Homeಕರೋನಾ ತಲ್ಲಣಕೊರೊನಾದಿಂದ ಭಾರತದಲ್ಲಿ ಮೃತಪಟ್ಟವರು 40 ಲಕ್ಷ; ಮೋದಿ ಸರ್ಕಾರದ ಲೆಕ್ಕ 5 ಲಕ್ಷ!

ಕೊರೊನಾದಿಂದ ಭಾರತದಲ್ಲಿ ಮೃತಪಟ್ಟವರು 40 ಲಕ್ಷ; ಮೋದಿ ಸರ್ಕಾರದ ಲೆಕ್ಕ 5 ಲಕ್ಷ!

ಕೊರೊನಾದಿಂದ ಸಂಭವಿಸಿದ ಸಾವಿನ ಸಂಖ್ಯೆಯನ್ನು ಬಹಿರಂಗಪಡಿಸುವ ವಿಶ್ವ ಆರೋಗ್ಯ ಸಂಸ್ಥೆ(WHO)ಯ ಪ್ರಯತ್ನಕ್ಕೆ ಭಾರತವು ತಡೆಯೊಡ್ಡುತ್ತಿದೆ ಎಂದು ‘ನ್ಯೂಯಾರ್ಕ್ ಟೈಮ್ಸ್‌‌’ ವರದಿ ಮಾಡಿದೆ.

- Advertisement -
- Advertisement -

ಭಾರತದಲ್ಲಿ ಕೊರೊನಾದಿಂದ ಸುಮಾರು 40 ಲಕ್ಷ ಜನರು ಮೃತಪಟ್ಟಿದ್ದಾರೆ ಎಂದು ವಿಶ್ವ ಆರೋಗ್ಯ ಸಂಸ್ಥೆ(WHO) ಹೇಳಿದೆ ಎಂದು ನ್ಯೂಯಾರ್ಕ್‌ ಟೈಮ್ಸ್‌ ಶನಿವಾರ ವರದಿ ಮಾಡಿದ್ದು, ಅದರೆ ಈ ವರದಿ ವಿಳಂಬವಾಗಲು ಭಾರತ ಪ್ರಯತ್ನಿಸುತ್ತಿದೆ ಎಂದು ಹೇಳಿದೆ. ಸರ್ಕಾರದ ಅಧೀಕೃತ ಲೆಕ್ಕಾಚಾರದ ಪ್ರಕಾರ ಕೊರೊನಾದಿಂದ ದೇಶದಲ್ಲಿ ಮೃತಪಟ್ಟವರು ಐದು ಲಕ್ಷ ಎಂದು ಹೇಳುತ್ತದೆ.

ಕೊರೊನಾದಿಂದ ಜಾಗತಿಕವಾಗಿ ಸಂಭವಿಸಿದ ಸಾವಿನ ಸಂಖ್ಯೆಯನ್ನು ಬಹಿರಂಗಪಡಿಸುವ ವಿಶ್ವ ಆರೋಗ್ಯ ಸಂಸ್ಥೆ(WHO)ಯ ಪ್ರಯತ್ನಕ್ಕೆ ಭಾರತವು ತಡೆಯೊಡ್ಡುತ್ತಿದೆ ಎಂದು ‘ನ್ಯೂಯಾರ್ಕ್ ಟೈಮ್ಸ್‌‌’ ವರದಿ ಮಾಡಿದೆ.  ಈ ಹಿಂದೆ ನಂಬಿದ್ದಕ್ಕಿಂತ ಹೆಚ್ಚಿನ ಜನರು ಕೊರೊನಾದಿಂದ ಸಾವನ್ನಪ್ಪಿದ್ದಾರೆ ಎಂದು WHO ಕಂಡುಹಿಡಿದಿದೆ. ಆದರೆ ಭಾರತದ ಆಕ್ಷೇಪಣೆಯಿಂದಾಗಿ ಈ ವರದಿ ವಿಳಂಬವಾಗುತ್ತಿದ್ದು, ಎಷ್ಟು ನಾಗರೀಕರು ಸತ್ತರು ಎಂಬ ಲೆಕ್ಕಾಚಾರವನ್ನು ನೀಡಲು ಭಾರತ ವಿವಾದ ಮಾಡುತ್ತಿದ್ದು, ಅದನ್ನು ಸಾರ್ವಜನಿಕವಾಗದಂತೆ ಇರಿಸಲು ಪ್ರಯತ್ನಿಸಿದೆ ಎಂದು ಟೈಮ್ಸ್‌ ವರದಿ ಹೇಳಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

2021ರ ಅಂತ್ಯಕ್ಕೆ ಪ್ರತಿಯೊಂದು ದೇಶಗಳು ವೈಯಕ್ತಿವಾಗಿ ನೀಡಿರುವ ಮಾಹಿತಿಯಂತೆ ಕೊರೊನಾ ಸಾವಿನ ಸಂಖ್ಯೆ 60 ಲಕ್ಷ ಎಂದು ನಂಬಲಾಗಿತ್ತು. ಆದರೆ ಕೊರೊನಾದಿಂದಾದ ಸಾವು 1.5 ಕೋಟಿಗೂ ಹೆಚ್ಚು ಎಂದು WHO ಇದೀಗ ಕಂಡು ಹಿಡಿದಿದೆ. ಪ್ರಪಂಚದಾದ್ಯಂತ ಇರುವ ತಜ್ಞರ ಒಂದು ವರ್ಷಕ್ಕೂ ಹೆಚ್ಚು ಸಂಶೋಧನೆ ಹಾಗೂ ವಿಶ್ಲೇಷಣೆಯ ಫಲಿತಾಂಶ ಮತ್ತು ಇಲ್ಲಿಯವರೆಗಿನ ಸಾಂಕ್ರಾಮಿಕ ರೋಗದ ಭೀಕರತೆಯ ಬಗ್ಗೆ ಅತ್ಯಂತ ಸಮಗ್ರವಾದ ನೋಟದ ವರದಿಯು ಭಾರತದ ಆಕ್ಷೇಪಣೆಯಿಂದಾಗಿ ತಿಂಗಳುಗಟ್ಟಲೆ ವಿಳಂಬವಾಗಿದೆ ಎಂದು ನ್ಯೂಯಾರ್ಕ್‌ ಟೈಮ್ಸ್‌‌ ತನ್ನ ವರದಿಯಲ್ಲಿ ಹೇಳಿದೆ.

ಇದನ್ನೂ ಓದಿ: ಕೊರೊನಾದಿಂದ ದೇಶ ತತ್ತರಿಸಿದ್ದರೂ ಫೋರ್ಬ್ಸ್-2022ರ ಶ್ರೀಮಂತ ಪಟ್ಟಿಯಲ್ಲಿ ಅಂಬಾನಿ, ಅದಾನಿ!

ಹೆಚ್ಚುವರಿ 90 ಲಕ್ಷ ಸಾವುಗಳಲ್ಲಿ ಮೂರನೇ ಒಂದು ಭಾಗಕ್ಕಿಂತ ಹೆಚ್ಚು ಸಾವು ಭಾರತದಲ್ಲಿ ಸಂಭವಿಸಿದೆ ಎಂದು WHO ಅಂದಾಜಿಸಿದೆ. ಆದರೆ ಮೋದಿ ನೇತೃತ್ವದ ಸರ್ಕಾರವು ಕೊರೊನಾದಿಂದ ಸಾವಿಗೀಡಾದವರ ಸಂಖ್ಯೆ ಕೇವಲ 5,20,000(ಐದು ಲಕ್ಷದ ಇಪ್ಪತ್ತು ಸಾವಿರ) ಎಂದು ಹೇಳುತ್ತಿದೆ. ದೇಶದಲ್ಲಿ ಕೊರೊನಾದಿಂದ ಸಾವಿಗೀಡಾದವರ ನಿಜವಾರ ಸಂ‌ಖ್ಯೆ ಕನಿಷ್ಠ 40 ಲಕ್ಷ ಎಂದು WHO ಹೇಳುತ್ತದೆ.

WHO ಲೆಕ್ಕಕ್ಕೆ ಸಿಗದ ಸಾವುಗಳನ್ನು ಕಂಡುಹಿಡಿಯುವುದಕ್ಕಾಗಿ ಕೇಂದ್ರೀಕೃತ ರಾಷ್ಟ್ರೀಯ ಡೇಟಾದ ಜೊತೆಗೆ ಸ್ಥಳೀಯ ಮತ್ತು ಮನೆ-ಮನೆ ಸರ್ವೆಗಳ ಹಾಗೂ ಸಂಖ್ಯಾಶಾಸ್ತ್ರೀಯ ಮಾದರಿಗಳ ಮೂಲಕ ಹೊಸ ಮಾಹಿತಿಯನ್ನು ಪಡೆಯುತ್ತಿದೆ.

ಅಂಕಿಅಂಶಗಳನ್ನು ಬಿಡುಗಡೆ ಮಾಡುವಲ್ಲಿನ ವಿಳಂಬವು ಗಂಭೀರ ವಿಷಯವಾಗಿದ್ದು, ಯಾಕೆಂದರೆ ಸಾಂಕ್ರಾಮಿಕ ರೋಗವು ಹೇಗೆ ಹೊರಹೊಮ್ಮಿದೆ ಮತ್ತು ಯಾವ ಕ್ರಮಗಳು ಇದೇ ರೀತಿಯ ಬಿಕ್ಕಟ್ಟನ್ನು ತಗ್ಗಿಸಬಹುದು ಎಂಬುದನ್ನು ಅರ್ಥಮಾಡಿಕೊಳ್ಳಲು ಜಾಗತಿಕ ಅಂಕಿಅಂಶ ಅತ್ಯಗತ್ಯವಾಗಿದೆ. ಆದರೆ ಭಾರತವು ಇದಕ್ಕೆ ಸಹಕರಿಸುತ್ತಿಲ್ಲ ಎಂದು ನ್ಯೂಯಾರ್ಕ್‌ ಟೈಮ್ಸ್‌ ವರದಿ ಉಲ್ಲೇಖಿಸಿದೆ.

ಇದನ್ನೂ ಓದಿ:ಗುಜರಾತ್‌ನಲ್ಲಿ ಕೊರೊನಾದ ಹೊಸ ರೂಪಾಂತರ XE ವೈರಸ್‌ ಪತ್ತೆ: ಸರ್ಕಾರಿ ಮೂಲಗಳು

ಈ ವರದಿ ತಯಾರಾದರೆ ಕೊರೊನಾಗೆ ನೀಡಿರುವ ಲಸಿಕೆ ಯಾವ ರೀತಿಯಲ್ಲಿ ಪರಿಣಾಮ ಬೀರಿದೆ ಎಂದು ತಜ್ಞರಿಗೆ ಅರ್ಥ ಮಾಡಿಕೊಳ್ಳಲು ಸಹಾಯವಾಗುತ್ತದೆ ಎಂದು ಟೊರೊಂಟೊದಲ್ಲಿನ ಜಾಗತಿಕ ಆರೋಗ್ಯ ಸಂಶೋಧನಾ ಕೇಂದ್ರದ ನಿರ್ದೇಶಕ ಡಾ. ಪ್ರಭಾತ್ ಝಾ ಹೇಳಿದ್ದಾರೆ.

WHO ವರದಿಯ ಅಂಕಿಅಂಶಗಳನ್ನು ಬಿಡುಗಡೆ ಮಾಡದಿದ್ದರೆ, ಅದನ್ನು ತಾವೇ ಸ್ವತಃ ಬಿಡುಗಡೆ ಮಾಡುತ್ತೇವೆ ಎಂದು ವರದಿಯ ತಯಾರಿಸುತ್ತಿರುವ ಗುಂಪಿನ ಕೆಲವು ಸದಸ್ಯರು WHO ಗೆ ಇತ್ತೀಚೆಗೆ ಎಚ್ಚರಿಕೆ ನೀಡಿದ್ದಾರೆ ಎಂದು ನ್ಯೂಯಾರ್ಕ್ ಟೈಮ್ಸ್‌ ಹೇಳಿದೆ.

WHO ವಕ್ತಾರ ಅಮ್ನಾ ಸ್ಮೈಲ್‌ಬೆಗೊವಿಕ್, “ವರದಿಯನ್ನು ನಾವು ಏಪ್ರಿಲ್‌ನಲ್ಲಿ ಪ್ರಕಟಿಸುವ ಗುರಿ ಹೊಂದಿದ್ದೇವೆ” ಎಂದು ತಿಳಿಸಿದ್ದಾರೆ. ಕೊರೊನಾದಿಂದಾಗ ಸಾವುಗಳನ್ನು ಕಡಿಮೆ ತೋರಿಸಿರುವ ದೇಶಗಳಲ್ಲಿ ಬ್ರೆಜಿಲ್ ಮತ್ತು ಇಂಡೋನೇಷ್ಯಾದಂತಹ ಕೂಡಾ ಸೇರಿದೆ.

ಆದರೆ ಭಾರತ ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದು, WHO ಯ ವಿಧಾನವು ದೋಷಪೂರಿತವಾಗಿದೆ ಎಂದು ಹೇಳಿದೆ.

ಇದನ್ನೂ ಓದಿ: ಕೊರೊನಾ ಬಿಕ್ಕಟ್ಟಿನಿಂದ ಪ್ರವಾಸೋದ್ಯಮ ಕ್ಷೇತ್ರದಲ್ಲಿ ಉದ್ಯೋಗ ಕಳೆದುಕೊಂಡ 2.15 ಕೋಟಿ ಮಂದಿ!

ಕಳೆದ ಎರಡು ವರ್ಷಗಳಿಂದ ಭಾರತವು ತನ್ನ ಒಟ್ಟು ಮರಣದ ಅಂಕಿಅಂಶವನ್ನು WHO ಗೆ ಸಲ್ಲಿಸಿಲ್ಲ ಎಂದು ಟೈಮ್ಸ್‌ ವರದಿ ಹೇಳಿದ್ದು, ಆದರೆ ಸಂಸ್ಥೆಯ ಸಂಶೋಧಕರು ಆಂಧ್ರಪ್ರದೇಶ, ಛತ್ತೀಸ್‌ಗಢ ಮತ್ತು ಕರ್ನಾಟಕ ಸೇರಿದಂತೆ ಕನಿಷ್ಠ 12 ರಾಜ್ಯಗಳಿಂದ ಸಂಗ್ರಹಿಸಿದ ಸಂಖ್ಯೆಗಳನ್ನು ತಮ್ಮ ವರದಿಗಳಲ್ಲಿ ಬಳಸಿದ್ದಾರೆ. ಕೊರೊನಾ ಪರಿಣಾಮವಾಗಿ ದೇಶದಲ್ಲಿ ಕನಿಷ್ಠ ನಾಲ್ಕರಿಂದ ಐದು ಪಟ್ಟು ಹೆಚ್ಚು ಸಾವುಗಳು ಉಂಟಾಗಿದೆ ಈ ಅಂಕಿಅಂಶ ತೋರಿಸುತ್ತದೆ ಎಂದು ತಜ್ಞರು ಹೇಳುತ್ತಾರೆ.

ವಿಶ್ವಸಂಸ್ಥೆಯ ವರದಿಯ ಬಿಡುಗಡೆಯನ್ನು ತಡೆಯುವ ಭಾರತ ತಡೆಯುತ್ತಿರುವುದು, ಮೋದಿ ನೇತೃತ್ವದ ಸರ್ಕಾರಕ್ಕೆ ಸಾಂಕ್ರಾಮಿಕ ದತ್ತಾಂಶವು ಸೂಕ್ಷ್ಮ ವಿಷಯವಾಗಿದೆ ಎಂಬುವುದು ಸ್ಪಷ್ಟಪಡಿಸುತ್ತದೆ ಎಂದು ನ್ಯೂಯಾರ್ಕ್‌ ಟೈಮ್ಸ್‌ ತನ್ನ ವರದಿಯಲ್ಲಿ ಉಲ್ಲೇಖಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಂಗಳೂರಿನಲ್ಲಿ ರಂಜಾನ್ ಆಹಾರ ಮೇಳ ನಡೆಸದಂತೆ ಹೋಟೆಲ್‌ಗಳಿಗೆ ಎಚ್ಚರಿಕೆ

ಬೆಂಗಳೂರು: ಫ್ರೇಸರ್ ಟೌನ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿನ ಎಂಎಂ ರಸ್ತೆಯಲ್ಲಿ ರಂಜಾನ್ ಆಹಾರ ಮೇಳ ನಡೆಸದಂತೆ ಹೋಟೆಲ್ ಮಾಲೀಕರಿಗೆ ಸ್ಥಳೀಯ ನಿವಾಸಿಗಳು ಎಚ್ಚರಿಕೆ ನೀಡಿದ್ದಾರೆ. ರಂಜಾನ್ ಆಹಾರ ಮೇಳದಿಂದ ಸಂಚಾರ ದಟ್ಟಣೆ. ಅವ್ಯವಸ್ಥೆಯ ಜೊತೆಗೆ...

‘ದಿ ಕೇರಳ ಸ್ಟೋರಿ-2’ ಚಲನಚಿತ್ರ ಜಾತ್ಯತೀತತೆಗೆ ಬೆದರಿಕೆ: ಮುಖ್ಯಮಂತ್ರಿ ಪಿಣರಾಯಿ ವಿಜಯನ್

'ದಿ ಕೇರಳ ಸ್ಟೋರಿ' ಚಿತ್ರದ ಎರಡನೇ ಭಾಗ ಬಿಡುಗಡೆಯಾಗುತ್ತಿರುವ ಬಗ್ಗೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕಳವಳ ವ್ಯಕ್ತಪಡಿಸಿದ್ದು, ಇದರ ಮೊದಲ ಭಾಗವು "ರಾಜ್ಯದ ವಿರುದ್ಧ ದ್ವೇಷವನ್ನು ಹರಡುವ ಮತ್ತು ನಮ್ಮ ಜಾತ್ಯತೀತ...

ಬಿಜೆಪಿ ಸೇರಲು ಸಿದ್ದರಾದ ಭೂಪೇನ್ ಬೋರಾ : ಪ್ರಿಯಾಂಕಾ, ಡಿಕೆಶಿ ಸೇರಿದಂತೆ ‘ಕೈ ಟ್ರಬಲ್ ಶೂಟರ್‌ಗಳು’ ಅಸ್ಸಾಂಗೆ ದೌಡು

ರಾಜ್ಯ ಕಾಂಗ್ರೆಸ್‌ ಘಟಕದ ಮಾಜಿ ಅಧ್ಯಕ್ಷ ಭೂಪೇನ್ ಬೋರಾ ಬಿಜೆಪಿಗೆ ಹಾರಲು ಸಿದ್ದರಾಗಿರುವ ನಡುವೆ ಪ್ರಿಯಾಂಕಾ ಗಾಂಧಿ, ಡಿ.ಕೆ ಶಿವಕುಮಾರ್ ಸೇರಿದಂತೆ ಕಾಂಗ್ರೆಸ್‌ನ ಟ್ರಬಲ್ ಶೂಟರ್‌ಗಳ ತಂಡ ಅಸ್ಸಾಂಗೆ ದೌಡಾಯಿಸಿದೆ. ಅಸ್ಸಾಂ ಕಾಂಗ್ರೆಸ್ ಅಭ್ಯರ್ಥಿಗಳ...

ಸರ್ಕಾರದ ಭರವಸೆಗೆ ಮಣಿಯದ ಸಾರಿಗೆ ಸಿಬ್ಬಂದಿ : ಮುಷ್ಕರ ಮುಂದುವರಿಸಲು ನಿರ್ಧಾರ

ಹಿಂಬಾಕಿ ಪಾವತಿ, ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ರಾಜ್ಯದ ನಾಲ್ಕು ಸಾರಿಗೆ ನಿಗಮಗಳಾದ ಕೆಎಸ್‌ಆರ್‌ಟಿಸಿ, ಕೆಕೆಆರ್‌ಟಿಸಿ, ಎನ್‌ಡಬ್ಲ್ಯುಕೆಆರ್‌ಟಿಸಿ ಹಾಗೂ ಬಿಎಂಟಿಸಿಯ ನೌಕರರು ಇಂದು (ಫೆ.19) ಮುಷ್ಕರಕ್ಕೆ ಕರೆ ಕೊಟ್ಟಿದ್ದಾರೆ. ನೌಕರರ ಪ್ರತಿಭಟನೆ...

ಬೆಂಗಳೂರಿನ ಅಪಾರ್ಟ್‌ಮೆಂಟ್‌ನಲ್ಲಿ ಪತ್ನಿಯ ಕತ್ತು ಹಿಸುಕಿ ಕೊಂದ ನಿವೃತ್ತ ಇಸ್ರೋ ಉದ್ಯೋಗಿ ಬಂಧನ

ಬೆಂಗಳೂರು: ಆಘಾತಕಾರಿ ಘಟನೆಯೊಂದರಲ್ಲಿ, 72 ವರ್ಷದ ನಿವೃತ್ತ ಇಸ್ರೋ ಉದ್ಯೋಗಿಯೊಬ್ಬರು ವೈಟ್‌ಫೀಲ್ಡ್ ವಿಭಾಗದ ಆವಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ತಮ್ಮ ಅಪಾರ್ಟ್‌ಮೆಂಟ್‌ನಲ್ಲಿ ಬುಧವಾರ ಪತ್ನಿಯನ್ನು ಕತ್ತು ಹಿಸುಕಿ ಕೊಂದಿರುವುದಾಗಿ ವರದಿಯಾಗಿದೆ.  ಬೊಮ್ಮನಹಳ್ಳಿಯ ಅಪಾರ್ಟ್‌ಮೆಂಟ್‌ನಲ್ಲಿ ಬೆಳಿಗ್ಗೆ...

ಮಧ್ಯಪ್ರದೇಶದಲ್ಲಿ ಶಾಸಕ ರಾಜಾ ಸಿಂಗ್‌ನಿಂದ ದ್ವೇಷ ಭಾಷಣ; ಪ್ರಚೋದನಕಾರಿ ‘ಶಿರಚ್ಛೇದನ’ ಹೇಳಿಕೆಗೆ ವಿರೋಧ

ತಮ್ಮ ಪ್ರಚೋದನಕಾರಿ ಹೇಳಿಕೆಗಳಿಂದಲೇ ಕುಖ್ಯಾತರಾಗಿರುವ ಹೈದರಾಬಾದ್‌ನ ಗೋಶಮಹಲ್ ಶಾಸಕ ಟಿ ರಾಜಾ ಸಿಂಗ್ ಸಾರ್ವಜನಿಕ ರ‍್ಯಾಲಿಯಲ್ಲಿ ಮತ್ತೊಮ್ಮೆ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದ್ದಾರೆ. ಮಧ್ಯಪ್ರದೇಶದಲ್ಲಿ ಅವರು ಆಡಿದ ಮಾತುಗಳು ವಿವಾದಕ್ಕೆ ಕಾರಣವಾಗಿದೆ. "ಪ್ರತಿಯೊಬ್ಬ ಬಜರಂಗಿಗಳು...

ಪಂಜಾಬ್ ವಿಶ್ವವಿದ್ಯಾಲಯದಲ್ಲಿ ಜಾತಿ ಆಧಾರಿತ ತಾರತಮ್ಯ ಆರೋಪ; ‘ಬಡ್ತಿ ವಿಳಂಬವಾಗಿದೆ..’; ಎಂದ ದಲಿತ ಪ್ರಾಧ್ಯಾಪಕ

ಪಂಜಾಬ್ ವಿಶ್ವವಿದ್ಯಾಲಯದ ದಲಿತ ಸಹಾಯಕ ಪ್ರಾಧ್ಯಾಪಕ ಹರ್‌ಪ್ರೀತ್ ಸಿಂಗ್ ಅವರು ವಿಶ್ವವಿದ್ಯಾಲಯದಲ್ಲಿ ಜಾತಿ ಆಧಾರಿತ ತಾರತಮ್ಯ ಇದೆ ಎಂದು ಸಾರ್ವಜನಿಕವಾಗಿ ಆರೋಪಿಸಿದ್ದಾರೆ. ತನ್ನ ಜಾತಿಯ ಕಾರಣದಿಂದಾಗಿ ಉದ್ದೇಶಪೂರ್ವಕವಾಗಿ ಬಡ್ತಿ ವಿಳಂಬ ಮಾಡಲಾಗಿದೆ...

ಮಹಾರಾಷ್ಟ್ರ: ತಾಯಿ, ಸಹೋದರನ ಕಣ್ಣಿಗೆ ಮೆಣಸಿನ ಪುಡಿ ಎರೆಚಿ ಮದುವೆ ಸಿದ್ಧತೆಯಲ್ಲಿದ್ದ 21 ವರ್ಷದ ಯುವತಿಯ ಅಪಹರಣ

ಮುಂಬೈ: ಆಘಾತಕಾರಿ ಘಟನೆಯೊಂದರಲ್ಲಿ, ಮಹಾರಾಷ್ಟ್ರದ ಪುಣೆ ಜಿಲ್ಲೆಯ ಇಂದಾಪುರ ತಹಸಿಲ್‌ನ ಭಿಗ್ವಾನ್‌ನಲ್ಲಿ 21 ವರ್ಷದ ಯುವತಿಯನ್ನು ಆಕೆಯ ತಾಯಿ ಮತ್ತು ಸಹೋದರನ ಮುಂದೆಯೇ ಇಬ್ಬರು ವ್ಯಕ್ತಿಗಳು ಅಪಹರಿಸಿದ್ದಾರೆ ಎಂದು ಆರೋಪಿಸಲಾಗಿದೆ.ಮದುವೆ ಸಿದ್ಧತೆಯಲ್ಲಿದ್ದ ಯುವತಿ...

KERALA SIR | ಬಿಜೆಪಿ ಮುಖಂಡನ ದೂರು: ಪೌರತ್ವ ಸಾಬೀತುಪಡಿಸುವಂತೆ ಮುಸ್ಲಿಂ ವ್ಯಕ್ತಿಗೆ ನೋಟಿಸ್!

ಬಿಜೆಪಿ ಕಾಸರಗೋಡು ಜಿಲ್ಲಾ ಕಾರ್ಯದರ್ಶಿ ಲೋಕೇಶ್ ನೋಂಡಾ ಎಂಬಾತನ ದೂರಿನ ಮೇರೆಗೆ ಹಿರಿಯ ವಯಸ್ಸಿನ ಮುಸ್ಲಿಂ ವ್ಯಕ್ತಿಯೊಬ್ಬರಿಗೆ ಭಾರತೀಯ ಪೌರತ್ವ ಸಾಬೀತುಪಡಿಸುವಂತೆ ಚುನಾವಣಾ ನೋಂದಣಿ ಅಧಿಕಾರಿ (ಇಆರ್‌ಒ) ನೋಟಿಸ್ ಜಾರಿ ಮಾಡಿದ್ದು, ಆ...

ಚೀನಾ ನಿರ್ಮಿತ ರೋಬೋ ಡಾಗ್ ತಾವೇ ಅಭಿವೃದ್ಧಿಪಡಿಸಿದ್ದಾಗಿ ಹೇಳಿಕೊಂಡಿದ್ದ ಗ್ಯಾಲ್ಗೋಟಿಯಾ ವಿವಿ AI ಸಮ್ಮಿಟ್ ಎಕ್ಸ್‌ಪೋದಿಂದ ತೆರವು

ನವದೆಹಲಿ: ಚೀನಾ ನಿರ್ಮಿತ ರೋಬೋ ಡಾಗ್ ತಮ್ಮದೇ ಎಂದು ಪ್ರದರ್ಶಿಸಿದ್ದಕ್ಕಾಗಿ ಟೀಕೆಗೆ ಗುರಿಯಾದ ನಂತರ ಮತ್ತು ಕೇಂದ್ರ ಸರ್ಕಾರವು ವಿರೋಧ ಪಕ್ಷಗಳಿಂದ ಟೀಕೆಗೆ ಗುರಿಯಾದ ನಂತರ ನೋಯ್ಡಾ ಮೂಲದ ಗ್ಯಾಲ್ಗೋಟಿಯಾಸ್ ವಿಶ್ವವಿದ್ಯಾಲಯವನ್ನು ಬುಧವಾರ...