Homeಮುಖಪುಟಸರ್ಕಾರಿ ಶಾಲೆಗಳಲ್ಲಿ ಶೇ.40 ರಷ್ಟು ಶೌಚಾಲಯಗಳು ಅಸ್ತಿತ್ವದಲ್ಲೇ ಇಲ್ಲ!

ಸರ್ಕಾರಿ ಶಾಲೆಗಳಲ್ಲಿ ಶೇ.40 ರಷ್ಟು ಶೌಚಾಲಯಗಳು ಅಸ್ತಿತ್ವದಲ್ಲೇ ಇಲ್ಲ!

ನಿರ್ಮಿಸಲಾಗಿದೆ ಎಂದು ವರದಿಯಾಗಿರುವ 200 ಶೌಚಾಲಯಗಳು ಅಸ್ಥಿತ್ವದಲ್ಲೇ ಇಲ್ಲ

- Advertisement -
- Advertisement -

ಶಿಕ್ಷಣ ಹಕ್ಕು ಯೋಜನೆಯ ದೇಶದಾದ್ಯಂತ ಸರ್ಕಾರಿ ಶಾಲೆಗಳಲ್ಲಿ ಸುಮಾರು 1.4 ಲಕ್ಷ ಶೌಚಾಲಯಗಳನ್ನು ನಿರ್ಮಿಸಲಾಗಿದೆ ಎಂದು ಸಾರ್ವಜನಿಕ ವಲಯದ ಘಟಕಗಳು ಹೇಳಿಕೊಂಡಿವೆ. ಆದರೆ ಸಮೀಕ್ಷೆಯೊಂದರ ಪ್ರಕಾರ ಶೇ.40 ರಷ್ಟು ಶೌಚಾಲಯಗಳು ಅಸ್ತಿತ್ವದಲ್ಲೇ ಇಲ್ಲ ಎನ್ನಲಾಗಿದೆ.

ಕೇಂದ್ರ ಸರ್ಕಾರದ ಈ ಯೋಜನೆಯ ಬಗ್ಗೆ ಕಂಟ್ರೋಲರ್ ಮತ್ತು ಆಡಿಟರ್ ಜನರಲ್ ಆಫ್ ಇಂಡಿಯಾ (ಸಿಎಜಿ) ಸಮೀಕ್ಷೆ ನಡೆಸಿದ್ದು, ಸುಮಾರು 1.4 ಲಕ್ಷ ಶೌಚಾಲಯಗಳ ಪೈಕಿ ಶೇ.40 ರಷ್ಟು ಶೌಚಾಲಯಗಳು ಅಸ್ತಿತ್ವದಲ್ಲೇ ಇಲ್ಲ ಅಥವಾ ನಿರ್ಮಾಣ ಕಾರ್ಯ ಅರ್ಧಕ್ಕೆ ನಿಂತಿದ್ದು ಬಳಕೆಯಾಗುತ್ತಿಲ್ಲ ಎಂಬ ಅಂಶ ಇದೀಗ ಬೆಳಕಿಗೆ ಬಂದಿದೆ.

ಸಂಸತ್ತಿನಲ್ಲಿ ಮಂಡಿಸಲಾದ ಲೆಕ್ಕ ಪರಿಶೋಧನಾ ವರದಿಯಲ್ಲಿ ಸಿಎಜಿ ಸರ್ಕಾರಿ ಶಾಲೆಗಳಲ್ಲಿನ ಶೌಚಾಲಯಗಳ ಪರಿಸ್ಥಿತಿಯನ್ನು ತೆರೆದಿಟ್ಟಿದೆ. ಈ ವರದಿಯ ಪ್ರಕಾರ ಶೇ.70 ಕ್ಕಿಂತಲೂ ಹೆಚ್ಚು ಶಾಲಾ ಶೌಚಾಲಯಗಳು ನೀರಿನ ಸೌಲಭ್ಯಗಳನ್ನು ಹೊಂದಿಲ್ಲ. ಅಲ್ಲದೆ, ಶೇ.75 ರಷ್ಟು ಶೌಚಾಲಯಗಳು ಆರೋಗ್ಯಕರವಾಗಿಲ್ಲ ಎಂದು ವರದಿ ನೀಡುವ ಮೂಲಕ ಶಾಲಾ ಮಕ್ಕಳ ಆರೋಗ್ಯ ಬಗ್ಗೆ ಗಂಭೀರ ಪ್ರಶ್ನೆ ಎತ್ತಿದೆ.

ಇದನ್ನೂ ಓದಿ: ಹೀಗೆ ಮಾಡಿದರೆ ಸರ್ಕಾರಿ ಶಾಲೆಗಳು ಉತ್ತಮವಾಗಬಹುದಲ್ಲವೇ?

2014 ರ ಸೆಪ್ಟೆಂಬರ್​ನಲ್ಲಿ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯ ಶುರು ಮಾಡಿದ ಸ್ವಚ್ ವಿದ್ಯಾಲಯ ಅಭಿಯಾನ, ಎಲ್ಲಾ ಸರ್ಕಾರಿ ಶಾಲೆಗಳಲ್ಲೂ ಬಾಲಕ ಮತ್ತು ಬಾಲಕಿಯರಿಗಾಗಿ ಪ್ರತ್ಯೇಕ ಶೌಚಾಲಯಗಳನ್ನು ನಿರ್ಮಿಸಬೇಕು ಎಂಬ ಶಿಕ್ಷಣ ಹಕ್ಕು ಕಾಯ್ದೆಯ ಆದೇಶವನ್ನು ಪೂರೈಸುವ ಗುರಿ ಹೊಂದಿತ್ತು.  ಆದರೆ ಯೋಜನೆಗೆ ಮೀಸಲಾದ ನಿಧಿಯ ಕೊರತೆ, ಕಳಪೆ ನಿರ್ವಹಣೆ ಮತ್ತು ಶೌಚಾಲಯಗಳಲ್ಲಿ ನೀರಿನ ಲಭ್ಯತೆಯು ಪ್ರಮುಖ ಸವಾಲುಗಳೆಂದು ಈ ವೇಳೆ ಗುರುತಿಸಲ್ಪಟ್ಟಿತು.

ದೇಶದಲ್ಲಿ 10.8 ಲಕ್ಷ ಸರ್ಕಾರಿ ಶಾಲೆಗಳಿವೆ. ಆದರೆ, ಈವರೆಗೆ ಒಟ್ಟಾರೆಯಾಗಿ 1.4 ಲಕ್ಷಕ್ಕೂ ಹೆಚ್ಚು ಶೌಚಾಲಯಗಳನ್ನು 53 ಸಿಪಿಎಸ್ಇಗಳು ನಿರ್ಮಿಸಿವೆ. ವಿದ್ಯುತ್, ಕಲ್ಲಿದ್ದಲು ಮತ್ತು ತೈಲ ಕಂಪನಿಗಳು ಈ ಕೆಲಸಕ್ಕೆ ಗಮನಾರ್ಹವಾದ ಕೊಡುವೆ ನೀಡಿವೆ. ಈ ನಡುವೆ ಸಿಎಜಿ ಲೆಕ್ಕಪರಿಶೋಧನೆಯು 15 ರಾಜ್ಯಗಳಲ್ಲಿ ಈ ಕಂಪನಿಗಳು ನಿರ್ಮಿಸಿದ 2,695 ಶೌಚಾಲಯಗಳ ಮಾದರಿಯ ಭೌತಿಕ ಸಮೀಕ್ಷೆಯನ್ನು ನಡೆಸಿತ್ತು.

ಇದನ್ನೂ ಓದಿ: ಅತ್ಯಾಧುನಿಕ ಸೆಂಟರ್ ಆಫ್ ಎಕ್ಸಲೆನ್ಸ್ ಶಾಲೆಗಳನ್ನುಉದ್ಘಾಟಿಸಿದ ಕೇರಳ ಸಿಎಂ ವಿಜಯನ್

ಮಾದರಿಯಾಗಿ ಆಯ್ಕೆ ಮಾಡಿಕೊಂಡಿದ್ದ 2,695 ಶೌಚಾಲಯಗಳ ಪೈಕಿ 83 ಶೌಚಾಲಯಗಳನ್ನು ಈವರೆಗೆ ನಿರ್ಮಿಸಿಯೇ ಇಲ್ಲ. PPV. 86 ಶೌಚಾಲಯಗಳು ಭಾಗಶಃ ನಿರ್ಮಾಣವಾಗಿವೆಯೇ ವಿನಃ ಪೂರ್ಣಗೊಂಡಿಲ್ಲ. 691 ಶೌಚಾಲಯಗಳಲ್ಲಿ ಸೂಕ್ತ ನೀರಿನ ವ್ಯವಸ್ಥೆಯೇ ಇಲ್ಲ. ಶೇ.72 ರಷ್ಟು ಶೌಚಾಲಯಗಳು ಸೂಕ್ತ ನೀರಿನ ಸೌಲಭ್ಯವನ್ನು ಹೊಂದಿಲ್ಲ ಎಂದು ಸಮೀಕ್ಷೆಯಿಂದ ತಿಳಿದುಬಂದಿದೆ. ಆದರೆ ಈ ಪೈಕಿ ಶೇ.55 ಶೌಚಾಲಯಗಳಲ್ಲಿ ಮಕ್ಕಳಿಗೆ ಕೈ ತೊಳೆಯುವ ಸೌಲಭ್ಯವಿಲ್ಲ. ಇನ್ನೂ ಬಾಲಕರ ಮತ್ತು ಬಾಲಕಿಯರಿಗಾಗಿ ಪ್ರತ್ಯೇಕ ಶೌಚಾಲಯಗಳನ್ನು ಒದಗಿಸುವ ಉದ್ದೇಶವು ಶೇ.27 ರಷ್ಟು ಶಾಲೆಗಳಲ್ಲಿ ಈಡೇರಿಲ್ಲ ಎಂದು ಸಿಎಜಿ ತನ್ನ ವರದಿಯಲ್ಲಿ ತಿಳಿಸಿದೆ.

ಇನ್ನೂ ಶೇ.75 ರಷ್ಟು ಶೌಚಾಲಯಗಳನ್ನು ದಿನಕ್ಕೆ ಒಮ್ಮೆಯಾದರೂ ಶುಚಿಗೊಳಿಸುವ ರೂಢಿಯನ್ನು ಅನುಸರಿಸಿಲ್ಲ. ಅನೇಕ ಶೌಚಾಲಯಗಳ ನಿರ್ಮಾಣವಾಗದ ಕಾರಣ, ನಾನಾ ಕಾರಣಗಳಿಂದಾಗಿ ಬಳಕೆಯಲ್ಲೇ ಇಲ್ಲ ಎಂದು ಆಡಿಟ್ ವರದಿ ಸಂಸತ್​ಗೆ ತಿಳಿಸಿದೆ. ಆದ್ದರಿಂದ, ಸುಮಾರು ಶೇ.40 ರಷ್ಟು ಶೌಚಾಲಯಗಳು ಅಸ್ತಿತ್ವದಲ್ಲೇ ಇಲ್ಲ ಎಂಬ ವಿಚಾರ ಬಹಿರಂಗಗೊಂಡಿದೆ.


ಇದನ್ನೂ ಓದಿ: ಕೊರೊನಾ ಕಾಲದಲ್ಲೂ ನಿಲ್ಲದ ಸುಲಿಗೆ; ಖಾಸಗಿ ಶಾಲೆಗಳಲ್ಲಿ ‘ಕೋವಿಡ್ ಫೀಸ್’ ವಸೂಲಿ ಆರಂಭ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿದ್ಯುತ್ ಖಾಸಗೀಕರಣ ವಿರುದ್ದದ ಹೋರಾಟಕ್ಕೆ ಗೆಲುವು: ಅರ್ಜಿ ಹಿಂಪಡೆದ ಟಾಟಾ ಪವರ್ ಕಂಪನಿ

ರಾಜ್ಯದಲ್ಲಿ ವಿದ್ಯುತ್ ಕ್ಷೇತ್ರದಲ್ಲಿ ಖಾಸಗೀಕರಣದ ಹೆಜ್ಜೆ ಇಡಲು ಮುಂದಾಗಿದ್ದ ಟಾಟಾ ಪವರ್ ಕಂಪನಿಗೆ ಭಾರಿ ಹಿನ್ನಡೆಯಾಗಿದೆ. ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗದ (KERC) ಮುಂದೆ ರಾಜ್ಯದ 19 ಕಂದಾಯ ಜಿಲ್ಲೆಗಳಿಗೆ ಸಂಬಂಧಿಸಿದಂತೆ ತಾನು...

SIR: ಮತದಾರರ ಮನೆಗೆ ಹೋಗದೆ ಕಚೇರಿಯಲ್ಲೇ ಕುಳಿತು ಫಾರ್ಮ್ ವಿತರಣೆ ಆರೋಪ, BLO ಗಳಿಗೆ ಎಚ್ಚರಿಕೆ ನೀಡಿದ ಆಯೋಗ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಂದ ವ್ಯಾಪಕ ದೂರುಗಳು ಕೇಳಿಬಂದ ಬೆನ್ನಲ್ಲೇ, ರಾಜ್ಯ ಚುನಾವಣಾ ಆಯೋಗವು ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಮತದಾರರ ಮನೆ-ಮನೆಗೆ ಭೇಟಿ...

ಅಳುವ ಕಂದಮ್ಮಗಳನ್ನು ವಾಷಿಂಗ್ ಮೆಷಿನ್‌ನಲ್ಲಿ ಕೂಡಿಹಾಕ್ತಿದ್ದ ಇಬ್ಬರು ಕೇರ್‌ಟೇಕರ್ ಅರೆಸ್ಟ್

ಸಿಲಿಕಾನ್ ಸಿಟಿಯ ಬ್ರೂಕ್‌ಫೀಲ್ಡ್‌ನಲ್ಲಿರುವ ಪ್ರಮುಖ ಐಟಿ ಸಂಸ್ಥೆ 'ಕ್ಯಾಪ್‌ಜೆಮಿನಿ' ಕ್ಯಾಂಪಸ್‌ನ ಡೇ-ಕೇರ್ ಸೆಂಟರ್‌ನಲ್ಲಿ ಪುಟ್ಟ ಕಂದಮ್ಮಗಳನ್ನು ಬಾತ್‌ರೂಮ್ ಹಾಗೂ ವಾಷಿಂಗ್ ಮೆಷಿನ್‌ಗಳಲ್ಲಿ ಕೂಡಿಹಾಕಿ ವಿಕೃತಿ ಮೆರೆದಿದ್ದ ಪ್ರಕರಣದಲ್ಲಿ ಪೊಲೀಸರು ಭರ್ಜರಿ ಬೇಟೆಯಾಡಿದ್ದಾರೆ. ಪ್ರಕರಣದ...

“ನಾಗರಿಕರು ಸರ್ಕಾರದ ಗುಲಾಮರಲ್ಲ”: ಸಿಎಎ, ಜ್ಞಾನವಾಪಿ ವಿರೋಧಿ ಪ್ರತಿಭಟನೆ ಸಂಬಂಧ ಎಸ್‌ಡಿಪಿಐ ನಾಯಕನ ಗಡಿಪಾರು ಪ್ರಶ್ನಿಸಿದ ಬಾಂಬೆ ಹೈಕೋರ್ಟ್

“ದೇಶದ ನಾಗರಿಕರು ಸರ್ಕಾರದ ಗುಲಾಮರಲ್ಲ. ಕೇವಲ ಸರ್ಕಾರದ ನಿರ್ಧಾರಗಳನ್ನು ವಿರೋಧಿಸುವುದು ಅಥವಾ ಆಡಳಿತ ವ್ಯವಸ್ಥೆಯ ವಿರುದ್ಧ ಘೋಷಣೆಗಳನ್ನು ಕೂಗುವುದು ಒಬ್ಬ ನಾಗರಿಕನನ್ನು ಗಡಿಪಾರು ಮಾಡಲು ಕಾನೂನಾತ್ಮಕ ಕಾರಣವಾಗಲಾರದು,” ಎಂದು ಬಾಂಬೆ ಹೈಕೋರ್ಟ್‌ ಐತಿಹಾಸಿಕ...

ಗೌರಿಯಕ್ಕ, ಸುರೇಶ್ ಭಟ್ರ ಬಗ್ಗೆ ತಿಳಿಯಲು ಎಕ್ಸ್ ಆರೆಸ್ಸೆಸ್‌ನವರ ಪ್ರಮಾಣ ಪತ್ರ ಬೇಕಿಲ್ಲ

ಕರ್ನಾಟಕ ಕೋಮು ಸೌಹಾರ್ದ ವೇದಿಕೆಯಲ್ಲಿ ನಮ್ಮ ಒಡನಾಡಿಯಾಗಿದ್ದ ಎ‌ಐಸಿಸಿ ಕಾರ್ಯದರ್ಶಿಯೂ ಆಗಿರುವ ಪಿ.ವಿ.ಮೋಹನ್‌ರಿಗೆ ವಿಧಾನ ಪರಿಷತ್ ಸದಸ್ಯತ್ವ ಸಿಕ್ಕಿದ್ದು ಸಹಜವಾಗಿಯೇ ನಮಗೆ ಖುಷಿಯಾಗಿತ್ತು. ಈ ನಿಟ್ಟಿನಲ್ಲಿ ಮಂಗಳೂರಿನ ವುಡ್‌ಲ್ಯಾಂಡ್ಸ್ ಹೋಟೆಲಲ್ಲಿ ಕೋಮು ಸೌಹಾರ್ದ...

ಡ್ರಗ್ಸ್ ಮುಕ್ತ ಕರ್ನಾಟಕ ನಮ್ಮ ಗುರಿ: ‘ಆಪರೇಷನ್ RISE’ ಮತ್ತು ‘ಬೇಡ BRO’ ಅಭಿಯಾನಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಕರೆ

ಬೆಂಗಳೂರು: ಮಾದಕ ದ್ರವ್ಯ ಮುಕ್ತ ಕರ್ನಾಟಕವನ್ನು ನಿರ್ಮಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದ್ದು, ಮಾದಕ ವ್ಯಸನದ ವಿರುದ್ಧ ಯುವಜನತೆ ಮತ್ತು ಸಾರ್ವಜನಿಕರು ಕೈಜೋಡಿಸಬೇಕು ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ...

ಬೆಂಗಳೂರಿನ 3 ಪ್ರಮುಖ ಮಾರ್ಗಗಳಲ್ಲಿ ಟೋಲ್ ದರ ಭಾರಿ ಹೆಚ್ಚಳ: ಇಂದಿನಿಂದಲೇ ಜಾರಿ 

ಬೆಂಗಳೂರು: ಸಿಲಿಕಾನ್ ಸಿಟಿಯ ವಾಹನ ಸವಾರರಿಗೆ ಜುಲೈ ಒಂದರಿಂದಲೇ ಅನ್ವಯವಾಗುವಂತೆ ಬೆಲೆ ಏರಿಕೆಯ ಭಾರಿ ಬಿಸಿ ತಟ್ಟಿದೆ. ಬೆಂಗಳೂರಿನ ಪ್ರಮುಖ ಸಂಪರ್ಕ ರಸ್ತೆಗಳಾದ ನೈಸ್ ರಸ್ತೆ (NICE Road), ಎಲೆಕ್ಟ್ರಾನಿಕ್ಸ್ ಸಿಟಿ ಎಲಿವೇಟೆಡ್...

ಕೊಪ್ಪಳದ ಬೋಚನಹಳ್ಳಿಯಲ್ಲಿ ದಲಿತರ ಮೇಲೆ ಹಲ್ಲೆ: ದೂರು-ಪ್ರತಿದೂರು; ಹೋರಾಟಕ್ಕೆ ಸಂಘಟನೆಗಳ ನಿರ್ಧಾರ

ಮೊಹರಂ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ದಲಿತರ ಮನೆಗಳಿಗೆ ನುಗ್ಗಿ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಕೊಪ್ಪಳ ತಾಲೂಕಿನ ಅಳವಂಡಿ ಬಳಿಯ ಬೋಚನಹಳ್ಳಿ ಗ್ರಾಮದಲ್ಲಿ ನಡೆದಿದೆ. ಜೂನ್ 25ರಂದು ಗ್ರಾಮದಲ್ಲಿ ಮೊಹರಂ ಮೆರವಣಿಗೆ...

ಎನ್ಯೂಮರೇಷನ್ ಫಾರಂ ಭರ್ತಿ ಮಾಡುವ ಮೂಲಕ SIR ಗೆ ಚಾಲನೆ ನೀಡಿದ ಸಿಎಂ ಡಿ.ಕೆ ಶಿವಕುಮಾರ್

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇಂದು (ಜೂನ್ 30) ಮಂಗಳವಾರ ತಮ್ಮ ಸದಾಶಿವನಗರ ನಿವಾಸದಲ್ಲಿ ದಾಖಲಾತಿ ನಮೂನೆಯನ್ನು ಭರ್ತಿ ಮಾಡಿ ಸಲ್ಲಿಸುವ ಮೂಲಕ ಮತದಾರರ ಪಟ್ಟಿಯ 'ವಿಶೇಷ ತೀವ್ರ ಪರಿಷ್ಕರಣೆ' (SIR) ಅಭಿಯಾನಕ್ಕೆ ಅಧಿಕೃತವಾಗಿ...

‘ಆಪರೇಷನ್ ಸಿಂಧೂರ್‌’ ಕುರಿತು ಸಂಸತ್ತಿಗೆ ಸುಳ್ಳು ಮಾಹಿತಿ: ರಾಜನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್‌ನಿಂದ ಹಕ್ಕುಚ್ಯುತಿ ನೋಟಿಸ್

ಕೇಂದ್ರ ರಕ್ಷಣಾ ಸಚಿವ ರಾಜ್‌ನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್ ಪಕ್ಷ ಲೋಕಸಭೆಯಲ್ಲಿ ಹಕ್ಕುಚ್ಯುತಿ ನೋಟಿಸ್ ನೀಡಿದೆ. ಕಾಂಗ್ರೆಸ್ ಸಂಸದ ಕೆ. ಸಿ. ವೇಣುಗೋಪಾಲ್ ಅವರು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಈ ಕುರಿತು ಪತ್ರ ಬರೆದಿದ್ದು,...