Homeಮುಖಪುಟಸರ್ಕಾರಿ ಶಾಲೆಗಳಲ್ಲಿ ಶೇ.40 ರಷ್ಟು ಶೌಚಾಲಯಗಳು ಅಸ್ತಿತ್ವದಲ್ಲೇ ಇಲ್ಲ!

ಸರ್ಕಾರಿ ಶಾಲೆಗಳಲ್ಲಿ ಶೇ.40 ರಷ್ಟು ಶೌಚಾಲಯಗಳು ಅಸ್ತಿತ್ವದಲ್ಲೇ ಇಲ್ಲ!

ನಿರ್ಮಿಸಲಾಗಿದೆ ಎಂದು ವರದಿಯಾಗಿರುವ 200 ಶೌಚಾಲಯಗಳು ಅಸ್ಥಿತ್ವದಲ್ಲೇ ಇಲ್ಲ

- Advertisement -
- Advertisement -

ಶಿಕ್ಷಣ ಹಕ್ಕು ಯೋಜನೆಯ ದೇಶದಾದ್ಯಂತ ಸರ್ಕಾರಿ ಶಾಲೆಗಳಲ್ಲಿ ಸುಮಾರು 1.4 ಲಕ್ಷ ಶೌಚಾಲಯಗಳನ್ನು ನಿರ್ಮಿಸಲಾಗಿದೆ ಎಂದು ಸಾರ್ವಜನಿಕ ವಲಯದ ಘಟಕಗಳು ಹೇಳಿಕೊಂಡಿವೆ. ಆದರೆ ಸಮೀಕ್ಷೆಯೊಂದರ ಪ್ರಕಾರ ಶೇ.40 ರಷ್ಟು ಶೌಚಾಲಯಗಳು ಅಸ್ತಿತ್ವದಲ್ಲೇ ಇಲ್ಲ ಎನ್ನಲಾಗಿದೆ.

ಕೇಂದ್ರ ಸರ್ಕಾರದ ಈ ಯೋಜನೆಯ ಬಗ್ಗೆ ಕಂಟ್ರೋಲರ್ ಮತ್ತು ಆಡಿಟರ್ ಜನರಲ್ ಆಫ್ ಇಂಡಿಯಾ (ಸಿಎಜಿ) ಸಮೀಕ್ಷೆ ನಡೆಸಿದ್ದು, ಸುಮಾರು 1.4 ಲಕ್ಷ ಶೌಚಾಲಯಗಳ ಪೈಕಿ ಶೇ.40 ರಷ್ಟು ಶೌಚಾಲಯಗಳು ಅಸ್ತಿತ್ವದಲ್ಲೇ ಇಲ್ಲ ಅಥವಾ ನಿರ್ಮಾಣ ಕಾರ್ಯ ಅರ್ಧಕ್ಕೆ ನಿಂತಿದ್ದು ಬಳಕೆಯಾಗುತ್ತಿಲ್ಲ ಎಂಬ ಅಂಶ ಇದೀಗ ಬೆಳಕಿಗೆ ಬಂದಿದೆ.

ಸಂಸತ್ತಿನಲ್ಲಿ ಮಂಡಿಸಲಾದ ಲೆಕ್ಕ ಪರಿಶೋಧನಾ ವರದಿಯಲ್ಲಿ ಸಿಎಜಿ ಸರ್ಕಾರಿ ಶಾಲೆಗಳಲ್ಲಿನ ಶೌಚಾಲಯಗಳ ಪರಿಸ್ಥಿತಿಯನ್ನು ತೆರೆದಿಟ್ಟಿದೆ. ಈ ವರದಿಯ ಪ್ರಕಾರ ಶೇ.70 ಕ್ಕಿಂತಲೂ ಹೆಚ್ಚು ಶಾಲಾ ಶೌಚಾಲಯಗಳು ನೀರಿನ ಸೌಲಭ್ಯಗಳನ್ನು ಹೊಂದಿಲ್ಲ. ಅಲ್ಲದೆ, ಶೇ.75 ರಷ್ಟು ಶೌಚಾಲಯಗಳು ಆರೋಗ್ಯಕರವಾಗಿಲ್ಲ ಎಂದು ವರದಿ ನೀಡುವ ಮೂಲಕ ಶಾಲಾ ಮಕ್ಕಳ ಆರೋಗ್ಯ ಬಗ್ಗೆ ಗಂಭೀರ ಪ್ರಶ್ನೆ ಎತ್ತಿದೆ.

ಇದನ್ನೂ ಓದಿ: ಹೀಗೆ ಮಾಡಿದರೆ ಸರ್ಕಾರಿ ಶಾಲೆಗಳು ಉತ್ತಮವಾಗಬಹುದಲ್ಲವೇ?

2014 ರ ಸೆಪ್ಟೆಂಬರ್​ನಲ್ಲಿ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯ ಶುರು ಮಾಡಿದ ಸ್ವಚ್ ವಿದ್ಯಾಲಯ ಅಭಿಯಾನ, ಎಲ್ಲಾ ಸರ್ಕಾರಿ ಶಾಲೆಗಳಲ್ಲೂ ಬಾಲಕ ಮತ್ತು ಬಾಲಕಿಯರಿಗಾಗಿ ಪ್ರತ್ಯೇಕ ಶೌಚಾಲಯಗಳನ್ನು ನಿರ್ಮಿಸಬೇಕು ಎಂಬ ಶಿಕ್ಷಣ ಹಕ್ಕು ಕಾಯ್ದೆಯ ಆದೇಶವನ್ನು ಪೂರೈಸುವ ಗುರಿ ಹೊಂದಿತ್ತು.  ಆದರೆ ಯೋಜನೆಗೆ ಮೀಸಲಾದ ನಿಧಿಯ ಕೊರತೆ, ಕಳಪೆ ನಿರ್ವಹಣೆ ಮತ್ತು ಶೌಚಾಲಯಗಳಲ್ಲಿ ನೀರಿನ ಲಭ್ಯತೆಯು ಪ್ರಮುಖ ಸವಾಲುಗಳೆಂದು ಈ ವೇಳೆ ಗುರುತಿಸಲ್ಪಟ್ಟಿತು.

ದೇಶದಲ್ಲಿ 10.8 ಲಕ್ಷ ಸರ್ಕಾರಿ ಶಾಲೆಗಳಿವೆ. ಆದರೆ, ಈವರೆಗೆ ಒಟ್ಟಾರೆಯಾಗಿ 1.4 ಲಕ್ಷಕ್ಕೂ ಹೆಚ್ಚು ಶೌಚಾಲಯಗಳನ್ನು 53 ಸಿಪಿಎಸ್ಇಗಳು ನಿರ್ಮಿಸಿವೆ. ವಿದ್ಯುತ್, ಕಲ್ಲಿದ್ದಲು ಮತ್ತು ತೈಲ ಕಂಪನಿಗಳು ಈ ಕೆಲಸಕ್ಕೆ ಗಮನಾರ್ಹವಾದ ಕೊಡುವೆ ನೀಡಿವೆ. ಈ ನಡುವೆ ಸಿಎಜಿ ಲೆಕ್ಕಪರಿಶೋಧನೆಯು 15 ರಾಜ್ಯಗಳಲ್ಲಿ ಈ ಕಂಪನಿಗಳು ನಿರ್ಮಿಸಿದ 2,695 ಶೌಚಾಲಯಗಳ ಮಾದರಿಯ ಭೌತಿಕ ಸಮೀಕ್ಷೆಯನ್ನು ನಡೆಸಿತ್ತು.

ಇದನ್ನೂ ಓದಿ: ಅತ್ಯಾಧುನಿಕ ಸೆಂಟರ್ ಆಫ್ ಎಕ್ಸಲೆನ್ಸ್ ಶಾಲೆಗಳನ್ನುಉದ್ಘಾಟಿಸಿದ ಕೇರಳ ಸಿಎಂ ವಿಜಯನ್

ಮಾದರಿಯಾಗಿ ಆಯ್ಕೆ ಮಾಡಿಕೊಂಡಿದ್ದ 2,695 ಶೌಚಾಲಯಗಳ ಪೈಕಿ 83 ಶೌಚಾಲಯಗಳನ್ನು ಈವರೆಗೆ ನಿರ್ಮಿಸಿಯೇ ಇಲ್ಲ. PPV. 86 ಶೌಚಾಲಯಗಳು ಭಾಗಶಃ ನಿರ್ಮಾಣವಾಗಿವೆಯೇ ವಿನಃ ಪೂರ್ಣಗೊಂಡಿಲ್ಲ. 691 ಶೌಚಾಲಯಗಳಲ್ಲಿ ಸೂಕ್ತ ನೀರಿನ ವ್ಯವಸ್ಥೆಯೇ ಇಲ್ಲ. ಶೇ.72 ರಷ್ಟು ಶೌಚಾಲಯಗಳು ಸೂಕ್ತ ನೀರಿನ ಸೌಲಭ್ಯವನ್ನು ಹೊಂದಿಲ್ಲ ಎಂದು ಸಮೀಕ್ಷೆಯಿಂದ ತಿಳಿದುಬಂದಿದೆ. ಆದರೆ ಈ ಪೈಕಿ ಶೇ.55 ಶೌಚಾಲಯಗಳಲ್ಲಿ ಮಕ್ಕಳಿಗೆ ಕೈ ತೊಳೆಯುವ ಸೌಲಭ್ಯವಿಲ್ಲ. ಇನ್ನೂ ಬಾಲಕರ ಮತ್ತು ಬಾಲಕಿಯರಿಗಾಗಿ ಪ್ರತ್ಯೇಕ ಶೌಚಾಲಯಗಳನ್ನು ಒದಗಿಸುವ ಉದ್ದೇಶವು ಶೇ.27 ರಷ್ಟು ಶಾಲೆಗಳಲ್ಲಿ ಈಡೇರಿಲ್ಲ ಎಂದು ಸಿಎಜಿ ತನ್ನ ವರದಿಯಲ್ಲಿ ತಿಳಿಸಿದೆ.

ಇನ್ನೂ ಶೇ.75 ರಷ್ಟು ಶೌಚಾಲಯಗಳನ್ನು ದಿನಕ್ಕೆ ಒಮ್ಮೆಯಾದರೂ ಶುಚಿಗೊಳಿಸುವ ರೂಢಿಯನ್ನು ಅನುಸರಿಸಿಲ್ಲ. ಅನೇಕ ಶೌಚಾಲಯಗಳ ನಿರ್ಮಾಣವಾಗದ ಕಾರಣ, ನಾನಾ ಕಾರಣಗಳಿಂದಾಗಿ ಬಳಕೆಯಲ್ಲೇ ಇಲ್ಲ ಎಂದು ಆಡಿಟ್ ವರದಿ ಸಂಸತ್​ಗೆ ತಿಳಿಸಿದೆ. ಆದ್ದರಿಂದ, ಸುಮಾರು ಶೇ.40 ರಷ್ಟು ಶೌಚಾಲಯಗಳು ಅಸ್ತಿತ್ವದಲ್ಲೇ ಇಲ್ಲ ಎಂಬ ವಿಚಾರ ಬಹಿರಂಗಗೊಂಡಿದೆ.


ಇದನ್ನೂ ಓದಿ: ಕೊರೊನಾ ಕಾಲದಲ್ಲೂ ನಿಲ್ಲದ ಸುಲಿಗೆ; ಖಾಸಗಿ ಶಾಲೆಗಳಲ್ಲಿ ‘ಕೋವಿಡ್ ಫೀಸ್’ ವಸೂಲಿ ಆರಂಭ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...