Homeಮುಖಪುಟಮಹರಾಷ್ಟ್ರ: ಶಿಂಧೆ, ಅಜಿತ್‌ ಬಣದ 40 ಶಾಸಕರು ಘರ್ ವಾಪ್ಸಿ?

ಮಹರಾಷ್ಟ್ರ: ಶಿಂಧೆ, ಅಜಿತ್‌ ಬಣದ 40 ಶಾಸಕರು ಘರ್ ವಾಪ್ಸಿ?

- Advertisement -
- Advertisement -

ಮಹರಾಷ್ಟ್ರ ಸಿಎಂ ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆ ಮತ್ತು ಡಿಸಿಎಂ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿಯ 40 ಶಾಸಕರು ಘರ್ ವಾಪ್ಸಿಗೆ ಉತ್ಸುಕರಾಗಿದ್ದಾರೆ ಎಂದು ಕಾಂಗ್ರೆಸ್ ಶಾಸಕ ಮತ್ತು ಮಹಾರಾಷ್ಟ್ರ ವಿಧಾನಸಭೆಯ ವಿರೋಧ ಪಕ್ಷದ ನಾಯಕ ವಿಜಯ್ ವಾಡೆತ್ತಿವಾರ್ ಹೇಳಿದ್ದಾರೆ.

ಲೋಕಸಭೆ ಚುನಾವಣೆ ಫಲಿತಾಂಶದಿಂದ ತನ್ನ ಶಕ್ತಿಯು ಹಿಮ್ಮಡಿಯಾಗಿದೆ. ಲೋಕಸಭಾ ಚುನಾವಣಾ ಫಲಿತಾಂಶವು ರಾಜ್ಯದಲ್ಲಿ ಯಾವ ದಿಕ್ಕಿನಲ್ಲಿ ಗಾಳಿ ಬೀಸುತ್ತಿದೆ ಎನ್ನುವುದನ್ನು ತೋರಿಸಿವೆ. ಇದರ ಪರಿಣಾಮ ವಿಧಾನಸಭಾ ಚುನಾವಣೆಗಳಲ್ಲಿಯೂ ಮುಂದುವರಿಯಲಿದೆ ಎಂದು ವಾಡೆತ್ತಿವಾರ್ ಹೇಳಿದ್ದಾರೆ.

ಮುಂದಿನ ಚುನಾವಣೆಯಲ್ಲಿ ಮಹಾ ವಿಕಾಸ್ ಅಘಾಡಿ – ಕಾಂಗ್ರೆಸ್, ಶರದ್ ಪವಾರ್ ಅವರ ಎನ್‌ಸಿಪಿ ಮತ್ತು ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ ಮಹಾರಾಷ್ಟ್ರದಲ್ಲಿ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ನಮಗೆ ವಿಶ್ವಾಸವಿದೆ. ಲೋಕಸಭಾ ಚುನಾವಣೆಯ ಫಲಿತಾಂಶ ರಾಜ್ಯದ 288 ವಿಧಾನಸಭಾ ಕ್ಷೇತ್ರಗಳ ಪೈಕಿ 150ರಲ್ಲಿ ಎಂವಿಎ ಮುಂದಿದೆ ಮತ್ತು 130 ಕ್ಷೇತ್ರಗಳಲ್ಲಿ ಮಹಾಯುತಿ (ಬಿಜೆಪಿ ನೇತೃತ್ವದ ಆಡಳಿತಾರೂಢ ಮೈತ್ರಿಕೂಟ) ಮುಂದಿದೆ ಎನ್ನುವುದನ್ನು ತೋರಿಸಿದೆ ಎಂದು ವಾಡೆತ್ತಿವಾರ್ ಹೇಳಿದ್ದಾರೆ.

ಎಂವಿಎ ಅಧಿಕಾರಕ್ಕೆ ಬರಲಿದೆ ಎನ್ನುವುದನ್ನು ಶಿಂಧೆ ಶಿವಸೇನೆ ಮತ್ತು ಎನ್ಸಿಪಿ ಬಣಗಳ 40 ಶಾಸಕರು ಅರ್ಥ ಮಾಡಿಕೊಂಡಿದ್ದಾರೆ ಮತ್ತು ಇದೇ ಕಾರಣಕ್ಕೆ ಘರ್ ವಾಪ್ಸಿಗೆ ಮನವಿ ಮಾಡಿಕೊಂಡು ತಮ್ಮ ಮೂಲಪಕ್ಷಗಳ ನಾಯಕರಿಗೆ ಕರೆಗಳನ್ನು ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ.

ಶರದ್ ಪವಾರ್ ನೇತೃತ್ವದ ಎನ್‌ಸಿಪಿಯ ರಾಜ್ಯಾಧ್ಯಕ್ಷ ಜಯಂತ್ ಅವರು ಶಿಂಧೆ ಮತ್ತು ಅಜಿತ್‌ ಬಣಕ್ಕೆ ಸೇರಿದ ಕೆಲವು ಶಾಸಕರು ಪಕ್ಷಕ್ಕೆ ವಾಪಾಸ್ಸು ಬರಲು ಮನವಿಯನ್ನು ನೀಡಿರುವುದನ್ನು ದೃಢಪಡಿಸಿದ್ದಾರೆ.

ಕೇಂದ್ರೀಯ ಸಂಸ್ಥೆಗಳಿಂದ ರಕ್ಷಣೆಗಾಗಿ ನಾವು ಬಿಜೆಪಿ ಜೊತೆಗಿದ್ದೇವೆ. ಬಿಜೆಪಿ 2014 ಮತ್ತು 2019ರಲ್ಲಿ ಇದ್ದಷ್ಟು ಶಕ್ತಿಶಾಲಿಯಾಗಿಲ್ಲ. ಬಿಜೆಪಿ ಮೈತ್ರಿಕೂಟದ ಪಾಲುದಾರರು, ಮುಖ್ಯವಾಗಿ ಜೆಡಿ(ಯು) ಮತ್ತು ಟಿಡಿಪಿ ಬೇರೆ ದಾರಿ ಹಿಡಿದರೆ, ಮೋದಿ ಸರ್ಕಾರ ಪತನಗೊಳ್ಳಬಹುದು ಎಂದು ಅಜಿತ್ ಪವಾರ್ ಬಣದ ಹಿರಿಯ ನಾಯಕರೊಬ್ಬರು ಹೇಳಿದ್ದಾರೆ.

ಬಿಜೆಪಿಗೂ ನಮಗೂ ಮೂಲ ಸಂಬಂಧವಿಲ್ಲ, ನಮ್ಮದು ಕೆಲಸದ ಸಂಬಂಧ. ನಮ್ಮ ಸಿದ್ಧಾಂತಗಳು ಹೊಂದಿಕೆಯಾಗುವುದಿಲ್ಲ. ಬಿಜೆಪಿಯೊಂದಿಗೆ ಉಳಿಯುವ ಮೂಲಕ ನಾವು ನಮ್ಮ ಜಾತ್ಯತೀತ ದಲಿತ, ಬುಡಕಟ್ಟು ಮತ್ತು ಅಲ್ಪಸಂಖ್ಯಾತರ ಮತ ಬ್ಯಾಂಕನ್ನು ಕಳೆದುಕೊಂಡಿದ್ದೇವೆ. ನಾವು ಅದನ್ನು ಮರಳಿ ಪಡೆಯಲು ಬಯಸುತ್ತೇವೆ ಎಂದು ಅಜಿತ್‌ ಬಣದ ನಾಯಕರೋರ್ವರು ಹೇಳಿದ್ದಾರೆ.

ಇದನ್ನು ಓದಿ: ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ: ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಜಯನಾ ಕೊಠಾರಿ ರಾಜೀನಾಮೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....