Homeಮುಖಪುಟಸರ್ಕಾರಿ ಶಾಲೆಗಳಲ್ಲಿ ಶೇ.40 ರಷ್ಟು ಶೌಚಾಲಯಗಳು ಅಸ್ತಿತ್ವದಲ್ಲೇ ಇಲ್ಲ!

ಸರ್ಕಾರಿ ಶಾಲೆಗಳಲ್ಲಿ ಶೇ.40 ರಷ್ಟು ಶೌಚಾಲಯಗಳು ಅಸ್ತಿತ್ವದಲ್ಲೇ ಇಲ್ಲ!

ನಿರ್ಮಿಸಲಾಗಿದೆ ಎಂದು ವರದಿಯಾಗಿರುವ 200 ಶೌಚಾಲಯಗಳು ಅಸ್ಥಿತ್ವದಲ್ಲೇ ಇಲ್ಲ

- Advertisement -
- Advertisement -

ಶಿಕ್ಷಣ ಹಕ್ಕು ಯೋಜನೆಯ ದೇಶದಾದ್ಯಂತ ಸರ್ಕಾರಿ ಶಾಲೆಗಳಲ್ಲಿ ಸುಮಾರು 1.4 ಲಕ್ಷ ಶೌಚಾಲಯಗಳನ್ನು ನಿರ್ಮಿಸಲಾಗಿದೆ ಎಂದು ಸಾರ್ವಜನಿಕ ವಲಯದ ಘಟಕಗಳು ಹೇಳಿಕೊಂಡಿವೆ. ಆದರೆ ಸಮೀಕ್ಷೆಯೊಂದರ ಪ್ರಕಾರ ಶೇ.40 ರಷ್ಟು ಶೌಚಾಲಯಗಳು ಅಸ್ತಿತ್ವದಲ್ಲೇ ಇಲ್ಲ ಎನ್ನಲಾಗಿದೆ.

ಕೇಂದ್ರ ಸರ್ಕಾರದ ಈ ಯೋಜನೆಯ ಬಗ್ಗೆ ಕಂಟ್ರೋಲರ್ ಮತ್ತು ಆಡಿಟರ್ ಜನರಲ್ ಆಫ್ ಇಂಡಿಯಾ (ಸಿಎಜಿ) ಸಮೀಕ್ಷೆ ನಡೆಸಿದ್ದು, ಸುಮಾರು 1.4 ಲಕ್ಷ ಶೌಚಾಲಯಗಳ ಪೈಕಿ ಶೇ.40 ರಷ್ಟು ಶೌಚಾಲಯಗಳು ಅಸ್ತಿತ್ವದಲ್ಲೇ ಇಲ್ಲ ಅಥವಾ ನಿರ್ಮಾಣ ಕಾರ್ಯ ಅರ್ಧಕ್ಕೆ ನಿಂತಿದ್ದು ಬಳಕೆಯಾಗುತ್ತಿಲ್ಲ ಎಂಬ ಅಂಶ ಇದೀಗ ಬೆಳಕಿಗೆ ಬಂದಿದೆ.

ಸಂಸತ್ತಿನಲ್ಲಿ ಮಂಡಿಸಲಾದ ಲೆಕ್ಕ ಪರಿಶೋಧನಾ ವರದಿಯಲ್ಲಿ ಸಿಎಜಿ ಸರ್ಕಾರಿ ಶಾಲೆಗಳಲ್ಲಿನ ಶೌಚಾಲಯಗಳ ಪರಿಸ್ಥಿತಿಯನ್ನು ತೆರೆದಿಟ್ಟಿದೆ. ಈ ವರದಿಯ ಪ್ರಕಾರ ಶೇ.70 ಕ್ಕಿಂತಲೂ ಹೆಚ್ಚು ಶಾಲಾ ಶೌಚಾಲಯಗಳು ನೀರಿನ ಸೌಲಭ್ಯಗಳನ್ನು ಹೊಂದಿಲ್ಲ. ಅಲ್ಲದೆ, ಶೇ.75 ರಷ್ಟು ಶೌಚಾಲಯಗಳು ಆರೋಗ್ಯಕರವಾಗಿಲ್ಲ ಎಂದು ವರದಿ ನೀಡುವ ಮೂಲಕ ಶಾಲಾ ಮಕ್ಕಳ ಆರೋಗ್ಯ ಬಗ್ಗೆ ಗಂಭೀರ ಪ್ರಶ್ನೆ ಎತ್ತಿದೆ.

ಇದನ್ನೂ ಓದಿ: ಹೀಗೆ ಮಾಡಿದರೆ ಸರ್ಕಾರಿ ಶಾಲೆಗಳು ಉತ್ತಮವಾಗಬಹುದಲ್ಲವೇ?

2014 ರ ಸೆಪ್ಟೆಂಬರ್​ನಲ್ಲಿ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯ ಶುರು ಮಾಡಿದ ಸ್ವಚ್ ವಿದ್ಯಾಲಯ ಅಭಿಯಾನ, ಎಲ್ಲಾ ಸರ್ಕಾರಿ ಶಾಲೆಗಳಲ್ಲೂ ಬಾಲಕ ಮತ್ತು ಬಾಲಕಿಯರಿಗಾಗಿ ಪ್ರತ್ಯೇಕ ಶೌಚಾಲಯಗಳನ್ನು ನಿರ್ಮಿಸಬೇಕು ಎಂಬ ಶಿಕ್ಷಣ ಹಕ್ಕು ಕಾಯ್ದೆಯ ಆದೇಶವನ್ನು ಪೂರೈಸುವ ಗುರಿ ಹೊಂದಿತ್ತು.  ಆದರೆ ಯೋಜನೆಗೆ ಮೀಸಲಾದ ನಿಧಿಯ ಕೊರತೆ, ಕಳಪೆ ನಿರ್ವಹಣೆ ಮತ್ತು ಶೌಚಾಲಯಗಳಲ್ಲಿ ನೀರಿನ ಲಭ್ಯತೆಯು ಪ್ರಮುಖ ಸವಾಲುಗಳೆಂದು ಈ ವೇಳೆ ಗುರುತಿಸಲ್ಪಟ್ಟಿತು.

ದೇಶದಲ್ಲಿ 10.8 ಲಕ್ಷ ಸರ್ಕಾರಿ ಶಾಲೆಗಳಿವೆ. ಆದರೆ, ಈವರೆಗೆ ಒಟ್ಟಾರೆಯಾಗಿ 1.4 ಲಕ್ಷಕ್ಕೂ ಹೆಚ್ಚು ಶೌಚಾಲಯಗಳನ್ನು 53 ಸಿಪಿಎಸ್ಇಗಳು ನಿರ್ಮಿಸಿವೆ. ವಿದ್ಯುತ್, ಕಲ್ಲಿದ್ದಲು ಮತ್ತು ತೈಲ ಕಂಪನಿಗಳು ಈ ಕೆಲಸಕ್ಕೆ ಗಮನಾರ್ಹವಾದ ಕೊಡುವೆ ನೀಡಿವೆ. ಈ ನಡುವೆ ಸಿಎಜಿ ಲೆಕ್ಕಪರಿಶೋಧನೆಯು 15 ರಾಜ್ಯಗಳಲ್ಲಿ ಈ ಕಂಪನಿಗಳು ನಿರ್ಮಿಸಿದ 2,695 ಶೌಚಾಲಯಗಳ ಮಾದರಿಯ ಭೌತಿಕ ಸಮೀಕ್ಷೆಯನ್ನು ನಡೆಸಿತ್ತು.

ಇದನ್ನೂ ಓದಿ: ಅತ್ಯಾಧುನಿಕ ಸೆಂಟರ್ ಆಫ್ ಎಕ್ಸಲೆನ್ಸ್ ಶಾಲೆಗಳನ್ನುಉದ್ಘಾಟಿಸಿದ ಕೇರಳ ಸಿಎಂ ವಿಜಯನ್

ಮಾದರಿಯಾಗಿ ಆಯ್ಕೆ ಮಾಡಿಕೊಂಡಿದ್ದ 2,695 ಶೌಚಾಲಯಗಳ ಪೈಕಿ 83 ಶೌಚಾಲಯಗಳನ್ನು ಈವರೆಗೆ ನಿರ್ಮಿಸಿಯೇ ಇಲ್ಲ. PPV. 86 ಶೌಚಾಲಯಗಳು ಭಾಗಶಃ ನಿರ್ಮಾಣವಾಗಿವೆಯೇ ವಿನಃ ಪೂರ್ಣಗೊಂಡಿಲ್ಲ. 691 ಶೌಚಾಲಯಗಳಲ್ಲಿ ಸೂಕ್ತ ನೀರಿನ ವ್ಯವಸ್ಥೆಯೇ ಇಲ್ಲ. ಶೇ.72 ರಷ್ಟು ಶೌಚಾಲಯಗಳು ಸೂಕ್ತ ನೀರಿನ ಸೌಲಭ್ಯವನ್ನು ಹೊಂದಿಲ್ಲ ಎಂದು ಸಮೀಕ್ಷೆಯಿಂದ ತಿಳಿದುಬಂದಿದೆ. ಆದರೆ ಈ ಪೈಕಿ ಶೇ.55 ಶೌಚಾಲಯಗಳಲ್ಲಿ ಮಕ್ಕಳಿಗೆ ಕೈ ತೊಳೆಯುವ ಸೌಲಭ್ಯವಿಲ್ಲ. ಇನ್ನೂ ಬಾಲಕರ ಮತ್ತು ಬಾಲಕಿಯರಿಗಾಗಿ ಪ್ರತ್ಯೇಕ ಶೌಚಾಲಯಗಳನ್ನು ಒದಗಿಸುವ ಉದ್ದೇಶವು ಶೇ.27 ರಷ್ಟು ಶಾಲೆಗಳಲ್ಲಿ ಈಡೇರಿಲ್ಲ ಎಂದು ಸಿಎಜಿ ತನ್ನ ವರದಿಯಲ್ಲಿ ತಿಳಿಸಿದೆ.

ಇನ್ನೂ ಶೇ.75 ರಷ್ಟು ಶೌಚಾಲಯಗಳನ್ನು ದಿನಕ್ಕೆ ಒಮ್ಮೆಯಾದರೂ ಶುಚಿಗೊಳಿಸುವ ರೂಢಿಯನ್ನು ಅನುಸರಿಸಿಲ್ಲ. ಅನೇಕ ಶೌಚಾಲಯಗಳ ನಿರ್ಮಾಣವಾಗದ ಕಾರಣ, ನಾನಾ ಕಾರಣಗಳಿಂದಾಗಿ ಬಳಕೆಯಲ್ಲೇ ಇಲ್ಲ ಎಂದು ಆಡಿಟ್ ವರದಿ ಸಂಸತ್​ಗೆ ತಿಳಿಸಿದೆ. ಆದ್ದರಿಂದ, ಸುಮಾರು ಶೇ.40 ರಷ್ಟು ಶೌಚಾಲಯಗಳು ಅಸ್ತಿತ್ವದಲ್ಲೇ ಇಲ್ಲ ಎಂಬ ವಿಚಾರ ಬಹಿರಂಗಗೊಂಡಿದೆ.


ಇದನ್ನೂ ಓದಿ: ಕೊರೊನಾ ಕಾಲದಲ್ಲೂ ನಿಲ್ಲದ ಸುಲಿಗೆ; ಖಾಸಗಿ ಶಾಲೆಗಳಲ್ಲಿ ‘ಕೋವಿಡ್ ಫೀಸ್’ ವಸೂಲಿ ಆರಂಭ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...