Homeಕರ್ನಾಟಕಬಿಜೆಪಿ ಸರ್ಕಾರದ ವಿರುದ್ಧದ 40 ಪರ್ಸೆಂಟ್‌ ಕಮಿಷನ್ ಆರೋಪ : ಸಿಎಂಗೆ ತನಿಖಾ ವರದಿ ಸಲ್ಲಿಕೆ

ಬಿಜೆಪಿ ಸರ್ಕಾರದ ವಿರುದ್ಧದ 40 ಪರ್ಸೆಂಟ್‌ ಕಮಿಷನ್ ಆರೋಪ : ಸಿಎಂಗೆ ತನಿಖಾ ವರದಿ ಸಲ್ಲಿಕೆ

- Advertisement -
- Advertisement -

ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘ ಹಿಂದಿನ ಬಿಜೆಪಿ ನೇತೃತ್ವದ ಸರ್ಕಾರದ ವಿರುದ್ದ ಮಾಡಿದ್ಧ ಶೇಖಡ 40ರಷ್ಟು ಕಮಿಷನ್ ಆರೋಪದ ಕುರಿತು ತನಿಖೆ ನಡೆಸಲು ನೇಮಿಸಿದ್ದ ನ್ಯಾಯಮೂರ್ತಿ ಹೆಚ್‌.ಎನ್‌ ನಾಗಮೋಹನ್‌ದಾಸ್ ವಿಚಾರಣಾ ಆಯೋಗ, ತನ್ನ ತನಿಖಾ ವರದಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬುಧವಾರ (ಮಾ.12) ಸಲ್ಲಿಸಿದೆ.

ಸರ್ಕಾರದ ಟೆಂಡರ್ ಕಾಮಗಾರಿಗಳಲ್ಲಿ ಶೇ.40ಕ್ಕಿಂತ ಹೆಚ್ಚಿನ ಕಮಿಷನ್ ಚಾಲ್ತಿಯಲ್ಲಿದೆ ಎಂದು ಆರೋಪಿಸಿ ಗುತ್ತಿಗೆದಾರರ ಸಂಘ ದೂರು ಸಲ್ಲಿಸಿತ್ತು. ಇದಲ್ಲದೆ, ಪ್ಯಾಕೇಜ್ ಪದ್ದತಿ ಕೈ ಬಿಡುವುದು, ಎಸ್‌.ಆರ್ ದರಪಟ್ಟಿ ನಿಗದಿ, ಸ್ಟಾರ್ ರೇಟ್‌ ಪದ್ದತಿ ಜಾರಿ, ಪಾರದರ್ಶಕತೆಯನ್ನು ಕಾಪಾಡಿಕೊಳ್ಳುವಿಕೆ, ಸೀನಿಯಾರಿಟಿ ಮೇಲೆ ಬಿಲ್ ಪಾವತಿ, ಕೆಆರ್‌ಐಡಿಎಲ್‌ನಿಂದ ಗುತ್ತಿಗೆದಾರರಿಗೆ ನೇರವಾಗಿ ಕಾಮಗಾರಿಗಳ ನೀಡಿಕೆ ತಪ್ಪಿಸುವುದು ಮೊದಲಾದ ವಿಷಯಗಳಿಗೆ ಸಂಬಂಧಿಸಿದಂತೆಯೂ ತನಿಖೆ ನಡೆಸಲು ಸರ್ಕಾರಕ್ಕೆ ಬೇಡಿಕೆ ಸಲ್ಲಿಸಿತ್ತು.

ಈ ಸಂಬಂಧ ವಿಚಾರಣಾ ಆಯೋಗವೂ ಈ ಎಲ್ಲಾ ಆರೋಪಗಳ ಸತ್ಯಾಸತ್ಯತೆಯ ಬಗ್ಗೆ ವಿವರವಾದ ಅಧ್ಯಯನ ನಡೆಸಿ ವರದಿ ಸಲ್ಲಿಸಿದೆ ಎಂದು ಮುಖ್ಯಮಂತ್ರಿ ಕಚೇರಿ ತಿಳಿಸಿದೆ. ಸಾರ್ವಜನಿಕರಿಂದ ಬಂದ ದೂರುಗಳ ಬಗ್ಗೆಯೂ ಆಯೋಗ ಕೂಲಂಕುಷವಾಗಿ ತನಿಖೆ ನಡೆಸಿ ಸಲಹೆ ಮತ್ತು ಅಭಿಪ್ರಾಯಗಳೊಂದಿಗೆ ವರದಿ ತಯಾರಿಸಿದೆ ಎಂದು ಹೇಳಿದೆ.

ಗುತ್ತಿಗೆದಾರರ ಸಂಘದ ಆರೋಪಗಳ ತನಿಖೆ ನಡೆಸುತ್ತಿದ್ದ ಜೊತೆ ಜೊತೆಯಲ್ಲಿಯೇ ಸರ್ಕಾರ ರಾಜ್ಯದ ಪ್ರಮುಖ ಐದು ಇಲಾಖೆಗಳಲ್ಲಿ 26 ಜಲೈ 2019ರಿಂದ 31 ಮಾರ್ಚ್ 2023ರ ಅವಧಿಯಲ್ಲಿ ನಡೆದಿರುವ ಎಲ್ಲಾ ಕಾಮಗಾರಿಗಳ ತನಿಖೆ ನಡೆಸಿ ವರದಿ ನೀಡಬೇಕೆಂದು ತಿಳಿಸಿತ್ತು.

ಇದನ್ನು ಗಮನದಲ್ಲಿಟ್ಟುಕೊಂಡು ಆಯೋಗವು ವೈಜ್ಞಾನಿಕವಾಗಿ ರ್‍ಯಾಂಡಮ್ ಮಾದರಿಯಲ್ಲಿ ಪೂರ್ಣಗೊಂಡ ಕಾಮಗಾರಿಗಳನ್ನು ತನಿಖೆಗೆ ಆಯ್ಕೆ ಮಾಡಿಕೊಂಡಿದೆ. ಈ ಆಯ್ಕೆಯಲ್ಲಿ ಎಲ್ಲಾ ಇಲಾಖೆಗಳು, ಎಲ್ಲಾ ಜಿಲ್ಲೆಗಳು, ಎಲ್ಲಾ ಮಾದರಿಯ ಕಾಮಗಾರಿಗಳು ಮತ್ತು ಎಲ್ಲಾ ಮೊತ್ತದ ಕಾಮಗಾರಿಗಳನ್ನು ಪರಿಗಣಿಸಲಾಗಿದೆ. ಕಾಮಗಾರಿಗಳ ತನಿಖೆಯು ಕಡತಗಳ ಪರಿಶೀಲನೆ, ಸ್ದಳ ಪರಿಶೀಲನೆ ಮತ್ತು ಲೆಕ್ಕಪತ್ರಗಳ ಪರಿಶೀಲನೆ ಅಂಶಗಳನ್ನು ಒಳಗೊಂಡಿದೆ. ತನಿಖಾ ವರದಿಯು ಸುಮಾರು 20 ಸಾವಿರ ಪುಟಗಳನ್ನು ಹೊಂದಿದೆ ಎಂದು ಸಿಎಂ ಕಚೇರಿ ಮಾಹಿತಿ ನೀಡಿದೆ.

ನಾರಾಯಣಪುರ ಕಾಲುವೆ ವರದಿ ಸಲ್ಲಿಕೆ 

ನಾರಾಯಣಪುರ ಬಲದಂಡೆ ಮುಖ್ಯ ಕಾಲುವೆಗೆ ಅಡ್ಡಲಾಗಿ ನಿರ್ಮಿಸಲಾದ ಉಪ ಕಾಲುವೆಗಳ ಆಧುನೀಕರಣ ಕಾಮಗಾರಿ ಕುರಿತೂ ತನಿಖೆ ನಡೆಸಿರುವ ಆಯೋಗ 800 ಪುಟಗಳ ವರದಿ ಸಲ್ಲಿಸಿದೆ.

ರಾಯಚೂರು ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ ನಾರಾಯಣಪುರ ಬಲದಂಡೆ ಮುಖ್ಯ ಕಾಲುವೆಗೆ ಅಡ್ಡಲಾಗಿ ನಿರ್ಮಿಸಲಾಗಿರುವ 1ರಿಂದ 18ರವರೆಗೆಗಿನ ಉಪ/ಸೀಳು ಕಾಲುವೆಯ ಆಧುನೀಕರಣ ಪ್ಯಾಕೇಜ್ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಮಂಜೂರಾದ ಅಂದಾಜು ಪತ್ರಿಕೆಗಳಲ್ಲಿ ಅಳವಡಿಸಿಕೊಂಡಿರುವ ಅಂದಾಜು ಹಾಗೂ ಸದರಿ ಅಂದಾಜು ಪತ್ರಿಕೆಗಳನ್ನು ಪರಿಶೀಲಿಸಿ ಪ್ರಸಕ್ತ ನಿಗಮದ ಅಂದಾಜು ನಿಗಮದ ಅಂದಾಜು ಪರಿಶೀಲನಾ ಸಮಿತಿಯು ಗಮನಿಸಿರುವ ತಾಂತ್ರಿಕ ನ್ಯೂನ್ಯತೆಗಳನ್ನ ಬಗ್ಗೆ ತನಿಖೆ ನಡೆಸಿ ವರದಿ ನೀಡಲು ಸರ್ಕಾರದ ನಿವೃತ್ತ ಕಾರ್ಯದರ್ಶಿ ಸಿದ್ದಗಂಗಪ್ಪ ಅವರ ಅಧ್ಯಕ್ಷತೆಯಲ್ಲಿ ರಚಿಸಿದ್ದ ತಾಂತ್ರಿಕ ಸಮಿತಿಯನ್ನು ವಿಸರ್ಜಿಸಿ, ವಿಚಾರಣಾ ಆಯೋಗಕ್ಕೆ ಹೆಚ್ಚಿನ ತನಿಖೆಯ ಜವಾಬ್ದಾರಿ ವಹಿಸಿತ್ತು.

ಮೀಸಲಾತಿ ವಿಚಾರದಲ್ಲಿ ದಲಿತರನ್ನು ಗತಿಗೆಟ್ಟವರು ಎಂದು ಅವಮಾನಿಸಲಾಗುತ್ತಿದೆ: ಹೋರಾಟಗಾರ ಮಾವಳ್ಳಿ ಶಂಕರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...