Homeರಾಜಕೀಯಇತಿಹಾಸ ತಿಳಿಯದ ಅಹಂಕಾರಿ ಮೋದಿಜಿ..... -ಎಚ್.ಎಸ್. ದೊರೆಸ್ವಾಮಿ

ಇತಿಹಾಸ ತಿಳಿಯದ ಅಹಂಕಾರಿ ಮೋದಿಜಿ….. -ಎಚ್.ಎಸ್. ದೊರೆಸ್ವಾಮಿ

- Advertisement -
ಇತಿಹಾಸ ತಿಳಿಯದ ಅಹಂಕಾರಿ ಮೋದಿಜಿ
-ಎಚ್.ಎಸ್. ದೊರೆಸ್ವಾಮಿ
ಭಾರತದ ಸ್ವಾತಂತ್ರ್ಯ ಸಂಗ್ರಾಮಕ್ಕೆ ಮಹಾತ್ಮಾ ಗಾಂಧಿಯವರ ಕೊಡುಗೆ ಅಪಾರ. ಅವರು ಕಾಂಗ್ರೆಸ್ ಸೇರುವುದಕ್ಕೆ ಮೊದಲು ಕಾಂಗ್ರೆಸ್ ಒಂದು ‘ಕ್ಲಾಸ್ ಮೂವ್‍ಮೆಂಟ್’ ಆಗಿತ್ತು. ಆದರೆ ಅವರೆಲ್ಲ ಜನನಾಯಕರು, ವಿಚಾರವಂತರು, ಅಧಿಕಾರ ದಾಹ ಇಲ್ಲದವರು. ಕೊಲೆ-ಸುಲಿಗೆಯನ್ನು ಅರಿಯದ ಮಹನೀಯರಾಗಿದ್ದರು. ಇಂಗ್ಲಿಷರು ಕೂಡ ಅವರ ಬಗ್ಗೆ ಅಪಾರ ಗೌರವ ಇರಿಸಿಕೊಂಡಿದ್ದರು. ಮನವಿಪತ್ರ (ಮೆಮೋರಾಂಡಮ್) ನೀಡುವುದರ ಮೂಲಕವೇ ಭಾರತೀಯರಿಗೆ ಅನೇಕ ಅಧಿಕಾರ ಕೊಡಿಸಿದರು. ಆಗಿನ ಸ್ವಾತಂತ್ರ್ಯ ಸಂಗ್ರಾಮ ಸೀಮಿತವಾಗಿತ್ತು.
ಮಹಾತ್ಮಾ ಗಾಂಧಿಯವರು ಕಾಂಗ್ರೆಸಿನ ನಾಯಕತ್ವ ವಹಿಸಿಕೊಳ್ಳುವ ಮೊದಲು ಅವರ ಗುರು ಸ್ಥಾನದಲ್ಲಿದ್ದ ಗೋಪಾಲಕೃಷ್ಣ ಗೋಖಲೆಯವರನ್ನು ಭೇಟಿ ಮಾಡಿದರು. ಗೋಖಲೆಯವರು ಹೇಳಿದರು: “ಮುಂದೆ ನೀನು ಭಾರತ ರಾಷ್ಟ್ರೀಯ ಕಾಂಗ್ರೆಸಿನ ಚುಕ್ಕಾಣಿ ಹಿಡಿಯುವವನಿದ್ದೀಯೆ. ಅದಕ್ಕೆ ಮೊದಲು ನೀನು 3ನೇ ದರ್ಜೆ ರೈಲ್ವೆ ಡಬ್ಬಿಯಲ್ಲಿ ಕೂತು ಭಾರತವನ್ನು ಸುತ್ತಿ ಬಾ. ಭಾರತೀಯರು ಯಾವ ದುರವಸ್ಥೆಯಲ್ಲಿದ್ದಾರೆ, ಅದನ್ನು ಕಣ್ಣಾರೆ ಕಂಡು ಬಾ. ಆನಂತರ ಹೇಗೆ ಕಾಂಗ್ರೆಸನ್ನು ರೂಪಿಸಬೇಕು ಎಂದು ವಿಚಾರ ಮಾಡು.”
ಗಾಂಧೀಜಿ ಭಾರತ ಯಾತ್ರೆ ಆರಂಭ ಮಾಡಿದರು. ಭಾರತೀಯರ ಬಡತನವನ್ನು, ಅವರ ಮೇಲಾಗುತ್ತಿರುವ ಶೋಷಣೆ, ದಬ್ಬಾಳಿಕೆಯನ್ನು ಕಣ್ಣಾರೆ ಕಂಡು ಮಮ್ಮಲ ಮರುಗಿದರು. ನಾನು ಈ ದುರ್ದೈವಿ ಬಡಜನರ ಪ್ರತಿನಿಧಿಯಾಗಬೇಕಾದರೆ ನಾನೂ ಅವರಂತೆಯೇ ಜೀವನ ತೂಗಿಸಬೇಕಲ್ಲವೆ? ಸರಳತೆಯನ್ನು ಅಭ್ಯಾಸ ಮಾಡಬೇಕು. ಸ್ವಯಂ-ಪ್ರೇರಣೆಯಿಂದ ಬಡತನ ಅಪ್ಪಿಕೊಳ್ಳಬೇಕು ಎಂದು ದೃಢಸಂಕಲ್ಪ ಮಾಡಿದರು. ನುಡಿದಂತೆ ನಡೆದರು.
ಸ್ವಾತಂತ್ರ್ಯ ಸಂಗ್ರಾಮದ ಸ್ವರೂಪವನ್ನು ಕಾಲಕ್ರಮೇಣ ಬದಲಾಯಿಸಿದರು. ‘ಕ್ಲಾಸ್‍ವಾರ್  (ಛಿಟಚಿss ತಿಚಿಡಿ)’ ಆಗಿದ್ದ ಹೋರಾಟವನ್ನು ‘ಮಾಸ್‍ವಾರ್ (mಚಿss ತಿಚಿಡಿ)’ ಹೋರಾಟವನ್ನಾಗಿ ಮಾರ್ಪಡಿಸಿ ಜನಸಾಮಾನ್ಯರೂ ಸ್ವಾತಂತ್ರ್ಯ ಸಂಗ್ರಾಮದಲ್ಲಿ ತೊಡಗಿಕೊಳ್ಳುವಂತೆ ಮಾಡಿದರು. ಬಡತನ ನಿರ್ಮೂಲನೆ ತನ್ನ ಆದ್ಯತೆ ಎಂದರು. 
ಗುಜರಾತಿನ ಜನ ಸ್ವಾತಂತ್ರ್ಯಕ್ಕಾಗಿ ಬಹಳ ತ್ಯಾಗ, ಬಲಿದಾನಗಳನ್ನು ಮಾಡಿದ್ದಾರೆ. ಮಹಾತ್ಮಾ ಗಾಂಧಿ, ವಲ್ಲಭಭಾಯಿ ಪಟೇಲ್, ವಿಠ್ಠಲಭಾಯಿ ಪಟೇಲ್, ಮೊರಾರ್ಜಿ ದೇಸಾಯಿ, ಮಹದೇವ ದೇಸಾಯಿ ಮುಂತಾದ ಮಹಾ ಪುರುಷರಿಗೆ ಜನ್ಮವಿತ್ತ ನಾಡು ಗುಜರಾತು. ಗಾಂಧೀಜಿ ಭಾರತವನ್ನು ಗುಲಾಮಗಿರಿಯಿಂದ ಪಾರು ಮಾಡಲು ತಮ್ಮ ಪ್ರಾಣವನ್ನೇ ಪಣವಾಗಿಟ್ಟರು. ಸರ್ದಾರ್ ಪಟೇಲರು 565 ರಾಜರುಗಳನ್ನು ಸಿಂಹಾಸನದಿಂದ ಕೆಳಗಿಳಿಸಿ ಅಖಂಡ ಭಾರತವನ್ನು ರೂಪಿಸಿದರು. ಸತ್ಯ, ಅಹಿಂಸೆ ಆಚರಣೆಯಿಂದ ಸ್ವರಾಜ್ಯ ಸ್ಥಾಪನೆ ಮಾಡಿದರು. ಈ ಇತಿಹಾಸ ಮೋದಿಜಿಗೆ ತಿಳಿದಿರಲಿಕ್ಕಿಲ್ಲ.
ಸ್ವಾತಂತ್ರ್ಯ ಪ್ರಾಪ್ತವಾದ ಕೂಡಲೇ ಕಾಂಗ್ರೆಸ್ಸನ್ನು ವಿಸರ್ಜನೆ ಮಾಡಬೇಕೆಂದರು ಗಾಂಧೀಜಿ. ದೇಶದ ಸ್ವಾತಂತ್ರ್ಯಕ್ಕಾಗಿ ತ್ಯಾಗ ಬಲಿದಾನ ಮಾಡಿದ ಕಾಂಗ್ರೆಸ್ ಸಂಸ್ಥೆ ಅಧಿಕಾರಕ್ಕಾಗಿ ಹಾತೊರೆಯದೆ ಒಂದು ಆದರ್ಶ ಸಂಸ್ಥೆಯಾಗಿ ಚಿರಸ್ಥಾಯಿಯಾಗಿ ಉಳಿಯಲಿ ಎಂಬುದು ಗಾಂಧೀಜಿಯವರ ಆಶಯವಾಗಿತ್ತು.
ಅಜ್ಞಾನಿ ಮೋದಿ ಅಂದುಕೊಂಡಿದ್ದಾರೆ: ‘ಭಾರತವನ್ನು ಮೋದಿಜಿಗೆ ಬಿಟ್ಟುಕೊಡಲೆಂದೇ ಗಾಂಧೀಜಿ ಕಾಂಗ್ರೆಸ್ಸನ್ನು ವಿಸರ್ಜನೆ ಮಾಡಲು ಹೇಳಿದ್ದಾರೆ’- “ಕಾಂಗ್ರೆಸ್ಸನ್ನು ಸರ್ವನಾಶ ಮಾಡುವುದೇ ನನ್ನ ಗುರಿ!” ಆದ್ದರಿಂದ ಅದನ್ನು ನಾಮಾವಶೇಷ ಮಾಡುವುದೇ ಇರುವ ಏಕೈಕ ಮಾರ್ಗ ಎನ್ನುತ್ತಾರೆ ಮೋದಿಜಿ. ಸರ್ವನಾಶ ಮಾಡಬೇಕೆಂದು ಹೊರಟ ರಾಕ್ಷಸರು ತಾವೇ ಸರ್ವನಾಶವಾದರು ಎಂದು ಪುರಾಣಗಳು ಹೇಳುತ್ತವೆ.
ಪ್ರಧಾನಿಯಾಗುವ ಆತುರದಲ್ಲಿ ಮೋದಿಜಿಗೆ ಇತಿಹಾಸ ಓದಲು ಪುರುಸೊತ್ತಿಲ್ಲವಾದರೂ, ಅವರಲ್ಲಿ ಮೌಢ್ಯ ಮತ್ತು ಅಧಿಕಾರ ಪಿಪಾಸೆ ಯಥೇಚ್ಛವಾಗಿದೆ!
ಗಾಂಧೀಜಿ ಕಾಂಗ್ರೆಸ್ಸನ್ನು ವಿಸರ್ಜನೆ ಮಾಡಲು ಏಕೆ ಹೇಳಿದರು? ಸ್ವಾತಂತ್ರ್ಯ ಪಡೆಯಲು ಬಲಿದಾನ ಮಾಡಿದ ಸಂಸ್ಥೆ, ದೇಶದಿಂದ ಇಂಗ್ಲಿಷರನ್ನು ಓಡಿಸಿ ಗುಲಾಮಗಿರಿಯಿಂದ ಭಾರತವನ್ನು ಪಾರು ಮಾಡಿದ ಕಾಂಗ್ರೆಸ್ ಸಂಸ್ಥೆಯ ಮುಂಚೂಣಿಯಲ್ಲಿರುವವರಿಗೆ ಸತತವಾಗಿ ಅಧಿಕಾರದಲ್ಲಿರಬೇಕು, ಅಧಿಕಾರ ಅನುಭವಿಸಬೇಕು ಎಂಬ ಹಂಬಲ ಸಹಜವಾಗಿಯೇ ಇರುತ್ತದೆ. ಕಾಂಗ್ರೆಸ್ ಅಧಿಕಾರ ದಾಹ ಬಿಟ್ಟು ರಾಜಕೀಯದಿಂದ ನಿವೃತ್ತಿ ಆಗಿ ಲೋಕಸೇವಾ ಸಂಘವಾಗಿ ಪರಿವರ್ತನೆಯಾಗಬೇಕು. ದುರಾಡಳಿತ ನಡೆಸುವ ಸರ್ಕಾರ ಮತ್ತು ಪಕ್ಷದ ಮೇಲೆ ಸಂಘರ್ಷ ನಡೆಸಬೇಕು.
ಭಾರತಕ್ಕೆ ಸ್ವಾತಂತ್ರ್ಯ ಪ್ರಾಪ್ತವಾದ ಕೂಡಲೇ ಕಾಂಗ್ರೆಸ್ಸನ್ನು ವಿಸರ್ಜನೆ ಮಾಡಲು ಗಾಂಧೀಜಿ ಹೇಳಿದ್ದು ಮೇಲಿನ ಕಾರಣಗಳಿಗಾಗಿ. ಕಾಂಗ್ರೆಸ್ ಧುರೀಣರು ಗಾಂಧೀಜಿಯವರ ಈ ಮಾತನ್ನು ಕೇಳಲಿಲ್ಲ. ಗಾಂಧೀಜಿ ಏಕೆ ಈ ಮಾತನ್ನು ಹೇಳಿದರು ಎಂಬುದು ಗೊತ್ತಿಲ್ಲ ಎಂದು ಮೋದಿಜೀ ಹೇಳುತ್ತಾರೆ.
ಇತಿಹಾಸದ ಅರಿವಿಲ್ಲದ ಮೋದಿಜಿಗೆ ಗಾಂಧೀಜಿಯವರ ಹಿರಿತನ, ಯೋಗ್ಯತೆ ಅರ್ಥವಾಗಿಲ್ಲ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...