Homeಕರ್ನಾಟಕಬಿಜೆಪಿ ಸರ್ಕಾರದ ವಿರುದ್ಧದ 40 ಪರ್ಸೆಂಟ್‌ ಕಮಿಷನ್ ಆರೋಪ : ಸಿಎಂಗೆ ತನಿಖಾ ವರದಿ ಸಲ್ಲಿಕೆ

ಬಿಜೆಪಿ ಸರ್ಕಾರದ ವಿರುದ್ಧದ 40 ಪರ್ಸೆಂಟ್‌ ಕಮಿಷನ್ ಆರೋಪ : ಸಿಎಂಗೆ ತನಿಖಾ ವರದಿ ಸಲ್ಲಿಕೆ

- Advertisement -
- Advertisement -

ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘ ಹಿಂದಿನ ಬಿಜೆಪಿ ನೇತೃತ್ವದ ಸರ್ಕಾರದ ವಿರುದ್ದ ಮಾಡಿದ್ಧ ಶೇಖಡ 40ರಷ್ಟು ಕಮಿಷನ್ ಆರೋಪದ ಕುರಿತು ತನಿಖೆ ನಡೆಸಲು ನೇಮಿಸಿದ್ದ ನ್ಯಾಯಮೂರ್ತಿ ಹೆಚ್‌.ಎನ್‌ ನಾಗಮೋಹನ್‌ದಾಸ್ ವಿಚಾರಣಾ ಆಯೋಗ, ತನ್ನ ತನಿಖಾ ವರದಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬುಧವಾರ (ಮಾ.12) ಸಲ್ಲಿಸಿದೆ.

ಸರ್ಕಾರದ ಟೆಂಡರ್ ಕಾಮಗಾರಿಗಳಲ್ಲಿ ಶೇ.40ಕ್ಕಿಂತ ಹೆಚ್ಚಿನ ಕಮಿಷನ್ ಚಾಲ್ತಿಯಲ್ಲಿದೆ ಎಂದು ಆರೋಪಿಸಿ ಗುತ್ತಿಗೆದಾರರ ಸಂಘ ದೂರು ಸಲ್ಲಿಸಿತ್ತು. ಇದಲ್ಲದೆ, ಪ್ಯಾಕೇಜ್ ಪದ್ದತಿ ಕೈ ಬಿಡುವುದು, ಎಸ್‌.ಆರ್ ದರಪಟ್ಟಿ ನಿಗದಿ, ಸ್ಟಾರ್ ರೇಟ್‌ ಪದ್ದತಿ ಜಾರಿ, ಪಾರದರ್ಶಕತೆಯನ್ನು ಕಾಪಾಡಿಕೊಳ್ಳುವಿಕೆ, ಸೀನಿಯಾರಿಟಿ ಮೇಲೆ ಬಿಲ್ ಪಾವತಿ, ಕೆಆರ್‌ಐಡಿಎಲ್‌ನಿಂದ ಗುತ್ತಿಗೆದಾರರಿಗೆ ನೇರವಾಗಿ ಕಾಮಗಾರಿಗಳ ನೀಡಿಕೆ ತಪ್ಪಿಸುವುದು ಮೊದಲಾದ ವಿಷಯಗಳಿಗೆ ಸಂಬಂಧಿಸಿದಂತೆಯೂ ತನಿಖೆ ನಡೆಸಲು ಸರ್ಕಾರಕ್ಕೆ ಬೇಡಿಕೆ ಸಲ್ಲಿಸಿತ್ತು.

ಈ ಸಂಬಂಧ ವಿಚಾರಣಾ ಆಯೋಗವೂ ಈ ಎಲ್ಲಾ ಆರೋಪಗಳ ಸತ್ಯಾಸತ್ಯತೆಯ ಬಗ್ಗೆ ವಿವರವಾದ ಅಧ್ಯಯನ ನಡೆಸಿ ವರದಿ ಸಲ್ಲಿಸಿದೆ ಎಂದು ಮುಖ್ಯಮಂತ್ರಿ ಕಚೇರಿ ತಿಳಿಸಿದೆ. ಸಾರ್ವಜನಿಕರಿಂದ ಬಂದ ದೂರುಗಳ ಬಗ್ಗೆಯೂ ಆಯೋಗ ಕೂಲಂಕುಷವಾಗಿ ತನಿಖೆ ನಡೆಸಿ ಸಲಹೆ ಮತ್ತು ಅಭಿಪ್ರಾಯಗಳೊಂದಿಗೆ ವರದಿ ತಯಾರಿಸಿದೆ ಎಂದು ಹೇಳಿದೆ.

ಗುತ್ತಿಗೆದಾರರ ಸಂಘದ ಆರೋಪಗಳ ತನಿಖೆ ನಡೆಸುತ್ತಿದ್ದ ಜೊತೆ ಜೊತೆಯಲ್ಲಿಯೇ ಸರ್ಕಾರ ರಾಜ್ಯದ ಪ್ರಮುಖ ಐದು ಇಲಾಖೆಗಳಲ್ಲಿ 26 ಜಲೈ 2019ರಿಂದ 31 ಮಾರ್ಚ್ 2023ರ ಅವಧಿಯಲ್ಲಿ ನಡೆದಿರುವ ಎಲ್ಲಾ ಕಾಮಗಾರಿಗಳ ತನಿಖೆ ನಡೆಸಿ ವರದಿ ನೀಡಬೇಕೆಂದು ತಿಳಿಸಿತ್ತು.

ಇದನ್ನು ಗಮನದಲ್ಲಿಟ್ಟುಕೊಂಡು ಆಯೋಗವು ವೈಜ್ಞಾನಿಕವಾಗಿ ರ್‍ಯಾಂಡಮ್ ಮಾದರಿಯಲ್ಲಿ ಪೂರ್ಣಗೊಂಡ ಕಾಮಗಾರಿಗಳನ್ನು ತನಿಖೆಗೆ ಆಯ್ಕೆ ಮಾಡಿಕೊಂಡಿದೆ. ಈ ಆಯ್ಕೆಯಲ್ಲಿ ಎಲ್ಲಾ ಇಲಾಖೆಗಳು, ಎಲ್ಲಾ ಜಿಲ್ಲೆಗಳು, ಎಲ್ಲಾ ಮಾದರಿಯ ಕಾಮಗಾರಿಗಳು ಮತ್ತು ಎಲ್ಲಾ ಮೊತ್ತದ ಕಾಮಗಾರಿಗಳನ್ನು ಪರಿಗಣಿಸಲಾಗಿದೆ. ಕಾಮಗಾರಿಗಳ ತನಿಖೆಯು ಕಡತಗಳ ಪರಿಶೀಲನೆ, ಸ್ದಳ ಪರಿಶೀಲನೆ ಮತ್ತು ಲೆಕ್ಕಪತ್ರಗಳ ಪರಿಶೀಲನೆ ಅಂಶಗಳನ್ನು ಒಳಗೊಂಡಿದೆ. ತನಿಖಾ ವರದಿಯು ಸುಮಾರು 20 ಸಾವಿರ ಪುಟಗಳನ್ನು ಹೊಂದಿದೆ ಎಂದು ಸಿಎಂ ಕಚೇರಿ ಮಾಹಿತಿ ನೀಡಿದೆ.

ನಾರಾಯಣಪುರ ಕಾಲುವೆ ವರದಿ ಸಲ್ಲಿಕೆ 

ನಾರಾಯಣಪುರ ಬಲದಂಡೆ ಮುಖ್ಯ ಕಾಲುವೆಗೆ ಅಡ್ಡಲಾಗಿ ನಿರ್ಮಿಸಲಾದ ಉಪ ಕಾಲುವೆಗಳ ಆಧುನೀಕರಣ ಕಾಮಗಾರಿ ಕುರಿತೂ ತನಿಖೆ ನಡೆಸಿರುವ ಆಯೋಗ 800 ಪುಟಗಳ ವರದಿ ಸಲ್ಲಿಸಿದೆ.

ರಾಯಚೂರು ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ ನಾರಾಯಣಪುರ ಬಲದಂಡೆ ಮುಖ್ಯ ಕಾಲುವೆಗೆ ಅಡ್ಡಲಾಗಿ ನಿರ್ಮಿಸಲಾಗಿರುವ 1ರಿಂದ 18ರವರೆಗೆಗಿನ ಉಪ/ಸೀಳು ಕಾಲುವೆಯ ಆಧುನೀಕರಣ ಪ್ಯಾಕೇಜ್ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಮಂಜೂರಾದ ಅಂದಾಜು ಪತ್ರಿಕೆಗಳಲ್ಲಿ ಅಳವಡಿಸಿಕೊಂಡಿರುವ ಅಂದಾಜು ಹಾಗೂ ಸದರಿ ಅಂದಾಜು ಪತ್ರಿಕೆಗಳನ್ನು ಪರಿಶೀಲಿಸಿ ಪ್ರಸಕ್ತ ನಿಗಮದ ಅಂದಾಜು ನಿಗಮದ ಅಂದಾಜು ಪರಿಶೀಲನಾ ಸಮಿತಿಯು ಗಮನಿಸಿರುವ ತಾಂತ್ರಿಕ ನ್ಯೂನ್ಯತೆಗಳನ್ನ ಬಗ್ಗೆ ತನಿಖೆ ನಡೆಸಿ ವರದಿ ನೀಡಲು ಸರ್ಕಾರದ ನಿವೃತ್ತ ಕಾರ್ಯದರ್ಶಿ ಸಿದ್ದಗಂಗಪ್ಪ ಅವರ ಅಧ್ಯಕ್ಷತೆಯಲ್ಲಿ ರಚಿಸಿದ್ದ ತಾಂತ್ರಿಕ ಸಮಿತಿಯನ್ನು ವಿಸರ್ಜಿಸಿ, ವಿಚಾರಣಾ ಆಯೋಗಕ್ಕೆ ಹೆಚ್ಚಿನ ತನಿಖೆಯ ಜವಾಬ್ದಾರಿ ವಹಿಸಿತ್ತು.

ಮೀಸಲಾತಿ ವಿಚಾರದಲ್ಲಿ ದಲಿತರನ್ನು ಗತಿಗೆಟ್ಟವರು ಎಂದು ಅವಮಾನಿಸಲಾಗುತ್ತಿದೆ: ಹೋರಾಟಗಾರ ಮಾವಳ್ಳಿ ಶಂಕರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...