Homeರಾಜಕೀಯಇತಿಹಾಸ ತಿಳಿಯದ ಅಹಂಕಾರಿ ಮೋದಿಜಿ..... -ಎಚ್.ಎಸ್. ದೊರೆಸ್ವಾಮಿ

ಇತಿಹಾಸ ತಿಳಿಯದ ಅಹಂಕಾರಿ ಮೋದಿಜಿ….. -ಎಚ್.ಎಸ್. ದೊರೆಸ್ವಾಮಿ

- Advertisement -
ಇತಿಹಾಸ ತಿಳಿಯದ ಅಹಂಕಾರಿ ಮೋದಿಜಿ
-ಎಚ್.ಎಸ್. ದೊರೆಸ್ವಾಮಿ
ಭಾರತದ ಸ್ವಾತಂತ್ರ್ಯ ಸಂಗ್ರಾಮಕ್ಕೆ ಮಹಾತ್ಮಾ ಗಾಂಧಿಯವರ ಕೊಡುಗೆ ಅಪಾರ. ಅವರು ಕಾಂಗ್ರೆಸ್ ಸೇರುವುದಕ್ಕೆ ಮೊದಲು ಕಾಂಗ್ರೆಸ್ ಒಂದು ‘ಕ್ಲಾಸ್ ಮೂವ್‍ಮೆಂಟ್’ ಆಗಿತ್ತು. ಆದರೆ ಅವರೆಲ್ಲ ಜನನಾಯಕರು, ವಿಚಾರವಂತರು, ಅಧಿಕಾರ ದಾಹ ಇಲ್ಲದವರು. ಕೊಲೆ-ಸುಲಿಗೆಯನ್ನು ಅರಿಯದ ಮಹನೀಯರಾಗಿದ್ದರು. ಇಂಗ್ಲಿಷರು ಕೂಡ ಅವರ ಬಗ್ಗೆ ಅಪಾರ ಗೌರವ ಇರಿಸಿಕೊಂಡಿದ್ದರು. ಮನವಿಪತ್ರ (ಮೆಮೋರಾಂಡಮ್) ನೀಡುವುದರ ಮೂಲಕವೇ ಭಾರತೀಯರಿಗೆ ಅನೇಕ ಅಧಿಕಾರ ಕೊಡಿಸಿದರು. ಆಗಿನ ಸ್ವಾತಂತ್ರ್ಯ ಸಂಗ್ರಾಮ ಸೀಮಿತವಾಗಿತ್ತು.
ಮಹಾತ್ಮಾ ಗಾಂಧಿಯವರು ಕಾಂಗ್ರೆಸಿನ ನಾಯಕತ್ವ ವಹಿಸಿಕೊಳ್ಳುವ ಮೊದಲು ಅವರ ಗುರು ಸ್ಥಾನದಲ್ಲಿದ್ದ ಗೋಪಾಲಕೃಷ್ಣ ಗೋಖಲೆಯವರನ್ನು ಭೇಟಿ ಮಾಡಿದರು. ಗೋಖಲೆಯವರು ಹೇಳಿದರು: “ಮುಂದೆ ನೀನು ಭಾರತ ರಾಷ್ಟ್ರೀಯ ಕಾಂಗ್ರೆಸಿನ ಚುಕ್ಕಾಣಿ ಹಿಡಿಯುವವನಿದ್ದೀಯೆ. ಅದಕ್ಕೆ ಮೊದಲು ನೀನು 3ನೇ ದರ್ಜೆ ರೈಲ್ವೆ ಡಬ್ಬಿಯಲ್ಲಿ ಕೂತು ಭಾರತವನ್ನು ಸುತ್ತಿ ಬಾ. ಭಾರತೀಯರು ಯಾವ ದುರವಸ್ಥೆಯಲ್ಲಿದ್ದಾರೆ, ಅದನ್ನು ಕಣ್ಣಾರೆ ಕಂಡು ಬಾ. ಆನಂತರ ಹೇಗೆ ಕಾಂಗ್ರೆಸನ್ನು ರೂಪಿಸಬೇಕು ಎಂದು ವಿಚಾರ ಮಾಡು.”
ಗಾಂಧೀಜಿ ಭಾರತ ಯಾತ್ರೆ ಆರಂಭ ಮಾಡಿದರು. ಭಾರತೀಯರ ಬಡತನವನ್ನು, ಅವರ ಮೇಲಾಗುತ್ತಿರುವ ಶೋಷಣೆ, ದಬ್ಬಾಳಿಕೆಯನ್ನು ಕಣ್ಣಾರೆ ಕಂಡು ಮಮ್ಮಲ ಮರುಗಿದರು. ನಾನು ಈ ದುರ್ದೈವಿ ಬಡಜನರ ಪ್ರತಿನಿಧಿಯಾಗಬೇಕಾದರೆ ನಾನೂ ಅವರಂತೆಯೇ ಜೀವನ ತೂಗಿಸಬೇಕಲ್ಲವೆ? ಸರಳತೆಯನ್ನು ಅಭ್ಯಾಸ ಮಾಡಬೇಕು. ಸ್ವಯಂ-ಪ್ರೇರಣೆಯಿಂದ ಬಡತನ ಅಪ್ಪಿಕೊಳ್ಳಬೇಕು ಎಂದು ದೃಢಸಂಕಲ್ಪ ಮಾಡಿದರು. ನುಡಿದಂತೆ ನಡೆದರು.
ಸ್ವಾತಂತ್ರ್ಯ ಸಂಗ್ರಾಮದ ಸ್ವರೂಪವನ್ನು ಕಾಲಕ್ರಮೇಣ ಬದಲಾಯಿಸಿದರು. ‘ಕ್ಲಾಸ್‍ವಾರ್  (ಛಿಟಚಿss ತಿಚಿಡಿ)’ ಆಗಿದ್ದ ಹೋರಾಟವನ್ನು ‘ಮಾಸ್‍ವಾರ್ (mಚಿss ತಿಚಿಡಿ)’ ಹೋರಾಟವನ್ನಾಗಿ ಮಾರ್ಪಡಿಸಿ ಜನಸಾಮಾನ್ಯರೂ ಸ್ವಾತಂತ್ರ್ಯ ಸಂಗ್ರಾಮದಲ್ಲಿ ತೊಡಗಿಕೊಳ್ಳುವಂತೆ ಮಾಡಿದರು. ಬಡತನ ನಿರ್ಮೂಲನೆ ತನ್ನ ಆದ್ಯತೆ ಎಂದರು. 
ಗುಜರಾತಿನ ಜನ ಸ್ವಾತಂತ್ರ್ಯಕ್ಕಾಗಿ ಬಹಳ ತ್ಯಾಗ, ಬಲಿದಾನಗಳನ್ನು ಮಾಡಿದ್ದಾರೆ. ಮಹಾತ್ಮಾ ಗಾಂಧಿ, ವಲ್ಲಭಭಾಯಿ ಪಟೇಲ್, ವಿಠ್ಠಲಭಾಯಿ ಪಟೇಲ್, ಮೊರಾರ್ಜಿ ದೇಸಾಯಿ, ಮಹದೇವ ದೇಸಾಯಿ ಮುಂತಾದ ಮಹಾ ಪುರುಷರಿಗೆ ಜನ್ಮವಿತ್ತ ನಾಡು ಗುಜರಾತು. ಗಾಂಧೀಜಿ ಭಾರತವನ್ನು ಗುಲಾಮಗಿರಿಯಿಂದ ಪಾರು ಮಾಡಲು ತಮ್ಮ ಪ್ರಾಣವನ್ನೇ ಪಣವಾಗಿಟ್ಟರು. ಸರ್ದಾರ್ ಪಟೇಲರು 565 ರಾಜರುಗಳನ್ನು ಸಿಂಹಾಸನದಿಂದ ಕೆಳಗಿಳಿಸಿ ಅಖಂಡ ಭಾರತವನ್ನು ರೂಪಿಸಿದರು. ಸತ್ಯ, ಅಹಿಂಸೆ ಆಚರಣೆಯಿಂದ ಸ್ವರಾಜ್ಯ ಸ್ಥಾಪನೆ ಮಾಡಿದರು. ಈ ಇತಿಹಾಸ ಮೋದಿಜಿಗೆ ತಿಳಿದಿರಲಿಕ್ಕಿಲ್ಲ.
ಸ್ವಾತಂತ್ರ್ಯ ಪ್ರಾಪ್ತವಾದ ಕೂಡಲೇ ಕಾಂಗ್ರೆಸ್ಸನ್ನು ವಿಸರ್ಜನೆ ಮಾಡಬೇಕೆಂದರು ಗಾಂಧೀಜಿ. ದೇಶದ ಸ್ವಾತಂತ್ರ್ಯಕ್ಕಾಗಿ ತ್ಯಾಗ ಬಲಿದಾನ ಮಾಡಿದ ಕಾಂಗ್ರೆಸ್ ಸಂಸ್ಥೆ ಅಧಿಕಾರಕ್ಕಾಗಿ ಹಾತೊರೆಯದೆ ಒಂದು ಆದರ್ಶ ಸಂಸ್ಥೆಯಾಗಿ ಚಿರಸ್ಥಾಯಿಯಾಗಿ ಉಳಿಯಲಿ ಎಂಬುದು ಗಾಂಧೀಜಿಯವರ ಆಶಯವಾಗಿತ್ತು.
ಅಜ್ಞಾನಿ ಮೋದಿ ಅಂದುಕೊಂಡಿದ್ದಾರೆ: ‘ಭಾರತವನ್ನು ಮೋದಿಜಿಗೆ ಬಿಟ್ಟುಕೊಡಲೆಂದೇ ಗಾಂಧೀಜಿ ಕಾಂಗ್ರೆಸ್ಸನ್ನು ವಿಸರ್ಜನೆ ಮಾಡಲು ಹೇಳಿದ್ದಾರೆ’- “ಕಾಂಗ್ರೆಸ್ಸನ್ನು ಸರ್ವನಾಶ ಮಾಡುವುದೇ ನನ್ನ ಗುರಿ!” ಆದ್ದರಿಂದ ಅದನ್ನು ನಾಮಾವಶೇಷ ಮಾಡುವುದೇ ಇರುವ ಏಕೈಕ ಮಾರ್ಗ ಎನ್ನುತ್ತಾರೆ ಮೋದಿಜಿ. ಸರ್ವನಾಶ ಮಾಡಬೇಕೆಂದು ಹೊರಟ ರಾಕ್ಷಸರು ತಾವೇ ಸರ್ವನಾಶವಾದರು ಎಂದು ಪುರಾಣಗಳು ಹೇಳುತ್ತವೆ.
ಪ್ರಧಾನಿಯಾಗುವ ಆತುರದಲ್ಲಿ ಮೋದಿಜಿಗೆ ಇತಿಹಾಸ ಓದಲು ಪುರುಸೊತ್ತಿಲ್ಲವಾದರೂ, ಅವರಲ್ಲಿ ಮೌಢ್ಯ ಮತ್ತು ಅಧಿಕಾರ ಪಿಪಾಸೆ ಯಥೇಚ್ಛವಾಗಿದೆ!
ಗಾಂಧೀಜಿ ಕಾಂಗ್ರೆಸ್ಸನ್ನು ವಿಸರ್ಜನೆ ಮಾಡಲು ಏಕೆ ಹೇಳಿದರು? ಸ್ವಾತಂತ್ರ್ಯ ಪಡೆಯಲು ಬಲಿದಾನ ಮಾಡಿದ ಸಂಸ್ಥೆ, ದೇಶದಿಂದ ಇಂಗ್ಲಿಷರನ್ನು ಓಡಿಸಿ ಗುಲಾಮಗಿರಿಯಿಂದ ಭಾರತವನ್ನು ಪಾರು ಮಾಡಿದ ಕಾಂಗ್ರೆಸ್ ಸಂಸ್ಥೆಯ ಮುಂಚೂಣಿಯಲ್ಲಿರುವವರಿಗೆ ಸತತವಾಗಿ ಅಧಿಕಾರದಲ್ಲಿರಬೇಕು, ಅಧಿಕಾರ ಅನುಭವಿಸಬೇಕು ಎಂಬ ಹಂಬಲ ಸಹಜವಾಗಿಯೇ ಇರುತ್ತದೆ. ಕಾಂಗ್ರೆಸ್ ಅಧಿಕಾರ ದಾಹ ಬಿಟ್ಟು ರಾಜಕೀಯದಿಂದ ನಿವೃತ್ತಿ ಆಗಿ ಲೋಕಸೇವಾ ಸಂಘವಾಗಿ ಪರಿವರ್ತನೆಯಾಗಬೇಕು. ದುರಾಡಳಿತ ನಡೆಸುವ ಸರ್ಕಾರ ಮತ್ತು ಪಕ್ಷದ ಮೇಲೆ ಸಂಘರ್ಷ ನಡೆಸಬೇಕು.
ಭಾರತಕ್ಕೆ ಸ್ವಾತಂತ್ರ್ಯ ಪ್ರಾಪ್ತವಾದ ಕೂಡಲೇ ಕಾಂಗ್ರೆಸ್ಸನ್ನು ವಿಸರ್ಜನೆ ಮಾಡಲು ಗಾಂಧೀಜಿ ಹೇಳಿದ್ದು ಮೇಲಿನ ಕಾರಣಗಳಿಗಾಗಿ. ಕಾಂಗ್ರೆಸ್ ಧುರೀಣರು ಗಾಂಧೀಜಿಯವರ ಈ ಮಾತನ್ನು ಕೇಳಲಿಲ್ಲ. ಗಾಂಧೀಜಿ ಏಕೆ ಈ ಮಾತನ್ನು ಹೇಳಿದರು ಎಂಬುದು ಗೊತ್ತಿಲ್ಲ ಎಂದು ಮೋದಿಜೀ ಹೇಳುತ್ತಾರೆ.
ಇತಿಹಾಸದ ಅರಿವಿಲ್ಲದ ಮೋದಿಜಿಗೆ ಗಾಂಧೀಜಿಯವರ ಹಿರಿತನ, ಯೋಗ್ಯತೆ ಅರ್ಥವಾಗಿಲ್ಲ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...