Homeಕರ್ನಾಟಕಬಿಜೆಪಿ ಸರ್ಕಾರದ ವಿರುದ್ಧದ 40 ಪರ್ಸೆಂಟ್‌ ಕಮಿಷನ್ ಆರೋಪ : ಸಿಎಂಗೆ ತನಿಖಾ ವರದಿ ಸಲ್ಲಿಕೆ

ಬಿಜೆಪಿ ಸರ್ಕಾರದ ವಿರುದ್ಧದ 40 ಪರ್ಸೆಂಟ್‌ ಕಮಿಷನ್ ಆರೋಪ : ಸಿಎಂಗೆ ತನಿಖಾ ವರದಿ ಸಲ್ಲಿಕೆ

- Advertisement -
- Advertisement -

ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘ ಹಿಂದಿನ ಬಿಜೆಪಿ ನೇತೃತ್ವದ ಸರ್ಕಾರದ ವಿರುದ್ದ ಮಾಡಿದ್ಧ ಶೇಖಡ 40ರಷ್ಟು ಕಮಿಷನ್ ಆರೋಪದ ಕುರಿತು ತನಿಖೆ ನಡೆಸಲು ನೇಮಿಸಿದ್ದ ನ್ಯಾಯಮೂರ್ತಿ ಹೆಚ್‌.ಎನ್‌ ನಾಗಮೋಹನ್‌ದಾಸ್ ವಿಚಾರಣಾ ಆಯೋಗ, ತನ್ನ ತನಿಖಾ ವರದಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬುಧವಾರ (ಮಾ.12) ಸಲ್ಲಿಸಿದೆ.

ಸರ್ಕಾರದ ಟೆಂಡರ್ ಕಾಮಗಾರಿಗಳಲ್ಲಿ ಶೇ.40ಕ್ಕಿಂತ ಹೆಚ್ಚಿನ ಕಮಿಷನ್ ಚಾಲ್ತಿಯಲ್ಲಿದೆ ಎಂದು ಆರೋಪಿಸಿ ಗುತ್ತಿಗೆದಾರರ ಸಂಘ ದೂರು ಸಲ್ಲಿಸಿತ್ತು. ಇದಲ್ಲದೆ, ಪ್ಯಾಕೇಜ್ ಪದ್ದತಿ ಕೈ ಬಿಡುವುದು, ಎಸ್‌.ಆರ್ ದರಪಟ್ಟಿ ನಿಗದಿ, ಸ್ಟಾರ್ ರೇಟ್‌ ಪದ್ದತಿ ಜಾರಿ, ಪಾರದರ್ಶಕತೆಯನ್ನು ಕಾಪಾಡಿಕೊಳ್ಳುವಿಕೆ, ಸೀನಿಯಾರಿಟಿ ಮೇಲೆ ಬಿಲ್ ಪಾವತಿ, ಕೆಆರ್‌ಐಡಿಎಲ್‌ನಿಂದ ಗುತ್ತಿಗೆದಾರರಿಗೆ ನೇರವಾಗಿ ಕಾಮಗಾರಿಗಳ ನೀಡಿಕೆ ತಪ್ಪಿಸುವುದು ಮೊದಲಾದ ವಿಷಯಗಳಿಗೆ ಸಂಬಂಧಿಸಿದಂತೆಯೂ ತನಿಖೆ ನಡೆಸಲು ಸರ್ಕಾರಕ್ಕೆ ಬೇಡಿಕೆ ಸಲ್ಲಿಸಿತ್ತು.

ಈ ಸಂಬಂಧ ವಿಚಾರಣಾ ಆಯೋಗವೂ ಈ ಎಲ್ಲಾ ಆರೋಪಗಳ ಸತ್ಯಾಸತ್ಯತೆಯ ಬಗ್ಗೆ ವಿವರವಾದ ಅಧ್ಯಯನ ನಡೆಸಿ ವರದಿ ಸಲ್ಲಿಸಿದೆ ಎಂದು ಮುಖ್ಯಮಂತ್ರಿ ಕಚೇರಿ ತಿಳಿಸಿದೆ. ಸಾರ್ವಜನಿಕರಿಂದ ಬಂದ ದೂರುಗಳ ಬಗ್ಗೆಯೂ ಆಯೋಗ ಕೂಲಂಕುಷವಾಗಿ ತನಿಖೆ ನಡೆಸಿ ಸಲಹೆ ಮತ್ತು ಅಭಿಪ್ರಾಯಗಳೊಂದಿಗೆ ವರದಿ ತಯಾರಿಸಿದೆ ಎಂದು ಹೇಳಿದೆ.

ಗುತ್ತಿಗೆದಾರರ ಸಂಘದ ಆರೋಪಗಳ ತನಿಖೆ ನಡೆಸುತ್ತಿದ್ದ ಜೊತೆ ಜೊತೆಯಲ್ಲಿಯೇ ಸರ್ಕಾರ ರಾಜ್ಯದ ಪ್ರಮುಖ ಐದು ಇಲಾಖೆಗಳಲ್ಲಿ 26 ಜಲೈ 2019ರಿಂದ 31 ಮಾರ್ಚ್ 2023ರ ಅವಧಿಯಲ್ಲಿ ನಡೆದಿರುವ ಎಲ್ಲಾ ಕಾಮಗಾರಿಗಳ ತನಿಖೆ ನಡೆಸಿ ವರದಿ ನೀಡಬೇಕೆಂದು ತಿಳಿಸಿತ್ತು.

ಇದನ್ನು ಗಮನದಲ್ಲಿಟ್ಟುಕೊಂಡು ಆಯೋಗವು ವೈಜ್ಞಾನಿಕವಾಗಿ ರ್‍ಯಾಂಡಮ್ ಮಾದರಿಯಲ್ಲಿ ಪೂರ್ಣಗೊಂಡ ಕಾಮಗಾರಿಗಳನ್ನು ತನಿಖೆಗೆ ಆಯ್ಕೆ ಮಾಡಿಕೊಂಡಿದೆ. ಈ ಆಯ್ಕೆಯಲ್ಲಿ ಎಲ್ಲಾ ಇಲಾಖೆಗಳು, ಎಲ್ಲಾ ಜಿಲ್ಲೆಗಳು, ಎಲ್ಲಾ ಮಾದರಿಯ ಕಾಮಗಾರಿಗಳು ಮತ್ತು ಎಲ್ಲಾ ಮೊತ್ತದ ಕಾಮಗಾರಿಗಳನ್ನು ಪರಿಗಣಿಸಲಾಗಿದೆ. ಕಾಮಗಾರಿಗಳ ತನಿಖೆಯು ಕಡತಗಳ ಪರಿಶೀಲನೆ, ಸ್ದಳ ಪರಿಶೀಲನೆ ಮತ್ತು ಲೆಕ್ಕಪತ್ರಗಳ ಪರಿಶೀಲನೆ ಅಂಶಗಳನ್ನು ಒಳಗೊಂಡಿದೆ. ತನಿಖಾ ವರದಿಯು ಸುಮಾರು 20 ಸಾವಿರ ಪುಟಗಳನ್ನು ಹೊಂದಿದೆ ಎಂದು ಸಿಎಂ ಕಚೇರಿ ಮಾಹಿತಿ ನೀಡಿದೆ.

ನಾರಾಯಣಪುರ ಕಾಲುವೆ ವರದಿ ಸಲ್ಲಿಕೆ 

ನಾರಾಯಣಪುರ ಬಲದಂಡೆ ಮುಖ್ಯ ಕಾಲುವೆಗೆ ಅಡ್ಡಲಾಗಿ ನಿರ್ಮಿಸಲಾದ ಉಪ ಕಾಲುವೆಗಳ ಆಧುನೀಕರಣ ಕಾಮಗಾರಿ ಕುರಿತೂ ತನಿಖೆ ನಡೆಸಿರುವ ಆಯೋಗ 800 ಪುಟಗಳ ವರದಿ ಸಲ್ಲಿಸಿದೆ.

ರಾಯಚೂರು ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ ನಾರಾಯಣಪುರ ಬಲದಂಡೆ ಮುಖ್ಯ ಕಾಲುವೆಗೆ ಅಡ್ಡಲಾಗಿ ನಿರ್ಮಿಸಲಾಗಿರುವ 1ರಿಂದ 18ರವರೆಗೆಗಿನ ಉಪ/ಸೀಳು ಕಾಲುವೆಯ ಆಧುನೀಕರಣ ಪ್ಯಾಕೇಜ್ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಮಂಜೂರಾದ ಅಂದಾಜು ಪತ್ರಿಕೆಗಳಲ್ಲಿ ಅಳವಡಿಸಿಕೊಂಡಿರುವ ಅಂದಾಜು ಹಾಗೂ ಸದರಿ ಅಂದಾಜು ಪತ್ರಿಕೆಗಳನ್ನು ಪರಿಶೀಲಿಸಿ ಪ್ರಸಕ್ತ ನಿಗಮದ ಅಂದಾಜು ನಿಗಮದ ಅಂದಾಜು ಪರಿಶೀಲನಾ ಸಮಿತಿಯು ಗಮನಿಸಿರುವ ತಾಂತ್ರಿಕ ನ್ಯೂನ್ಯತೆಗಳನ್ನ ಬಗ್ಗೆ ತನಿಖೆ ನಡೆಸಿ ವರದಿ ನೀಡಲು ಸರ್ಕಾರದ ನಿವೃತ್ತ ಕಾರ್ಯದರ್ಶಿ ಸಿದ್ದಗಂಗಪ್ಪ ಅವರ ಅಧ್ಯಕ್ಷತೆಯಲ್ಲಿ ರಚಿಸಿದ್ದ ತಾಂತ್ರಿಕ ಸಮಿತಿಯನ್ನು ವಿಸರ್ಜಿಸಿ, ವಿಚಾರಣಾ ಆಯೋಗಕ್ಕೆ ಹೆಚ್ಚಿನ ತನಿಖೆಯ ಜವಾಬ್ದಾರಿ ವಹಿಸಿತ್ತು.

ಮೀಸಲಾತಿ ವಿಚಾರದಲ್ಲಿ ದಲಿತರನ್ನು ಗತಿಗೆಟ್ಟವರು ಎಂದು ಅವಮಾನಿಸಲಾಗುತ್ತಿದೆ: ಹೋರಾಟಗಾರ ಮಾವಳ್ಳಿ ಶಂಕರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್ ಜೊತೆಗಿನ ಮಾತುಕತೆಗಳು ಫಲಪ್ರದವಾಗಿವೆ, ಐದು ದಿನಗಳ ಕಾಲ ದಾಳಿ ಮಾಡದಂತೆ ಸೂಚಿಸಿದ್ದೇನೆ : ಟ್ರಂಪ್

ಕಳೆದ ಎರಡು ದಿನಗಳಲ್ಲಿ ಅಮೆರಿಕ ಮತ್ತು ಇರಾನ್ ನಡುವೆ ನಡೆದ ಮಾತುಕತೆಗಳು ಫಲಪ್ರದವಾಗಿವೆ. ಆದ್ದರಿಂದ ಇರಾನ್‌ನ ಇಂಧನ ಕೇಂದ್ರಗಳ ಮೇಲಿನ ಅಮೆರಿಕದ ದಾಳಿಯನ್ನು ಐದು ದಿನಗಳವರೆಗೆ ಮುಂದೂಡಲು ಸೂಚಿಸಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್...

ಎಸ್‌ಐಆರ್ ದೂರಾಲೋಚನೆ ಅಲ್ಲ, ಸಿಎಎ-ಎನ್‌ಆರ್‌ಸಿ ಜಾರಿಗೊಳಿಸುವ ದುರಾಲೋಚನೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುವುದು 'ದೂರಾಲೋಚನೆ'ಯಲ್ಲ, ಬದಲಿಗೆ ಅದು ಸಿಎಎ-ಎನ್‌ಅರ್‌ಸಿಯನ್ನು ಜಾರಿಗೊಳಿಸುವ 'ದುರಾಲೋಚನೆ'ಯನ್ನು ತನ್ನ ಒಡಲಲ್ಲಿಟ್ಟಿಕೊಂಡಿದೆ. ಮೊಕದ್ದಮೆಗಳ ವಿಚಾರಣೆಯು ಸುಪ್ರೀಂ ಕೋರ್ಟಿನಲ್ಲಿರುವಾಗ ಕರ್ನಾಟಕದಲ್ಲಿ ತರಾರುರಿಯಲ್ಲಿ ಎಸ್‌ಐಆರ್ ಪ್ರಕ್ರಿಯೆಯನ್ನು ನಡೆಸಬಾರದು...

ಸ್ವಘೋಷಿತ ದೇವಮಾನವನ ಖರಾತ್ ವಿರುದ್ಧ ಮತ್ತೆರಡು ಎಫ್‌ಐಆರ್ : ಗರ್ಭಿಣಿ ಮೇಲೆ ಅತ್ಯಾಚಾರವೆಸಗಿದ ಆರೋಪ

ಅತ್ಯಾಚಾರ ಸೇರಿದಂತೆ ಹಲವು ಕ್ರಿಮಿನಲ್ ಆರೋಪಗಳ ಮೇಲೆ ಈಗಾಗಲೇ ಬಂಧಿತನಾಗಿರುವ ಸ್ವಘೋಷಿತ ದೇವಮಾನವ ಹಾಗೂ ಜ್ಯೋತಿಷಿ ಅಶೋಕ್ ಖರಾತ್ ವಿರುದ್ಧ ಮಹಾರಾಷ್ಟ್ರದ ನಾಸಿಕ್‌ನ ಸರ್ಕಾರವಾಡಾ ಪೊಲೀಸರು ಶನಿವಾರ (ಮಾ.21) ಎರಡು ಹೊಸ ಅತ್ಯಾಚಾರ...

ದಲಿತ ಮಹಿಳೆ ಮೇಲೆ ಸಾರ್ವಜನಿಕವಾಗಿ ಹಲ್ಲೆ; ಹಾಡಗಲೇ ಕೂದಲಿಡಿದು ಎಳೆದಾಡಿದ ಪಂಜಾಬ್ ಪೊಲೀಸರು

ಪಂಜಾಬ್‌ನ ಜಲಂಧರ್‌ನಲ್ಲಿ ಕಳೆದ ಶುಕ್ರವಾರ (ಮಾ.20), ಪೊಲೀಸ್ ಅಧಿಕಾರಿಯೊಬ್ಬರು ದಲಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಹಲ್ಲೆ ನಡೆಸಿ ಕೂದಲು ಹಿಡಿದು ಎಳೆದಾಡಿದ್ದಾರೆ ಎಂದು 'ಸಿಯಾಸಾಟ್.ಕಾಮ್' ವರದಿ ಮಾಡಿದೆ. ಘಟನೆಯ ಸಿಸಿಟಿವಿ ದೃಶ್ಯಾವಳಿಗಳು ಸಾಮಾಜಿಕ ಮಾಧ್ಯಮದಲ್ಲಿ...

ನ್ಯೂಯಾರ್ಕ್‌ನ ಲಾಗಾರ್ಡಿಯಾ ವಿಮಾನ ನಿಲ್ದಾಣದಲ್ಲಿ ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಏರ್ ಕೆನಡಾ ಎಕ್ಸ್‌ಪ್ರೆಸ್ ವಿಮಾನ; ಇಬ್ಬರು ಸಾವು

ಭಾನುವಾರ ತಡರಾತ್ರಿ ನ್ಯೂಯಾರ್ಕ್‌ನ ಲಾಗಾರ್ಡಿಯಾ ವಿಮಾನ ನಿಲ್ದಾಣದಲ್ಲಿ ಸುಮಾರು 76 ಜನರನ್ನು ಹೊತ್ತೊಯ್ಯುತ್ತಿದ್ದ ಏರ್ ಕೆನಡಾ ಎಕ್ಸ್‌ಪ್ರೆಸ್ ವಿಮಾನವು ನೆಲದ ಮೇಲೆ ಚಲಿಸುತ್ತಿದ್ದ ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಪೈಲಟ್ ಮತ್ತು...

‘ತೀರ್ಮಾನಿಸಲು ಏನೂ ಉಳಿದಿಲ್ಲ’ : ಸೋನಮ್ ವಾಂಗ್ಚುಕ್ ಬಂಧನ ಪ್ರಶ್ನಿಸಿದ್ದ ಅರ್ಜಿ ವಿಲೇವಾರಿ ಮಾಡಿದ ಸುಪ್ರೀಂ ಕೋರ್ಟ್

ಲಡಾಖ್‌ನ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರನ್ನು ರಾಷ್ಟ್ರೀಯ ಭದ್ರತಾ ಕಾಯ್ದೆ (ಎನ್‌ಎಸ್‌ಎ) ಅಡಿಯಲ್ಲಿ ಬಂಧಿಸಿರುವುದನ್ನು ಪ್ರಶ್ನಿಸಿ ಅವರ ಪತ್ನಿ ಗೀತಾಂಜಲಿ ಅಂಗ್ಮೋ ಸಲ್ಲಿಸಿದ್ದ ಹೇಬಿಯಸ್ ಕಾರ್ಪಸ್ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಮಾ.23)...

ಡೋನಾಲ್ಡ್‌ ಟ್ರಂಪ್ ಕಠಿಣ ವೀಸಾ ನೀತಿಗಳಿಂದ ಸಂಕಷ್ಟಕ್ಕೆ ಸಿಲುಕಿದ ಭಾರತ-ಚೀನಾ

ಡೊನಾಲ್ಡ್‌ ಟ್ರಂಪ್ ಆಡಳಿತವು ಅನಾವರಣಗೊಳಿಸಿದ ಕಠಿಣ ವಲಸೆ ನೀತಿಯ ಗರಿಷ್ಠ ಹೊರೆಯು ಭಾರತ ಮತ್ತು ಚೀನಾ ದೇಶಗಳ ಮೇಲೆ ಬಿದ್ದಿದೆ. 2024 ರ ಅದೇ ಅವಧಿಗೆ ಹೋಲಿಸಿದರೆ 2025 ರ ಮೊದಲ ಎಂಟು...

ಉತ್ತರಾಖಂಡ| ಪೌರಿಯಲ್ಲಿ ಅಂಬೇಡ್ಕರ್ ಪ್ರತಿಮೆ ವಿರೂಪ; ದೂರು ದಾಖಲು

ಉತ್ತರಾಖಂಡದ ಪೌರಿ ಜಿಲ್ಲೆಯಲ್ಲಿ ಬಾಬಾಸಾಹೇಬ್ ಡಾ.ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆಯನ್ನು ವಿರೂಪಗೊಳಿಸಿದ ನಂತರ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು (ಮಾ.22) ತಿಳಿಸಿದ್ದಾರೆ. ಮಾರ್ಚ್ 21 ರ ಶನಿವಾರ ಸಂಜೆ 4 ಗಂಟೆ ಸುಮಾರಿಗೆ ಅಲಕನಂದಾ...

ಅಸ್ಸಾಂ : ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ ಸಚಿವೆ ನಂದಿತಾ ಗರ್ಲೋಸಾ

ಅಸ್ಸಾಂನ ಬಿಜೆಪಿ ಸರ್ಕಾರದಲ್ಲಿ ಸಚಿವೆಯಾಗಿದ್ದ ನಂದಿತಾ ಗರ್ಲೋಸಾ ಅವರು ಭಾನುವಾರ (ಮಾ.22) ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. ವಿಧಾನಸಭೆ ಚುನಾವಣೆಗೆ ಟಿಕೆಟ್ ನಿರಾಕರಿಸಿದ ಹಿನ್ನೆಲೆ ನಂದಿತಾ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದಾರೆ. ನಂದಿತಾ ಅವರು ಪ್ರತಿನಿಧಿಸುತ್ತಿದ್ದ...

ಉತ್ತರ ಪ್ರದೇಶ| ವಾಲ್ಮೀಕಿ ಸಮುದಾಯದ ವಿರುದ್ಧ ಹೇಳಿಕೆ; ಸೋಶಿಯಲ್ ಮೀಡಿಯಾ ಇನ್‌ಫ್ಲುಯೆನ್ಸರ್ ಬಂಧನ

ವಾಲ್ಮೀಕಿ ಸಮುದಾಯದ ವಿರುದ್ಧ ಸೋಶಿಯಲ್ ಮೀಡಿಯಾ ಇನ್‌ಫ್ಲುಯೆನ್ಸರ್ ನೀಡಿದ ಆಕ್ಷೇಪಾರ್ಹ ಹೇಳಿಕೆ ಆಕ್ರೋಶ ವ್ಯಕ್ತವಾಗಿದ್ದು, ಸಮುದಾಯದಿಂದ ಪ್ರತಿಭಟನೆ ಮತ್ತು ರಸ್ತೆ ತಡೆಗೆ ಕಾರಣವಾದ ನಂತರ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ನೌಗವಾನ್ ಪಕ್ಡಿಯಾ...