Homeಮುಖಪುಟಹೇಮಾ ಸಮಿತಿ ವರದಿ ಸಂಬಂಧ 40 ಎಫ್‌ಐಆರ್ ದಾಖಲು : ಹೈಕೋರ್ಟ್‌ಗೆ ತಿಳಿಸಿದ ಕೇರಳ ಸರ್ಕಾರ

ಹೇಮಾ ಸಮಿತಿ ವರದಿ ಸಂಬಂಧ 40 ಎಫ್‌ಐಆರ್ ದಾಖಲು : ಹೈಕೋರ್ಟ್‌ಗೆ ತಿಳಿಸಿದ ಕೇರಳ ಸರ್ಕಾರ

- Advertisement -
- Advertisement -

ಹೇಮಾ ಸಮಿತಿ ವರದಿ ಬಿಡುಗಡೆಯಾದ ನಂತರ ಇಲ್ಲಿಯವರೆಗೆ ಒಟ್ಟು 40 ಪ್ರಥಮ ಮಾಹಿತಿ ವರದಿಗಳು (ಎಫ್‌ಐಆರ್) ದಾಖಲಾಗಿವೆ ಎಂದು ಕೇರಳ ರಾಜ್ಯ ಸರ್ಕಾರ ಜನವರಿ 16 ಗುರುವಾರ ಹೈಕೋರ್ಟ್‌ಗೆ ತಿಳಿಸಿದೆ.

ಸರ್ಕಾರದ ಪರ ಅಡ್ವೊಕೇಟ್ ಜನರಲ್ (ಎಜಿ) ಗೋಪಾಲಕೃಷ್ಣ ಕುರುಪ್ ಅವರು ನ್ಯಾಯಮೂರ್ತಿಗಳಾದ ಎ.ಕೆ ಜಯಶಂಕರನ್ ನಂಬಿಯಾರ್ ಮತ್ತು ಸಿಎಸ್ ಸುಧಾ ಅವರನ್ನೊಳಗೊಂಡ ಹೈಕೋರ್ಟ್‌ನ ವಿಶೇಷ ಪೀಠಕ್ಕೆ ವಿವರಗಳನ್ನೊಳಗೊಂಡ ಟಿಪ್ಪಣಿಯನ್ನು ಸಲ್ಲಿಸಿದ್ದಾರೆ.

ಹೇಮಾ ಸಮಿತಿಯ ವರದಿಗೆ ಸಂಬಂಧಿಸಿದ ಪ್ರಕರಣಗಳನ್ನು ಪ್ರತ್ಯೇಕವಾಗಿ ವಿಚಾರಣೆ ನಡೆಸಲು ಸೆಪ್ಟೆಂಬರ್ 5 ರಂದು ಹೈಕೋರ್ಟ್‌ನಲ್ಲಿ ವಿಶೇಷ ಪೀಠ ರಚಿಸಲಾಗಿದೆ.

ಆಗಸ್ಟ್ 2024 ರಲ್ಲಿ ಬಿಡುಗಡೆಯಾದ ಹೇಮಾ ಸಮಿತಿ ವರದಿಯು ಮಲಯಾಳಂ ಚಲನಚಿತ್ರೋದ್ಯಮದಲ್ಲಿ ನಡೆದ ಮಹಿಳಾ ಕಲಾವಿದರ ಮೇಲಿನ ಲೈಂಗಿಕ ದೌರ್ಜನ್ಯಗಳನ್ನು ಬಹಿರಂಗಪಡಿಸಿತ್ತು.

ಹೇಮಾ ಸಮಿತಿ ವರದಿಗೆ ಸಂಬಂಧಿಸಿದ ಪ್ರಕರಣಗಳ ತನಿಖೆ ನಡೆಸುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಆರಂಭದಲ್ಲಿ 35 ಪ್ರಕರಣಗಳನ್ನು ದಾಖಲಿಸಿತ್ತು. ನಂತರ ಲೈಂಗಿಕ ಕಿರುಕುಳದ ದೂರುಗಳನ್ನು ಸ್ವೀಕರಿಸಲು ನೇಮಿಸಲಾದ ನೋಡಲ್ ಅಧಿಕಾರಿಗೆ ಹೆಚ್ಚುವರಿಯಾಗಿ ಎಂಟು ದೂರುಗಳು ಸಲ್ಲಿಕೆಯಾಗಿದೆ. ಅದನ್ನು ಆಧರಿಸಿ ಇನ್ನೂ ಐದು ಎಫ್‌ಐಆರ್‌ಗಳು ದಾಖಲಾಗಿವೆ ಎಂದು ಎಜಿ ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

ಈ ಪ್ರಕರಣದ ಅಮಿಕಸ್ ಕ್ಯೂರಿ ಮಿಥಾ ಸುಧೀಂದ್ರನ್ ಅವರು ನ್ಯಾಯಯುತ ಕೆಲಸದ ಸ್ಥಳದ ವಾತಾವರಣವನ್ನು ಖಚಿತಪಡಿಸಿಕೊಳ್ಳುವ ಗುರಿಯನ್ನು ಹೊಂದಿರುವ ಪ್ರಸ್ತಾವಿತ ಕಾನೂನಿನ ಕರಡನ್ನು ಒಳಗೊಂಡಿರುವ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ.

‘ಕೇರಳ ಮನರಂಜನಾ ಉದ್ಯಮ (ಸಮಾನತೆ ಮತ್ತು ಸಬಲೀಕರಣ) ಕಾಯ್ದೆ’ ಎಂಬ ಶೀರ್ಷಿಕೆಯ ಕರಡು ಕಾನೂನು ಕೆಲಸದ ಪರಿಸ್ಥಿತಿಗಳು, ನೇಮಕಾತಿ ಪದ್ಧತಿಗಳು ಮತ್ತು ವೇತನದಂತಹ ಸಮಸ್ಯೆಗಳನ್ನು ಪರಿಹರಿಸುತ್ತದೆ ಎಂದು ಅವರು ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

ರಾಜ್ಯ ಸರ್ಕಾರವು ಕರಡು ಕಾನೂನನ್ನು ಪರಿಶೀಲಿಸಿ ಪ್ರತಿಕ್ರಿಯೆ ನೀಡಲಿದೆ ಎಂದು ಎಜಿ ನ್ಯಾಯಾಲಯಕ್ಕೆ ತಿಳಿಸಿದ್ದಾರೆ. ನ್ಯಾಯಾಲಯ ಕೂಡ ಕರಡು ಪ್ರತಿಯನ್ನು ಪರಿಶೀಲಿಸುವುದಾಗಿ ಹೇಳಿದೆ. ಇದಲ್ಲದೆ, ಮಹಿಳೆಯರು ಬಹು ಹಂತಗಳಲ್ಲಿ ತಾರತಮ್ಯವನ್ನು ಎದುರಿಸುತ್ತಿದ್ದಾರೆ ಎಂದು ನ್ಯಾಯಾಲಯವು ಗಮನಿಸಿದೆ ಮತ್ತು ಸಿನಿಮಾ ಇಂಡಸ್ಟ್ರಿಯಲ್ಲಿ ಮಹಿಳೆಯರು ಎದುರಿಸುತ್ತಿರುವ ತಾರತಮ್ಯವನ್ನು ಪರಿಹರಿಸಲು ಬಹರೂಪಿ ವಿಧಾನವನ್ನು ಅಳವಡಿಸಿಕೊಳ್ಳಬೇಕು ಎಂದು ನಿರ್ದೇಶಿಸಿದೆ.

“ನಾವು ಸ್ವಲ್ಪ ಮಟ್ಟಿಗೆ ತಾರತಮ್ಯವನ್ನು ನಿಭಾಯಿಸಿದ್ದರೂ, ಬಹುರೂಪದ ತಾರತಮ್ಯವನ್ನು ಸಾಮಾನ್ಯವಾಗಿ ಪರಿಹರಿಸಲಾಗುವುದಿಲ್ಲ. ಬಹು ಹಂತಗಳಲ್ಲಿ ಬಹುರೂಪದ ತಾರತಮ್ಯದಲ್ಲಿ ದೊಡ್ಡ ಅಂತರವಿದೆ. ಉದಾ : ದಲಿತ ಮಹಿಳೆಯಂತೆ. ಆಕೆ (ದಲಿತ ಮಹಿಳೆ) ಮಹಿಳೆ ಎಂಬ ಕಾರಣಕ್ಕೆ ಮತ್ತು ಸಾಮಾಜಿಕ ಸ್ಥಾನಮಾನ ಕಾರಣಕ್ಕೆ ಬಹು ಹಂತಗಳಲ್ಲಿ ತಾರತಮ್ಯವನ್ನು ಎದುರಿಸುತ್ತಾರೆ. ಕೇರಳದಲ್ಲಿ ಈ ಸಮಸ್ಯೆ ಅಷ್ಟಾಗಿ ಇಲ್ಲ. ಆದರೆ, ಉತ್ತರದ ರಾಜ್ಯಗಳಲ್ಲಿ ಇದು ತುಂಬಾ ದೊಡ್ಡ ಮಟ್ಟದಲ್ಲಿದೆ. ಮಹಿಳೆಯರು ಎದುರಿಸುತ್ತಿರುವ ಆರ್ಥಿಕ ಅಸಮಾನತೆ ಇತ್ಯಾದಿಗಳನ್ನೂ ನಾವು ಪರಿಗಣಿಸಬೇಕು ಎಂದು ನ್ಯಾಯಾಲಯ ಹೇಳಿರುವುದಾಗಿ ಲೈವ್ ಲಾ  ವರದಿ ಮಾಡಿದೆ.

ಪ್ರಕರಣದ ಮುಂದಿನ ವಿಚಾರಣೆಯನ್ನು ನ್ಯಾಯಾಲಯ ಫೆಬ್ರವರಿ 6ಕ್ಕೆ ಮುಂದೂಡಿದೆ. ಈ ಪ್ರಕರಣದ ಮೊದಲ ವಿಚಾರಣೆ ಸೆಪ್ಟೆಂಬರ್ 10, 2024 ರಂದು ನಡೆದಿತ್ತು. ಆಗ ಹೇಮಾ ಸಮಿತಿಯ ವರದಿ ಸಂಬಂಧ ರಾಜ್ಯ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ನ್ಯಾಯಾಲಯ ತರಾಟೆಗೆ ತೆಗೆದುಕೊಂಡಿತ್ತು.

ಕೇರಳ | ಟ್ರಾನ್ಸ್‌ಜೆಂಡರ್‌ಗಳಿಗೆ ಮೀಸಲಾತಿ; 6 ತಿಂಗಳ ಗಡುವು ನೀಡಿದ ಹೈಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...