Homeರಾಜಕೀಯಇತಿಹಾಸ ತಿಳಿಯದ ಅಹಂಕಾರಿ ಮೋದಿಜಿ..... -ಎಚ್.ಎಸ್. ದೊರೆಸ್ವಾಮಿ

ಇತಿಹಾಸ ತಿಳಿಯದ ಅಹಂಕಾರಿ ಮೋದಿಜಿ….. -ಎಚ್.ಎಸ್. ದೊರೆಸ್ವಾಮಿ

- Advertisement -
ಇತಿಹಾಸ ತಿಳಿಯದ ಅಹಂಕಾರಿ ಮೋದಿಜಿ
-ಎಚ್.ಎಸ್. ದೊರೆಸ್ವಾಮಿ
ಭಾರತದ ಸ್ವಾತಂತ್ರ್ಯ ಸಂಗ್ರಾಮಕ್ಕೆ ಮಹಾತ್ಮಾ ಗಾಂಧಿಯವರ ಕೊಡುಗೆ ಅಪಾರ. ಅವರು ಕಾಂಗ್ರೆಸ್ ಸೇರುವುದಕ್ಕೆ ಮೊದಲು ಕಾಂಗ್ರೆಸ್ ಒಂದು ‘ಕ್ಲಾಸ್ ಮೂವ್‍ಮೆಂಟ್’ ಆಗಿತ್ತು. ಆದರೆ ಅವರೆಲ್ಲ ಜನನಾಯಕರು, ವಿಚಾರವಂತರು, ಅಧಿಕಾರ ದಾಹ ಇಲ್ಲದವರು. ಕೊಲೆ-ಸುಲಿಗೆಯನ್ನು ಅರಿಯದ ಮಹನೀಯರಾಗಿದ್ದರು. ಇಂಗ್ಲಿಷರು ಕೂಡ ಅವರ ಬಗ್ಗೆ ಅಪಾರ ಗೌರವ ಇರಿಸಿಕೊಂಡಿದ್ದರು. ಮನವಿಪತ್ರ (ಮೆಮೋರಾಂಡಮ್) ನೀಡುವುದರ ಮೂಲಕವೇ ಭಾರತೀಯರಿಗೆ ಅನೇಕ ಅಧಿಕಾರ ಕೊಡಿಸಿದರು. ಆಗಿನ ಸ್ವಾತಂತ್ರ್ಯ ಸಂಗ್ರಾಮ ಸೀಮಿತವಾಗಿತ್ತು.
ಮಹಾತ್ಮಾ ಗಾಂಧಿಯವರು ಕಾಂಗ್ರೆಸಿನ ನಾಯಕತ್ವ ವಹಿಸಿಕೊಳ್ಳುವ ಮೊದಲು ಅವರ ಗುರು ಸ್ಥಾನದಲ್ಲಿದ್ದ ಗೋಪಾಲಕೃಷ್ಣ ಗೋಖಲೆಯವರನ್ನು ಭೇಟಿ ಮಾಡಿದರು. ಗೋಖಲೆಯವರು ಹೇಳಿದರು: “ಮುಂದೆ ನೀನು ಭಾರತ ರಾಷ್ಟ್ರೀಯ ಕಾಂಗ್ರೆಸಿನ ಚುಕ್ಕಾಣಿ ಹಿಡಿಯುವವನಿದ್ದೀಯೆ. ಅದಕ್ಕೆ ಮೊದಲು ನೀನು 3ನೇ ದರ್ಜೆ ರೈಲ್ವೆ ಡಬ್ಬಿಯಲ್ಲಿ ಕೂತು ಭಾರತವನ್ನು ಸುತ್ತಿ ಬಾ. ಭಾರತೀಯರು ಯಾವ ದುರವಸ್ಥೆಯಲ್ಲಿದ್ದಾರೆ, ಅದನ್ನು ಕಣ್ಣಾರೆ ಕಂಡು ಬಾ. ಆನಂತರ ಹೇಗೆ ಕಾಂಗ್ರೆಸನ್ನು ರೂಪಿಸಬೇಕು ಎಂದು ವಿಚಾರ ಮಾಡು.”
ಗಾಂಧೀಜಿ ಭಾರತ ಯಾತ್ರೆ ಆರಂಭ ಮಾಡಿದರು. ಭಾರತೀಯರ ಬಡತನವನ್ನು, ಅವರ ಮೇಲಾಗುತ್ತಿರುವ ಶೋಷಣೆ, ದಬ್ಬಾಳಿಕೆಯನ್ನು ಕಣ್ಣಾರೆ ಕಂಡು ಮಮ್ಮಲ ಮರುಗಿದರು. ನಾನು ಈ ದುರ್ದೈವಿ ಬಡಜನರ ಪ್ರತಿನಿಧಿಯಾಗಬೇಕಾದರೆ ನಾನೂ ಅವರಂತೆಯೇ ಜೀವನ ತೂಗಿಸಬೇಕಲ್ಲವೆ? ಸರಳತೆಯನ್ನು ಅಭ್ಯಾಸ ಮಾಡಬೇಕು. ಸ್ವಯಂ-ಪ್ರೇರಣೆಯಿಂದ ಬಡತನ ಅಪ್ಪಿಕೊಳ್ಳಬೇಕು ಎಂದು ದೃಢಸಂಕಲ್ಪ ಮಾಡಿದರು. ನುಡಿದಂತೆ ನಡೆದರು.
ಸ್ವಾತಂತ್ರ್ಯ ಸಂಗ್ರಾಮದ ಸ್ವರೂಪವನ್ನು ಕಾಲಕ್ರಮೇಣ ಬದಲಾಯಿಸಿದರು. ‘ಕ್ಲಾಸ್‍ವಾರ್  (ಛಿಟಚಿss ತಿಚಿಡಿ)’ ಆಗಿದ್ದ ಹೋರಾಟವನ್ನು ‘ಮಾಸ್‍ವಾರ್ (mಚಿss ತಿಚಿಡಿ)’ ಹೋರಾಟವನ್ನಾಗಿ ಮಾರ್ಪಡಿಸಿ ಜನಸಾಮಾನ್ಯರೂ ಸ್ವಾತಂತ್ರ್ಯ ಸಂಗ್ರಾಮದಲ್ಲಿ ತೊಡಗಿಕೊಳ್ಳುವಂತೆ ಮಾಡಿದರು. ಬಡತನ ನಿರ್ಮೂಲನೆ ತನ್ನ ಆದ್ಯತೆ ಎಂದರು. 
ಗುಜರಾತಿನ ಜನ ಸ್ವಾತಂತ್ರ್ಯಕ್ಕಾಗಿ ಬಹಳ ತ್ಯಾಗ, ಬಲಿದಾನಗಳನ್ನು ಮಾಡಿದ್ದಾರೆ. ಮಹಾತ್ಮಾ ಗಾಂಧಿ, ವಲ್ಲಭಭಾಯಿ ಪಟೇಲ್, ವಿಠ್ಠಲಭಾಯಿ ಪಟೇಲ್, ಮೊರಾರ್ಜಿ ದೇಸಾಯಿ, ಮಹದೇವ ದೇಸಾಯಿ ಮುಂತಾದ ಮಹಾ ಪುರುಷರಿಗೆ ಜನ್ಮವಿತ್ತ ನಾಡು ಗುಜರಾತು. ಗಾಂಧೀಜಿ ಭಾರತವನ್ನು ಗುಲಾಮಗಿರಿಯಿಂದ ಪಾರು ಮಾಡಲು ತಮ್ಮ ಪ್ರಾಣವನ್ನೇ ಪಣವಾಗಿಟ್ಟರು. ಸರ್ದಾರ್ ಪಟೇಲರು 565 ರಾಜರುಗಳನ್ನು ಸಿಂಹಾಸನದಿಂದ ಕೆಳಗಿಳಿಸಿ ಅಖಂಡ ಭಾರತವನ್ನು ರೂಪಿಸಿದರು. ಸತ್ಯ, ಅಹಿಂಸೆ ಆಚರಣೆಯಿಂದ ಸ್ವರಾಜ್ಯ ಸ್ಥಾಪನೆ ಮಾಡಿದರು. ಈ ಇತಿಹಾಸ ಮೋದಿಜಿಗೆ ತಿಳಿದಿರಲಿಕ್ಕಿಲ್ಲ.
ಸ್ವಾತಂತ್ರ್ಯ ಪ್ರಾಪ್ತವಾದ ಕೂಡಲೇ ಕಾಂಗ್ರೆಸ್ಸನ್ನು ವಿಸರ್ಜನೆ ಮಾಡಬೇಕೆಂದರು ಗಾಂಧೀಜಿ. ದೇಶದ ಸ್ವಾತಂತ್ರ್ಯಕ್ಕಾಗಿ ತ್ಯಾಗ ಬಲಿದಾನ ಮಾಡಿದ ಕಾಂಗ್ರೆಸ್ ಸಂಸ್ಥೆ ಅಧಿಕಾರಕ್ಕಾಗಿ ಹಾತೊರೆಯದೆ ಒಂದು ಆದರ್ಶ ಸಂಸ್ಥೆಯಾಗಿ ಚಿರಸ್ಥಾಯಿಯಾಗಿ ಉಳಿಯಲಿ ಎಂಬುದು ಗಾಂಧೀಜಿಯವರ ಆಶಯವಾಗಿತ್ತು.
ಅಜ್ಞಾನಿ ಮೋದಿ ಅಂದುಕೊಂಡಿದ್ದಾರೆ: ‘ಭಾರತವನ್ನು ಮೋದಿಜಿಗೆ ಬಿಟ್ಟುಕೊಡಲೆಂದೇ ಗಾಂಧೀಜಿ ಕಾಂಗ್ರೆಸ್ಸನ್ನು ವಿಸರ್ಜನೆ ಮಾಡಲು ಹೇಳಿದ್ದಾರೆ’- “ಕಾಂಗ್ರೆಸ್ಸನ್ನು ಸರ್ವನಾಶ ಮಾಡುವುದೇ ನನ್ನ ಗುರಿ!” ಆದ್ದರಿಂದ ಅದನ್ನು ನಾಮಾವಶೇಷ ಮಾಡುವುದೇ ಇರುವ ಏಕೈಕ ಮಾರ್ಗ ಎನ್ನುತ್ತಾರೆ ಮೋದಿಜಿ. ಸರ್ವನಾಶ ಮಾಡಬೇಕೆಂದು ಹೊರಟ ರಾಕ್ಷಸರು ತಾವೇ ಸರ್ವನಾಶವಾದರು ಎಂದು ಪುರಾಣಗಳು ಹೇಳುತ್ತವೆ.
ಪ್ರಧಾನಿಯಾಗುವ ಆತುರದಲ್ಲಿ ಮೋದಿಜಿಗೆ ಇತಿಹಾಸ ಓದಲು ಪುರುಸೊತ್ತಿಲ್ಲವಾದರೂ, ಅವರಲ್ಲಿ ಮೌಢ್ಯ ಮತ್ತು ಅಧಿಕಾರ ಪಿಪಾಸೆ ಯಥೇಚ್ಛವಾಗಿದೆ!
ಗಾಂಧೀಜಿ ಕಾಂಗ್ರೆಸ್ಸನ್ನು ವಿಸರ್ಜನೆ ಮಾಡಲು ಏಕೆ ಹೇಳಿದರು? ಸ್ವಾತಂತ್ರ್ಯ ಪಡೆಯಲು ಬಲಿದಾನ ಮಾಡಿದ ಸಂಸ್ಥೆ, ದೇಶದಿಂದ ಇಂಗ್ಲಿಷರನ್ನು ಓಡಿಸಿ ಗುಲಾಮಗಿರಿಯಿಂದ ಭಾರತವನ್ನು ಪಾರು ಮಾಡಿದ ಕಾಂಗ್ರೆಸ್ ಸಂಸ್ಥೆಯ ಮುಂಚೂಣಿಯಲ್ಲಿರುವವರಿಗೆ ಸತತವಾಗಿ ಅಧಿಕಾರದಲ್ಲಿರಬೇಕು, ಅಧಿಕಾರ ಅನುಭವಿಸಬೇಕು ಎಂಬ ಹಂಬಲ ಸಹಜವಾಗಿಯೇ ಇರುತ್ತದೆ. ಕಾಂಗ್ರೆಸ್ ಅಧಿಕಾರ ದಾಹ ಬಿಟ್ಟು ರಾಜಕೀಯದಿಂದ ನಿವೃತ್ತಿ ಆಗಿ ಲೋಕಸೇವಾ ಸಂಘವಾಗಿ ಪರಿವರ್ತನೆಯಾಗಬೇಕು. ದುರಾಡಳಿತ ನಡೆಸುವ ಸರ್ಕಾರ ಮತ್ತು ಪಕ್ಷದ ಮೇಲೆ ಸಂಘರ್ಷ ನಡೆಸಬೇಕು.
ಭಾರತಕ್ಕೆ ಸ್ವಾತಂತ್ರ್ಯ ಪ್ರಾಪ್ತವಾದ ಕೂಡಲೇ ಕಾಂಗ್ರೆಸ್ಸನ್ನು ವಿಸರ್ಜನೆ ಮಾಡಲು ಗಾಂಧೀಜಿ ಹೇಳಿದ್ದು ಮೇಲಿನ ಕಾರಣಗಳಿಗಾಗಿ. ಕಾಂಗ್ರೆಸ್ ಧುರೀಣರು ಗಾಂಧೀಜಿಯವರ ಈ ಮಾತನ್ನು ಕೇಳಲಿಲ್ಲ. ಗಾಂಧೀಜಿ ಏಕೆ ಈ ಮಾತನ್ನು ಹೇಳಿದರು ಎಂಬುದು ಗೊತ್ತಿಲ್ಲ ಎಂದು ಮೋದಿಜೀ ಹೇಳುತ್ತಾರೆ.
ಇತಿಹಾಸದ ಅರಿವಿಲ್ಲದ ಮೋದಿಜಿಗೆ ಗಾಂಧೀಜಿಯವರ ಹಿರಿತನ, ಯೋಗ್ಯತೆ ಅರ್ಥವಾಗಿಲ್ಲ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....