್ತಿಗೆದಾರರ ಸಂಘದ ಅಧ್ಯಕ್ಷರ ಗಂಭೀರ ಆರೋಪ

ಸಚಿವ ಈಶ್ವರಪ್ಪ ಮೇಲೆ ನಿನ್ನೆಯೇ ಎಫ್.ಐ.ಆರ್ ದಾಖಲಾಗಿದೆ. ಸಂತೋಷ್ ಪಾಟೀಲ್ ಆತ್ಮಹತ್ಯೆಗೂ ಮುನ್ನ ವಾಟ್ಸ್ ಆ್ಯಪ್ ಮೂಲಕ ಕಳುಹಿಸಿರುವ ಡೆತ್ ನೋಟ್ ನಲ್ಲಿ ತನ್ನ ಸಾವಿಗೆ ಸಚಿವ ಈಶ್ವರಪ್ಪ ಅವರೇ ನೇರ ಕಾರಣ ಎಂದು ಬರೆದಿದ್ದಾರೆ. ರಾಜೀನಾಮೆ ಕೊಡುವುದಿಲ್ಲ ಎಂದು ಹಟ ಹಿಡಿದಿರುವ ಈಶ್ವರಪ್ಪನವರಿಗೆ ನರೇಂದ್ರ ಮೋದಿಯಾದಿಯಾಗಿ ಎಲ್ಲಾ ನಾಯಕರು ಮತ್ತು ಸರ್ಕಾರ ಹೆದರುತ್ತಿರುವುದು ಯಾಕೆ? 40% ಕಮಿಷನ್ ನಲ್ಲಿ ಪಾಲು‌ಪಡೆದವರೆಲ್ಲರ ಹೆಸರು ಬಯಲು ಮಾಡುತ್ತೇನೆ ಎಂದು ಈಶ್ವರಪ್ಪ ಬ್ಲಾಕ್ ಮೇಲ್ ಮಾಡುತ್ತಿದ್ದಾರೆಯೇ? ಎಂದು ಪ್ರಶ್ನಿಸಿದ್ದಾರೆ.

ರಾಜ್ಯ ಸರ್ಕಾರದ 40% ಕಮಿಷನ್ ದಂಧೆಯ ಬಗ್ಗೆ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷರಾದ ಕೆಂಪಣ್ಣನವರು ಪ್ರಧಾನಿಗಳಿಗೆ ಪತ್ರ ಬರೆದಿದ್ದರು. ಈ ಬಗ್ಗೆ ಕ್ರಮ ಕೈಗೊಳ್ಳದೆ ಪ್ರಧಾನಿ ನರೇಂದ್ರ ಮೋದಿ ಸುಮ್ಮನಿರುವುದು ಏಕೆ? 40% ಕಮಿಷನ್ ನಲ್ಲಿ ಮೋದಿಯವರಿಗೂ ಪಾಲಿದೆಯಾ? ಎಂದು ಕೇಳಿದ್ದಾರೆ.

ಸಚಿವ ಈಶ್ವರಪ್ಪ ಅವರ ಮೇಲೆ ಆತ್ಮಹತ್ಯೆಗೆ ಕುಮ್ಮಕ್ಕು ನೀಡಿದ ಪ್ರಕರಣದ ಜೊತೆಗೆ ಭ್ರಷ್ಟಾಚಾರ ನಿಗ್ರಹ ಕಾಯ್ದೆಯ ಸೆಕ್ಷನ್ -13 ರಡಿ ಭ್ರಷ್ಟಾಚಾರ ಪ್ರಕರಣವನ್ನು ದಾಖಲಿಸಬೇಕು. ಇದೊಂದು ಗಂಭೀರ ಸ್ವರೂಪದ ಅಪರಾಧ, ಕೂಡಲೇ ಅವರ ಬಂಧನವಾಗಬೇಕು ಎಂದು ಒತ್ತಾಯಿಸುತ್ತೇನೆ. ಈಶ್ವರಪ್ಪ ಅವರನ್ನು ಅನೇಕ ಬಾರಿ ಭೇಟಿ ಮಾಡಿದರೂ ಪ್ರಯೋಜನವಾಗದ ಕಾರಣಕ್ಕೆ ಸಂತೋಷ್ ಪಾಟೀಲ್ ಅವರು ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವರಿಗೆ ಪತ್ರ ಬರೆದಿದ್ದರು, ಬಿಜೆಪಿ ಪ್ರಧಾನ ಕಾರ್ಯದರ್ಶಿ ಬಿ.ಎಲ್ ಸಂತೋಷ್ ಅವರನ್ನು ಭೇಟಿಮಾಡಿ ಮನವಿ ಮಾಡಿದ್ದರು. ಇವರ ಪ್ರತಿಕ್ರಿಯೆ ಏನು? ಎಂದು ಪ್ರಶ್ನಿಸಿದ್ದಾರೆ.

ಮುಖ್ಯಮಂತ್ರಿಗಳನ್ನು ಭೇಟಿ ಮಾಡುವ ಉದ್ದೇಶದಿಂದ ಸಂತೋಷ್ ಪಾಟೀಲ್ ಉಡುಪಿಗೆ ಹೋಗಿದ್ದರು. ತಮ್ಮ ಕೊನೆ ಪ್ರಯತ್ನವೂ ಫಲ ನೀಡದೆ ಇರುವುದರಿಂದ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾರೆ.‌‌ ಇದರಿಂದ ಕಮಿಷನ್ ಗಾಗಿ ಕಿರುಕುಳ ನೀಡಿದ ಸಚಿವರು ಮಾತ್ರವಲ್ಲ‌ ಮುಖ್ಯಮಂತ್ರಿಗಳೂ ಈ ಸಾವಿಗೆ ಹೊಣೆಗಾರರಾಗಿದ್ದಾರೆ ಎಂದು ಆರೋಪಿಸಿದ್ದಾರೆ.

ಕಾಂಗ್ರೆಸ್ ಪಕ್ಷದ ನಿಯೋಗ ಇಂದು ರಾಜ್ಯಪಾಲರನ್ನು ಭೇಟಿಮಾಡಿ ಮನವಿ ಪತ್ರ ಕೊಟ್ಟಿದೆ. ರಾಜ್ಯಪಾಲರು ಸೂಕ್ತ ಕಾನೂನು ಕ್ರಮ ಕೈಗೊಳ್ಳಲು ಮತ್ತು ಈಶ್ವರಪ್ಪ ಅವರನ್ನು ಸಂಪುಟದಿಂದ ವಜಾಗೊಳಿಸಲು ಸರ್ಕಾರಕ್ಕೆ ನಿರ್ದೇಶನ ನೀಡುತ್ತಾರೆ ಎಂಬ ಭರವಸೆ ನಮಗಿದೆ ಎಂದಿದ್ದಾರೆ.


ಇದನ್ನೂ ಓದಿರಿ: ಸಂತೋಷ್‌ ಸಾವು ಪ್ರಕರಣ: ಇಂತಹ ನೂರು ಕೇಸ್‌ ನೋಡಿದ್ದೇನೆ; ರಾಜೀನಾಮೆ ನೀಡುವ ಪ್ರಶ್ನೆಯೆ ಇಲ್ಲ: ಕೆ.ಎಸ್‌. ಈಶ್ವರಪ್ಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...