Homeಮುಖಪುಟಸರ್ಕಾರಿ ಶಾಲೆಗಳಲ್ಲಿ ಶೇ.40 ರಷ್ಟು ಶೌಚಾಲಯಗಳು ಅಸ್ತಿತ್ವದಲ್ಲೇ ಇಲ್ಲ!

ಸರ್ಕಾರಿ ಶಾಲೆಗಳಲ್ಲಿ ಶೇ.40 ರಷ್ಟು ಶೌಚಾಲಯಗಳು ಅಸ್ತಿತ್ವದಲ್ಲೇ ಇಲ್ಲ!

ನಿರ್ಮಿಸಲಾಗಿದೆ ಎಂದು ವರದಿಯಾಗಿರುವ 200 ಶೌಚಾಲಯಗಳು ಅಸ್ಥಿತ್ವದಲ್ಲೇ ಇಲ್ಲ

- Advertisement -
- Advertisement -

ಶಿಕ್ಷಣ ಹಕ್ಕು ಯೋಜನೆಯ ದೇಶದಾದ್ಯಂತ ಸರ್ಕಾರಿ ಶಾಲೆಗಳಲ್ಲಿ ಸುಮಾರು 1.4 ಲಕ್ಷ ಶೌಚಾಲಯಗಳನ್ನು ನಿರ್ಮಿಸಲಾಗಿದೆ ಎಂದು ಸಾರ್ವಜನಿಕ ವಲಯದ ಘಟಕಗಳು ಹೇಳಿಕೊಂಡಿವೆ. ಆದರೆ ಸಮೀಕ್ಷೆಯೊಂದರ ಪ್ರಕಾರ ಶೇ.40 ರಷ್ಟು ಶೌಚಾಲಯಗಳು ಅಸ್ತಿತ್ವದಲ್ಲೇ ಇಲ್ಲ ಎನ್ನಲಾಗಿದೆ.

ಕೇಂದ್ರ ಸರ್ಕಾರದ ಈ ಯೋಜನೆಯ ಬಗ್ಗೆ ಕಂಟ್ರೋಲರ್ ಮತ್ತು ಆಡಿಟರ್ ಜನರಲ್ ಆಫ್ ಇಂಡಿಯಾ (ಸಿಎಜಿ) ಸಮೀಕ್ಷೆ ನಡೆಸಿದ್ದು, ಸುಮಾರು 1.4 ಲಕ್ಷ ಶೌಚಾಲಯಗಳ ಪೈಕಿ ಶೇ.40 ರಷ್ಟು ಶೌಚಾಲಯಗಳು ಅಸ್ತಿತ್ವದಲ್ಲೇ ಇಲ್ಲ ಅಥವಾ ನಿರ್ಮಾಣ ಕಾರ್ಯ ಅರ್ಧಕ್ಕೆ ನಿಂತಿದ್ದು ಬಳಕೆಯಾಗುತ್ತಿಲ್ಲ ಎಂಬ ಅಂಶ ಇದೀಗ ಬೆಳಕಿಗೆ ಬಂದಿದೆ.

ಸಂಸತ್ತಿನಲ್ಲಿ ಮಂಡಿಸಲಾದ ಲೆಕ್ಕ ಪರಿಶೋಧನಾ ವರದಿಯಲ್ಲಿ ಸಿಎಜಿ ಸರ್ಕಾರಿ ಶಾಲೆಗಳಲ್ಲಿನ ಶೌಚಾಲಯಗಳ ಪರಿಸ್ಥಿತಿಯನ್ನು ತೆರೆದಿಟ್ಟಿದೆ. ಈ ವರದಿಯ ಪ್ರಕಾರ ಶೇ.70 ಕ್ಕಿಂತಲೂ ಹೆಚ್ಚು ಶಾಲಾ ಶೌಚಾಲಯಗಳು ನೀರಿನ ಸೌಲಭ್ಯಗಳನ್ನು ಹೊಂದಿಲ್ಲ. ಅಲ್ಲದೆ, ಶೇ.75 ರಷ್ಟು ಶೌಚಾಲಯಗಳು ಆರೋಗ್ಯಕರವಾಗಿಲ್ಲ ಎಂದು ವರದಿ ನೀಡುವ ಮೂಲಕ ಶಾಲಾ ಮಕ್ಕಳ ಆರೋಗ್ಯ ಬಗ್ಗೆ ಗಂಭೀರ ಪ್ರಶ್ನೆ ಎತ್ತಿದೆ.

ಇದನ್ನೂ ಓದಿ: ಹೀಗೆ ಮಾಡಿದರೆ ಸರ್ಕಾರಿ ಶಾಲೆಗಳು ಉತ್ತಮವಾಗಬಹುದಲ್ಲವೇ?

2014 ರ ಸೆಪ್ಟೆಂಬರ್​ನಲ್ಲಿ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯ ಶುರು ಮಾಡಿದ ಸ್ವಚ್ ವಿದ್ಯಾಲಯ ಅಭಿಯಾನ, ಎಲ್ಲಾ ಸರ್ಕಾರಿ ಶಾಲೆಗಳಲ್ಲೂ ಬಾಲಕ ಮತ್ತು ಬಾಲಕಿಯರಿಗಾಗಿ ಪ್ರತ್ಯೇಕ ಶೌಚಾಲಯಗಳನ್ನು ನಿರ್ಮಿಸಬೇಕು ಎಂಬ ಶಿಕ್ಷಣ ಹಕ್ಕು ಕಾಯ್ದೆಯ ಆದೇಶವನ್ನು ಪೂರೈಸುವ ಗುರಿ ಹೊಂದಿತ್ತು.  ಆದರೆ ಯೋಜನೆಗೆ ಮೀಸಲಾದ ನಿಧಿಯ ಕೊರತೆ, ಕಳಪೆ ನಿರ್ವಹಣೆ ಮತ್ತು ಶೌಚಾಲಯಗಳಲ್ಲಿ ನೀರಿನ ಲಭ್ಯತೆಯು ಪ್ರಮುಖ ಸವಾಲುಗಳೆಂದು ಈ ವೇಳೆ ಗುರುತಿಸಲ್ಪಟ್ಟಿತು.

ದೇಶದಲ್ಲಿ 10.8 ಲಕ್ಷ ಸರ್ಕಾರಿ ಶಾಲೆಗಳಿವೆ. ಆದರೆ, ಈವರೆಗೆ ಒಟ್ಟಾರೆಯಾಗಿ 1.4 ಲಕ್ಷಕ್ಕೂ ಹೆಚ್ಚು ಶೌಚಾಲಯಗಳನ್ನು 53 ಸಿಪಿಎಸ್ಇಗಳು ನಿರ್ಮಿಸಿವೆ. ವಿದ್ಯುತ್, ಕಲ್ಲಿದ್ದಲು ಮತ್ತು ತೈಲ ಕಂಪನಿಗಳು ಈ ಕೆಲಸಕ್ಕೆ ಗಮನಾರ್ಹವಾದ ಕೊಡುವೆ ನೀಡಿವೆ. ಈ ನಡುವೆ ಸಿಎಜಿ ಲೆಕ್ಕಪರಿಶೋಧನೆಯು 15 ರಾಜ್ಯಗಳಲ್ಲಿ ಈ ಕಂಪನಿಗಳು ನಿರ್ಮಿಸಿದ 2,695 ಶೌಚಾಲಯಗಳ ಮಾದರಿಯ ಭೌತಿಕ ಸಮೀಕ್ಷೆಯನ್ನು ನಡೆಸಿತ್ತು.

ಇದನ್ನೂ ಓದಿ: ಅತ್ಯಾಧುನಿಕ ಸೆಂಟರ್ ಆಫ್ ಎಕ್ಸಲೆನ್ಸ್ ಶಾಲೆಗಳನ್ನುಉದ್ಘಾಟಿಸಿದ ಕೇರಳ ಸಿಎಂ ವಿಜಯನ್

ಮಾದರಿಯಾಗಿ ಆಯ್ಕೆ ಮಾಡಿಕೊಂಡಿದ್ದ 2,695 ಶೌಚಾಲಯಗಳ ಪೈಕಿ 83 ಶೌಚಾಲಯಗಳನ್ನು ಈವರೆಗೆ ನಿರ್ಮಿಸಿಯೇ ಇಲ್ಲ. PPV. 86 ಶೌಚಾಲಯಗಳು ಭಾಗಶಃ ನಿರ್ಮಾಣವಾಗಿವೆಯೇ ವಿನಃ ಪೂರ್ಣಗೊಂಡಿಲ್ಲ. 691 ಶೌಚಾಲಯಗಳಲ್ಲಿ ಸೂಕ್ತ ನೀರಿನ ವ್ಯವಸ್ಥೆಯೇ ಇಲ್ಲ. ಶೇ.72 ರಷ್ಟು ಶೌಚಾಲಯಗಳು ಸೂಕ್ತ ನೀರಿನ ಸೌಲಭ್ಯವನ್ನು ಹೊಂದಿಲ್ಲ ಎಂದು ಸಮೀಕ್ಷೆಯಿಂದ ತಿಳಿದುಬಂದಿದೆ. ಆದರೆ ಈ ಪೈಕಿ ಶೇ.55 ಶೌಚಾಲಯಗಳಲ್ಲಿ ಮಕ್ಕಳಿಗೆ ಕೈ ತೊಳೆಯುವ ಸೌಲಭ್ಯವಿಲ್ಲ. ಇನ್ನೂ ಬಾಲಕರ ಮತ್ತು ಬಾಲಕಿಯರಿಗಾಗಿ ಪ್ರತ್ಯೇಕ ಶೌಚಾಲಯಗಳನ್ನು ಒದಗಿಸುವ ಉದ್ದೇಶವು ಶೇ.27 ರಷ್ಟು ಶಾಲೆಗಳಲ್ಲಿ ಈಡೇರಿಲ್ಲ ಎಂದು ಸಿಎಜಿ ತನ್ನ ವರದಿಯಲ್ಲಿ ತಿಳಿಸಿದೆ.

ಇನ್ನೂ ಶೇ.75 ರಷ್ಟು ಶೌಚಾಲಯಗಳನ್ನು ದಿನಕ್ಕೆ ಒಮ್ಮೆಯಾದರೂ ಶುಚಿಗೊಳಿಸುವ ರೂಢಿಯನ್ನು ಅನುಸರಿಸಿಲ್ಲ. ಅನೇಕ ಶೌಚಾಲಯಗಳ ನಿರ್ಮಾಣವಾಗದ ಕಾರಣ, ನಾನಾ ಕಾರಣಗಳಿಂದಾಗಿ ಬಳಕೆಯಲ್ಲೇ ಇಲ್ಲ ಎಂದು ಆಡಿಟ್ ವರದಿ ಸಂಸತ್​ಗೆ ತಿಳಿಸಿದೆ. ಆದ್ದರಿಂದ, ಸುಮಾರು ಶೇ.40 ರಷ್ಟು ಶೌಚಾಲಯಗಳು ಅಸ್ತಿತ್ವದಲ್ಲೇ ಇಲ್ಲ ಎಂಬ ವಿಚಾರ ಬಹಿರಂಗಗೊಂಡಿದೆ.


ಇದನ್ನೂ ಓದಿ: ಕೊರೊನಾ ಕಾಲದಲ್ಲೂ ನಿಲ್ಲದ ಸುಲಿಗೆ; ಖಾಸಗಿ ಶಾಲೆಗಳಲ್ಲಿ ‘ಕೋವಿಡ್ ಫೀಸ್’ ವಸೂಲಿ ಆರಂಭ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...