Homeರಾಜಕೀಯಇತಿಹಾಸ ತಿಳಿಯದ ಅಹಂಕಾರಿ ಮೋದಿಜಿ..... -ಎಚ್.ಎಸ್. ದೊರೆಸ್ವಾಮಿ

ಇತಿಹಾಸ ತಿಳಿಯದ ಅಹಂಕಾರಿ ಮೋದಿಜಿ….. -ಎಚ್.ಎಸ್. ದೊರೆಸ್ವಾಮಿ

- Advertisement -
ಇತಿಹಾಸ ತಿಳಿಯದ ಅಹಂಕಾರಿ ಮೋದಿಜಿ
-ಎಚ್.ಎಸ್. ದೊರೆಸ್ವಾಮಿ
ಭಾರತದ ಸ್ವಾತಂತ್ರ್ಯ ಸಂಗ್ರಾಮಕ್ಕೆ ಮಹಾತ್ಮಾ ಗಾಂಧಿಯವರ ಕೊಡುಗೆ ಅಪಾರ. ಅವರು ಕಾಂಗ್ರೆಸ್ ಸೇರುವುದಕ್ಕೆ ಮೊದಲು ಕಾಂಗ್ರೆಸ್ ಒಂದು ‘ಕ್ಲಾಸ್ ಮೂವ್‍ಮೆಂಟ್’ ಆಗಿತ್ತು. ಆದರೆ ಅವರೆಲ್ಲ ಜನನಾಯಕರು, ವಿಚಾರವಂತರು, ಅಧಿಕಾರ ದಾಹ ಇಲ್ಲದವರು. ಕೊಲೆ-ಸುಲಿಗೆಯನ್ನು ಅರಿಯದ ಮಹನೀಯರಾಗಿದ್ದರು. ಇಂಗ್ಲಿಷರು ಕೂಡ ಅವರ ಬಗ್ಗೆ ಅಪಾರ ಗೌರವ ಇರಿಸಿಕೊಂಡಿದ್ದರು. ಮನವಿಪತ್ರ (ಮೆಮೋರಾಂಡಮ್) ನೀಡುವುದರ ಮೂಲಕವೇ ಭಾರತೀಯರಿಗೆ ಅನೇಕ ಅಧಿಕಾರ ಕೊಡಿಸಿದರು. ಆಗಿನ ಸ್ವಾತಂತ್ರ್ಯ ಸಂಗ್ರಾಮ ಸೀಮಿತವಾಗಿತ್ತು.
ಮಹಾತ್ಮಾ ಗಾಂಧಿಯವರು ಕಾಂಗ್ರೆಸಿನ ನಾಯಕತ್ವ ವಹಿಸಿಕೊಳ್ಳುವ ಮೊದಲು ಅವರ ಗುರು ಸ್ಥಾನದಲ್ಲಿದ್ದ ಗೋಪಾಲಕೃಷ್ಣ ಗೋಖಲೆಯವರನ್ನು ಭೇಟಿ ಮಾಡಿದರು. ಗೋಖಲೆಯವರು ಹೇಳಿದರು: “ಮುಂದೆ ನೀನು ಭಾರತ ರಾಷ್ಟ್ರೀಯ ಕಾಂಗ್ರೆಸಿನ ಚುಕ್ಕಾಣಿ ಹಿಡಿಯುವವನಿದ್ದೀಯೆ. ಅದಕ್ಕೆ ಮೊದಲು ನೀನು 3ನೇ ದರ್ಜೆ ರೈಲ್ವೆ ಡಬ್ಬಿಯಲ್ಲಿ ಕೂತು ಭಾರತವನ್ನು ಸುತ್ತಿ ಬಾ. ಭಾರತೀಯರು ಯಾವ ದುರವಸ್ಥೆಯಲ್ಲಿದ್ದಾರೆ, ಅದನ್ನು ಕಣ್ಣಾರೆ ಕಂಡು ಬಾ. ಆನಂತರ ಹೇಗೆ ಕಾಂಗ್ರೆಸನ್ನು ರೂಪಿಸಬೇಕು ಎಂದು ವಿಚಾರ ಮಾಡು.”
ಗಾಂಧೀಜಿ ಭಾರತ ಯಾತ್ರೆ ಆರಂಭ ಮಾಡಿದರು. ಭಾರತೀಯರ ಬಡತನವನ್ನು, ಅವರ ಮೇಲಾಗುತ್ತಿರುವ ಶೋಷಣೆ, ದಬ್ಬಾಳಿಕೆಯನ್ನು ಕಣ್ಣಾರೆ ಕಂಡು ಮಮ್ಮಲ ಮರುಗಿದರು. ನಾನು ಈ ದುರ್ದೈವಿ ಬಡಜನರ ಪ್ರತಿನಿಧಿಯಾಗಬೇಕಾದರೆ ನಾನೂ ಅವರಂತೆಯೇ ಜೀವನ ತೂಗಿಸಬೇಕಲ್ಲವೆ? ಸರಳತೆಯನ್ನು ಅಭ್ಯಾಸ ಮಾಡಬೇಕು. ಸ್ವಯಂ-ಪ್ರೇರಣೆಯಿಂದ ಬಡತನ ಅಪ್ಪಿಕೊಳ್ಳಬೇಕು ಎಂದು ದೃಢಸಂಕಲ್ಪ ಮಾಡಿದರು. ನುಡಿದಂತೆ ನಡೆದರು.
ಸ್ವಾತಂತ್ರ್ಯ ಸಂಗ್ರಾಮದ ಸ್ವರೂಪವನ್ನು ಕಾಲಕ್ರಮೇಣ ಬದಲಾಯಿಸಿದರು. ‘ಕ್ಲಾಸ್‍ವಾರ್  (ಛಿಟಚಿss ತಿಚಿಡಿ)’ ಆಗಿದ್ದ ಹೋರಾಟವನ್ನು ‘ಮಾಸ್‍ವಾರ್ (mಚಿss ತಿಚಿಡಿ)’ ಹೋರಾಟವನ್ನಾಗಿ ಮಾರ್ಪಡಿಸಿ ಜನಸಾಮಾನ್ಯರೂ ಸ್ವಾತಂತ್ರ್ಯ ಸಂಗ್ರಾಮದಲ್ಲಿ ತೊಡಗಿಕೊಳ್ಳುವಂತೆ ಮಾಡಿದರು. ಬಡತನ ನಿರ್ಮೂಲನೆ ತನ್ನ ಆದ್ಯತೆ ಎಂದರು. 
ಗುಜರಾತಿನ ಜನ ಸ್ವಾತಂತ್ರ್ಯಕ್ಕಾಗಿ ಬಹಳ ತ್ಯಾಗ, ಬಲಿದಾನಗಳನ್ನು ಮಾಡಿದ್ದಾರೆ. ಮಹಾತ್ಮಾ ಗಾಂಧಿ, ವಲ್ಲಭಭಾಯಿ ಪಟೇಲ್, ವಿಠ್ಠಲಭಾಯಿ ಪಟೇಲ್, ಮೊರಾರ್ಜಿ ದೇಸಾಯಿ, ಮಹದೇವ ದೇಸಾಯಿ ಮುಂತಾದ ಮಹಾ ಪುರುಷರಿಗೆ ಜನ್ಮವಿತ್ತ ನಾಡು ಗುಜರಾತು. ಗಾಂಧೀಜಿ ಭಾರತವನ್ನು ಗುಲಾಮಗಿರಿಯಿಂದ ಪಾರು ಮಾಡಲು ತಮ್ಮ ಪ್ರಾಣವನ್ನೇ ಪಣವಾಗಿಟ್ಟರು. ಸರ್ದಾರ್ ಪಟೇಲರು 565 ರಾಜರುಗಳನ್ನು ಸಿಂಹಾಸನದಿಂದ ಕೆಳಗಿಳಿಸಿ ಅಖಂಡ ಭಾರತವನ್ನು ರೂಪಿಸಿದರು. ಸತ್ಯ, ಅಹಿಂಸೆ ಆಚರಣೆಯಿಂದ ಸ್ವರಾಜ್ಯ ಸ್ಥಾಪನೆ ಮಾಡಿದರು. ಈ ಇತಿಹಾಸ ಮೋದಿಜಿಗೆ ತಿಳಿದಿರಲಿಕ್ಕಿಲ್ಲ.
ಸ್ವಾತಂತ್ರ್ಯ ಪ್ರಾಪ್ತವಾದ ಕೂಡಲೇ ಕಾಂಗ್ರೆಸ್ಸನ್ನು ವಿಸರ್ಜನೆ ಮಾಡಬೇಕೆಂದರು ಗಾಂಧೀಜಿ. ದೇಶದ ಸ್ವಾತಂತ್ರ್ಯಕ್ಕಾಗಿ ತ್ಯಾಗ ಬಲಿದಾನ ಮಾಡಿದ ಕಾಂಗ್ರೆಸ್ ಸಂಸ್ಥೆ ಅಧಿಕಾರಕ್ಕಾಗಿ ಹಾತೊರೆಯದೆ ಒಂದು ಆದರ್ಶ ಸಂಸ್ಥೆಯಾಗಿ ಚಿರಸ್ಥಾಯಿಯಾಗಿ ಉಳಿಯಲಿ ಎಂಬುದು ಗಾಂಧೀಜಿಯವರ ಆಶಯವಾಗಿತ್ತು.
ಅಜ್ಞಾನಿ ಮೋದಿ ಅಂದುಕೊಂಡಿದ್ದಾರೆ: ‘ಭಾರತವನ್ನು ಮೋದಿಜಿಗೆ ಬಿಟ್ಟುಕೊಡಲೆಂದೇ ಗಾಂಧೀಜಿ ಕಾಂಗ್ರೆಸ್ಸನ್ನು ವಿಸರ್ಜನೆ ಮಾಡಲು ಹೇಳಿದ್ದಾರೆ’- “ಕಾಂಗ್ರೆಸ್ಸನ್ನು ಸರ್ವನಾಶ ಮಾಡುವುದೇ ನನ್ನ ಗುರಿ!” ಆದ್ದರಿಂದ ಅದನ್ನು ನಾಮಾವಶೇಷ ಮಾಡುವುದೇ ಇರುವ ಏಕೈಕ ಮಾರ್ಗ ಎನ್ನುತ್ತಾರೆ ಮೋದಿಜಿ. ಸರ್ವನಾಶ ಮಾಡಬೇಕೆಂದು ಹೊರಟ ರಾಕ್ಷಸರು ತಾವೇ ಸರ್ವನಾಶವಾದರು ಎಂದು ಪುರಾಣಗಳು ಹೇಳುತ್ತವೆ.
ಪ್ರಧಾನಿಯಾಗುವ ಆತುರದಲ್ಲಿ ಮೋದಿಜಿಗೆ ಇತಿಹಾಸ ಓದಲು ಪುರುಸೊತ್ತಿಲ್ಲವಾದರೂ, ಅವರಲ್ಲಿ ಮೌಢ್ಯ ಮತ್ತು ಅಧಿಕಾರ ಪಿಪಾಸೆ ಯಥೇಚ್ಛವಾಗಿದೆ!
ಗಾಂಧೀಜಿ ಕಾಂಗ್ರೆಸ್ಸನ್ನು ವಿಸರ್ಜನೆ ಮಾಡಲು ಏಕೆ ಹೇಳಿದರು? ಸ್ವಾತಂತ್ರ್ಯ ಪಡೆಯಲು ಬಲಿದಾನ ಮಾಡಿದ ಸಂಸ್ಥೆ, ದೇಶದಿಂದ ಇಂಗ್ಲಿಷರನ್ನು ಓಡಿಸಿ ಗುಲಾಮಗಿರಿಯಿಂದ ಭಾರತವನ್ನು ಪಾರು ಮಾಡಿದ ಕಾಂಗ್ರೆಸ್ ಸಂಸ್ಥೆಯ ಮುಂಚೂಣಿಯಲ್ಲಿರುವವರಿಗೆ ಸತತವಾಗಿ ಅಧಿಕಾರದಲ್ಲಿರಬೇಕು, ಅಧಿಕಾರ ಅನುಭವಿಸಬೇಕು ಎಂಬ ಹಂಬಲ ಸಹಜವಾಗಿಯೇ ಇರುತ್ತದೆ. ಕಾಂಗ್ರೆಸ್ ಅಧಿಕಾರ ದಾಹ ಬಿಟ್ಟು ರಾಜಕೀಯದಿಂದ ನಿವೃತ್ತಿ ಆಗಿ ಲೋಕಸೇವಾ ಸಂಘವಾಗಿ ಪರಿವರ್ತನೆಯಾಗಬೇಕು. ದುರಾಡಳಿತ ನಡೆಸುವ ಸರ್ಕಾರ ಮತ್ತು ಪಕ್ಷದ ಮೇಲೆ ಸಂಘರ್ಷ ನಡೆಸಬೇಕು.
ಭಾರತಕ್ಕೆ ಸ್ವಾತಂತ್ರ್ಯ ಪ್ರಾಪ್ತವಾದ ಕೂಡಲೇ ಕಾಂಗ್ರೆಸ್ಸನ್ನು ವಿಸರ್ಜನೆ ಮಾಡಲು ಗಾಂಧೀಜಿ ಹೇಳಿದ್ದು ಮೇಲಿನ ಕಾರಣಗಳಿಗಾಗಿ. ಕಾಂಗ್ರೆಸ್ ಧುರೀಣರು ಗಾಂಧೀಜಿಯವರ ಈ ಮಾತನ್ನು ಕೇಳಲಿಲ್ಲ. ಗಾಂಧೀಜಿ ಏಕೆ ಈ ಮಾತನ್ನು ಹೇಳಿದರು ಎಂಬುದು ಗೊತ್ತಿಲ್ಲ ಎಂದು ಮೋದಿಜೀ ಹೇಳುತ್ತಾರೆ.
ಇತಿಹಾಸದ ಅರಿವಿಲ್ಲದ ಮೋದಿಜಿಗೆ ಗಾಂಧೀಜಿಯವರ ಹಿರಿತನ, ಯೋಗ್ಯತೆ ಅರ್ಥವಾಗಿಲ್ಲ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...