Homeಮುಖಪುಟಅಂತರ್ಜಾತಿ ಮದುವೆಗೆ ವಿರೋಧ: ತಲೆ ಬೋಳಿಸಿಕೊಂಡ ಯುವತಿ ಕುಟುಂಬದ 40 ಸದಸ್ಯರು!

ಅಂತರ್ಜಾತಿ ಮದುವೆಗೆ ವಿರೋಧ: ತಲೆ ಬೋಳಿಸಿಕೊಂಡ ಯುವತಿ ಕುಟುಂಬದ 40 ಸದಸ್ಯರು!

- Advertisement -
- Advertisement -

ಬುಡಕಟ್ಟು ಯುವತಿಯೊಬ್ಬರು ಅಂತರ್ಜಾತಿ ಮದುವೆಯಾಗಿದ್ದಕ್ಕೆ ಆಕೆಯ ಕುಟುಂಬದ 40 ಮಂದಿ ತಲೆ ಬೋಳಿಸಿಕೊಂಡು ಶುದ್ದೀಕರಣ ನಡೆಸಿದ ಘಟನೆ ಒಡಿಶಾದ ರಾಯಗಡ ಜಿಲ್ಲೆಯಲ್ಲಿ ನಡೆದಿದೆ ಎಂದು newindianexpress.com ವರದಿ ಮಾಡಿದೆ.

ಶುದ್ದೀಕರಣದ ವೇಳೆ ಗ್ರಾಮ ದೇವತೆಯ ಮುಂದೆ ಮೇಕೆ, ಕೋಳಿ ಮತ್ತು ಹಂದಿಗಳನ್ನು ಬಲಿ ನೀಡಲಾಗಿದೆ ಎಂದು ವರದಿ ಹೇಳಿದೆ. ರಾಯಗಡ ಜಿಲ್ಲೆಯ ಕಾಶಿಪುರ ಬ್ಲಾಕ್‌ನ ಗೋರಖ್‌ಪುರ ಪಂಚಾಯಿತಿ ವ್ಯಾಪ್ತಿಯ ಬೈಗಾನಗುಡ ಗ್ರಾಮದಲ್ಲಿ ಗುರುವಾರ (ಜೂ.19) ಈ ಘಟನೆ ನಡೆದಿದೆ.

ವರದಿಗಳ ಪ್ರಕಾರ, ಸುಮಾರು 20 ವರ್ಷ ವಯಸ್ಸಿನ ಬುಡಕಟ್ಟು ಸಮುದಾಯದ ಯುವತಿ ಮತ್ತು ಎಸ್‌ಸಿ ಸಮುದಾಯ ಯುವಕ ಪರಸ್ಪರ ಪ್ರೀತಿಸುತ್ತಿದ್ದರು. ಯುವಕ ಬುಡಕಟ್ಟು ಸಮುದಾಯದವನಲ್ಲ ಎಂಬ ಕಾರಣಕ್ಕೆ ಇವರ ಮದುವೆಗೆ ಯುವತಿ ಕಡೆಯವರು ವಿರೋಧ ವ್ಯಕ್ತಪಡಿಸಿದ್ದರು. ಇದನ್ನು ಲೆಕ್ಕಿಸದೆ ಯುವಜೋಡಿ ಮದುವೆಯಾಗಿದೆ.

ಯುವತಿಯ ಸಮುದಾಯದಲ್ಲಿ ಅನ್ಯ ಜಾತಿಯವರನ್ನು ಮದುವೆಯಾಗಲು ಅವಕಾಶ ಇಲ್ಲ. ಹಾಗೇನಾದರು ಮದುವೆಯಾದರೆ, ಅವರ ಇಡೀ ಕುಟುಂಬ ಮತ್ತು ಸಂಬಂಧಿಕರು ಗ್ರಾಮ ದೇವತೆಯ ಕೋಪಕ್ಕೆ ತುತ್ತಾಗುತ್ತಾರೆ. ದೇವತೆಯ ಕೋಪ ತಣಿಸಲು ಇಡೀ ಕುಟುಂಬ ಮತ್ತು ಸಂಬಂಧಿಕರು ಸಮುದಾಯದಲ್ಲಿ ಅಂಗೀಕರಿಸಲ್ಪಡುವ ಶುದ್ಧೀಕರಣ ಆಚರಣೆಗೆ ಒಳಗಾಗಬೇಕಾಗುತ್ತದೆ.

ಅದರಂತೆ, ಯುವತಿಯ ಕುಟುಂಬ ಸದಸ್ಯರು ಮತ್ತು ಸಂಬಂಧಿಕರು ತಲೆ ಬೋಳಿಸಿಕೊಂಡು, ಮೇಕೆ, ಹಂದಿ ಮತ್ತು ಕೋಳಿಗಳನ್ನು ಬಲಿ ನೀಡಿ ಗ್ರಾಮಸ್ಥರಿಗೆ ಭವ್ಯ ಔತಣವನ್ನು ಏರ್ಪಡಿಸಿದ್ದಾರೆ ಎಂದು newindianexpress.com ವರದಿ ಹೇಳಿದೆ.

ಗ್ರಾಮದ ಯಾರೋ ಒಬ್ಬರು ಶುದ್ದೀಕರಣ ಆಚರಣೆಯನ್ನು ಮೊಬೈಲ್ ಫೋನ್‌ನಲ್ಲಿ ರೆಕಾರ್ಡ್ ಮಾಡಿ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ ನಂತರ ಈ ಘಟನೆ ಬೆಳಕಿಗೆ ಬಂದಿದೆ. ವಿಡಿಯೋ ತುಣುಕು ವೈರಲ್ ಆಗುತ್ತಿದ್ದಂತೆ, ಜಿಲ್ಲಾಡಳಿತವು ಘಟನೆಯ ತನಿಖೆ ನಡೆಸುವಂತೆ ಕಾಶಿಪುರದ ಬ್ಲಾಕ್ ಅಭಿವೃದ್ಧಿ ಅಧಿಕಾರಿ (ಬಿಡಿಒ) ಅವರಿಗೆ ನಿರ್ದೇಶನ ನೀಡಿದೆ.

ಬ್ಲಾಕ್ ಮಟ್ಟದ ವಿಸ್ತರಣಾ ಅಧಿಕಾರಿ ನೇತೃತ್ವದ ತಂಡವು ಈ ವಿಷಯದ ಬಗ್ಗೆ ತನಿಖೆ ನಡೆಸಲು ಬೈಗನಗುಡ ಗ್ರಾಮಕ್ಕೆ ಭೇಟಿ ನೀಡಿದೆ ಎಂದು ಬಿಡಿಒ ಬಿಜಯ್ ಸೋ ತಿಳಿಸಿದ್ದಾರೆ. ಅಧಿಕಾರಿಗಳ ತಂಡ ಶುದ್ದೀಕರಣ ನಡೆಸಿರುವ ಜನರನ್ನು ಭೇಟಿಯಾಗಿದ್ದಾರೆ. ಅವರು ಯಾವುದೇ ಬಲವಂತವಿಲ್ಲದೆ ತಮ್ಮ ಪದ್ಧತಿಯಂತೆ ಆಚರಣೆಯನ್ನು ಆಚರಿಸಿದ್ದೇವೆ ಎಂದು ವಿವರಿಸಿದ್ದಾರೆ. ಅಂತರ್ಜಾತಿ ವಿವಾಹಕ್ಕೆ ಸರ್ಕಾರದ ಸಹಾಯವನ್ನು ಪರಿಗಣಿಸಲು ಈ ವಿಷಯವನ್ನು ಉನ್ನತ ಅಧಿಕಾರಿಗಳ ಮುಂದೆ ಇಡಲಾಗಿದೆ” ಎಂದು ಅವರು ಹೇಳಿದ್ದಾರೆ.

ದೆಹಲಿ ವಿಶ್ವವಿದ್ಯಾಲಯ: ‘ಮಾತೃಭಾಷೆ’ ವಿಭಾಗದಲ್ಲಿ ‘ಉರ್ದು’ ಕೈಬಿಟ್ಟು, ‘ಮುಸ್ಲಿಂ’ ಸೇರಿಸಿದ್ದಕ್ಕೆ ತೀವ್ರ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...