Homeರಾಜಕೀಯಇತಿಹಾಸ ತಿಳಿಯದ ಅಹಂಕಾರಿ ಮೋದಿಜಿ..... -ಎಚ್.ಎಸ್. ದೊರೆಸ್ವಾಮಿ

ಇತಿಹಾಸ ತಿಳಿಯದ ಅಹಂಕಾರಿ ಮೋದಿಜಿ….. -ಎಚ್.ಎಸ್. ದೊರೆಸ್ವಾಮಿ

- Advertisement -
ಇತಿಹಾಸ ತಿಳಿಯದ ಅಹಂಕಾರಿ ಮೋದಿಜಿ
-ಎಚ್.ಎಸ್. ದೊರೆಸ್ವಾಮಿ
ಭಾರತದ ಸ್ವಾತಂತ್ರ್ಯ ಸಂಗ್ರಾಮಕ್ಕೆ ಮಹಾತ್ಮಾ ಗಾಂಧಿಯವರ ಕೊಡುಗೆ ಅಪಾರ. ಅವರು ಕಾಂಗ್ರೆಸ್ ಸೇರುವುದಕ್ಕೆ ಮೊದಲು ಕಾಂಗ್ರೆಸ್ ಒಂದು ‘ಕ್ಲಾಸ್ ಮೂವ್‍ಮೆಂಟ್’ ಆಗಿತ್ತು. ಆದರೆ ಅವರೆಲ್ಲ ಜನನಾಯಕರು, ವಿಚಾರವಂತರು, ಅಧಿಕಾರ ದಾಹ ಇಲ್ಲದವರು. ಕೊಲೆ-ಸುಲಿಗೆಯನ್ನು ಅರಿಯದ ಮಹನೀಯರಾಗಿದ್ದರು. ಇಂಗ್ಲಿಷರು ಕೂಡ ಅವರ ಬಗ್ಗೆ ಅಪಾರ ಗೌರವ ಇರಿಸಿಕೊಂಡಿದ್ದರು. ಮನವಿಪತ್ರ (ಮೆಮೋರಾಂಡಮ್) ನೀಡುವುದರ ಮೂಲಕವೇ ಭಾರತೀಯರಿಗೆ ಅನೇಕ ಅಧಿಕಾರ ಕೊಡಿಸಿದರು. ಆಗಿನ ಸ್ವಾತಂತ್ರ್ಯ ಸಂಗ್ರಾಮ ಸೀಮಿತವಾಗಿತ್ತು.
ಮಹಾತ್ಮಾ ಗಾಂಧಿಯವರು ಕಾಂಗ್ರೆಸಿನ ನಾಯಕತ್ವ ವಹಿಸಿಕೊಳ್ಳುವ ಮೊದಲು ಅವರ ಗುರು ಸ್ಥಾನದಲ್ಲಿದ್ದ ಗೋಪಾಲಕೃಷ್ಣ ಗೋಖಲೆಯವರನ್ನು ಭೇಟಿ ಮಾಡಿದರು. ಗೋಖಲೆಯವರು ಹೇಳಿದರು: “ಮುಂದೆ ನೀನು ಭಾರತ ರಾಷ್ಟ್ರೀಯ ಕಾಂಗ್ರೆಸಿನ ಚುಕ್ಕಾಣಿ ಹಿಡಿಯುವವನಿದ್ದೀಯೆ. ಅದಕ್ಕೆ ಮೊದಲು ನೀನು 3ನೇ ದರ್ಜೆ ರೈಲ್ವೆ ಡಬ್ಬಿಯಲ್ಲಿ ಕೂತು ಭಾರತವನ್ನು ಸುತ್ತಿ ಬಾ. ಭಾರತೀಯರು ಯಾವ ದುರವಸ್ಥೆಯಲ್ಲಿದ್ದಾರೆ, ಅದನ್ನು ಕಣ್ಣಾರೆ ಕಂಡು ಬಾ. ಆನಂತರ ಹೇಗೆ ಕಾಂಗ್ರೆಸನ್ನು ರೂಪಿಸಬೇಕು ಎಂದು ವಿಚಾರ ಮಾಡು.”
ಗಾಂಧೀಜಿ ಭಾರತ ಯಾತ್ರೆ ಆರಂಭ ಮಾಡಿದರು. ಭಾರತೀಯರ ಬಡತನವನ್ನು, ಅವರ ಮೇಲಾಗುತ್ತಿರುವ ಶೋಷಣೆ, ದಬ್ಬಾಳಿಕೆಯನ್ನು ಕಣ್ಣಾರೆ ಕಂಡು ಮಮ್ಮಲ ಮರುಗಿದರು. ನಾನು ಈ ದುರ್ದೈವಿ ಬಡಜನರ ಪ್ರತಿನಿಧಿಯಾಗಬೇಕಾದರೆ ನಾನೂ ಅವರಂತೆಯೇ ಜೀವನ ತೂಗಿಸಬೇಕಲ್ಲವೆ? ಸರಳತೆಯನ್ನು ಅಭ್ಯಾಸ ಮಾಡಬೇಕು. ಸ್ವಯಂ-ಪ್ರೇರಣೆಯಿಂದ ಬಡತನ ಅಪ್ಪಿಕೊಳ್ಳಬೇಕು ಎಂದು ದೃಢಸಂಕಲ್ಪ ಮಾಡಿದರು. ನುಡಿದಂತೆ ನಡೆದರು.
ಸ್ವಾತಂತ್ರ್ಯ ಸಂಗ್ರಾಮದ ಸ್ವರೂಪವನ್ನು ಕಾಲಕ್ರಮೇಣ ಬದಲಾಯಿಸಿದರು. ‘ಕ್ಲಾಸ್‍ವಾರ್  (ಛಿಟಚಿss ತಿಚಿಡಿ)’ ಆಗಿದ್ದ ಹೋರಾಟವನ್ನು ‘ಮಾಸ್‍ವಾರ್ (mಚಿss ತಿಚಿಡಿ)’ ಹೋರಾಟವನ್ನಾಗಿ ಮಾರ್ಪಡಿಸಿ ಜನಸಾಮಾನ್ಯರೂ ಸ್ವಾತಂತ್ರ್ಯ ಸಂಗ್ರಾಮದಲ್ಲಿ ತೊಡಗಿಕೊಳ್ಳುವಂತೆ ಮಾಡಿದರು. ಬಡತನ ನಿರ್ಮೂಲನೆ ತನ್ನ ಆದ್ಯತೆ ಎಂದರು. 
ಗುಜರಾತಿನ ಜನ ಸ್ವಾತಂತ್ರ್ಯಕ್ಕಾಗಿ ಬಹಳ ತ್ಯಾಗ, ಬಲಿದಾನಗಳನ್ನು ಮಾಡಿದ್ದಾರೆ. ಮಹಾತ್ಮಾ ಗಾಂಧಿ, ವಲ್ಲಭಭಾಯಿ ಪಟೇಲ್, ವಿಠ್ಠಲಭಾಯಿ ಪಟೇಲ್, ಮೊರಾರ್ಜಿ ದೇಸಾಯಿ, ಮಹದೇವ ದೇಸಾಯಿ ಮುಂತಾದ ಮಹಾ ಪುರುಷರಿಗೆ ಜನ್ಮವಿತ್ತ ನಾಡು ಗುಜರಾತು. ಗಾಂಧೀಜಿ ಭಾರತವನ್ನು ಗುಲಾಮಗಿರಿಯಿಂದ ಪಾರು ಮಾಡಲು ತಮ್ಮ ಪ್ರಾಣವನ್ನೇ ಪಣವಾಗಿಟ್ಟರು. ಸರ್ದಾರ್ ಪಟೇಲರು 565 ರಾಜರುಗಳನ್ನು ಸಿಂಹಾಸನದಿಂದ ಕೆಳಗಿಳಿಸಿ ಅಖಂಡ ಭಾರತವನ್ನು ರೂಪಿಸಿದರು. ಸತ್ಯ, ಅಹಿಂಸೆ ಆಚರಣೆಯಿಂದ ಸ್ವರಾಜ್ಯ ಸ್ಥಾಪನೆ ಮಾಡಿದರು. ಈ ಇತಿಹಾಸ ಮೋದಿಜಿಗೆ ತಿಳಿದಿರಲಿಕ್ಕಿಲ್ಲ.
ಸ್ವಾತಂತ್ರ್ಯ ಪ್ರಾಪ್ತವಾದ ಕೂಡಲೇ ಕಾಂಗ್ರೆಸ್ಸನ್ನು ವಿಸರ್ಜನೆ ಮಾಡಬೇಕೆಂದರು ಗಾಂಧೀಜಿ. ದೇಶದ ಸ್ವಾತಂತ್ರ್ಯಕ್ಕಾಗಿ ತ್ಯಾಗ ಬಲಿದಾನ ಮಾಡಿದ ಕಾಂಗ್ರೆಸ್ ಸಂಸ್ಥೆ ಅಧಿಕಾರಕ್ಕಾಗಿ ಹಾತೊರೆಯದೆ ಒಂದು ಆದರ್ಶ ಸಂಸ್ಥೆಯಾಗಿ ಚಿರಸ್ಥಾಯಿಯಾಗಿ ಉಳಿಯಲಿ ಎಂಬುದು ಗಾಂಧೀಜಿಯವರ ಆಶಯವಾಗಿತ್ತು.
ಅಜ್ಞಾನಿ ಮೋದಿ ಅಂದುಕೊಂಡಿದ್ದಾರೆ: ‘ಭಾರತವನ್ನು ಮೋದಿಜಿಗೆ ಬಿಟ್ಟುಕೊಡಲೆಂದೇ ಗಾಂಧೀಜಿ ಕಾಂಗ್ರೆಸ್ಸನ್ನು ವಿಸರ್ಜನೆ ಮಾಡಲು ಹೇಳಿದ್ದಾರೆ’- “ಕಾಂಗ್ರೆಸ್ಸನ್ನು ಸರ್ವನಾಶ ಮಾಡುವುದೇ ನನ್ನ ಗುರಿ!” ಆದ್ದರಿಂದ ಅದನ್ನು ನಾಮಾವಶೇಷ ಮಾಡುವುದೇ ಇರುವ ಏಕೈಕ ಮಾರ್ಗ ಎನ್ನುತ್ತಾರೆ ಮೋದಿಜಿ. ಸರ್ವನಾಶ ಮಾಡಬೇಕೆಂದು ಹೊರಟ ರಾಕ್ಷಸರು ತಾವೇ ಸರ್ವನಾಶವಾದರು ಎಂದು ಪುರಾಣಗಳು ಹೇಳುತ್ತವೆ.
ಪ್ರಧಾನಿಯಾಗುವ ಆತುರದಲ್ಲಿ ಮೋದಿಜಿಗೆ ಇತಿಹಾಸ ಓದಲು ಪುರುಸೊತ್ತಿಲ್ಲವಾದರೂ, ಅವರಲ್ಲಿ ಮೌಢ್ಯ ಮತ್ತು ಅಧಿಕಾರ ಪಿಪಾಸೆ ಯಥೇಚ್ಛವಾಗಿದೆ!
ಗಾಂಧೀಜಿ ಕಾಂಗ್ರೆಸ್ಸನ್ನು ವಿಸರ್ಜನೆ ಮಾಡಲು ಏಕೆ ಹೇಳಿದರು? ಸ್ವಾತಂತ್ರ್ಯ ಪಡೆಯಲು ಬಲಿದಾನ ಮಾಡಿದ ಸಂಸ್ಥೆ, ದೇಶದಿಂದ ಇಂಗ್ಲಿಷರನ್ನು ಓಡಿಸಿ ಗುಲಾಮಗಿರಿಯಿಂದ ಭಾರತವನ್ನು ಪಾರು ಮಾಡಿದ ಕಾಂಗ್ರೆಸ್ ಸಂಸ್ಥೆಯ ಮುಂಚೂಣಿಯಲ್ಲಿರುವವರಿಗೆ ಸತತವಾಗಿ ಅಧಿಕಾರದಲ್ಲಿರಬೇಕು, ಅಧಿಕಾರ ಅನುಭವಿಸಬೇಕು ಎಂಬ ಹಂಬಲ ಸಹಜವಾಗಿಯೇ ಇರುತ್ತದೆ. ಕಾಂಗ್ರೆಸ್ ಅಧಿಕಾರ ದಾಹ ಬಿಟ್ಟು ರಾಜಕೀಯದಿಂದ ನಿವೃತ್ತಿ ಆಗಿ ಲೋಕಸೇವಾ ಸಂಘವಾಗಿ ಪರಿವರ್ತನೆಯಾಗಬೇಕು. ದುರಾಡಳಿತ ನಡೆಸುವ ಸರ್ಕಾರ ಮತ್ತು ಪಕ್ಷದ ಮೇಲೆ ಸಂಘರ್ಷ ನಡೆಸಬೇಕು.
ಭಾರತಕ್ಕೆ ಸ್ವಾತಂತ್ರ್ಯ ಪ್ರಾಪ್ತವಾದ ಕೂಡಲೇ ಕಾಂಗ್ರೆಸ್ಸನ್ನು ವಿಸರ್ಜನೆ ಮಾಡಲು ಗಾಂಧೀಜಿ ಹೇಳಿದ್ದು ಮೇಲಿನ ಕಾರಣಗಳಿಗಾಗಿ. ಕಾಂಗ್ರೆಸ್ ಧುರೀಣರು ಗಾಂಧೀಜಿಯವರ ಈ ಮಾತನ್ನು ಕೇಳಲಿಲ್ಲ. ಗಾಂಧೀಜಿ ಏಕೆ ಈ ಮಾತನ್ನು ಹೇಳಿದರು ಎಂಬುದು ಗೊತ್ತಿಲ್ಲ ಎಂದು ಮೋದಿಜೀ ಹೇಳುತ್ತಾರೆ.
ಇತಿಹಾಸದ ಅರಿವಿಲ್ಲದ ಮೋದಿಜಿಗೆ ಗಾಂಧೀಜಿಯವರ ಹಿರಿತನ, ಯೋಗ್ಯತೆ ಅರ್ಥವಾಗಿಲ್ಲ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...