Homeಕರ್ನಾಟಕ40% ಕಮಿಷನ್‌ ಸರ್ಕಾರದ ವಿರುದ್ಧ ಜನಜಾಗೃತಿಗೆ ರಾಜ್ಯ ಪ್ರವಾಸ: ಸಿದ್ದರಾಮಯ್ಯ ಘೋಷಣೆ

40% ಕಮಿಷನ್‌ ಸರ್ಕಾರದ ವಿರುದ್ಧ ಜನಜಾಗೃತಿಗೆ ರಾಜ್ಯ ಪ್ರವಾಸ: ಸಿದ್ದರಾಮಯ್ಯ ಘೋಷಣೆ

‘40% ಕಮಿಷನ್ ದಂಧೆಯ ಬಗ್ಗೆ ರಾಜ್ಯ ಗುತ್ತಿಗೆದಾರರ ಸಂಘವು ಪ್ರಧಾನಿಯವರಿಗೆ ಪತ್ರ ಬರೆದಿತ್ತು. ನರೇಂದ್ರ ಮೋದಿಯವರು ಸುಮ್ಮನಿರುವುದು ಏಕೆ? 40% ಕಮಿಷನ್ ನಲ್ಲಿ ಮೋದಿಯವರಿಗೂ ಪಾಲಿದೆಯಾ?’

- Advertisement -
- Advertisement -

ಸಂತೋಷ್ ಪಾಟೀಲ್ ಎಂಬ ಗುತ್ತಿಗೆದಾರನ ಬಲಿ ಪಡೆದ ಭ್ರಷ್ಟ 40% ಕಮಿಷನ್ ಸರ್ಕಾರದ ವಿರುದ್ಧ ಜನ ಜಾಗೃತಿ ಮೂಡಿಸಲು ನಾವು 5 ದಿನಗಳ ಕಾಲ ರಾಜ್ಯ ಪ್ರವಾಸ ಮಾಡುತ್ತೇವೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ರಾಜ್ಯದ ಪ್ರತಿ ಜಿಲ್ಲೆಗೂ ನಮ್ಮ ಪಕ್ಷದ ನಾಯಕರ ನೇತೃತ್ವದಲ್ಲಿ ತಂಡಗಳಾಗಿ ತೆರಳಿ, ಜನರ ಜೀವ ಮತ್ತು ರಾಜ್ಯದ ಮಾನ ಕಾಪಾಡಲು ಭ್ರಷ್ಟ ಬಿಜೆಪಿ ಸರ್ಕಾರವನ್ನು ಕಿತ್ತೊಗೆಯುವಂತೆ ಮನವಿ ಮಾಡುತ್ತೇವೆ ಎಂದು ಅವರು ಘೋಷಿಸಿದ್ದಾರೆ.

ನಾಳೆ ಬೆಳಿಗ್ಗೆ 10 ಗಂಟೆಗೆ ಮುಖ್ಯಮಂತ್ರಿಗಳಿಗೆ ಘೇರಾವ್ ಹಾಕುತ್ತೇವೆ. ಭ್ರಷ್ಟಾಚಾರದಲ್ಲಿ ಕರ್ನಾಟಕವನ್ನು ನಂಬರ್ 2 ಸ್ಥಾನಕ್ಕೇರಿಸಿದ್ದ ಮುಖ್ಯಮಂತ್ರಿಯೂ ಸೇರಿದಂತೆ ಸಾಲು ಸಾಲು ಸಚಿವರು ಜೈಲು ಸೇರಿದ್ದನ್ನು ದೇಶ ಕಂಡಿದೆ. ಈಗ ಈ ಭ್ರಷ್ಟರ ಎರಡನೇ‌ ಅಂಕ ಶುರುವಾಗಿದೆ. ಮತ್ತೆ ದೇಶದ ಮುಂದೆ ಕರ್ನಾಟಕ ತಲೆ ತಗ್ಗಿಸುವಂತಾಗಿದೆ ಎಂದಿದ್ದಾರೆ.

ಜಬಾಬ್ದಾರಿಯುತ ವಿರೋಧ ಪಕ್ಷವಾಗಿ ಸಂತೋಷ್ ಪಾಟೀಲ್ ಅವರ ಸಾವಿಗೆ ನ್ಯಾಯ ಕೊಡಿಸುವ ಪ್ರಾಮಾಣಿಕ ಪ್ರಯತ್ನವನ್ನು ನಾವು ಮಾಡುತ್ತೇವೆ. ಇದು ನಮ್ಮ ಕರ್ತವ್ಯ. ಬಿಜೆಪಿ ಸರ್ಕಾರದ ಕಮಿಷನ್ ಕಿರುಕುಳಕ್ಕೆ ಇನ್ನಷ್ಟು ಜೀವಗಳು ಬಲಿಯಾಗಬಾರದು ಎಂದು ಎಚ್ಚರಿಸಿದ್ದಾರೆ.

ಇದು ಕೇವಲ ಕಾಂಗ್ರೆಸ್ ಪಕ್ಷದ ರಾಜಕೀಯ ಪ್ರತಿಭಟನೆಯಾಗಬಾರದು. ಜನರ ಬೆವರ ಗಳಿಕೆಯ ತೆರಿಗೆ ಹಣವನ್ನು ಲೂಟಿ‌ ಮಾಡುತ್ತಿರುವ ಮತ್ತು ರಾಷ್ಟಮಟ್ಟದಲ್ಲಿ ರಾಜ್ಯದ ಮಾನ ಹರಾಜು ಹಾಕುತ್ತಿರುವ ಭ್ರಷ್ಟ ಬಿಜೆಪಿ‌ ಸರ್ಕಾರದ ವಿರುದ್ಧ ಪ್ರತಿಯೊಬ್ಬ ಕನ್ನಡಿಗನೂ ಬೀದಿಗಿಳಿಯಬೇಕಾಗಿದೆ ಎಂದು ಆಶಿಸಿದ್ದಾರೆ.

ಇದನ್ನೂ ಓದಿರಿ: 40% ಕಮಿಷನ್‌ ನಿಜ; 25,000 ಕೋಟಿ ರೂ. ಪೆಂಡಿಂಗ್ ಬಿಲ್ ಇದೆ: ಗುತ್ತಿಗೆದಾರರ ಸಂಘದ ಅಧ್ಯಕ್ಷರ ಗಂಭೀರ ಆರೋಪ

ಸಚಿವ ಈಶ್ವರಪ್ಪ ಮೇಲೆ ನಿನ್ನೆಯೇ ಎಫ್.ಐ.ಆರ್ ದಾಖಲಾಗಿದೆ. ಸಂತೋಷ್ ಪಾಟೀಲ್ ಆತ್ಮಹತ್ಯೆಗೂ ಮುನ್ನ ವಾಟ್ಸ್ ಆ್ಯಪ್ ಮೂಲಕ ಕಳುಹಿಸಿರುವ ಡೆತ್ ನೋಟ್ ನಲ್ಲಿ ತನ್ನ ಸಾವಿಗೆ ಸಚಿವ ಈಶ್ವರಪ್ಪ ಅವರೇ ನೇರ ಕಾರಣ ಎಂದು ಬರೆದಿದ್ದಾರೆ. ರಾಜೀನಾಮೆ ಕೊಡುವುದಿಲ್ಲ ಎಂದು ಹಟ ಹಿಡಿದಿರುವ ಈಶ್ವರಪ್ಪನವರಿಗೆ ನರೇಂದ್ರ ಮೋದಿಯಾದಿಯಾಗಿ ಎಲ್ಲಾ ನಾಯಕರು ಮತ್ತು ಸರ್ಕಾರ ಹೆದರುತ್ತಿರುವುದು ಯಾಕೆ? 40% ಕಮಿಷನ್ ನಲ್ಲಿ ಪಾಲು‌ಪಡೆದವರೆಲ್ಲರ ಹೆಸರು ಬಯಲು ಮಾಡುತ್ತೇನೆ ಎಂದು ಈಶ್ವರಪ್ಪ ಬ್ಲಾಕ್ ಮೇಲ್ ಮಾಡುತ್ತಿದ್ದಾರೆಯೇ? ಎಂದು ಪ್ರಶ್ನಿಸಿದ್ದಾರೆ.

ರಾಜ್ಯ ಸರ್ಕಾರದ 40% ಕಮಿಷನ್ ದಂಧೆಯ ಬಗ್ಗೆ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷರಾದ ಕೆಂಪಣ್ಣನವರು ಪ್ರಧಾನಿಗಳಿಗೆ ಪತ್ರ ಬರೆದಿದ್ದರು. ಈ ಬಗ್ಗೆ ಕ್ರಮ ಕೈಗೊಳ್ಳದೆ ಪ್ರಧಾನಿ ನರೇಂದ್ರ ಮೋದಿ ಸುಮ್ಮನಿರುವುದು ಏಕೆ? 40% ಕಮಿಷನ್ ನಲ್ಲಿ ಮೋದಿಯವರಿಗೂ ಪಾಲಿದೆಯಾ? ಎಂದು ಕೇಳಿದ್ದಾರೆ.

ಸಚಿವ ಈಶ್ವರಪ್ಪ ಅವರ ಮೇಲೆ ಆತ್ಮಹತ್ಯೆಗೆ ಕುಮ್ಮಕ್ಕು ನೀಡಿದ ಪ್ರಕರಣದ ಜೊತೆಗೆ ಭ್ರಷ್ಟಾಚಾರ ನಿಗ್ರಹ ಕಾಯ್ದೆಯ ಸೆಕ್ಷನ್ -13 ರಡಿ ಭ್ರಷ್ಟಾಚಾರ ಪ್ರಕರಣವನ್ನು ದಾಖಲಿಸಬೇಕು. ಇದೊಂದು ಗಂಭೀರ ಸ್ವರೂಪದ ಅಪರಾಧ, ಕೂಡಲೇ ಅವರ ಬಂಧನವಾಗಬೇಕು ಎಂದು ಒತ್ತಾಯಿಸುತ್ತೇನೆ. ಈಶ್ವರಪ್ಪ ಅವರನ್ನು ಅನೇಕ ಬಾರಿ ಭೇಟಿ ಮಾಡಿದರೂ ಪ್ರಯೋಜನವಾಗದ ಕಾರಣಕ್ಕೆ ಸಂತೋಷ್ ಪಾಟೀಲ್ ಅವರು ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವರಿಗೆ ಪತ್ರ ಬರೆದಿದ್ದರು, ಬಿಜೆಪಿ ಪ್ರಧಾನ ಕಾರ್ಯದರ್ಶಿ ಬಿ.ಎಲ್ ಸಂತೋಷ್ ಅವರನ್ನು ಭೇಟಿಮಾಡಿ ಮನವಿ ಮಾಡಿದ್ದರು. ಇವರ ಪ್ರತಿಕ್ರಿಯೆ ಏನು? ಎಂದು ಪ್ರಶ್ನಿಸಿದ್ದಾರೆ.

ಮುಖ್ಯಮಂತ್ರಿಗಳನ್ನು ಭೇಟಿ ಮಾಡುವ ಉದ್ದೇಶದಿಂದ ಸಂತೋಷ್ ಪಾಟೀಲ್ ಉಡುಪಿಗೆ ಹೋಗಿದ್ದರು. ತಮ್ಮ ಕೊನೆ ಪ್ರಯತ್ನವೂ ಫಲ ನೀಡದೆ ಇರುವುದರಿಂದ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾರೆ.‌‌ ಇದರಿಂದ ಕಮಿಷನ್ ಗಾಗಿ ಕಿರುಕುಳ ನೀಡಿದ ಸಚಿವರು ಮಾತ್ರವಲ್ಲ‌ ಮುಖ್ಯಮಂತ್ರಿಗಳೂ ಈ ಸಾವಿಗೆ ಹೊಣೆಗಾರರಾಗಿದ್ದಾರೆ ಎಂದು ಆರೋಪಿಸಿದ್ದಾರೆ.

ಕಾಂಗ್ರೆಸ್ ಪಕ್ಷದ ನಿಯೋಗ ಇಂದು ರಾಜ್ಯಪಾಲರನ್ನು ಭೇಟಿಮಾಡಿ ಮನವಿ ಪತ್ರ ಕೊಟ್ಟಿದೆ. ರಾಜ್ಯಪಾಲರು ಸೂಕ್ತ ಕಾನೂನು ಕ್ರಮ ಕೈಗೊಳ್ಳಲು ಮತ್ತು ಈಶ್ವರಪ್ಪ ಅವರನ್ನು ಸಂಪುಟದಿಂದ ವಜಾಗೊಳಿಸಲು ಸರ್ಕಾರಕ್ಕೆ ನಿರ್ದೇಶನ ನೀಡುತ್ತಾರೆ ಎಂಬ ಭರವಸೆ ನಮಗಿದೆ ಎಂದಿದ್ದಾರೆ.


ಇದನ್ನೂ ಓದಿರಿ: ಸಂತೋಷ್‌ ಸಾವು ಪ್ರಕರಣ: ಇಂತಹ ನೂರು ಕೇಸ್‌ ನೋಡಿದ್ದೇನೆ; ರಾಜೀನಾಮೆ ನೀಡುವ ಪ್ರಶ್ನೆಯೆ ಇಲ್ಲ: ಕೆ.ಎಸ್‌. ಈಶ್ವರಪ್ಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....