Homeಮುಖಪುಟಅಂತರ್ಜಾತಿ ಮದುವೆಗೆ ವಿರೋಧ: ತಲೆ ಬೋಳಿಸಿಕೊಂಡ ಯುವತಿ ಕುಟುಂಬದ 40 ಸದಸ್ಯರು!

ಅಂತರ್ಜಾತಿ ಮದುವೆಗೆ ವಿರೋಧ: ತಲೆ ಬೋಳಿಸಿಕೊಂಡ ಯುವತಿ ಕುಟುಂಬದ 40 ಸದಸ್ಯರು!

- Advertisement -
- Advertisement -

ಬುಡಕಟ್ಟು ಯುವತಿಯೊಬ್ಬರು ಅಂತರ್ಜಾತಿ ಮದುವೆಯಾಗಿದ್ದಕ್ಕೆ ಆಕೆಯ ಕುಟುಂಬದ 40 ಮಂದಿ ತಲೆ ಬೋಳಿಸಿಕೊಂಡು ಶುದ್ದೀಕರಣ ನಡೆಸಿದ ಘಟನೆ ಒಡಿಶಾದ ರಾಯಗಡ ಜಿಲ್ಲೆಯಲ್ಲಿ ನಡೆದಿದೆ ಎಂದು newindianexpress.com ವರದಿ ಮಾಡಿದೆ.

ಶುದ್ದೀಕರಣದ ವೇಳೆ ಗ್ರಾಮ ದೇವತೆಯ ಮುಂದೆ ಮೇಕೆ, ಕೋಳಿ ಮತ್ತು ಹಂದಿಗಳನ್ನು ಬಲಿ ನೀಡಲಾಗಿದೆ ಎಂದು ವರದಿ ಹೇಳಿದೆ. ರಾಯಗಡ ಜಿಲ್ಲೆಯ ಕಾಶಿಪುರ ಬ್ಲಾಕ್‌ನ ಗೋರಖ್‌ಪುರ ಪಂಚಾಯಿತಿ ವ್ಯಾಪ್ತಿಯ ಬೈಗಾನಗುಡ ಗ್ರಾಮದಲ್ಲಿ ಗುರುವಾರ (ಜೂ.19) ಈ ಘಟನೆ ನಡೆದಿದೆ.

ವರದಿಗಳ ಪ್ರಕಾರ, ಸುಮಾರು 20 ವರ್ಷ ವಯಸ್ಸಿನ ಬುಡಕಟ್ಟು ಸಮುದಾಯದ ಯುವತಿ ಮತ್ತು ಎಸ್‌ಸಿ ಸಮುದಾಯ ಯುವಕ ಪರಸ್ಪರ ಪ್ರೀತಿಸುತ್ತಿದ್ದರು. ಯುವಕ ಬುಡಕಟ್ಟು ಸಮುದಾಯದವನಲ್ಲ ಎಂಬ ಕಾರಣಕ್ಕೆ ಇವರ ಮದುವೆಗೆ ಯುವತಿ ಕಡೆಯವರು ವಿರೋಧ ವ್ಯಕ್ತಪಡಿಸಿದ್ದರು. ಇದನ್ನು ಲೆಕ್ಕಿಸದೆ ಯುವಜೋಡಿ ಮದುವೆಯಾಗಿದೆ.

ಯುವತಿಯ ಸಮುದಾಯದಲ್ಲಿ ಅನ್ಯ ಜಾತಿಯವರನ್ನು ಮದುವೆಯಾಗಲು ಅವಕಾಶ ಇಲ್ಲ. ಹಾಗೇನಾದರು ಮದುವೆಯಾದರೆ, ಅವರ ಇಡೀ ಕುಟುಂಬ ಮತ್ತು ಸಂಬಂಧಿಕರು ಗ್ರಾಮ ದೇವತೆಯ ಕೋಪಕ್ಕೆ ತುತ್ತಾಗುತ್ತಾರೆ. ದೇವತೆಯ ಕೋಪ ತಣಿಸಲು ಇಡೀ ಕುಟುಂಬ ಮತ್ತು ಸಂಬಂಧಿಕರು ಸಮುದಾಯದಲ್ಲಿ ಅಂಗೀಕರಿಸಲ್ಪಡುವ ಶುದ್ಧೀಕರಣ ಆಚರಣೆಗೆ ಒಳಗಾಗಬೇಕಾಗುತ್ತದೆ.

ಅದರಂತೆ, ಯುವತಿಯ ಕುಟುಂಬ ಸದಸ್ಯರು ಮತ್ತು ಸಂಬಂಧಿಕರು ತಲೆ ಬೋಳಿಸಿಕೊಂಡು, ಮೇಕೆ, ಹಂದಿ ಮತ್ತು ಕೋಳಿಗಳನ್ನು ಬಲಿ ನೀಡಿ ಗ್ರಾಮಸ್ಥರಿಗೆ ಭವ್ಯ ಔತಣವನ್ನು ಏರ್ಪಡಿಸಿದ್ದಾರೆ ಎಂದು newindianexpress.com ವರದಿ ಹೇಳಿದೆ.

ಗ್ರಾಮದ ಯಾರೋ ಒಬ್ಬರು ಶುದ್ದೀಕರಣ ಆಚರಣೆಯನ್ನು ಮೊಬೈಲ್ ಫೋನ್‌ನಲ್ಲಿ ರೆಕಾರ್ಡ್ ಮಾಡಿ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ ನಂತರ ಈ ಘಟನೆ ಬೆಳಕಿಗೆ ಬಂದಿದೆ. ವಿಡಿಯೋ ತುಣುಕು ವೈರಲ್ ಆಗುತ್ತಿದ್ದಂತೆ, ಜಿಲ್ಲಾಡಳಿತವು ಘಟನೆಯ ತನಿಖೆ ನಡೆಸುವಂತೆ ಕಾಶಿಪುರದ ಬ್ಲಾಕ್ ಅಭಿವೃದ್ಧಿ ಅಧಿಕಾರಿ (ಬಿಡಿಒ) ಅವರಿಗೆ ನಿರ್ದೇಶನ ನೀಡಿದೆ.

ಬ್ಲಾಕ್ ಮಟ್ಟದ ವಿಸ್ತರಣಾ ಅಧಿಕಾರಿ ನೇತೃತ್ವದ ತಂಡವು ಈ ವಿಷಯದ ಬಗ್ಗೆ ತನಿಖೆ ನಡೆಸಲು ಬೈಗನಗುಡ ಗ್ರಾಮಕ್ಕೆ ಭೇಟಿ ನೀಡಿದೆ ಎಂದು ಬಿಡಿಒ ಬಿಜಯ್ ಸೋ ತಿಳಿಸಿದ್ದಾರೆ. ಅಧಿಕಾರಿಗಳ ತಂಡ ಶುದ್ದೀಕರಣ ನಡೆಸಿರುವ ಜನರನ್ನು ಭೇಟಿಯಾಗಿದ್ದಾರೆ. ಅವರು ಯಾವುದೇ ಬಲವಂತವಿಲ್ಲದೆ ತಮ್ಮ ಪದ್ಧತಿಯಂತೆ ಆಚರಣೆಯನ್ನು ಆಚರಿಸಿದ್ದೇವೆ ಎಂದು ವಿವರಿಸಿದ್ದಾರೆ. ಅಂತರ್ಜಾತಿ ವಿವಾಹಕ್ಕೆ ಸರ್ಕಾರದ ಸಹಾಯವನ್ನು ಪರಿಗಣಿಸಲು ಈ ವಿಷಯವನ್ನು ಉನ್ನತ ಅಧಿಕಾರಿಗಳ ಮುಂದೆ ಇಡಲಾಗಿದೆ” ಎಂದು ಅವರು ಹೇಳಿದ್ದಾರೆ.

ದೆಹಲಿ ವಿಶ್ವವಿದ್ಯಾಲಯ: ‘ಮಾತೃಭಾಷೆ’ ವಿಭಾಗದಲ್ಲಿ ‘ಉರ್ದು’ ಕೈಬಿಟ್ಟು, ‘ಮುಸ್ಲಿಂ’ ಸೇರಿಸಿದ್ದಕ್ಕೆ ತೀವ್ರ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಐ ಶೃಂಗಸಭೆ ಪ್ರತಿಭಟನೆ | ಆರೋಪಿಗಳ ಬಂಧನ ವೇಳೆ ಭಾರೀ ಹೈಡ್ರಾಮ : ದೆಹಲಿ ಪೊಲೀಸರನ್ನೇ ವಶಕ್ಕೆ ಪಡೆದ ಶಿಮ್ಲಾ ಪೊಲೀಸರು

ದೆಹಲಿಯ ಎಐ ಶೃಂಗಸಭೆಯಲ್ಲಿ ಅರೆಬೆತ್ತಲೆಯಾಗಿ ಪ್ರತಿಭಟಿಸಿದ ಯುವ ಕಾಂಗ್ರೆಸ್‌ ಕಾರ್ಯಕರ್ತರ ಬಂಧನ ವೇಳೆ ಭಾರೀ ಹೈಡ್ರಾಮ ನಡೆದಿದೆ. ಆರೋಪಿಗಳನ್ನು ಬಂಧಿಸಿ ಕರೆತರಲು ಹಿಮಾಚಲ ಪ್ರದೇಶದ ಶಿಮ್ಲಾ ಜಿಲ್ಲೆಗೆ ತೆರಳಿದ್ದ ದೆಹಲಿ ಪೊಲೀಸರನ್ನು ಅಲ್ಲಿನ...

ಉತ್ತರ ಪ್ರದೇಶ| ಪೊಲೀಸರಿಂದ ಬೈಕ್ ಸೀಝ್‌; ಠಾಣೆ ಮುಂದೆ ಬೆಂಕಿ ಹಚ್ಚಿಕೊಂಡ ‘ಗಿಗ್’ ಕಾರ್ಮಿಕ

ಪೊಲೀಸರು ತನ್ನ ಬೈಕ್‌ ವಶಪಡಿಸಿಕೊಂಡ ನಂತರ 32 ವರ್ಷದ ಗಿಗ್ ಕಾರ್ಮಿಕನೊಬ್ಬ ಠಾಣೆಯ ಹೊರಗೆ ಬೆಂಕಿಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಉತ್ತರ ಪ್ರದೇಶದ ಬರೇಲಿಯಲ್ಲಿ ನಡೆದಿದೆ. ಅಕ್ಷಯ್ ಕಶ್ಯಪ್ ಎಂದು ಗುರುತಿಸಲ್ಪಟ್ಟ ಯುವಕನಿಗೆ ದೇಹದ...

ಎಪ್‌ಸ್ಟೀನ್ ಫೈಲ್ಸ್ ನಲ್ಲಿ ಹೆಸರು ಪ್ರಸ್ತಾಪ; ಗೇಟ್ಸ್ ಫೌಂಡೇಶನ್ ಸಿಬ್ಬಂದಿಗೆ ಕ್ಷಮೆಯಾಚಿಸಿದ ಬಿಲ್ ಗೇಟ್ಸ್: ವರದಿ 

ನ್ಯೂಯಾರ್ಕ್: ಅಮೆರಿಕದ ತಂತ್ರಜ್ಞಾನ ಉದ್ಯಮಿ ಬಿಲ್ ಗೇಟ್ಸ್, ಲೈಂಗಿಕ ಅಪರಾಧಿ ಜೆಫ್ರಿ ಎಪ್‌ಸ್ಟೈನ್‌ನೊಂದಿಗಿನ ಹಳೆಯ ಸಂಪರ್ಕಕ್ಕಾಗಿ ಗೇಟ್ಸ್ ಫೌಂಡೇಶನ್ ಸಿಬ್ಬಂದಿಗೆ ಕ್ಷಮೆಯಾಚಿಸಿದ್ದಾರೆ ಎಂದು ವರದಿಯಾಗಿದೆ. ವಾಲ್ ಸ್ಟ್ರೀಟ್ ಜರ್ನಲ್ ವರದಿಯ ಪ್ರಕಾರ, ಫೌಂಡೇಶನ್‌ನ ಟೌನ್...

ಕೆಎಸ್‌ಯು-ಐಯುಎಂಎಲ್ ಪ್ರತಿಭಟನೆಯಲ್ಲಿ ಘರ್ಷಣೆ; ಗಾಯಗೊಂಡ ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್

ಕಣ್ಣೂರು ರೈಲ್ವೆ ನಿಲ್ದಾಣದಲ್ಲಿ ಬುಧವಾರ ಪೊಲೀಸರು ಮತ್ತು ಕೇರಳ ವಿದ್ಯಾರ್ಥಿ ಸಂಘ (ಕೆಎಸ್‌ಯು)-ಐಯುಎಂಎಲ್ ಯುವ ಘಟಕದ ಪ್ರತಿಭಟನಾಕಾರರ ನಡುವೆ ನಡೆದ ಘರ್ಷಣೆಯಲ್ಲಿ ಆರೋಗ್ಯ ಸಚಿವೆ ವೀಣಾ ಜಾರ್ಜ್ ಕುತ್ತಿಗೆ ಮತ್ತು ಕೈಗೆ ಗಾಯಗಳಾಗಿದೆ. ಕಾಂಗ್ರೆಸ್-ಕೆಎಸ್‌ಯು...

ಉತ್ತರಾಖಂಡ| ದೇವಸ್ಥಾನದ ಸಮೀಪ ಖಾಲಿ ಜಾಗದಲ್ಲಿ ನಮಾಜ್; ವೃದ್ಧ ಮುಸ್ಲಿಂ ವ್ಯಕ್ತಿಯ ಮೇಲೆ ಹಲ್ಲೆ

ಉತ್ತರಾಖಂಡದ ಜಗತ್ಪುರದ ಅತ್ರಿಯ ದೇವಸ್ಥಾನದ ಮುಂಭಾಗದಲ್ಲಿರುವ ಖಾಲಿ ಜಾಗದಲ್ಲಿ ನಮಾಜ್ ಮಾಡಿದ ನಂತರ ಶಾಹಿದ್ ಎಂದು ಗುರುತಿಸಲಾದ ವೃದ್ಧ ಮುಸ್ಲಿಂ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿ ಧಾರ್ಮಿಕ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು...

ಮುಝಫ್ಫರ್‌ನಗರ ಗಲಭೆ ಪ್ರಕರಣ : 37 ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

ಉತ್ತರ ಪ್ರದೇಶದ ಮುಝಫ್ಫರ್‌ನಗರದ ನ್ಯಾಯಾಲಯ 2013ರ ಕೋಮು ಗಲಭೆಗೆ ಸಂಬಂಧಿಸಿದ ಎಂಟು ಜನರ ಹತ್ಯೆ ಪ್ರಕರಣದಲ್ಲಿ ಸಾಕ್ಷ್ಯಗಳ ಕೊರತೆಯನ್ನು ಉಲ್ಲೇಖಿಸಿ 37 ಆರೋಪಿಗಳನ್ನು ಮಂಗಳವಾರ (ಫೆ.25) ಖುಲಾಸೆಗೊಳಿಸಿದೆ ಎಂದು ವರದಿಯಾಗಿದೆ. ತೀರ್ಪು ಪ್ರಕಟಿಸಿದ ಹೆಚ್ಚುವರಿ...

ಇಸ್ರೇಲ್ ಸಂಸತ್ತಿನಲ್ಲಿ ಭಾಷಣದ ವೇಳೆ ಪ್ರಧಾನಿ ಮೋದಿ ಗಾಝಾ ನರಮೇಧ ಉಲ್ಲೇಖಿಸಲಿ : ಪ್ರಿಯಾಂಕಾ ಗಾಂಧಿ ಆಗ್ರಹ

ಇಸ್ರೇಲ್‌ಗೆ ಭೇಟಿ ನೀಡಿರುವ ಪ್ರಧಾನಿ ನರೇಂದ್ರ ಮೋದಿ, ಅಲ್ಲಿನ ಸಂಸತ್ತಾದ ನೆಸೆಟ್ ಅನ್ನು ಉದ್ದೇಶಿಸಿ ಮಾತನಾಡುವಾಗ ಗಾಝಾ ನರಮೇಧವನ್ನು ಉಲ್ಲೇಖಿಸಿ ನ್ಯಾಯಕ್ಕಾಗಿ ಆಗ್ರಹಿಸಬೇಕು ಎಂದು ಎಐಸಿಸಿ ಕಾರ್ಯದರ್ಶಿ ಹಾಗೂ ವಯನಾಡ್ ಸಂಸದೆ ಪ್ರಿಯಾಂಕಾ...

ಕೇಂದ್ರ ಸಚಿವರ ಸಮ್ಮುಖದಲ್ಲಿ ‘ಮುಸ್ಲಿಂ ವಿರೋಧಿ ಹೇಳಿಕೆ’ ನೀಡಿದ ಹಿಂದುತ್ವವಾದಿ ವ್ಯಕ್ತಿ

ಉತ್ತರಾಖಂಡದಲ್ಲಿ ನಡೆದ ಸಾರ್ವಜನಿಕ ಹಿಂದೂ ಧಾರ್ಮಿಕ ಕಾರ್ಯಕ್ರಮದಲ್ಲಿ, ಕೇಂದ್ರ ಸಚಿವರ ಸಮ್ಮುಖದಲ್ಲಿಯೇ ಹಿಂದುತ್ವವಾದಿ ಮುಖಂಡನೊಬ್ಬ ಮುಸ್ಲಿಮರ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡಿದ್ದು ರಾಜಕೀಯ ಮತ್ತು ಸಾಮಾಜಿಕ ವಿವಾದಕ್ಕೆ ಕಾರಣವಾಗಿದೆ. ಇದು ಪೊಲೀಸ್ ಕ್ರಮ...

ಎನ್‌ಸಿಇಆರ್‌ಟಿ ಪಠ್ಯಪುಸ್ತಕದ ‘ನ್ಯಾಯಾಂಗದಲ್ಲಿನ ಭ್ರಷ್ಟಾಚಾರ’ ವಿಷಯಕ್ಕೆ ಸುಪ್ರೀಂ ಕೋರ್ಟ್ ತೀವ್ರ ಆಕ್ಷೇಪ

ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಪ್ರಕಟಿಸಿದ 8ನೇ ತರಗತಿಯ ಹೊಸ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ "ನ್ಯಾಯಾಂಗದಲ್ಲಿನ ಭ್ರಷ್ಟಾಚಾರ" ಎಂಬ ವಿಷಯ ಉಲ್ಲೇಖಿಸಿರುವುದಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಫೆ.25) ತೀವ್ರ...

ಮಧ್ಯಪ್ರದೇಶ: ಡಾ. ಹರಿಸಿಂಗ್ ಗೌರ್ ವಿವಿಯಲ್ಲಿ ಎಬಿವಿಪಿ-ಆರ್‌ಎಸ್‌ಎಸ್‌ ದುಷ್ಕರ್ಮಿಗಳಿಂದ ವಿದ್ಯಾರ್ಥಿಗಳ ಮೇಲೆ ದಾಳಿ, ಜೀವಬೆದರಿಕೆ;  ಎಫ್‌ಐಆರ್ ದಾಖಲು

ಮಧ್ಯಪ್ರದೇಶದ ಸಾಗರ್‌ನಲ್ಲಿರುವ ಡಾ. ಹರಿ ಸಿಂಗ್ ಗೌರ್ ವಿಶ್ವವಿದ್ಯಾಲಯದಲ್ಲಿ ನಡೆದ ಸರಣಿ ಹಿಂಸಾತ್ಮಕ ಘಟನೆಗಳು ಕ್ಯಾಂಪಸ್ ಸುರಕ್ಷತೆಯ ಬಗ್ಗೆ ಗಂಭೀರ ಕಳವಳವನ್ನು ಉಂಟುಮಾಡಿವೆ. ಐದು ದಿನಗಳಲ್ಲಿ ಎಬಿವಿಪಿ-ಆರ್‌ಎಸ್‌ಎಸ್‌ಗೆ ಸಂಬಂಧಿಸಿದ ವ್ಯಕ್ತಿಗಳಿಂದ ಎರಡು ಜೀವ...