Homeಕರೋನಾ ತಲ್ಲಣಕೊರೊನಾದಿಂದ ಭಾರತದಲ್ಲಿ ಮೃತಪಟ್ಟವರು 40 ಲಕ್ಷ; ಮೋದಿ ಸರ್ಕಾರದ ಲೆಕ್ಕ 5 ಲಕ್ಷ!

ಕೊರೊನಾದಿಂದ ಭಾರತದಲ್ಲಿ ಮೃತಪಟ್ಟವರು 40 ಲಕ್ಷ; ಮೋದಿ ಸರ್ಕಾರದ ಲೆಕ್ಕ 5 ಲಕ್ಷ!

ಕೊರೊನಾದಿಂದ ಸಂಭವಿಸಿದ ಸಾವಿನ ಸಂಖ್ಯೆಯನ್ನು ಬಹಿರಂಗಪಡಿಸುವ ವಿಶ್ವ ಆರೋಗ್ಯ ಸಂಸ್ಥೆ(WHO)ಯ ಪ್ರಯತ್ನಕ್ಕೆ ಭಾರತವು ತಡೆಯೊಡ್ಡುತ್ತಿದೆ ಎಂದು ‘ನ್ಯೂಯಾರ್ಕ್ ಟೈಮ್ಸ್‌‌’ ವರದಿ ಮಾಡಿದೆ.

- Advertisement -
- Advertisement -

ಭಾರತದಲ್ಲಿ ಕೊರೊನಾದಿಂದ ಸುಮಾರು 40 ಲಕ್ಷ ಜನರು ಮೃತಪಟ್ಟಿದ್ದಾರೆ ಎಂದು ವಿಶ್ವ ಆರೋಗ್ಯ ಸಂಸ್ಥೆ(WHO) ಹೇಳಿದೆ ಎಂದು ನ್ಯೂಯಾರ್ಕ್‌ ಟೈಮ್ಸ್‌ ಶನಿವಾರ ವರದಿ ಮಾಡಿದ್ದು, ಅದರೆ ಈ ವರದಿ ವಿಳಂಬವಾಗಲು ಭಾರತ ಪ್ರಯತ್ನಿಸುತ್ತಿದೆ ಎಂದು ಹೇಳಿದೆ. ಸರ್ಕಾರದ ಅಧೀಕೃತ ಲೆಕ್ಕಾಚಾರದ ಪ್ರಕಾರ ಕೊರೊನಾದಿಂದ ದೇಶದಲ್ಲಿ ಮೃತಪಟ್ಟವರು ಐದು ಲಕ್ಷ ಎಂದು ಹೇಳುತ್ತದೆ.

ಕೊರೊನಾದಿಂದ ಜಾಗತಿಕವಾಗಿ ಸಂಭವಿಸಿದ ಸಾವಿನ ಸಂಖ್ಯೆಯನ್ನು ಬಹಿರಂಗಪಡಿಸುವ ವಿಶ್ವ ಆರೋಗ್ಯ ಸಂಸ್ಥೆ(WHO)ಯ ಪ್ರಯತ್ನಕ್ಕೆ ಭಾರತವು ತಡೆಯೊಡ್ಡುತ್ತಿದೆ ಎಂದು ‘ನ್ಯೂಯಾರ್ಕ್ ಟೈಮ್ಸ್‌‌’ ವರದಿ ಮಾಡಿದೆ.  ಈ ಹಿಂದೆ ನಂಬಿದ್ದಕ್ಕಿಂತ ಹೆಚ್ಚಿನ ಜನರು ಕೊರೊನಾದಿಂದ ಸಾವನ್ನಪ್ಪಿದ್ದಾರೆ ಎಂದು WHO ಕಂಡುಹಿಡಿದಿದೆ. ಆದರೆ ಭಾರತದ ಆಕ್ಷೇಪಣೆಯಿಂದಾಗಿ ಈ ವರದಿ ವಿಳಂಬವಾಗುತ್ತಿದ್ದು, ಎಷ್ಟು ನಾಗರೀಕರು ಸತ್ತರು ಎಂಬ ಲೆಕ್ಕಾಚಾರವನ್ನು ನೀಡಲು ಭಾರತ ವಿವಾದ ಮಾಡುತ್ತಿದ್ದು, ಅದನ್ನು ಸಾರ್ವಜನಿಕವಾಗದಂತೆ ಇರಿಸಲು ಪ್ರಯತ್ನಿಸಿದೆ ಎಂದು ಟೈಮ್ಸ್‌ ವರದಿ ಹೇಳಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

2021ರ ಅಂತ್ಯಕ್ಕೆ ಪ್ರತಿಯೊಂದು ದೇಶಗಳು ವೈಯಕ್ತಿವಾಗಿ ನೀಡಿರುವ ಮಾಹಿತಿಯಂತೆ ಕೊರೊನಾ ಸಾವಿನ ಸಂಖ್ಯೆ 60 ಲಕ್ಷ ಎಂದು ನಂಬಲಾಗಿತ್ತು. ಆದರೆ ಕೊರೊನಾದಿಂದಾದ ಸಾವು 1.5 ಕೋಟಿಗೂ ಹೆಚ್ಚು ಎಂದು WHO ಇದೀಗ ಕಂಡು ಹಿಡಿದಿದೆ. ಪ್ರಪಂಚದಾದ್ಯಂತ ಇರುವ ತಜ್ಞರ ಒಂದು ವರ್ಷಕ್ಕೂ ಹೆಚ್ಚು ಸಂಶೋಧನೆ ಹಾಗೂ ವಿಶ್ಲೇಷಣೆಯ ಫಲಿತಾಂಶ ಮತ್ತು ಇಲ್ಲಿಯವರೆಗಿನ ಸಾಂಕ್ರಾಮಿಕ ರೋಗದ ಭೀಕರತೆಯ ಬಗ್ಗೆ ಅತ್ಯಂತ ಸಮಗ್ರವಾದ ನೋಟದ ವರದಿಯು ಭಾರತದ ಆಕ್ಷೇಪಣೆಯಿಂದಾಗಿ ತಿಂಗಳುಗಟ್ಟಲೆ ವಿಳಂಬವಾಗಿದೆ ಎಂದು ನ್ಯೂಯಾರ್ಕ್‌ ಟೈಮ್ಸ್‌‌ ತನ್ನ ವರದಿಯಲ್ಲಿ ಹೇಳಿದೆ.

ಇದನ್ನೂ ಓದಿ: ಕೊರೊನಾದಿಂದ ದೇಶ ತತ್ತರಿಸಿದ್ದರೂ ಫೋರ್ಬ್ಸ್-2022ರ ಶ್ರೀಮಂತ ಪಟ್ಟಿಯಲ್ಲಿ ಅಂಬಾನಿ, ಅದಾನಿ!

ಹೆಚ್ಚುವರಿ 90 ಲಕ್ಷ ಸಾವುಗಳಲ್ಲಿ ಮೂರನೇ ಒಂದು ಭಾಗಕ್ಕಿಂತ ಹೆಚ್ಚು ಸಾವು ಭಾರತದಲ್ಲಿ ಸಂಭವಿಸಿದೆ ಎಂದು WHO ಅಂದಾಜಿಸಿದೆ. ಆದರೆ ಮೋದಿ ನೇತೃತ್ವದ ಸರ್ಕಾರವು ಕೊರೊನಾದಿಂದ ಸಾವಿಗೀಡಾದವರ ಸಂಖ್ಯೆ ಕೇವಲ 5,20,000(ಐದು ಲಕ್ಷದ ಇಪ್ಪತ್ತು ಸಾವಿರ) ಎಂದು ಹೇಳುತ್ತಿದೆ. ದೇಶದಲ್ಲಿ ಕೊರೊನಾದಿಂದ ಸಾವಿಗೀಡಾದವರ ನಿಜವಾರ ಸಂ‌ಖ್ಯೆ ಕನಿಷ್ಠ 40 ಲಕ್ಷ ಎಂದು WHO ಹೇಳುತ್ತದೆ.

WHO ಲೆಕ್ಕಕ್ಕೆ ಸಿಗದ ಸಾವುಗಳನ್ನು ಕಂಡುಹಿಡಿಯುವುದಕ್ಕಾಗಿ ಕೇಂದ್ರೀಕೃತ ರಾಷ್ಟ್ರೀಯ ಡೇಟಾದ ಜೊತೆಗೆ ಸ್ಥಳೀಯ ಮತ್ತು ಮನೆ-ಮನೆ ಸರ್ವೆಗಳ ಹಾಗೂ ಸಂಖ್ಯಾಶಾಸ್ತ್ರೀಯ ಮಾದರಿಗಳ ಮೂಲಕ ಹೊಸ ಮಾಹಿತಿಯನ್ನು ಪಡೆಯುತ್ತಿದೆ.

ಅಂಕಿಅಂಶಗಳನ್ನು ಬಿಡುಗಡೆ ಮಾಡುವಲ್ಲಿನ ವಿಳಂಬವು ಗಂಭೀರ ವಿಷಯವಾಗಿದ್ದು, ಯಾಕೆಂದರೆ ಸಾಂಕ್ರಾಮಿಕ ರೋಗವು ಹೇಗೆ ಹೊರಹೊಮ್ಮಿದೆ ಮತ್ತು ಯಾವ ಕ್ರಮಗಳು ಇದೇ ರೀತಿಯ ಬಿಕ್ಕಟ್ಟನ್ನು ತಗ್ಗಿಸಬಹುದು ಎಂಬುದನ್ನು ಅರ್ಥಮಾಡಿಕೊಳ್ಳಲು ಜಾಗತಿಕ ಅಂಕಿಅಂಶ ಅತ್ಯಗತ್ಯವಾಗಿದೆ. ಆದರೆ ಭಾರತವು ಇದಕ್ಕೆ ಸಹಕರಿಸುತ್ತಿಲ್ಲ ಎಂದು ನ್ಯೂಯಾರ್ಕ್‌ ಟೈಮ್ಸ್‌ ವರದಿ ಉಲ್ಲೇಖಿಸಿದೆ.

ಇದನ್ನೂ ಓದಿ:ಗುಜರಾತ್‌ನಲ್ಲಿ ಕೊರೊನಾದ ಹೊಸ ರೂಪಾಂತರ XE ವೈರಸ್‌ ಪತ್ತೆ: ಸರ್ಕಾರಿ ಮೂಲಗಳು

ಈ ವರದಿ ತಯಾರಾದರೆ ಕೊರೊನಾಗೆ ನೀಡಿರುವ ಲಸಿಕೆ ಯಾವ ರೀತಿಯಲ್ಲಿ ಪರಿಣಾಮ ಬೀರಿದೆ ಎಂದು ತಜ್ಞರಿಗೆ ಅರ್ಥ ಮಾಡಿಕೊಳ್ಳಲು ಸಹಾಯವಾಗುತ್ತದೆ ಎಂದು ಟೊರೊಂಟೊದಲ್ಲಿನ ಜಾಗತಿಕ ಆರೋಗ್ಯ ಸಂಶೋಧನಾ ಕೇಂದ್ರದ ನಿರ್ದೇಶಕ ಡಾ. ಪ್ರಭಾತ್ ಝಾ ಹೇಳಿದ್ದಾರೆ.

WHO ವರದಿಯ ಅಂಕಿಅಂಶಗಳನ್ನು ಬಿಡುಗಡೆ ಮಾಡದಿದ್ದರೆ, ಅದನ್ನು ತಾವೇ ಸ್ವತಃ ಬಿಡುಗಡೆ ಮಾಡುತ್ತೇವೆ ಎಂದು ವರದಿಯ ತಯಾರಿಸುತ್ತಿರುವ ಗುಂಪಿನ ಕೆಲವು ಸದಸ್ಯರು WHO ಗೆ ಇತ್ತೀಚೆಗೆ ಎಚ್ಚರಿಕೆ ನೀಡಿದ್ದಾರೆ ಎಂದು ನ್ಯೂಯಾರ್ಕ್ ಟೈಮ್ಸ್‌ ಹೇಳಿದೆ.

WHO ವಕ್ತಾರ ಅಮ್ನಾ ಸ್ಮೈಲ್‌ಬೆಗೊವಿಕ್, “ವರದಿಯನ್ನು ನಾವು ಏಪ್ರಿಲ್‌ನಲ್ಲಿ ಪ್ರಕಟಿಸುವ ಗುರಿ ಹೊಂದಿದ್ದೇವೆ” ಎಂದು ತಿಳಿಸಿದ್ದಾರೆ. ಕೊರೊನಾದಿಂದಾಗ ಸಾವುಗಳನ್ನು ಕಡಿಮೆ ತೋರಿಸಿರುವ ದೇಶಗಳಲ್ಲಿ ಬ್ರೆಜಿಲ್ ಮತ್ತು ಇಂಡೋನೇಷ್ಯಾದಂತಹ ಕೂಡಾ ಸೇರಿದೆ.

ಆದರೆ ಭಾರತ ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದು, WHO ಯ ವಿಧಾನವು ದೋಷಪೂರಿತವಾಗಿದೆ ಎಂದು ಹೇಳಿದೆ.

ಇದನ್ನೂ ಓದಿ: ಕೊರೊನಾ ಬಿಕ್ಕಟ್ಟಿನಿಂದ ಪ್ರವಾಸೋದ್ಯಮ ಕ್ಷೇತ್ರದಲ್ಲಿ ಉದ್ಯೋಗ ಕಳೆದುಕೊಂಡ 2.15 ಕೋಟಿ ಮಂದಿ!

ಕಳೆದ ಎರಡು ವರ್ಷಗಳಿಂದ ಭಾರತವು ತನ್ನ ಒಟ್ಟು ಮರಣದ ಅಂಕಿಅಂಶವನ್ನು WHO ಗೆ ಸಲ್ಲಿಸಿಲ್ಲ ಎಂದು ಟೈಮ್ಸ್‌ ವರದಿ ಹೇಳಿದ್ದು, ಆದರೆ ಸಂಸ್ಥೆಯ ಸಂಶೋಧಕರು ಆಂಧ್ರಪ್ರದೇಶ, ಛತ್ತೀಸ್‌ಗಢ ಮತ್ತು ಕರ್ನಾಟಕ ಸೇರಿದಂತೆ ಕನಿಷ್ಠ 12 ರಾಜ್ಯಗಳಿಂದ ಸಂಗ್ರಹಿಸಿದ ಸಂಖ್ಯೆಗಳನ್ನು ತಮ್ಮ ವರದಿಗಳಲ್ಲಿ ಬಳಸಿದ್ದಾರೆ. ಕೊರೊನಾ ಪರಿಣಾಮವಾಗಿ ದೇಶದಲ್ಲಿ ಕನಿಷ್ಠ ನಾಲ್ಕರಿಂದ ಐದು ಪಟ್ಟು ಹೆಚ್ಚು ಸಾವುಗಳು ಉಂಟಾಗಿದೆ ಈ ಅಂಕಿಅಂಶ ತೋರಿಸುತ್ತದೆ ಎಂದು ತಜ್ಞರು ಹೇಳುತ್ತಾರೆ.

ವಿಶ್ವಸಂಸ್ಥೆಯ ವರದಿಯ ಬಿಡುಗಡೆಯನ್ನು ತಡೆಯುವ ಭಾರತ ತಡೆಯುತ್ತಿರುವುದು, ಮೋದಿ ನೇತೃತ್ವದ ಸರ್ಕಾರಕ್ಕೆ ಸಾಂಕ್ರಾಮಿಕ ದತ್ತಾಂಶವು ಸೂಕ್ಷ್ಮ ವಿಷಯವಾಗಿದೆ ಎಂಬುವುದು ಸ್ಪಷ್ಟಪಡಿಸುತ್ತದೆ ಎಂದು ನ್ಯೂಯಾರ್ಕ್‌ ಟೈಮ್ಸ್‌ ತನ್ನ ವರದಿಯಲ್ಲಿ ಉಲ್ಲೇಖಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...