Homeಮುಖಪುಟ40 ಐಟಿಐಗಳ ಖಾಸಗೀಕರಣಕ್ಕೆ ಮುಂದಾದ ಯೋಗಿ ಸರ್ಕಾರ: ವಿದ್ಯಾರ್ಥಿಗಳ ತೀವ್ರ ಪ್ರತಿಭಟನೆ

40 ಐಟಿಐಗಳ ಖಾಸಗೀಕರಣಕ್ಕೆ ಮುಂದಾದ ಯೋಗಿ ಸರ್ಕಾರ: ವಿದ್ಯಾರ್ಥಿಗಳ ತೀವ್ರ ಪ್ರತಿಭಟನೆ

ಉತ್ತರಪ್ರದೇಶದಲ್ಲಿ ಐಟಿಐನ ಮಾಸಿಕ ಶುಲ್ಕ 40 ರೂ. ಇದ್ದು, ಅದು ವಾರ್ಷಿಕವಾಗಿ 480 ರೂ. ಆಗುತ್ತದೆ. ಆದರೆ, ಖಾಸಗೀಕರಣದ ನಂತರ ವಿದ್ಯಾರ್ಥಿಗಳು ವಾರ್ಷಿಕವಾಗಿ 26,000 ರೂ. ಪಾವತಿಸಬೇಕಾಗುತ್ತದೆ. 

- Advertisement -
- Advertisement -

ಸರ್ಕಾರಿ ಸ್ವಾಮ್ಯದಲ್ಲಿರುವ 40 ಐಟಿಐಗಳನ್ನು ಖಾಸಗಿ ಸಂಸ್ಥೆಗಳನ್ನಾಗಿ ಪರಿವರ್ತಿಸುವ ಯೋಗಿ ಆದಿತ್ಯನಾಥ್ ಸರ್ಕಾರದ ನಿರ್ಧಾರದ ವಿರುದ್ಧ ಉತ್ತರಪ್ರದೇಶದಾದ್ಯಂತ ಕೈಗಾರಿಕಾ ತರಬೇತಿ ಸಂಸ್ಥೆಗಳ (ಐಟಿಐ) ವಿದ್ಯಾರ್ಥಿಗಳು ಬೃಹತ್ ಪ್ರತಿಭಟನೆ ನಡೆಸುತ್ತಿದ್ದಾರೆ.

ಉತ್ತರಪ್ರದೇಶದಲ್ಲಿ 3,303 ಕ್ಕೂ ಹೆಚ್ಚು ಐಟಿಐಗಳಿವೆ. ಅದರಲ್ಲಿ 2,931 ಈಗಾಗಲೇ ಖಾಸಗಿ ವಲಯದಲ್ಲಿದ್ದರೆ, ಕೇವಲ 307 ಮಾತ್ರ ಸರ್ಕಾರಿ ಸ್ವಾಮ್ಯದಲ್ಲಿವೆ. ಅದರಲ್ಲಿ 12 ಮಹಿಳೆಯರಿಗೆ ಮಾತ್ರ ಮೀಸಲಾಗಿವೆ.

ಗೋರಖ್‌ಪುರದ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ (ಜಿಐಟಿಐ) ಈ ಖಾಸಗೀಕರಣದ ವಿರುದ್ಧದ ಪ್ರತಿಭಟನೆಯ ಕೇಂದ್ರಬಿಂದುವಾಗಿದೆ. ವಿದ್ಯಾರ್ಥಿಗಳು, ಪೋಷಕರು ಮತ್ತು ಸಿಬ್ಬಂದಿ ವರ್ಗದ ನೇತೃತ್ವದಲ್ಲಿ, ಖಾಸಗೀಕರಣದ ನಿರ್ಧಾರವನ್ನು ಕೈಬಿಡುವಂತೆ ಒತ್ತಾಯಿಸಿ ಮೂರು ದಿನಗಳಿಂದ ಪ್ರತಿಭಟನೆಗಳು ನಡೆಯುತ್ತಿವೆ.

ಭಾನುವಾರ, ನೂರಾರು ವಿದ್ಯಾರ್ಥಿಗಳು ಮುಖ್ಯ ದ್ವಾರದ ಹೊರಗೆ ತರಗತಿಗಳನ್ನು ಬಹಿಷ್ಕರಿಸಿ, ಸರ್ಕಾರದ ನಿರ್ಧಾರವು ಬಡ ವರ್ಗದ ವಿದ್ಯಾರ್ಥಿಗಳಿಗೆ ಅನ್ಯಾಯ ಎಂದು ಪ್ರತಿಭಟಿಸಿದ್ದಾರೆ.

“ಸರ್ಕಾರವು ಅನೇಕ ಅಧ್ಯಾಪಕರನ್ನು ಇತರೆ ಸರ್ಕಾರಿ ಕಾಲೇಜುಗಳಿಗೆ ವರ್ಗಾಯಿಸಿ, ನಾಲ್ಕು ಕೋರ್ಸ್‌ಗಳ ಶುಲ್ಕವನ್ನು 480 ರೂ.ಗಳಿಂದ 26,000 ರೂ.ಗೆ ಹೆಚ್ಚಿಸಿರುವುದರಿಂದ ಅನೇಕ ವಿದ್ಯಾರ್ಥಿಗಳಿಗೆ ಅನ್ಯಾಯವಾಗಿದೆ. ಖಾಸಗಿ ಶಿಕ್ಷಣ ಸಂಸ್ಥೆಗಳು ಕೇವಲ ಲಾಭದತ್ತ ಹೆಚ್ಚು ಗಮನ ಹರಿಸುತ್ತವೆ” ಎಂದು ವಿದ್ಯಾರ್ಥಿ ಅಭಿಷೇಕ್ ಹೇಳಿದ್ದಾರೆ.

ಪ್ರತಿಭಟನೆಯ ಸಂಕೇತವಾಗಿ, ರಾಜ್ಯಾದ್ಯಂತ ಅನೇಕ ಕಾಲೇಜುಗಳ ನೂರಾರು ವಿದ್ಯಾರ್ಥಿಗಳು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ಪತ್ರ‌ಗಳನ್ನು ಕಳುಹಿಸಿದ್ದಾರೆ. ವಿದ್ಯಾರ್ಥಿಗಳು ತಮ್ಮ ತರಗತಿಗಳಿಗೆ ಕಪ್ಪು ಬ್ಯಾಡ್ಜ್‌ಗಳನ್ನು ಧರಿಸಿಕೊಂಡು ಹಾಜರಾಗುತ್ತಿದ್ದಾರೆ.

ಅಲಹಾಬಾದ್‌ನ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ಕೊರಾನ್, ಸರ್ಕಾರಿ ಐಟಿಐ ಬನ್ಸ್‌ಡಿಹ್, ಬಲ್ಲಿಯಾ, ಐಟಿಐ ತಖಾ ಇಟಾವಾ ಮತ್ತು ಪ್ರತಾಪ‌ಗಢದ ಲಾಲ್‌ಗಂಜ್‌ನಲ್ಲಿರುವ ಐಟಿಐ ಕಾಲೇಜುಗಳು ಸೇರಿದಂತೆ, ಇನ್ನೂ ಅನೇಕ ಸರ್ಕಾರಿ ಐಟಿಐ ಕಾಲೇಜುಗಳಿವೆ. ಅಲ್ಲೆಲ್ಲಾ ಪ್ರತಿಭಟನೆಗಳು ತೀವ್ರಗೊಳ್ಳುವ ಸಾಧ್ಯತೆಯಿದೆ ಎಂದು ಕೆಲವು ವಿದ್ಯಾರ್ಥಿಗಳು ತಿಳಿಸಿದ್ದಾರೆ.

ಕಾಲೇಜುಗಳ ಖಾಸಗೀಕರಣವನ್ನು ಎರಡು ಹಂತಗಳಲ್ಲಿ ಮಾಡಲಾಗುತ್ತದೆ. ಮೊದಲ ಹಂತದಲ್ಲಿ 16 ಐಟಿಐಗಳನ್ನು ಖಾಸಗಿ ಖಾಸಗೀಯವರಿಗೆ ಹಸ್ತಾಂತರಿಸಲಾಗಿದ್ದರೆ, 24 ಐಟಿಐಗಳನ್ನು ಎರಡನೇ ಹಂತದಲ್ಲಿ ಹಸ್ತಾಂತರಿಸಲಾಗುತ್ತದೆ.

ಉತ್ತರಪ್ರದೇಶದ ಖಾಸಗಿ ಐಟಿಐ ಸಂಸ್ಥೆಗಳ ಸಂಖ್ಯೆ ಈಗಾಗಲೇ ಸರ್ಕಾರಿ ಸಂಸ್ಥೆಗಳಿಗಿಂತ 10 ಪಟ್ಟು ಹೆಚ್ಚಾಗಿದೆ. ಈ ನಿರ್ಧಾರದ ನಂತರ, ಖಾಸಗಿ ಐಟಿಐಗಳ ಸಂಖ್ಯೆ ಇನ್ನಷ್ಟು ಹೆಚ್ಚಾದರೆಮ ಸರ್ಕಾರಿ ಸ್ವಾಮ್ಯದ ಸಂಸ್ಥೆಗಳ ಬೆರಳೆಣಿಕೆಯಷ್ಟಾಗುತ್ತವೆ.

ಐಟಿಐ ಸಮಿತಿಯ ಪ್ರಸ್ತಾವನೆಯ ನಂತರ ರಾಜ್ಯ ಸರ್ಕಾರವು ಶುಲ್ಕವನ್ನು ಹೆಚ್ಚಿಸುವ ನಿರ್ಧಾರವನ್ನು ತೆಗೆದುಕೊಂಡಿದೆ. ನಿರ್ಧಾರದ ಪ್ರಕಾರ, ಹೊಸ ಅಕಾಡೆಮಿಕ್ ವರ್ಷಕ್ಕೆ (2020 -21) ದಾಖಲಾಗುವ ವಿದ್ಯಾರ್ಥಿಗಳು ಅತಿಯಾದ ಶುಲ್ಕವನ್ನು ಪಾವತಿಸಬೇಕಾಗುತ್ತದೆ.

ಉತ್ತರಪ್ರದೇಶದಲ್ಲಿ ಐಟಿಐನ ಮಾಸಿಕ ಶುಲ್ಕ 40 ರೂ. ಇದ್ದು, ಅದು ವಾರ್ಷಿಕವಾಗಿ 480 ರೂ. ಆಗುತ್ತದೆ. ಆದರೆ, ಖಾಸಗೀಕರಣದ ನಂತರ ವಿದ್ಯಾರ್ಥಿಗಳು ವಾರ್ಷಿಕವಾಗಿ 26,000 ರೂ. ಪಾವತಿಸಬೇಕಾಗುತ್ತದೆ.

ಆದರೆ, ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜುಗಳಲ್ಲಿ ಒಂದು ವರ್ಷದ ಡಿಪ್ಲೊಮಾ ಶುಲ್ಕ ಕೇವಲ 11,000 ರೂ ಇದೆ. ಇದರ ಪರಿಣಾಮವಾಗಿ, ಉತ್ತರ ಪ್ರದೇಶದ ಐಟಿಐಗಳು ಈಗ ಪಾಲಿಟೆಕ್ನಿಕ್ ಕೋರ್ಸ್‌ಗಳಿಗಿಂತ ದುಬಾರಿಯಾಗಲಿದ್ದು, ತಾಂತ್ರಿಕ ಮಟ್ಟದಲ್ಲಿ ಐಟಿಐ ಲೆವೆಲ್ ಒನ್ ಕೋರ್ಸ್ ಆಗಿದೆ.

ಇದನ್ನೂ ಓದಿ: ರೈಲ್ವೇ ಖಾಸಗೀಕರಣಕ್ಕೆ ಚಾಲನೆ: ಮುಂದಿನ ಕರಾಳ ದಿನಗಳಿಗೆ ಹಸಿರು ನಿಶಾನೆ

ಅಧಿಕಾರಿಗಳ ಪ್ರಕಾರ, ತರಬೇತಿ ಗುಣಮಟ್ಟವನ್ನು ಸುಧಾರಿಸಲು ಖಾಸಗೀಕರಣವನ್ನು ಮಾಡಲಾಗುತ್ತಿದೆ ಎಂದು ತಿಳಿದುಬಂದಿದೆ. ಖಾಸಗೀಕರಣದ ನಂತರ ವಿದ್ಯಾರ್ಥಿಗಳಿಗೆ ಅತ್ಯಾಧುನಿಕ ಯಂತ್ರಗಳ ಮೂಲಕ ಹೊಸ ತಂತ್ರಜ್ಞಾನವನ್ನು ಕಲಿಯುವ ಅವಕಾಶ ಸಿಗುತ್ತದೆ ಎಂದು ಹೇಳಲಾಗುತ್ತದೆ. ಆದರೂ, ಎಲ್ಲಾ ಐಟಿಐಗಳ ಪಠ್ಯಕ್ರಮವು ಒಂದೇ ಆಗಿರುತ್ತದೆ.

“ಐಟಿಐನಲ್ಲಿ, ಹೆಚ್ಚಿನ ವಿದ್ಯಾರ್ಥಿಗಳು ದುರ್ಬಲ ವರ್ಗದವರು ಅಥವಾ ಅತ್ಯಂತ ಕಳಪೆ ಹಿನ್ನೆಲೆಯಿಂದ ಬಂದವರೇ ಇದ್ದಾರೆ. ಖಾಸಗೀಕರಣದ ನಂತರ ಅವರು ತಮ್ಮ ಶಿಕ್ಷಣವನ್ನು ಪಡೆಯಲು ಸಾಧ್ಯವಿಲ್ಲ ಎಂದು ಐಟಿಐನ ಶಿಕ್ಷಕ ದುರ್ಗೇಶ್ ಹೇಳಿದ್ದಾಗಿ ನ್ಯೂಸ್ ಕ್ಲಿಕ್ ವರದಿ ಮಾಡಿದೆ.

“ಶುಲ್ಕವು ಮೊದಲು 40 ರೂ. ಇತ್ತು. ಆದರೆ ಖಾಸಗೀಕರಣದ ನಂತರ ಅದು ಸುಮಾರು 480 ರೂ. ಆಗುತ್ತದೆ. ನನ್ನ ತಂದೆ ಗುಜರಾತ್‌ನಲ್ಲಿ ದಿನಗೂಲಿ ಮಾಡುತ್ತಿದ್ದಾರೆ. ಸಾಂಕ್ರಾಮಿಕ ರೋಗದ ನಂತರ ಅವರು ಹಳ್ಳಿಗೆ ಮರಳಿ, ಈಗ ತರಕಾರಿ ಮಾರಾಟ ಮಾಡುತ್ತಿದ್ದಾರೆ. ಆದ್ದರಿಂದ, ನನಗೆ ಶುಲ್ಕವನ್ನು ಪಾವತಿಸಲು ಸಾಧ್ಯವಿಲ್ಲ” ಎಂದು ವಿದ್ಯಾರ್ಥಿಯೊಬ್ಬರು ತಮ್ಮ ಅಳಲು ತೋಡಿಕೊಂಡಿದ್ದಾರೆ.


ಇದನ್ನೂ ಓದಿ: ಭಾರತ್ ಪೆಟ್ರೋಲಿಯಂ ಖಾಸಗೀಕರಣ: ಕೇಂದ್ರದ ನಿರ್ಧಾರದ ವಿರುದ್ಧ ನೌಕರರಿಂದ ಬೃಹತ್‌ ಮುಷ್ಕರಕ್ಕೆ ಸಿದ್ದತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಂಗಳೂರಿನ ಅಪಾರ್ಟ್‌ಮೆಂಟ್‌ನಲ್ಲಿ ಪತ್ನಿಯ ಕತ್ತು ಹಿಸುಕಿ ಕೊಂದ ನಿವೃತ್ತ ಇಸ್ರೋ ಉದ್ಯೋಗಿ ಬಂಧನ

ಬೆಂಗಳೂರು: ಆಘಾತಕಾರಿ ಘಟನೆಯೊಂದರಲ್ಲಿ, 72 ವರ್ಷದ ನಿವೃತ್ತ ಇಸ್ರೋ ಉದ್ಯೋಗಿಯೊಬ್ಬರು ವೈಟ್‌ಫೀಲ್ಡ್ ವಿಭಾಗದ ಆವಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ತಮ್ಮ ಅಪಾರ್ಟ್‌ಮೆಂಟ್‌ನಲ್ಲಿ ಬುಧವಾರ ಪತ್ನಿಯನ್ನು ಕತ್ತು ಹಿಸುಕಿ ಕೊಂದಿರುವುದಾಗಿ ವರದಿಯಾಗಿದೆ.  ಬೊಮ್ಮನಹಳ್ಳಿಯ ಅಪಾರ್ಟ್‌ಮೆಂಟ್‌ನಲ್ಲಿ ಬೆಳಿಗ್ಗೆ...

ಮಧ್ಯಪ್ರದೇಶದಲ್ಲಿ ಶಾಸಕ ರಾಜಾ ಸಿಂಗ್‌ನಿಂದ ದ್ವೇಷ ಭಾಷಣ; ಪ್ರಚೋದನಕಾರಿ ‘ಶಿರಚ್ಛೇದನ’ ಹೇಳಿಕೆಗೆ ವಿರೋಧ

ತಮ್ಮ ಪ್ರಚೋದನಕಾರಿ ಹೇಳಿಕೆಗಳಿಂದಲೇ ಕುಖ್ಯಾತರಾಗಿರುವ ಹೈದರಾಬಾದ್‌ನ ಗೋಶಮಹಲ್ ಶಾಸಕ ಟಿ ರಾಜಾ ಸಿಂಗ್ ಸಾರ್ವಜನಿಕ ರ‍್ಯಾಲಿಯಲ್ಲಿ ಮತ್ತೊಮ್ಮೆ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದ್ದಾರೆ. ಮಧ್ಯಪ್ರದೇಶದಲ್ಲಿ ಅವರು ಆಡಿದ ಮಾತುಗಳು ವಿವಾದಕ್ಕೆ ಕಾರಣವಾಗಿದೆ. "ಪ್ರತಿಯೊಬ್ಬ ಬಜರಂಗಿಗಳು...

ಪಂಜಾಬ್ ವಿಶ್ವವಿದ್ಯಾಲಯದಲ್ಲಿ ಜಾತಿ ಆಧಾರಿತ ತಾರತಮ್ಯ ಆರೋಪ; ‘ಬಡ್ತಿ ವಿಳಂಬವಾಗಿದೆ..’; ಎಂದ ದಲಿತ ಪ್ರಾಧ್ಯಾಪಕ

ಪಂಜಾಬ್ ವಿಶ್ವವಿದ್ಯಾಲಯದ ದಲಿತ ಸಹಾಯಕ ಪ್ರಾಧ್ಯಾಪಕ ಹರ್‌ಪ್ರೀತ್ ಸಿಂಗ್ ಅವರು ವಿಶ್ವವಿದ್ಯಾಲಯದಲ್ಲಿ ಜಾತಿ ಆಧಾರಿತ ತಾರತಮ್ಯ ಇದೆ ಎಂದು ಸಾರ್ವಜನಿಕವಾಗಿ ಆರೋಪಿಸಿದ್ದಾರೆ. ತನ್ನ ಜಾತಿಯ ಕಾರಣದಿಂದಾಗಿ ಉದ್ದೇಶಪೂರ್ವಕವಾಗಿ ಬಡ್ತಿ ವಿಳಂಬ ಮಾಡಲಾಗಿದೆ...

ಮಹಾರಾಷ್ಟ್ರ: ತಾಯಿ, ಸಹೋದರನ ಕಣ್ಣಿಗೆ ಮೆಣಸಿನ ಪುಡಿ ಎರೆಚಿ ಮದುವೆ ಸಿದ್ಧತೆಯಲ್ಲಿದ್ದ 21 ವರ್ಷದ ಯುವತಿಯ ಅಪಹರಣ

ಮುಂಬೈ: ಆಘಾತಕಾರಿ ಘಟನೆಯೊಂದರಲ್ಲಿ, ಮಹಾರಾಷ್ಟ್ರದ ಪುಣೆ ಜಿಲ್ಲೆಯ ಇಂದಾಪುರ ತಹಸಿಲ್‌ನ ಭಿಗ್ವಾನ್‌ನಲ್ಲಿ 21 ವರ್ಷದ ಯುವತಿಯನ್ನು ಆಕೆಯ ತಾಯಿ ಮತ್ತು ಸಹೋದರನ ಮುಂದೆಯೇ ಇಬ್ಬರು ವ್ಯಕ್ತಿಗಳು ಅಪಹರಿಸಿದ್ದಾರೆ ಎಂದು ಆರೋಪಿಸಲಾಗಿದೆ.ಮದುವೆ ಸಿದ್ಧತೆಯಲ್ಲಿದ್ದ ಯುವತಿ...

KERALA SIR | ಬಿಜೆಪಿ ಮುಖಂಡನ ದೂರು: ಪೌರತ್ವ ಸಾಬೀತುಪಡಿಸುವಂತೆ ಮುಸ್ಲಿಂ ವ್ಯಕ್ತಿಗೆ ನೋಟಿಸ್!

ಬಿಜೆಪಿ ಕಾಸರಗೋಡು ಜಿಲ್ಲಾ ಕಾರ್ಯದರ್ಶಿ ಲೋಕೇಶ್ ನೋಂಡಾ ಎಂಬಾತನ ದೂರಿನ ಮೇರೆಗೆ ಹಿರಿಯ ವಯಸ್ಸಿನ ಮುಸ್ಲಿಂ ವ್ಯಕ್ತಿಯೊಬ್ಬರಿಗೆ ಭಾರತೀಯ ಪೌರತ್ವ ಸಾಬೀತುಪಡಿಸುವಂತೆ ಚುನಾವಣಾ ನೋಂದಣಿ ಅಧಿಕಾರಿ (ಇಆರ್‌ಒ) ನೋಟಿಸ್ ಜಾರಿ ಮಾಡಿದ್ದು, ಆ...

ಚೀನಾ ನಿರ್ಮಿತ ರೋಬೋ ಡಾಗ್ ತಾವೇ ಅಭಿವೃದ್ಧಿಪಡಿಸಿದ್ದಾಗಿ ಹೇಳಿಕೊಂಡಿದ್ದ ಗ್ಯಾಲ್ಗೋಟಿಯಾ ವಿವಿ AI ಸಮ್ಮಿಟ್ ಎಕ್ಸ್‌ಪೋದಿಂದ ತೆರವು

ನವದೆಹಲಿ: ಚೀನಾ ನಿರ್ಮಿತ ರೋಬೋ ಡಾಗ್ ತಮ್ಮದೇ ಎಂದು ಪ್ರದರ್ಶಿಸಿದ್ದಕ್ಕಾಗಿ ಟೀಕೆಗೆ ಗುರಿಯಾದ ನಂತರ ಮತ್ತು ಕೇಂದ್ರ ಸರ್ಕಾರವು ವಿರೋಧ ಪಕ್ಷಗಳಿಂದ ಟೀಕೆಗೆ ಗುರಿಯಾದ ನಂತರ ನೋಯ್ಡಾ ಮೂಲದ ಗ್ಯಾಲ್ಗೋಟಿಯಾಸ್ ವಿಶ್ವವಿದ್ಯಾಲಯವನ್ನು ಬುಧವಾರ...

ಉತ್ತರ ಪ್ರದೇಶ| ಅಹಮದಾಬಾದ್-ಗೋರಖ್‌ಪುರ ಎಕ್ಸ್‌ಪ್ರೆಸ್‌ನಲ್ಲಿ ಟಿಟಿಇಯಿಂದ ಸೇನಾ ಆಕಾಂಕ್ಷಿಯ ಮೇಲೆ ಅತ್ಯಾಚಾರ

ಉತ್ತರ ಪ್ರದೇಶದ ಅಹಮದಾಬಾದ್-ಗೋರಖ್‌ಪುರ ಎಕ್ಸ್‌ಪ್ರೆಸ್‌ನಲ್ಲಿ ಪ್ರಯಾಣಿಸುತ್ತಿದ್ದಾಗ ಟಿಕೆಟ್ ಪರೀಕ್ಷಕನೊಬ್ಬ (ಟಿಟಿಇ) ತನ್ನ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಸೇನಾ ನೇಮಕಾತಿಗೆ ತಯಾರಿ ನಡೆಸುತ್ತಿದ್ದ ಯುವತಿ ಆರೋಪಿಸಿದ್ದಾರೆ. ಇಂದಾರಾ ಮತ್ತು ಡಿಯೋರಿಯಾ ರೈಲು ನಿಲ್ದಾಣಗಳ ನಡುವೆ...

ನಾನು ಭಾರತಕ್ಕೆ ಯಾವಾಗ ಹಿಂತಿರುಗುತ್ತೇನೆಂದು ಹೇಳಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಗೆ ತಿಳಿಸಿದ ಮಲ್ಯ

ವಂಚನೆ ಮತ್ತು ಹಣ ವರ್ಗಾವಣೆಯ ಹಲವಾರು ಪ್ರಕರಣಗಳನ್ನು ಎದುರಿಸುತ್ತಿರುವ, ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಯುಕೆ ತೊರೆಯುವುದನ್ನು ನನಗೆ ಕಾನೂನುಬದ್ಧವಾಗಿ ನಿಷೇಧಿಸಲಾಗಿರುವುದರಿಂದ ಯಾವಾಗ ಭಾರತಕ್ಕೆ ಹಿಂತಿರುಗುತ್ತೇನೆ ಎಂದು ಹೇಳಲು ಸಾಧ್ಯವಿಲ್ಲ" ಎಂದು...

ಕಾಂಗ್ರೆಸ್‌ನಲ್ಲಿದ್ದಾಗ ನಾನು ಮುಖ್ಯಮಂತ್ರಿ ಆಗದಂತೆ ತಡೆದಿದ್ದು ರಾಹುಲ್ ಗಾಂಧಿ : ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಕಾಂಗ್ರೆಸ್‌ನಲ್ಲಿದ್ದಾಗ ನಾನು ಮುಖ್ಯಮಂತ್ರಿಯಾಗದಂತೆ ರಾಹುಲ್ ಗಾಂಧಿ ತಡೆದಿದ್ದಾರೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಮಂಗಳವಾರ (ಫೆ.17) ಆರೋಪಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, "2014 ರಲ್ಲಿ ಅಂದಿನ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ...

ಮಮತಾ ಬ್ಯಾನರ್ಜಿ ವಿರುದ್ಧ ಇಡಿ ಅರ್ಜಿ: ಮಾರ್ಚ್ 18ಕ್ಕೆ ವಿಚಾರಣೆ ಮುಂದೂಡಿಕೆ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹಾಗೂ ಇತರರ ವಿರುದ್ಧದ ಐ-ಪ್ಯಾಕ್ ಕಚೇರಿ ಶೋಧಕ್ಕೆ ಸಂಬಂಧಿಸಿದ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ, ಕೇಂದ್ರ ಜಾರಿ ನಿರ್ದೇಶನಾಲಯದ (ಇಡಿ) ಪರವಾಗಿ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್‌ವಿ...