Homeಮುಖಪುಟ40 ಐಟಿಐಗಳ ಖಾಸಗೀಕರಣಕ್ಕೆ ಮುಂದಾದ ಯೋಗಿ ಸರ್ಕಾರ: ವಿದ್ಯಾರ್ಥಿಗಳ ತೀವ್ರ ಪ್ರತಿಭಟನೆ

40 ಐಟಿಐಗಳ ಖಾಸಗೀಕರಣಕ್ಕೆ ಮುಂದಾದ ಯೋಗಿ ಸರ್ಕಾರ: ವಿದ್ಯಾರ್ಥಿಗಳ ತೀವ್ರ ಪ್ರತಿಭಟನೆ

ಉತ್ತರಪ್ರದೇಶದಲ್ಲಿ ಐಟಿಐನ ಮಾಸಿಕ ಶುಲ್ಕ 40 ರೂ. ಇದ್ದು, ಅದು ವಾರ್ಷಿಕವಾಗಿ 480 ರೂ. ಆಗುತ್ತದೆ. ಆದರೆ, ಖಾಸಗೀಕರಣದ ನಂತರ ವಿದ್ಯಾರ್ಥಿಗಳು ವಾರ್ಷಿಕವಾಗಿ 26,000 ರೂ. ಪಾವತಿಸಬೇಕಾಗುತ್ತದೆ. 

- Advertisement -
- Advertisement -

ಸರ್ಕಾರಿ ಸ್ವಾಮ್ಯದಲ್ಲಿರುವ 40 ಐಟಿಐಗಳನ್ನು ಖಾಸಗಿ ಸಂಸ್ಥೆಗಳನ್ನಾಗಿ ಪರಿವರ್ತಿಸುವ ಯೋಗಿ ಆದಿತ್ಯನಾಥ್ ಸರ್ಕಾರದ ನಿರ್ಧಾರದ ವಿರುದ್ಧ ಉತ್ತರಪ್ರದೇಶದಾದ್ಯಂತ ಕೈಗಾರಿಕಾ ತರಬೇತಿ ಸಂಸ್ಥೆಗಳ (ಐಟಿಐ) ವಿದ್ಯಾರ್ಥಿಗಳು ಬೃಹತ್ ಪ್ರತಿಭಟನೆ ನಡೆಸುತ್ತಿದ್ದಾರೆ.

ಉತ್ತರಪ್ರದೇಶದಲ್ಲಿ 3,303 ಕ್ಕೂ ಹೆಚ್ಚು ಐಟಿಐಗಳಿವೆ. ಅದರಲ್ಲಿ 2,931 ಈಗಾಗಲೇ ಖಾಸಗಿ ವಲಯದಲ್ಲಿದ್ದರೆ, ಕೇವಲ 307 ಮಾತ್ರ ಸರ್ಕಾರಿ ಸ್ವಾಮ್ಯದಲ್ಲಿವೆ. ಅದರಲ್ಲಿ 12 ಮಹಿಳೆಯರಿಗೆ ಮಾತ್ರ ಮೀಸಲಾಗಿವೆ.

ಗೋರಖ್‌ಪುರದ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ (ಜಿಐಟಿಐ) ಈ ಖಾಸಗೀಕರಣದ ವಿರುದ್ಧದ ಪ್ರತಿಭಟನೆಯ ಕೇಂದ್ರಬಿಂದುವಾಗಿದೆ. ವಿದ್ಯಾರ್ಥಿಗಳು, ಪೋಷಕರು ಮತ್ತು ಸಿಬ್ಬಂದಿ ವರ್ಗದ ನೇತೃತ್ವದಲ್ಲಿ, ಖಾಸಗೀಕರಣದ ನಿರ್ಧಾರವನ್ನು ಕೈಬಿಡುವಂತೆ ಒತ್ತಾಯಿಸಿ ಮೂರು ದಿನಗಳಿಂದ ಪ್ರತಿಭಟನೆಗಳು ನಡೆಯುತ್ತಿವೆ.

ಭಾನುವಾರ, ನೂರಾರು ವಿದ್ಯಾರ್ಥಿಗಳು ಮುಖ್ಯ ದ್ವಾರದ ಹೊರಗೆ ತರಗತಿಗಳನ್ನು ಬಹಿಷ್ಕರಿಸಿ, ಸರ್ಕಾರದ ನಿರ್ಧಾರವು ಬಡ ವರ್ಗದ ವಿದ್ಯಾರ್ಥಿಗಳಿಗೆ ಅನ್ಯಾಯ ಎಂದು ಪ್ರತಿಭಟಿಸಿದ್ದಾರೆ.

“ಸರ್ಕಾರವು ಅನೇಕ ಅಧ್ಯಾಪಕರನ್ನು ಇತರೆ ಸರ್ಕಾರಿ ಕಾಲೇಜುಗಳಿಗೆ ವರ್ಗಾಯಿಸಿ, ನಾಲ್ಕು ಕೋರ್ಸ್‌ಗಳ ಶುಲ್ಕವನ್ನು 480 ರೂ.ಗಳಿಂದ 26,000 ರೂ.ಗೆ ಹೆಚ್ಚಿಸಿರುವುದರಿಂದ ಅನೇಕ ವಿದ್ಯಾರ್ಥಿಗಳಿಗೆ ಅನ್ಯಾಯವಾಗಿದೆ. ಖಾಸಗಿ ಶಿಕ್ಷಣ ಸಂಸ್ಥೆಗಳು ಕೇವಲ ಲಾಭದತ್ತ ಹೆಚ್ಚು ಗಮನ ಹರಿಸುತ್ತವೆ” ಎಂದು ವಿದ್ಯಾರ್ಥಿ ಅಭಿಷೇಕ್ ಹೇಳಿದ್ದಾರೆ.

ಪ್ರತಿಭಟನೆಯ ಸಂಕೇತವಾಗಿ, ರಾಜ್ಯಾದ್ಯಂತ ಅನೇಕ ಕಾಲೇಜುಗಳ ನೂರಾರು ವಿದ್ಯಾರ್ಥಿಗಳು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ಪತ್ರ‌ಗಳನ್ನು ಕಳುಹಿಸಿದ್ದಾರೆ. ವಿದ್ಯಾರ್ಥಿಗಳು ತಮ್ಮ ತರಗತಿಗಳಿಗೆ ಕಪ್ಪು ಬ್ಯಾಡ್ಜ್‌ಗಳನ್ನು ಧರಿಸಿಕೊಂಡು ಹಾಜರಾಗುತ್ತಿದ್ದಾರೆ.

ಅಲಹಾಬಾದ್‌ನ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ಕೊರಾನ್, ಸರ್ಕಾರಿ ಐಟಿಐ ಬನ್ಸ್‌ಡಿಹ್, ಬಲ್ಲಿಯಾ, ಐಟಿಐ ತಖಾ ಇಟಾವಾ ಮತ್ತು ಪ್ರತಾಪ‌ಗಢದ ಲಾಲ್‌ಗಂಜ್‌ನಲ್ಲಿರುವ ಐಟಿಐ ಕಾಲೇಜುಗಳು ಸೇರಿದಂತೆ, ಇನ್ನೂ ಅನೇಕ ಸರ್ಕಾರಿ ಐಟಿಐ ಕಾಲೇಜುಗಳಿವೆ. ಅಲ್ಲೆಲ್ಲಾ ಪ್ರತಿಭಟನೆಗಳು ತೀವ್ರಗೊಳ್ಳುವ ಸಾಧ್ಯತೆಯಿದೆ ಎಂದು ಕೆಲವು ವಿದ್ಯಾರ್ಥಿಗಳು ತಿಳಿಸಿದ್ದಾರೆ.

ಕಾಲೇಜುಗಳ ಖಾಸಗೀಕರಣವನ್ನು ಎರಡು ಹಂತಗಳಲ್ಲಿ ಮಾಡಲಾಗುತ್ತದೆ. ಮೊದಲ ಹಂತದಲ್ಲಿ 16 ಐಟಿಐಗಳನ್ನು ಖಾಸಗಿ ಖಾಸಗೀಯವರಿಗೆ ಹಸ್ತಾಂತರಿಸಲಾಗಿದ್ದರೆ, 24 ಐಟಿಐಗಳನ್ನು ಎರಡನೇ ಹಂತದಲ್ಲಿ ಹಸ್ತಾಂತರಿಸಲಾಗುತ್ತದೆ.

ಉತ್ತರಪ್ರದೇಶದ ಖಾಸಗಿ ಐಟಿಐ ಸಂಸ್ಥೆಗಳ ಸಂಖ್ಯೆ ಈಗಾಗಲೇ ಸರ್ಕಾರಿ ಸಂಸ್ಥೆಗಳಿಗಿಂತ 10 ಪಟ್ಟು ಹೆಚ್ಚಾಗಿದೆ. ಈ ನಿರ್ಧಾರದ ನಂತರ, ಖಾಸಗಿ ಐಟಿಐಗಳ ಸಂಖ್ಯೆ ಇನ್ನಷ್ಟು ಹೆಚ್ಚಾದರೆಮ ಸರ್ಕಾರಿ ಸ್ವಾಮ್ಯದ ಸಂಸ್ಥೆಗಳ ಬೆರಳೆಣಿಕೆಯಷ್ಟಾಗುತ್ತವೆ.

ಐಟಿಐ ಸಮಿತಿಯ ಪ್ರಸ್ತಾವನೆಯ ನಂತರ ರಾಜ್ಯ ಸರ್ಕಾರವು ಶುಲ್ಕವನ್ನು ಹೆಚ್ಚಿಸುವ ನಿರ್ಧಾರವನ್ನು ತೆಗೆದುಕೊಂಡಿದೆ. ನಿರ್ಧಾರದ ಪ್ರಕಾರ, ಹೊಸ ಅಕಾಡೆಮಿಕ್ ವರ್ಷಕ್ಕೆ (2020 -21) ದಾಖಲಾಗುವ ವಿದ್ಯಾರ್ಥಿಗಳು ಅತಿಯಾದ ಶುಲ್ಕವನ್ನು ಪಾವತಿಸಬೇಕಾಗುತ್ತದೆ.

ಉತ್ತರಪ್ರದೇಶದಲ್ಲಿ ಐಟಿಐನ ಮಾಸಿಕ ಶುಲ್ಕ 40 ರೂ. ಇದ್ದು, ಅದು ವಾರ್ಷಿಕವಾಗಿ 480 ರೂ. ಆಗುತ್ತದೆ. ಆದರೆ, ಖಾಸಗೀಕರಣದ ನಂತರ ವಿದ್ಯಾರ್ಥಿಗಳು ವಾರ್ಷಿಕವಾಗಿ 26,000 ರೂ. ಪಾವತಿಸಬೇಕಾಗುತ್ತದೆ.

ಆದರೆ, ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜುಗಳಲ್ಲಿ ಒಂದು ವರ್ಷದ ಡಿಪ್ಲೊಮಾ ಶುಲ್ಕ ಕೇವಲ 11,000 ರೂ ಇದೆ. ಇದರ ಪರಿಣಾಮವಾಗಿ, ಉತ್ತರ ಪ್ರದೇಶದ ಐಟಿಐಗಳು ಈಗ ಪಾಲಿಟೆಕ್ನಿಕ್ ಕೋರ್ಸ್‌ಗಳಿಗಿಂತ ದುಬಾರಿಯಾಗಲಿದ್ದು, ತಾಂತ್ರಿಕ ಮಟ್ಟದಲ್ಲಿ ಐಟಿಐ ಲೆವೆಲ್ ಒನ್ ಕೋರ್ಸ್ ಆಗಿದೆ.

ಇದನ್ನೂ ಓದಿ: ರೈಲ್ವೇ ಖಾಸಗೀಕರಣಕ್ಕೆ ಚಾಲನೆ: ಮುಂದಿನ ಕರಾಳ ದಿನಗಳಿಗೆ ಹಸಿರು ನಿಶಾನೆ

ಅಧಿಕಾರಿಗಳ ಪ್ರಕಾರ, ತರಬೇತಿ ಗುಣಮಟ್ಟವನ್ನು ಸುಧಾರಿಸಲು ಖಾಸಗೀಕರಣವನ್ನು ಮಾಡಲಾಗುತ್ತಿದೆ ಎಂದು ತಿಳಿದುಬಂದಿದೆ. ಖಾಸಗೀಕರಣದ ನಂತರ ವಿದ್ಯಾರ್ಥಿಗಳಿಗೆ ಅತ್ಯಾಧುನಿಕ ಯಂತ್ರಗಳ ಮೂಲಕ ಹೊಸ ತಂತ್ರಜ್ಞಾನವನ್ನು ಕಲಿಯುವ ಅವಕಾಶ ಸಿಗುತ್ತದೆ ಎಂದು ಹೇಳಲಾಗುತ್ತದೆ. ಆದರೂ, ಎಲ್ಲಾ ಐಟಿಐಗಳ ಪಠ್ಯಕ್ರಮವು ಒಂದೇ ಆಗಿರುತ್ತದೆ.

“ಐಟಿಐನಲ್ಲಿ, ಹೆಚ್ಚಿನ ವಿದ್ಯಾರ್ಥಿಗಳು ದುರ್ಬಲ ವರ್ಗದವರು ಅಥವಾ ಅತ್ಯಂತ ಕಳಪೆ ಹಿನ್ನೆಲೆಯಿಂದ ಬಂದವರೇ ಇದ್ದಾರೆ. ಖಾಸಗೀಕರಣದ ನಂತರ ಅವರು ತಮ್ಮ ಶಿಕ್ಷಣವನ್ನು ಪಡೆಯಲು ಸಾಧ್ಯವಿಲ್ಲ ಎಂದು ಐಟಿಐನ ಶಿಕ್ಷಕ ದುರ್ಗೇಶ್ ಹೇಳಿದ್ದಾಗಿ ನ್ಯೂಸ್ ಕ್ಲಿಕ್ ವರದಿ ಮಾಡಿದೆ.

“ಶುಲ್ಕವು ಮೊದಲು 40 ರೂ. ಇತ್ತು. ಆದರೆ ಖಾಸಗೀಕರಣದ ನಂತರ ಅದು ಸುಮಾರು 480 ರೂ. ಆಗುತ್ತದೆ. ನನ್ನ ತಂದೆ ಗುಜರಾತ್‌ನಲ್ಲಿ ದಿನಗೂಲಿ ಮಾಡುತ್ತಿದ್ದಾರೆ. ಸಾಂಕ್ರಾಮಿಕ ರೋಗದ ನಂತರ ಅವರು ಹಳ್ಳಿಗೆ ಮರಳಿ, ಈಗ ತರಕಾರಿ ಮಾರಾಟ ಮಾಡುತ್ತಿದ್ದಾರೆ. ಆದ್ದರಿಂದ, ನನಗೆ ಶುಲ್ಕವನ್ನು ಪಾವತಿಸಲು ಸಾಧ್ಯವಿಲ್ಲ” ಎಂದು ವಿದ್ಯಾರ್ಥಿಯೊಬ್ಬರು ತಮ್ಮ ಅಳಲು ತೋಡಿಕೊಂಡಿದ್ದಾರೆ.


ಇದನ್ನೂ ಓದಿ: ಭಾರತ್ ಪೆಟ್ರೋಲಿಯಂ ಖಾಸಗೀಕರಣ: ಕೇಂದ್ರದ ನಿರ್ಧಾರದ ವಿರುದ್ಧ ನೌಕರರಿಂದ ಬೃಹತ್‌ ಮುಷ್ಕರಕ್ಕೆ ಸಿದ್ದತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...