Homeಕರೋನಾ ತಲ್ಲಣಕೊರೊನಾದಿಂದ ಭಾರತದಲ್ಲಿ ಮೃತಪಟ್ಟವರು 40 ಲಕ್ಷ; ಮೋದಿ ಸರ್ಕಾರದ ಲೆಕ್ಕ 5 ಲಕ್ಷ!

ಕೊರೊನಾದಿಂದ ಭಾರತದಲ್ಲಿ ಮೃತಪಟ್ಟವರು 40 ಲಕ್ಷ; ಮೋದಿ ಸರ್ಕಾರದ ಲೆಕ್ಕ 5 ಲಕ್ಷ!

ಕೊರೊನಾದಿಂದ ಸಂಭವಿಸಿದ ಸಾವಿನ ಸಂಖ್ಯೆಯನ್ನು ಬಹಿರಂಗಪಡಿಸುವ ವಿಶ್ವ ಆರೋಗ್ಯ ಸಂಸ್ಥೆ(WHO)ಯ ಪ್ರಯತ್ನಕ್ಕೆ ಭಾರತವು ತಡೆಯೊಡ್ಡುತ್ತಿದೆ ಎಂದು ‘ನ್ಯೂಯಾರ್ಕ್ ಟೈಮ್ಸ್‌‌’ ವರದಿ ಮಾಡಿದೆ.

- Advertisement -
- Advertisement -

ಭಾರತದಲ್ಲಿ ಕೊರೊನಾದಿಂದ ಸುಮಾರು 40 ಲಕ್ಷ ಜನರು ಮೃತಪಟ್ಟಿದ್ದಾರೆ ಎಂದು ವಿಶ್ವ ಆರೋಗ್ಯ ಸಂಸ್ಥೆ(WHO) ಹೇಳಿದೆ ಎಂದು ನ್ಯೂಯಾರ್ಕ್‌ ಟೈಮ್ಸ್‌ ಶನಿವಾರ ವರದಿ ಮಾಡಿದ್ದು, ಅದರೆ ಈ ವರದಿ ವಿಳಂಬವಾಗಲು ಭಾರತ ಪ್ರಯತ್ನಿಸುತ್ತಿದೆ ಎಂದು ಹೇಳಿದೆ. ಸರ್ಕಾರದ ಅಧೀಕೃತ ಲೆಕ್ಕಾಚಾರದ ಪ್ರಕಾರ ಕೊರೊನಾದಿಂದ ದೇಶದಲ್ಲಿ ಮೃತಪಟ್ಟವರು ಐದು ಲಕ್ಷ ಎಂದು ಹೇಳುತ್ತದೆ.

ಕೊರೊನಾದಿಂದ ಜಾಗತಿಕವಾಗಿ ಸಂಭವಿಸಿದ ಸಾವಿನ ಸಂಖ್ಯೆಯನ್ನು ಬಹಿರಂಗಪಡಿಸುವ ವಿಶ್ವ ಆರೋಗ್ಯ ಸಂಸ್ಥೆ(WHO)ಯ ಪ್ರಯತ್ನಕ್ಕೆ ಭಾರತವು ತಡೆಯೊಡ್ಡುತ್ತಿದೆ ಎಂದು ‘ನ್ಯೂಯಾರ್ಕ್ ಟೈಮ್ಸ್‌‌’ ವರದಿ ಮಾಡಿದೆ.  ಈ ಹಿಂದೆ ನಂಬಿದ್ದಕ್ಕಿಂತ ಹೆಚ್ಚಿನ ಜನರು ಕೊರೊನಾದಿಂದ ಸಾವನ್ನಪ್ಪಿದ್ದಾರೆ ಎಂದು WHO ಕಂಡುಹಿಡಿದಿದೆ. ಆದರೆ ಭಾರತದ ಆಕ್ಷೇಪಣೆಯಿಂದಾಗಿ ಈ ವರದಿ ವಿಳಂಬವಾಗುತ್ತಿದ್ದು, ಎಷ್ಟು ನಾಗರೀಕರು ಸತ್ತರು ಎಂಬ ಲೆಕ್ಕಾಚಾರವನ್ನು ನೀಡಲು ಭಾರತ ವಿವಾದ ಮಾಡುತ್ತಿದ್ದು, ಅದನ್ನು ಸಾರ್ವಜನಿಕವಾಗದಂತೆ ಇರಿಸಲು ಪ್ರಯತ್ನಿಸಿದೆ ಎಂದು ಟೈಮ್ಸ್‌ ವರದಿ ಹೇಳಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

2021ರ ಅಂತ್ಯಕ್ಕೆ ಪ್ರತಿಯೊಂದು ದೇಶಗಳು ವೈಯಕ್ತಿವಾಗಿ ನೀಡಿರುವ ಮಾಹಿತಿಯಂತೆ ಕೊರೊನಾ ಸಾವಿನ ಸಂಖ್ಯೆ 60 ಲಕ್ಷ ಎಂದು ನಂಬಲಾಗಿತ್ತು. ಆದರೆ ಕೊರೊನಾದಿಂದಾದ ಸಾವು 1.5 ಕೋಟಿಗೂ ಹೆಚ್ಚು ಎಂದು WHO ಇದೀಗ ಕಂಡು ಹಿಡಿದಿದೆ. ಪ್ರಪಂಚದಾದ್ಯಂತ ಇರುವ ತಜ್ಞರ ಒಂದು ವರ್ಷಕ್ಕೂ ಹೆಚ್ಚು ಸಂಶೋಧನೆ ಹಾಗೂ ವಿಶ್ಲೇಷಣೆಯ ಫಲಿತಾಂಶ ಮತ್ತು ಇಲ್ಲಿಯವರೆಗಿನ ಸಾಂಕ್ರಾಮಿಕ ರೋಗದ ಭೀಕರತೆಯ ಬಗ್ಗೆ ಅತ್ಯಂತ ಸಮಗ್ರವಾದ ನೋಟದ ವರದಿಯು ಭಾರತದ ಆಕ್ಷೇಪಣೆಯಿಂದಾಗಿ ತಿಂಗಳುಗಟ್ಟಲೆ ವಿಳಂಬವಾಗಿದೆ ಎಂದು ನ್ಯೂಯಾರ್ಕ್‌ ಟೈಮ್ಸ್‌‌ ತನ್ನ ವರದಿಯಲ್ಲಿ ಹೇಳಿದೆ.

ಇದನ್ನೂ ಓದಿ: ಕೊರೊನಾದಿಂದ ದೇಶ ತತ್ತರಿಸಿದ್ದರೂ ಫೋರ್ಬ್ಸ್-2022ರ ಶ್ರೀಮಂತ ಪಟ್ಟಿಯಲ್ಲಿ ಅಂಬಾನಿ, ಅದಾನಿ!

ಹೆಚ್ಚುವರಿ 90 ಲಕ್ಷ ಸಾವುಗಳಲ್ಲಿ ಮೂರನೇ ಒಂದು ಭಾಗಕ್ಕಿಂತ ಹೆಚ್ಚು ಸಾವು ಭಾರತದಲ್ಲಿ ಸಂಭವಿಸಿದೆ ಎಂದು WHO ಅಂದಾಜಿಸಿದೆ. ಆದರೆ ಮೋದಿ ನೇತೃತ್ವದ ಸರ್ಕಾರವು ಕೊರೊನಾದಿಂದ ಸಾವಿಗೀಡಾದವರ ಸಂಖ್ಯೆ ಕೇವಲ 5,20,000(ಐದು ಲಕ್ಷದ ಇಪ್ಪತ್ತು ಸಾವಿರ) ಎಂದು ಹೇಳುತ್ತಿದೆ. ದೇಶದಲ್ಲಿ ಕೊರೊನಾದಿಂದ ಸಾವಿಗೀಡಾದವರ ನಿಜವಾರ ಸಂ‌ಖ್ಯೆ ಕನಿಷ್ಠ 40 ಲಕ್ಷ ಎಂದು WHO ಹೇಳುತ್ತದೆ.

WHO ಲೆಕ್ಕಕ್ಕೆ ಸಿಗದ ಸಾವುಗಳನ್ನು ಕಂಡುಹಿಡಿಯುವುದಕ್ಕಾಗಿ ಕೇಂದ್ರೀಕೃತ ರಾಷ್ಟ್ರೀಯ ಡೇಟಾದ ಜೊತೆಗೆ ಸ್ಥಳೀಯ ಮತ್ತು ಮನೆ-ಮನೆ ಸರ್ವೆಗಳ ಹಾಗೂ ಸಂಖ್ಯಾಶಾಸ್ತ್ರೀಯ ಮಾದರಿಗಳ ಮೂಲಕ ಹೊಸ ಮಾಹಿತಿಯನ್ನು ಪಡೆಯುತ್ತಿದೆ.

ಅಂಕಿಅಂಶಗಳನ್ನು ಬಿಡುಗಡೆ ಮಾಡುವಲ್ಲಿನ ವಿಳಂಬವು ಗಂಭೀರ ವಿಷಯವಾಗಿದ್ದು, ಯಾಕೆಂದರೆ ಸಾಂಕ್ರಾಮಿಕ ರೋಗವು ಹೇಗೆ ಹೊರಹೊಮ್ಮಿದೆ ಮತ್ತು ಯಾವ ಕ್ರಮಗಳು ಇದೇ ರೀತಿಯ ಬಿಕ್ಕಟ್ಟನ್ನು ತಗ್ಗಿಸಬಹುದು ಎಂಬುದನ್ನು ಅರ್ಥಮಾಡಿಕೊಳ್ಳಲು ಜಾಗತಿಕ ಅಂಕಿಅಂಶ ಅತ್ಯಗತ್ಯವಾಗಿದೆ. ಆದರೆ ಭಾರತವು ಇದಕ್ಕೆ ಸಹಕರಿಸುತ್ತಿಲ್ಲ ಎಂದು ನ್ಯೂಯಾರ್ಕ್‌ ಟೈಮ್ಸ್‌ ವರದಿ ಉಲ್ಲೇಖಿಸಿದೆ.

ಇದನ್ನೂ ಓದಿ:ಗುಜರಾತ್‌ನಲ್ಲಿ ಕೊರೊನಾದ ಹೊಸ ರೂಪಾಂತರ XE ವೈರಸ್‌ ಪತ್ತೆ: ಸರ್ಕಾರಿ ಮೂಲಗಳು

ಈ ವರದಿ ತಯಾರಾದರೆ ಕೊರೊನಾಗೆ ನೀಡಿರುವ ಲಸಿಕೆ ಯಾವ ರೀತಿಯಲ್ಲಿ ಪರಿಣಾಮ ಬೀರಿದೆ ಎಂದು ತಜ್ಞರಿಗೆ ಅರ್ಥ ಮಾಡಿಕೊಳ್ಳಲು ಸಹಾಯವಾಗುತ್ತದೆ ಎಂದು ಟೊರೊಂಟೊದಲ್ಲಿನ ಜಾಗತಿಕ ಆರೋಗ್ಯ ಸಂಶೋಧನಾ ಕೇಂದ್ರದ ನಿರ್ದೇಶಕ ಡಾ. ಪ್ರಭಾತ್ ಝಾ ಹೇಳಿದ್ದಾರೆ.

WHO ವರದಿಯ ಅಂಕಿಅಂಶಗಳನ್ನು ಬಿಡುಗಡೆ ಮಾಡದಿದ್ದರೆ, ಅದನ್ನು ತಾವೇ ಸ್ವತಃ ಬಿಡುಗಡೆ ಮಾಡುತ್ತೇವೆ ಎಂದು ವರದಿಯ ತಯಾರಿಸುತ್ತಿರುವ ಗುಂಪಿನ ಕೆಲವು ಸದಸ್ಯರು WHO ಗೆ ಇತ್ತೀಚೆಗೆ ಎಚ್ಚರಿಕೆ ನೀಡಿದ್ದಾರೆ ಎಂದು ನ್ಯೂಯಾರ್ಕ್ ಟೈಮ್ಸ್‌ ಹೇಳಿದೆ.

WHO ವಕ್ತಾರ ಅಮ್ನಾ ಸ್ಮೈಲ್‌ಬೆಗೊವಿಕ್, “ವರದಿಯನ್ನು ನಾವು ಏಪ್ರಿಲ್‌ನಲ್ಲಿ ಪ್ರಕಟಿಸುವ ಗುರಿ ಹೊಂದಿದ್ದೇವೆ” ಎಂದು ತಿಳಿಸಿದ್ದಾರೆ. ಕೊರೊನಾದಿಂದಾಗ ಸಾವುಗಳನ್ನು ಕಡಿಮೆ ತೋರಿಸಿರುವ ದೇಶಗಳಲ್ಲಿ ಬ್ರೆಜಿಲ್ ಮತ್ತು ಇಂಡೋನೇಷ್ಯಾದಂತಹ ಕೂಡಾ ಸೇರಿದೆ.

ಆದರೆ ಭಾರತ ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದು, WHO ಯ ವಿಧಾನವು ದೋಷಪೂರಿತವಾಗಿದೆ ಎಂದು ಹೇಳಿದೆ.

ಇದನ್ನೂ ಓದಿ: ಕೊರೊನಾ ಬಿಕ್ಕಟ್ಟಿನಿಂದ ಪ್ರವಾಸೋದ್ಯಮ ಕ್ಷೇತ್ರದಲ್ಲಿ ಉದ್ಯೋಗ ಕಳೆದುಕೊಂಡ 2.15 ಕೋಟಿ ಮಂದಿ!

ಕಳೆದ ಎರಡು ವರ್ಷಗಳಿಂದ ಭಾರತವು ತನ್ನ ಒಟ್ಟು ಮರಣದ ಅಂಕಿಅಂಶವನ್ನು WHO ಗೆ ಸಲ್ಲಿಸಿಲ್ಲ ಎಂದು ಟೈಮ್ಸ್‌ ವರದಿ ಹೇಳಿದ್ದು, ಆದರೆ ಸಂಸ್ಥೆಯ ಸಂಶೋಧಕರು ಆಂಧ್ರಪ್ರದೇಶ, ಛತ್ತೀಸ್‌ಗಢ ಮತ್ತು ಕರ್ನಾಟಕ ಸೇರಿದಂತೆ ಕನಿಷ್ಠ 12 ರಾಜ್ಯಗಳಿಂದ ಸಂಗ್ರಹಿಸಿದ ಸಂಖ್ಯೆಗಳನ್ನು ತಮ್ಮ ವರದಿಗಳಲ್ಲಿ ಬಳಸಿದ್ದಾರೆ. ಕೊರೊನಾ ಪರಿಣಾಮವಾಗಿ ದೇಶದಲ್ಲಿ ಕನಿಷ್ಠ ನಾಲ್ಕರಿಂದ ಐದು ಪಟ್ಟು ಹೆಚ್ಚು ಸಾವುಗಳು ಉಂಟಾಗಿದೆ ಈ ಅಂಕಿಅಂಶ ತೋರಿಸುತ್ತದೆ ಎಂದು ತಜ್ಞರು ಹೇಳುತ್ತಾರೆ.

ವಿಶ್ವಸಂಸ್ಥೆಯ ವರದಿಯ ಬಿಡುಗಡೆಯನ್ನು ತಡೆಯುವ ಭಾರತ ತಡೆಯುತ್ತಿರುವುದು, ಮೋದಿ ನೇತೃತ್ವದ ಸರ್ಕಾರಕ್ಕೆ ಸಾಂಕ್ರಾಮಿಕ ದತ್ತಾಂಶವು ಸೂಕ್ಷ್ಮ ವಿಷಯವಾಗಿದೆ ಎಂಬುವುದು ಸ್ಪಷ್ಟಪಡಿಸುತ್ತದೆ ಎಂದು ನ್ಯೂಯಾರ್ಕ್‌ ಟೈಮ್ಸ್‌ ತನ್ನ ವರದಿಯಲ್ಲಿ ಉಲ್ಲೇಖಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...