Homeರಾಜಕೀಯಇತಿಹಾಸ ತಿಳಿಯದ ಅಹಂಕಾರಿ ಮೋದಿಜಿ..... -ಎಚ್.ಎಸ್. ದೊರೆಸ್ವಾಮಿ

ಇತಿಹಾಸ ತಿಳಿಯದ ಅಹಂಕಾರಿ ಮೋದಿಜಿ….. -ಎಚ್.ಎಸ್. ದೊರೆಸ್ವಾಮಿ

- Advertisement -
ಇತಿಹಾಸ ತಿಳಿಯದ ಅಹಂಕಾರಿ ಮೋದಿಜಿ
-ಎಚ್.ಎಸ್. ದೊರೆಸ್ವಾಮಿ
ಭಾರತದ ಸ್ವಾತಂತ್ರ್ಯ ಸಂಗ್ರಾಮಕ್ಕೆ ಮಹಾತ್ಮಾ ಗಾಂಧಿಯವರ ಕೊಡುಗೆ ಅಪಾರ. ಅವರು ಕಾಂಗ್ರೆಸ್ ಸೇರುವುದಕ್ಕೆ ಮೊದಲು ಕಾಂಗ್ರೆಸ್ ಒಂದು ‘ಕ್ಲಾಸ್ ಮೂವ್‍ಮೆಂಟ್’ ಆಗಿತ್ತು. ಆದರೆ ಅವರೆಲ್ಲ ಜನನಾಯಕರು, ವಿಚಾರವಂತರು, ಅಧಿಕಾರ ದಾಹ ಇಲ್ಲದವರು. ಕೊಲೆ-ಸುಲಿಗೆಯನ್ನು ಅರಿಯದ ಮಹನೀಯರಾಗಿದ್ದರು. ಇಂಗ್ಲಿಷರು ಕೂಡ ಅವರ ಬಗ್ಗೆ ಅಪಾರ ಗೌರವ ಇರಿಸಿಕೊಂಡಿದ್ದರು. ಮನವಿಪತ್ರ (ಮೆಮೋರಾಂಡಮ್) ನೀಡುವುದರ ಮೂಲಕವೇ ಭಾರತೀಯರಿಗೆ ಅನೇಕ ಅಧಿಕಾರ ಕೊಡಿಸಿದರು. ಆಗಿನ ಸ್ವಾತಂತ್ರ್ಯ ಸಂಗ್ರಾಮ ಸೀಮಿತವಾಗಿತ್ತು.
ಮಹಾತ್ಮಾ ಗಾಂಧಿಯವರು ಕಾಂಗ್ರೆಸಿನ ನಾಯಕತ್ವ ವಹಿಸಿಕೊಳ್ಳುವ ಮೊದಲು ಅವರ ಗುರು ಸ್ಥಾನದಲ್ಲಿದ್ದ ಗೋಪಾಲಕೃಷ್ಣ ಗೋಖಲೆಯವರನ್ನು ಭೇಟಿ ಮಾಡಿದರು. ಗೋಖಲೆಯವರು ಹೇಳಿದರು: “ಮುಂದೆ ನೀನು ಭಾರತ ರಾಷ್ಟ್ರೀಯ ಕಾಂಗ್ರೆಸಿನ ಚುಕ್ಕಾಣಿ ಹಿಡಿಯುವವನಿದ್ದೀಯೆ. ಅದಕ್ಕೆ ಮೊದಲು ನೀನು 3ನೇ ದರ್ಜೆ ರೈಲ್ವೆ ಡಬ್ಬಿಯಲ್ಲಿ ಕೂತು ಭಾರತವನ್ನು ಸುತ್ತಿ ಬಾ. ಭಾರತೀಯರು ಯಾವ ದುರವಸ್ಥೆಯಲ್ಲಿದ್ದಾರೆ, ಅದನ್ನು ಕಣ್ಣಾರೆ ಕಂಡು ಬಾ. ಆನಂತರ ಹೇಗೆ ಕಾಂಗ್ರೆಸನ್ನು ರೂಪಿಸಬೇಕು ಎಂದು ವಿಚಾರ ಮಾಡು.”
ಗಾಂಧೀಜಿ ಭಾರತ ಯಾತ್ರೆ ಆರಂಭ ಮಾಡಿದರು. ಭಾರತೀಯರ ಬಡತನವನ್ನು, ಅವರ ಮೇಲಾಗುತ್ತಿರುವ ಶೋಷಣೆ, ದಬ್ಬಾಳಿಕೆಯನ್ನು ಕಣ್ಣಾರೆ ಕಂಡು ಮಮ್ಮಲ ಮರುಗಿದರು. ನಾನು ಈ ದುರ್ದೈವಿ ಬಡಜನರ ಪ್ರತಿನಿಧಿಯಾಗಬೇಕಾದರೆ ನಾನೂ ಅವರಂತೆಯೇ ಜೀವನ ತೂಗಿಸಬೇಕಲ್ಲವೆ? ಸರಳತೆಯನ್ನು ಅಭ್ಯಾಸ ಮಾಡಬೇಕು. ಸ್ವಯಂ-ಪ್ರೇರಣೆಯಿಂದ ಬಡತನ ಅಪ್ಪಿಕೊಳ್ಳಬೇಕು ಎಂದು ದೃಢಸಂಕಲ್ಪ ಮಾಡಿದರು. ನುಡಿದಂತೆ ನಡೆದರು.
ಸ್ವಾತಂತ್ರ್ಯ ಸಂಗ್ರಾಮದ ಸ್ವರೂಪವನ್ನು ಕಾಲಕ್ರಮೇಣ ಬದಲಾಯಿಸಿದರು. ‘ಕ್ಲಾಸ್‍ವಾರ್  (ಛಿಟಚಿss ತಿಚಿಡಿ)’ ಆಗಿದ್ದ ಹೋರಾಟವನ್ನು ‘ಮಾಸ್‍ವಾರ್ (mಚಿss ತಿಚಿಡಿ)’ ಹೋರಾಟವನ್ನಾಗಿ ಮಾರ್ಪಡಿಸಿ ಜನಸಾಮಾನ್ಯರೂ ಸ್ವಾತಂತ್ರ್ಯ ಸಂಗ್ರಾಮದಲ್ಲಿ ತೊಡಗಿಕೊಳ್ಳುವಂತೆ ಮಾಡಿದರು. ಬಡತನ ನಿರ್ಮೂಲನೆ ತನ್ನ ಆದ್ಯತೆ ಎಂದರು. 
ಗುಜರಾತಿನ ಜನ ಸ್ವಾತಂತ್ರ್ಯಕ್ಕಾಗಿ ಬಹಳ ತ್ಯಾಗ, ಬಲಿದಾನಗಳನ್ನು ಮಾಡಿದ್ದಾರೆ. ಮಹಾತ್ಮಾ ಗಾಂಧಿ, ವಲ್ಲಭಭಾಯಿ ಪಟೇಲ್, ವಿಠ್ಠಲಭಾಯಿ ಪಟೇಲ್, ಮೊರಾರ್ಜಿ ದೇಸಾಯಿ, ಮಹದೇವ ದೇಸಾಯಿ ಮುಂತಾದ ಮಹಾ ಪುರುಷರಿಗೆ ಜನ್ಮವಿತ್ತ ನಾಡು ಗುಜರಾತು. ಗಾಂಧೀಜಿ ಭಾರತವನ್ನು ಗುಲಾಮಗಿರಿಯಿಂದ ಪಾರು ಮಾಡಲು ತಮ್ಮ ಪ್ರಾಣವನ್ನೇ ಪಣವಾಗಿಟ್ಟರು. ಸರ್ದಾರ್ ಪಟೇಲರು 565 ರಾಜರುಗಳನ್ನು ಸಿಂಹಾಸನದಿಂದ ಕೆಳಗಿಳಿಸಿ ಅಖಂಡ ಭಾರತವನ್ನು ರೂಪಿಸಿದರು. ಸತ್ಯ, ಅಹಿಂಸೆ ಆಚರಣೆಯಿಂದ ಸ್ವರಾಜ್ಯ ಸ್ಥಾಪನೆ ಮಾಡಿದರು. ಈ ಇತಿಹಾಸ ಮೋದಿಜಿಗೆ ತಿಳಿದಿರಲಿಕ್ಕಿಲ್ಲ.
ಸ್ವಾತಂತ್ರ್ಯ ಪ್ರಾಪ್ತವಾದ ಕೂಡಲೇ ಕಾಂಗ್ರೆಸ್ಸನ್ನು ವಿಸರ್ಜನೆ ಮಾಡಬೇಕೆಂದರು ಗಾಂಧೀಜಿ. ದೇಶದ ಸ್ವಾತಂತ್ರ್ಯಕ್ಕಾಗಿ ತ್ಯಾಗ ಬಲಿದಾನ ಮಾಡಿದ ಕಾಂಗ್ರೆಸ್ ಸಂಸ್ಥೆ ಅಧಿಕಾರಕ್ಕಾಗಿ ಹಾತೊರೆಯದೆ ಒಂದು ಆದರ್ಶ ಸಂಸ್ಥೆಯಾಗಿ ಚಿರಸ್ಥಾಯಿಯಾಗಿ ಉಳಿಯಲಿ ಎಂಬುದು ಗಾಂಧೀಜಿಯವರ ಆಶಯವಾಗಿತ್ತು.
ಅಜ್ಞಾನಿ ಮೋದಿ ಅಂದುಕೊಂಡಿದ್ದಾರೆ: ‘ಭಾರತವನ್ನು ಮೋದಿಜಿಗೆ ಬಿಟ್ಟುಕೊಡಲೆಂದೇ ಗಾಂಧೀಜಿ ಕಾಂಗ್ರೆಸ್ಸನ್ನು ವಿಸರ್ಜನೆ ಮಾಡಲು ಹೇಳಿದ್ದಾರೆ’- “ಕಾಂಗ್ರೆಸ್ಸನ್ನು ಸರ್ವನಾಶ ಮಾಡುವುದೇ ನನ್ನ ಗುರಿ!” ಆದ್ದರಿಂದ ಅದನ್ನು ನಾಮಾವಶೇಷ ಮಾಡುವುದೇ ಇರುವ ಏಕೈಕ ಮಾರ್ಗ ಎನ್ನುತ್ತಾರೆ ಮೋದಿಜಿ. ಸರ್ವನಾಶ ಮಾಡಬೇಕೆಂದು ಹೊರಟ ರಾಕ್ಷಸರು ತಾವೇ ಸರ್ವನಾಶವಾದರು ಎಂದು ಪುರಾಣಗಳು ಹೇಳುತ್ತವೆ.
ಪ್ರಧಾನಿಯಾಗುವ ಆತುರದಲ್ಲಿ ಮೋದಿಜಿಗೆ ಇತಿಹಾಸ ಓದಲು ಪುರುಸೊತ್ತಿಲ್ಲವಾದರೂ, ಅವರಲ್ಲಿ ಮೌಢ್ಯ ಮತ್ತು ಅಧಿಕಾರ ಪಿಪಾಸೆ ಯಥೇಚ್ಛವಾಗಿದೆ!
ಗಾಂಧೀಜಿ ಕಾಂಗ್ರೆಸ್ಸನ್ನು ವಿಸರ್ಜನೆ ಮಾಡಲು ಏಕೆ ಹೇಳಿದರು? ಸ್ವಾತಂತ್ರ್ಯ ಪಡೆಯಲು ಬಲಿದಾನ ಮಾಡಿದ ಸಂಸ್ಥೆ, ದೇಶದಿಂದ ಇಂಗ್ಲಿಷರನ್ನು ಓಡಿಸಿ ಗುಲಾಮಗಿರಿಯಿಂದ ಭಾರತವನ್ನು ಪಾರು ಮಾಡಿದ ಕಾಂಗ್ರೆಸ್ ಸಂಸ್ಥೆಯ ಮುಂಚೂಣಿಯಲ್ಲಿರುವವರಿಗೆ ಸತತವಾಗಿ ಅಧಿಕಾರದಲ್ಲಿರಬೇಕು, ಅಧಿಕಾರ ಅನುಭವಿಸಬೇಕು ಎಂಬ ಹಂಬಲ ಸಹಜವಾಗಿಯೇ ಇರುತ್ತದೆ. ಕಾಂಗ್ರೆಸ್ ಅಧಿಕಾರ ದಾಹ ಬಿಟ್ಟು ರಾಜಕೀಯದಿಂದ ನಿವೃತ್ತಿ ಆಗಿ ಲೋಕಸೇವಾ ಸಂಘವಾಗಿ ಪರಿವರ್ತನೆಯಾಗಬೇಕು. ದುರಾಡಳಿತ ನಡೆಸುವ ಸರ್ಕಾರ ಮತ್ತು ಪಕ್ಷದ ಮೇಲೆ ಸಂಘರ್ಷ ನಡೆಸಬೇಕು.
ಭಾರತಕ್ಕೆ ಸ್ವಾತಂತ್ರ್ಯ ಪ್ರಾಪ್ತವಾದ ಕೂಡಲೇ ಕಾಂಗ್ರೆಸ್ಸನ್ನು ವಿಸರ್ಜನೆ ಮಾಡಲು ಗಾಂಧೀಜಿ ಹೇಳಿದ್ದು ಮೇಲಿನ ಕಾರಣಗಳಿಗಾಗಿ. ಕಾಂಗ್ರೆಸ್ ಧುರೀಣರು ಗಾಂಧೀಜಿಯವರ ಈ ಮಾತನ್ನು ಕೇಳಲಿಲ್ಲ. ಗಾಂಧೀಜಿ ಏಕೆ ಈ ಮಾತನ್ನು ಹೇಳಿದರು ಎಂಬುದು ಗೊತ್ತಿಲ್ಲ ಎಂದು ಮೋದಿಜೀ ಹೇಳುತ್ತಾರೆ.
ಇತಿಹಾಸದ ಅರಿವಿಲ್ಲದ ಮೋದಿಜಿಗೆ ಗಾಂಧೀಜಿಯವರ ಹಿರಿತನ, ಯೋಗ್ಯತೆ ಅರ್ಥವಾಗಿಲ್ಲ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗೋವಾ ನೈಟ್ ಕ್ಲಬ್ ಮಾಲೀಕರ ಮಧ್ಯಂತರ ಜಾಮೀನು ನಿರಾಕರಿಸಿದ ದೆಹಲಿ ನ್ಯಾಯಾಲಯ: ಥೈಲ್ಯಾಂಡ್‌ನಿಂದಲೂ ಗಡಿಪಾರು ಪ್ರಕ್ರಿಯೆ ಆರಂಭ 

ನವದೆಹಲಿ: ಕಳೆದ ವಾರ ಕನಿಷ್ಠ 25 ಜನರ ಸಾವಿಗೆ ಕಾರಣವಾಗಿದ್ದ, ಗೋವಾದ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಮತ್ತು ಗೌರವ್ ಲುಥ್ರಾಸ್ ಅವರ ಟ್ರಾನ್ಸಿಟ್ ನಿರೀಕ್ಷಣಾ ಜಾಮೀನು ಅರ್ಜಿಯನ್ನು...

ಮಾದಕ ದ್ರವ್ಯ ಬಳಕೆ-ಮಾರಾಟದ ಶಿಕ್ಷೆಯ ಕುರಿತು ಶಾಲಾ-ಕಾಲೇಜುಗಳಲ್ಲಿ ಜಾಗೃತಿ ಕಾರ್ಯಕ್ರಮ: ಪರಮೇಶ್ವರ್

ಮಾದಕ ದ್ರವ್ಯ ಬಳಕೆಯ ದುಷ್ಪರಿಣಾಮ, ಮಾರಾಟದ ಶಿಕ್ಷೆಯ ಕುರಿತು ಶಾಲಾ-ಕಾಲೇಜುಗಳಲ್ಲಿ, ಪೊಲೀಸ್ ಠಾಣೆಗಳಲ್ಲಿ ನಿಯಮಿತವಾಗಿ ಜಾಗೃತಿ ಕಾರ್ಯಕ್ರಮಗಳನ್ನು ಮಾಡಲಾಗಿರುತ್ತದೆ ಎಂದು ಗೃಹ ಸಚಿವ ಜಿ ಪರಮೇಶ್ವರ್ ಹೇಳಿದರು. ಗುರುವಾರ ವಿಧಾನ ಪರಿಷತ್ತಿನಲ್ಲಿ ಕಾಂಗ್ರೆಸ್ ಸದಸ್ಯ...

ದುಡ್ಡು ಕೊಟ್ಟವರಿಗೆ ರಾಜಾತಿಥ್ಯ, ಪೌರತ್ವಕ್ಕೆ ರಹದಾರಿ : ಏನಿದು ‘ಟ್ರಂಪ್ ಗೋಲ್ಡ್ ಕಾರ್ಡ್’

ಟ್ರಂಪ್ ಆಡಳಿತವು ಬುಧವಾರ (ಡಿಸೆಂಬರ್ 10) ಔಪಚಾರಿಕವಾಗಿ 'ಟ್ರಂಪ್ ಗೋಲ್ಡ್ ಕಾರ್ಡ್'ಗಾಗಿ ಅರ್ಜಿಗಳನ್ನು ಸ್ವೀಕರಿಸಲು ಪ್ರಾರಂಭಿಸಿದೆ. ಇದನ್ನು ಅಮೆರಿಕ ಸರ್ಕಾರ ಕನಿಷ್ಠ 1 ಮಿಲಿಯನ್ ಡಾಲರ್ ಪಾವತಿಸುವ ಜನರಿಗೆ ನೀಡಲು ಯೋಜಿಸಿದೆ. 'ಟ್ರಂಪ್ ಗೋಲ್ಡ್...

ಮಾಜಿ ಐಪಿಎಸ್ ಅಧಿಕಾರಿ ಸಂಜೀವ್ ಭಟ್ ಜೈಲು ಶಿಕ್ಷೆ ಅಮಾನತು ಮನವಿ ನಿರಾಕರಿಸಿದ ಸುಪ್ರೀಂ ಕೋರ್ಟ್

1996 ರ ಮಾದಕ ದ್ರವ್ಯ ವಶ ಪ್ರಕರಣದಲ್ಲಿ ಮಾಜಿ ಐಪಿಎಸ್ ಅಧಿಕಾರಿ ಸಂಜೀವ್ ಭಟ್ ಅವರ 20 ವರ್ಷಗಳ ಜೈಲು ಶಿಕ್ಷೆಯನ್ನು ಅಮಾನತುಗೊಳಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿದ್ದರಿಂದ ಗುರುವಾರ ಅವರ ಬಿಡುಗಡೆಗಾಗಿನ ಪ್ರಯತ್ನ...

ಅರುಣಾಚಲ ಪ್ರದೇಶ: ಟ್ರಕ್ ಕಂದಕಕ್ಕೆ ಉರುಳಿ ಅಸ್ಸಾಂ ಮೂಲದ 21 ಕಾರ್ಮಿಕರು ಸಾವನ್ನಪ್ಪಿರುವ ಶಂಕೆ, 18 ಮೃತದೇಹಗಳು ಪತ್ತೆ

ಅರುಣಾಚಲ ಪ್ರದೇಶದ ಅಂಜಾವ್ ಜಿಲ್ಲೆಯಲ್ಲಿ ಅಸ್ಸಾಂನಿಂದ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಟ್ರಕ್ ಆಳವಾದ ಕಂದಕಕ್ಕೆ ಉರುಳಿದ್ದು, 21 ಜನರು ಸಾವನ್ನಪ್ಪಿದ್ದಾರೆ ಎಂದು ಶಂಕಿಸಲಾಗಿದೆ. ಇಲ್ಲಿಯವರೆಗೆ 18 ಶವಗಳನ್ನು ಹೊರತೆಗೆಯಲಾಗಿದೆ ಎಂಬ ಮಾಹಿತಿ ಸಿಕ್ಕಿದೆ.  ಡಿಸೆಂಬರ್ 8ನೇ...

ಜಾರ್ಖಂಡ್‌ನ 27 ಮಕ್ಕಳು ನೇಪಾಳಕ್ಕೆ ಕಳ್ಳಸಾಗಣೆ; ತನಿಖೆ ಆರಂಭಿಸಿದ ಪೊಲೀಸರು

ಉತ್ತಮ ಶಿಕ್ಷಣ ಒದಗಿಸುವ ನೆಪದಲ್ಲಿ 27 ಮಕ್ಕಳನ್ನು ನೇಪಾಳಕ್ಕೆ ಕಳ್ಳಸಾಗಣೆ ಮಾಡಲಾಗಿದೆ ಎಂಬ ಆರೋಪದ ಮೇಲೆ ಜಾರ್ಖಂಡ್‌ನ ಪಶ್ಚಿಮ ಸಿಂಗ್‌ಭೂಮ್ ಜಿಲ್ಲೆಯ ಪೊಲೀಸರು ಗುರುವಾರ ತನಿಖೆ ಆರಂಭಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಮಕ್ಕಳನ್ನು...

ಉಮರ್ ಖಾಲಿದ್‌ಗೆ 14 ದಿನಗಳ ಮಧ್ಯಂತರ ಜಾಮೀನು; ಸಹೋದರಿಯ ಮದುವೆಯಲ್ಲಿ ಪಾಲ್ಗೊಳ್ಳಲು ಅವಕಾಶ

ಸಾಮಾಜಿಕ ಕಾರ್ಯಕರ್ತ ಉಮರ್ ಖಾಲಿದ್ ಅವರಿಗೆ ಡಿಸೆಂಬರ್ 27 ರಂದು ನಿಗದಿಯಾಗಿದ್ದ ತಮ್ಮ ಸಹೋದರಿಯ ಮದುವೆಯಲ್ಲಿ ಪಾಲ್ಗೊಳ್ಳಲು ಡಿಸೆಂಬರ್ 16 ರಿಂದ 29 ರವರೆಗೆ 14 ದಿನಗಳ ಕಾಲ ಮಧ್ಯಂತರ ಜಾಮೀನು ನೀಡಲಾಯಿತು....

ಜಾತ್ಯತೀತತೆಯನ್ನು ಮಾತ್ರ ನಂಬುತ್ತೇನೆ; ಕೋಮುವಾದವನ್ನಲ್ಲ: ಮಮತಾ ಬ್ಯಾನರ್ಜಿ

ನಾನು ಕೋಮುವಾದದಲ್ಲಿ ನಂಬಿಕೆ ಇಡುವುದಿಲ್ಲ. ಜಾತ್ಯತೀತತೆಯನ್ನು ಮಾತ್ರ ನಂಬುತ್ತೇನೆ. ಚುನಾವಣೆ ಸಮೀಪಿಸಿದಾಗಲೆಲ್ಲಾ, ಬಿಜೆಪಿ ಹಣವನ್ನು ಬಳಸಿ ಇತರ ರಾಜ್ಯಗಳಿಂದ ಜನರನ್ನು ಕರೆತಂದು ಸಾರ್ವಜನಿಕರನ್ನು ವಿಭಜಿಸಲು ಪ್ರಯತ್ನಿಸುತ್ತದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ...

ಅತ್ಯಾಚಾರ ಪ್ರಕರಣದ ವಿಚಾರಣೆ ವರ್ಗಾವಣೆ ಕೋರಿ ಪ್ರಜ್ವಲ್ ರೇವಣ್ಣ ಮನವಿ : ತಿರಸ್ಕರಿಸಿದ ಸುಪ್ರೀಂ ಕೋರ್ಟ್‌

ಬೆಂಗಳೂರಿನ 81ನೇ ಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಧೀಶರು ವಿಚಾರಣೆ ನಡೆಸುತ್ತಿರುವ ತಮ್ಮ ವಿರುದ್ಧದ ಎರಡು ಅತ್ಯಾಚಾರ ಪ್ರಕರಣಗಳನ್ನು ಬೇರೆ ಸೆಷನ್ಸ್‌ ನ್ಯಾಯಾಲಯಕ್ಕೆ ವರ್ಗಾಯಿಸುವಂತೆ ಕೋರಿ ಜೆಡಿಎಸ್‌ ಮಾಜಿ ಸಂಸದ ಪ್ರಜ್ವಲ್‌...

ಭಗವದ್ಗೀತೆ ಕಾರ್ಯಕ್ರಮದಲ್ಲಿ ಚಿಕನ್ ಪಫ್ಸ್ ಮಾರಿದ ಮುಸ್ಲಿಂ ವ್ಯಾಪಾರಿಗೆ ಥಳಿತ : ಮೂವರ ಬಂಧನ

ಲಕ್ಷ ಕಂಠ ಗೀತಾ ಪಾರಾಯಣ (ಸುಮಾರು 5 ಲಕ್ಷ ಜನರಿಂದ ಭಗವದ್ಗೀತೆ ಪಾರಾಯಣ) ಕಾರ್ಯಕ್ರಮದಲ್ಲಿ ಚಿಕನ್ ಪಫ್ಸ್ ಮಾರಿದ ಬಡ ಮುಸ್ಲಿಂ ವ್ಯಾಪಾರಿಗೆ ಥಳಿಸಿದ ಘಟನೆ ಭಾನುವಾರ (ಡಿಸೆಂಬರ್ 7) ಕೋಲ್ಕತ್ತಾದ ಬ್ರಿಗೇಡ್...