Homeಮುಖಪುಟಸರ್ಕಾರಿ ಶಾಲೆಗಳಲ್ಲಿ ಶೇ.40 ರಷ್ಟು ಶೌಚಾಲಯಗಳು ಅಸ್ತಿತ್ವದಲ್ಲೇ ಇಲ್ಲ!

ಸರ್ಕಾರಿ ಶಾಲೆಗಳಲ್ಲಿ ಶೇ.40 ರಷ್ಟು ಶೌಚಾಲಯಗಳು ಅಸ್ತಿತ್ವದಲ್ಲೇ ಇಲ್ಲ!

ನಿರ್ಮಿಸಲಾಗಿದೆ ಎಂದು ವರದಿಯಾಗಿರುವ 200 ಶೌಚಾಲಯಗಳು ಅಸ್ಥಿತ್ವದಲ್ಲೇ ಇಲ್ಲ

- Advertisement -
- Advertisement -

ಶಿಕ್ಷಣ ಹಕ್ಕು ಯೋಜನೆಯ ದೇಶದಾದ್ಯಂತ ಸರ್ಕಾರಿ ಶಾಲೆಗಳಲ್ಲಿ ಸುಮಾರು 1.4 ಲಕ್ಷ ಶೌಚಾಲಯಗಳನ್ನು ನಿರ್ಮಿಸಲಾಗಿದೆ ಎಂದು ಸಾರ್ವಜನಿಕ ವಲಯದ ಘಟಕಗಳು ಹೇಳಿಕೊಂಡಿವೆ. ಆದರೆ ಸಮೀಕ್ಷೆಯೊಂದರ ಪ್ರಕಾರ ಶೇ.40 ರಷ್ಟು ಶೌಚಾಲಯಗಳು ಅಸ್ತಿತ್ವದಲ್ಲೇ ಇಲ್ಲ ಎನ್ನಲಾಗಿದೆ.

ಕೇಂದ್ರ ಸರ್ಕಾರದ ಈ ಯೋಜನೆಯ ಬಗ್ಗೆ ಕಂಟ್ರೋಲರ್ ಮತ್ತು ಆಡಿಟರ್ ಜನರಲ್ ಆಫ್ ಇಂಡಿಯಾ (ಸಿಎಜಿ) ಸಮೀಕ್ಷೆ ನಡೆಸಿದ್ದು, ಸುಮಾರು 1.4 ಲಕ್ಷ ಶೌಚಾಲಯಗಳ ಪೈಕಿ ಶೇ.40 ರಷ್ಟು ಶೌಚಾಲಯಗಳು ಅಸ್ತಿತ್ವದಲ್ಲೇ ಇಲ್ಲ ಅಥವಾ ನಿರ್ಮಾಣ ಕಾರ್ಯ ಅರ್ಧಕ್ಕೆ ನಿಂತಿದ್ದು ಬಳಕೆಯಾಗುತ್ತಿಲ್ಲ ಎಂಬ ಅಂಶ ಇದೀಗ ಬೆಳಕಿಗೆ ಬಂದಿದೆ.

ಸಂಸತ್ತಿನಲ್ಲಿ ಮಂಡಿಸಲಾದ ಲೆಕ್ಕ ಪರಿಶೋಧನಾ ವರದಿಯಲ್ಲಿ ಸಿಎಜಿ ಸರ್ಕಾರಿ ಶಾಲೆಗಳಲ್ಲಿನ ಶೌಚಾಲಯಗಳ ಪರಿಸ್ಥಿತಿಯನ್ನು ತೆರೆದಿಟ್ಟಿದೆ. ಈ ವರದಿಯ ಪ್ರಕಾರ ಶೇ.70 ಕ್ಕಿಂತಲೂ ಹೆಚ್ಚು ಶಾಲಾ ಶೌಚಾಲಯಗಳು ನೀರಿನ ಸೌಲಭ್ಯಗಳನ್ನು ಹೊಂದಿಲ್ಲ. ಅಲ್ಲದೆ, ಶೇ.75 ರಷ್ಟು ಶೌಚಾಲಯಗಳು ಆರೋಗ್ಯಕರವಾಗಿಲ್ಲ ಎಂದು ವರದಿ ನೀಡುವ ಮೂಲಕ ಶಾಲಾ ಮಕ್ಕಳ ಆರೋಗ್ಯ ಬಗ್ಗೆ ಗಂಭೀರ ಪ್ರಶ್ನೆ ಎತ್ತಿದೆ.

ಇದನ್ನೂ ಓದಿ: ಹೀಗೆ ಮಾಡಿದರೆ ಸರ್ಕಾರಿ ಶಾಲೆಗಳು ಉತ್ತಮವಾಗಬಹುದಲ್ಲವೇ?

2014 ರ ಸೆಪ್ಟೆಂಬರ್​ನಲ್ಲಿ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯ ಶುರು ಮಾಡಿದ ಸ್ವಚ್ ವಿದ್ಯಾಲಯ ಅಭಿಯಾನ, ಎಲ್ಲಾ ಸರ್ಕಾರಿ ಶಾಲೆಗಳಲ್ಲೂ ಬಾಲಕ ಮತ್ತು ಬಾಲಕಿಯರಿಗಾಗಿ ಪ್ರತ್ಯೇಕ ಶೌಚಾಲಯಗಳನ್ನು ನಿರ್ಮಿಸಬೇಕು ಎಂಬ ಶಿಕ್ಷಣ ಹಕ್ಕು ಕಾಯ್ದೆಯ ಆದೇಶವನ್ನು ಪೂರೈಸುವ ಗುರಿ ಹೊಂದಿತ್ತು.  ಆದರೆ ಯೋಜನೆಗೆ ಮೀಸಲಾದ ನಿಧಿಯ ಕೊರತೆ, ಕಳಪೆ ನಿರ್ವಹಣೆ ಮತ್ತು ಶೌಚಾಲಯಗಳಲ್ಲಿ ನೀರಿನ ಲಭ್ಯತೆಯು ಪ್ರಮುಖ ಸವಾಲುಗಳೆಂದು ಈ ವೇಳೆ ಗುರುತಿಸಲ್ಪಟ್ಟಿತು.

ದೇಶದಲ್ಲಿ 10.8 ಲಕ್ಷ ಸರ್ಕಾರಿ ಶಾಲೆಗಳಿವೆ. ಆದರೆ, ಈವರೆಗೆ ಒಟ್ಟಾರೆಯಾಗಿ 1.4 ಲಕ್ಷಕ್ಕೂ ಹೆಚ್ಚು ಶೌಚಾಲಯಗಳನ್ನು 53 ಸಿಪಿಎಸ್ಇಗಳು ನಿರ್ಮಿಸಿವೆ. ವಿದ್ಯುತ್, ಕಲ್ಲಿದ್ದಲು ಮತ್ತು ತೈಲ ಕಂಪನಿಗಳು ಈ ಕೆಲಸಕ್ಕೆ ಗಮನಾರ್ಹವಾದ ಕೊಡುವೆ ನೀಡಿವೆ. ಈ ನಡುವೆ ಸಿಎಜಿ ಲೆಕ್ಕಪರಿಶೋಧನೆಯು 15 ರಾಜ್ಯಗಳಲ್ಲಿ ಈ ಕಂಪನಿಗಳು ನಿರ್ಮಿಸಿದ 2,695 ಶೌಚಾಲಯಗಳ ಮಾದರಿಯ ಭೌತಿಕ ಸಮೀಕ್ಷೆಯನ್ನು ನಡೆಸಿತ್ತು.

ಇದನ್ನೂ ಓದಿ: ಅತ್ಯಾಧುನಿಕ ಸೆಂಟರ್ ಆಫ್ ಎಕ್ಸಲೆನ್ಸ್ ಶಾಲೆಗಳನ್ನುಉದ್ಘಾಟಿಸಿದ ಕೇರಳ ಸಿಎಂ ವಿಜಯನ್

ಮಾದರಿಯಾಗಿ ಆಯ್ಕೆ ಮಾಡಿಕೊಂಡಿದ್ದ 2,695 ಶೌಚಾಲಯಗಳ ಪೈಕಿ 83 ಶೌಚಾಲಯಗಳನ್ನು ಈವರೆಗೆ ನಿರ್ಮಿಸಿಯೇ ಇಲ್ಲ. PPV. 86 ಶೌಚಾಲಯಗಳು ಭಾಗಶಃ ನಿರ್ಮಾಣವಾಗಿವೆಯೇ ವಿನಃ ಪೂರ್ಣಗೊಂಡಿಲ್ಲ. 691 ಶೌಚಾಲಯಗಳಲ್ಲಿ ಸೂಕ್ತ ನೀರಿನ ವ್ಯವಸ್ಥೆಯೇ ಇಲ್ಲ. ಶೇ.72 ರಷ್ಟು ಶೌಚಾಲಯಗಳು ಸೂಕ್ತ ನೀರಿನ ಸೌಲಭ್ಯವನ್ನು ಹೊಂದಿಲ್ಲ ಎಂದು ಸಮೀಕ್ಷೆಯಿಂದ ತಿಳಿದುಬಂದಿದೆ. ಆದರೆ ಈ ಪೈಕಿ ಶೇ.55 ಶೌಚಾಲಯಗಳಲ್ಲಿ ಮಕ್ಕಳಿಗೆ ಕೈ ತೊಳೆಯುವ ಸೌಲಭ್ಯವಿಲ್ಲ. ಇನ್ನೂ ಬಾಲಕರ ಮತ್ತು ಬಾಲಕಿಯರಿಗಾಗಿ ಪ್ರತ್ಯೇಕ ಶೌಚಾಲಯಗಳನ್ನು ಒದಗಿಸುವ ಉದ್ದೇಶವು ಶೇ.27 ರಷ್ಟು ಶಾಲೆಗಳಲ್ಲಿ ಈಡೇರಿಲ್ಲ ಎಂದು ಸಿಎಜಿ ತನ್ನ ವರದಿಯಲ್ಲಿ ತಿಳಿಸಿದೆ.

ಇನ್ನೂ ಶೇ.75 ರಷ್ಟು ಶೌಚಾಲಯಗಳನ್ನು ದಿನಕ್ಕೆ ಒಮ್ಮೆಯಾದರೂ ಶುಚಿಗೊಳಿಸುವ ರೂಢಿಯನ್ನು ಅನುಸರಿಸಿಲ್ಲ. ಅನೇಕ ಶೌಚಾಲಯಗಳ ನಿರ್ಮಾಣವಾಗದ ಕಾರಣ, ನಾನಾ ಕಾರಣಗಳಿಂದಾಗಿ ಬಳಕೆಯಲ್ಲೇ ಇಲ್ಲ ಎಂದು ಆಡಿಟ್ ವರದಿ ಸಂಸತ್​ಗೆ ತಿಳಿಸಿದೆ. ಆದ್ದರಿಂದ, ಸುಮಾರು ಶೇ.40 ರಷ್ಟು ಶೌಚಾಲಯಗಳು ಅಸ್ತಿತ್ವದಲ್ಲೇ ಇಲ್ಲ ಎಂಬ ವಿಚಾರ ಬಹಿರಂಗಗೊಂಡಿದೆ.


ಇದನ್ನೂ ಓದಿ: ಕೊರೊನಾ ಕಾಲದಲ್ಲೂ ನಿಲ್ಲದ ಸುಲಿಗೆ; ಖಾಸಗಿ ಶಾಲೆಗಳಲ್ಲಿ ‘ಕೋವಿಡ್ ಫೀಸ್’ ವಸೂಲಿ ಆರಂಭ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...