HomeUncategorized41 ದಲಿತ ಕುಟುಂಬಗಳಿಗೆ ಸರಕಾರವೇ ಪುನರ್ವಸತಿ ಕಲ್ಪಿಸಿದ ಸ್ಥಳದಿಂದ ಜಾಗ ಖಾಲಿ ಮಾಡಲು ನೋಟಿಸ್

41 ದಲಿತ ಕುಟುಂಬಗಳಿಗೆ ಸರಕಾರವೇ ಪುನರ್ವಸತಿ ಕಲ್ಪಿಸಿದ ಸ್ಥಳದಿಂದ ಜಾಗ ಖಾಲಿ ಮಾಡಲು ನೋಟಿಸ್

- Advertisement -
- Advertisement -

ಉತ್ತರಪ್ರದೇಶದ ಹಾರ್ಪುರದ ಇಂದ್ರನಗರ ಕಾಲೋನಿಯಲ್ಲಿ 1986ರಿಂದ ವಾಸಿಸುತ್ತಿರುವ ದಲಿತ ಸಮುದಾಯಕ್ಕೆ ಸೇರಿದ 41 ಕುಟುಂಬಗಳಿಗೆ ನೀವು ಈ ಸ್ಥಳದಲ್ಲಿ ಅಕ್ರಮವಾಗಿ ವಾಸಿಸುತ್ತಿದ್ದೀರಿ, ಜಾಗ ಖಾಲಿ ಮಾಡಿ ಎಂದು ಪುರಸಭೆಯಿಂದ ನೋಟಿಸ್ ಜಾರಿಗೊಳಿಸಲಾಗಿದೆ.

ಇಲ್ಲಿ ದಲಿತರಿಗೆ ಸೇರಿದ 41 ಮನೆಗಳಲ್ಲಿ ನಲವತ್ತು ಮನೆಗಳನ್ನು ಪ್ರಧಾನ ಮಂತ್ರಿ ಆವಾಸ್ ಯೋಜನೆ (PMAY) ಅಡಿಯಲ್ಲಿ ನಿರ್ಮಿಸಲಾಗಿತ್ತು ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

2022ರ ವೇಳೆಗೆ “ಎಲ್ಲರಿಗೂ ವಸತಿ” ಒದಗಿಸುವ ಉದ್ದೇಶದಿಂದ ಆವಾಸ್ ಯೋಜನೆಯನ್ನು 2016ರಲ್ಲಿ ಪ್ರಾರಂಭಿಸಲಾಯಿತು. ಗ್ರಾಮೀಣ ಪ್ರದೇಶಗಳಲ್ಲಿ ಮನೆಗಳ ನಿರ್ಮಾಣವನ್ನು ಬೆಂಬಲಿಸುವ ಯೋಜನೆಯನ್ನು ಪ್ರಧಾನ ಮಂತ್ರಿ ಆವಾಸ್ ಯೋಜನೆ – ಗ್ರಾಮೀಣ (PMAY-G) ಎಂದು ಕರೆಯಲಾಗುತ್ತದೆ ಮತ್ತು ನಗರ ಪ್ರದೇಶಗಳಿಗೆ ಇದನ್ನು ಪ್ರಧಾನ ಮಂತ್ರಿ ಆವಾಸ್ ಯೋಜನೆ – ನಗರ (PMAY-U) ಎಂದು ಕರೆಯಲಾಗುತ್ತದೆ.

ಇದೇ ಏಪ್ರಿಲ್ 8 ರಂದು ನೀಡಲಾದ ನೋಟಿಸ್‌ನಲ್ಲಿ ದಲಿತರು ಮನೆಗಳನ್ನು ನಿರ್ಮಿಸಿರುವ ಭೂಮಿ ಸರ್ಕಾರಕ್ಕೆ ಸೇರಿದ್ದು ಮತ್ತು ಅದು ಹಿಂದೆ ಕೊಳವಾಗಿತ್ತು ಎಂದು ಹೇಳಿದೆ.

ಗರ್ಮುಕ್ತೇಶ್ವರ ಪುರಸಭೆಯ ಕಾರ್ಯನಿರ್ವಾಹಕ ಅಧಿಕಾರಿ ಮುಕ್ತಾ ಸಿಂಗ್ ಅವರು ನೀಡಿದ ನೋಟಿಸ್‌ನಲ್ಲಿ, “ನೀವು ನಗರ ಪಾಲಿಕೆಯ ಭೂಮಿಯನ್ನು ಅಕ್ರಮವಾಗಿ ಆಕ್ರಮಿಸಿಕೊಂಡು ಅದರಲ್ಲಿ ಮನೆ ಕಟ್ಟಿದ್ದೀರಿ ಮತ್ತು ಈ ಮನೆಗಳನ್ನು ತೆರವು ಮಾಡಲು ನೀವು ಬಯಸುತ್ತಿಲ್ಲವಾದ್ದರಿಂದ, ನಿಮ್ಮ ವಿರುದ್ಧ ಕಾನೂನು ಕ್ರಮಗಳನ್ನು ಪ್ರಾರಂಭಿಸುವುದು ಮುಖ್ಯವಾಗಿದೆ. ಈ ನೋಟಿಸ್ ಸ್ವೀಕರಿಸಿದ 15 ದಿನಗಳಲ್ಲಿ, ಭೂಮಿಯಲ್ಲಿರುವ ನಿಮಗೆ ಸಂಬಂಧಿಸಿದ ವಸ್ತುಗಳನ್ನು ತೆಗೆದುಹಾಕಿ ಮತ್ತು ಭೂಮಿಯನ್ನು ನಗರ ಪಾಲಿಕೆಗೆ ಒಪ್ಸಿಪಿ, ಇಲ್ಲದಿದ್ದರೆ ನಿಮ್ಮ ವಿರುದ್ಧದ ಪ್ರಕರಣಕ್ಕೆ ನೀವೇ ಜವಾಬ್ದಾರರಾಗಿರುತ್ತೀರಿ” ಎಂದು ಬರೆದಿದ್ದಾರೆ.

ನಿವಾಸಿಗಳಿಗೆ ಹಲವಾರು ಬಾರಿ ಮೌಖಿಕವಾಗಿ ಎಚ್ಚರಿಕೆ ನೀಡಲಾಗಿದ್ದರೂ, “ಅವರ ಅಹಂಕಾರದಿಂದಾಗಿ” ಅವರು ಪುರಸಭೆಯ ಆದೇಶಗಳನ್ನು ಪಾಲಿಸಿಲ್ಲ ಎಂದು ನೋಟಿಸ್‌ನಲ್ಲಿ ಆರೋಪಿಸಲಾಗಿದೆ.

“ನಗರಸಭೆಯ ಅಧಿಕಾರಿಗಳು ನಿಮಗೆ ಭೂಮಿಯನ್ನು ಖಾಲಿ ಮಾಡುವಂತೆ ಹಲವಾರು ಬಾರಿ ಮೌಖಿಕವಾಗಿ ಆದೇಶ ನೀಡಲಾಗಿದ್ದರೂ, ಶಾಸನಬದ್ಧ ನಿಬಂಧನೆಗಳನ್ನು ಪಾಲಿಸದೆ ನೀವು ಭೂಮಿಯನ್ನು ಖಾಲಿ ಮಾಡಲು ನಿರಾಕರಿಸುತ್ತಿದ್ದೀರಿ ಮತ್ತು ನಿಮ್ಮ ಭೂ ದಾಖಲೆಗಳಲ್ಲಿ ಸದರಿ ಭೂಮಿಯನ್ನು ಸರಕಾರವು ತಮಗೆ ನೀಡಿದೆ ಮತ್ತು ದಾಖಲೆಗಳನ್ನು ನೀಡಿದೆ ಎಂದು ನೀವು ಹೇಳುತ್ತೀರಿ. ಸದರಿ ಭೂಮಿಯಲ್ಲಿ ಯಾವುದೇ ವಸತಿ ಪ್ಲಾಟ್‌ಗಳ ದಾಖಲೆಗಳಿಲ್ಲ ಮತ್ತು ಯಾವುದೇ ಸಂದರ್ಭದಲ್ಲಿ ಯಾರ ಹೆಸರಿನಲ್ಲಿ ಭೂ ದಾಖಲೆಗಳನ್ನು ಹೊಂದಿದ್ದರೆ ಅದನ್ನು ರದ್ದುಗೊಳಿಸಲಾಗಿದೆ.” ಎಂದು ಅವರು ಹೇಳಿದ್ದಾರೆ.

ಪ್ರಕಟಣೆಯೊಂದಿಗೆ ಮಾತನಾಡಿದ ಜಿಲ್ಲಾ ಮ್ಯಾಜಿಸ್ಟ್ರೇಟ್ ಪ್ರೇರಣಾ ಶರ್ಮಾ, “ನಾವು ಈ ವಿಷಯವನ್ನು ಪರಿಶೀಲಿಸುತ್ತಿದ್ದೇವೆ. ಇದನ್ನು ಮಂಗಳವಾರ ನಮ್ಮ ಗಮನಕ್ಕೆ ತರಲಾಗಿದೆ. ಜನರ ಹಕ್ಕುಗಳು ಸರಿಯಾಗಿದ್ದರೆ, ನಾವು ತನಿಖೆ ಮಾಡುತ್ತೇವೆ. PMAY ಯೋಜನೆಯಡಿಯಲ್ಲಿ ಭೂ ದಾಖಲೆಗಳ ದೃಢೀಕರಣವನ್ನು ನಾವು ಪರಿಶೀಲಿಸುವುದಿಲ್ಲ, ದಸ್ತಾವೇಜಿನ ಪ್ರಕಾರ ವ್ಯಕ್ತಿಯು ಸರಿಯಾದ ಮಾಲೀಕರೇ ಎಂಬುದನ್ನು ಮಾತ್ರ ನಾವು ಪರಿಶೀಲಿಸುತ್ತೇವೆ. ನಾವು ಹಕ್ಕುಗಳನ್ನು ಪರಿಶೀಲಿಸಬೇಕಾಗಿದೆ” ಎಂದು ವಿವರಿಸಿದ್ದಾರೆ.

ಆದಾಗ್ಯೂ ನೋಟಿಸ್‌ನಲ್ಲಿ ಬಳಸಲಾದ ಸ್ವರ ಮತ್ತು ಭಾಷೆಯ ಬಗ್ಗೆ ಕೇಳಿದಾಗ, ಅಧಿಕಾರಿಗಳು ಪ್ರತಿಕ್ರಿಯಿಸಲು ನಿರಾಕರಿಸಿದರು. ನೋಟಿಸ್ ಸ್ವೀಕರಿಸಿದ ನಂತರ ಹಲವಾರು ನಿವಾಸಿಗಳು ಕಾರ್ಯನಿರ್ವಾಹಕ ಅಧಿಕಾರಿಯನ್ನು ಭೇಟಿಯಾಗಿದ್ದಾರೆ.

ವರದಿಯ ಪ್ರಕಾರ 58 ವರ್ಷದ ಗಂಗಾರಾಮ್, “ನಾನು 4ನೇ ತರಗತಿಯವರೆಗೆ ಮಾತ್ರ ಓದಿದ್ದೇನೆ ಮತ್ತು ನನ್ನ ಹೆಸರನ್ನು ಮಾತ್ರ ಓದಬಲ್ಲೆ. ಕಾಲೋನಿಯಲ್ಲಿರುವ ಇತರರು ನನ್ನ ಮನೆಯನ್ನು ಖಾಲಿ ಮಾಡಬೇಕೆಂದು ನನಗೆ ವಿವರಿಸಿದರು. ನಮ್ಮ ಕಾಲೋನಿ ಅಕ್ರಮ ಎಂದು ಅಧಿಕಾರಿಗಳು ನಮಗೆ ಹೇಳಿದರು. ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಲು ಅವರು ನಮಗೆ ಹೇಳಿದರು. ನಾವು ಬಡವರು, ನಾವು ದೂರು ನೀಡಬಹುದು.” ಎಂದು ಆವಲತ್ತುಕೊಂಡಿದ್ದಾರೆ.

PMAY ಯೋಜನೆಯಡಿಯಲ್ಲಿ ಇಲ್ಲಿ ಮನೆ ನಿರ್ಮಾಣಕ್ಕೆ ಮೊದಲ COVID-19 ಲಾಕ್‌ಡೌನ್ ನಂತರ ನಾನು ಮೂರು ಕಂತುಗಳನ್ನು ಪಡೆದೆನು. ತಲಾ 1 ಲಕ್ಷ ರೂ. ಮತ್ತು ಮುಂದಿನ ಕಂತುಗಳಲ್ಲಿ ತಲಾ 50,000 ರೂ. ಪಡೆದೆನು. ಆಳಿದುಳಿದ ಮನೆ ನಿರ್ಮಾಣವನ್ನು ಪೂರ್ಣಗೊಳಿಸಲು ಹೆಚ್ಚುವರಿಯಾಗಿ ತಮ್ಮ ಉಳಿತಾಯದಿಂದ 1.5 ಲಕ್ಷ ರೂ.ಗಳನ್ನು ಬಳಕೆ ಮಾಡಿದೆ ಎಂದು ಅವರು ಹೇಳಿದರು.

1986ರಲ್ಲಿ ಗಾಜಿಯಾಬಾದ್ ಜಿಲ್ಲೆಯ ಭಾಗವಾಗಿದ್ದ ಗರ್ಮುಕ್ತೇಶ್ವರದ ಚುಪ್ಲಾದಿಂದ ಸರಕಾರವು ಆ ಪ್ರದೇಶಕ್ಕೆ ತಮ್ಮನ್ನು ಸ್ಥಳಾಂತರಿಸಲಾಗಿದೆ ಎಂದು ನಿವಾಸಿಗಳು ಹೇಳಿದರು.

ಆ ಸಮಯದಲ್ಲಿ ಹೊರಡಿಸಲಾದ ನೋಟಿಸ್‌ನಲ್ಲಿ, “ಪುನರ್ವಸತಿ ಉದ್ದೇಶಕ್ಕಾಗಿ, ಸಾಮೂಹಿಕ ಅರ್ಜಿ ಪತ್ರವನ್ನು ಪರಿಗಣಿಸಿ, ಪುನರ್ವಸತಿ ಸಮಸ್ಯೆ ಬಗೆಹರಿಯಲು 100 ಗಜ ಭೂಮಿಯನ್ನು ನಿಮಗೆ ನೀಡಲು ನಾವು ನಿರ್ಧರಿಸಿದ್ದೇವೆ. ಭೂಮಿಯನ್ನು ಮಾರಾಟ ಮಾಡುವ ಮತ್ತು ವರ್ಗಾಯಿಸುವ ಹಕ್ಕು ನಿಮಗೆ ಇರುವುದಿಲ್ಲ. ನೀವು ಮತ್ತು ನಿಮ್ಮ ಕುಟುಂಬ ಸದಸ್ಯರು ವಸತಿ ಉದ್ದೇಶಗಳಿಗಾಗಿ ಭೂಮಿಯನ್ನು ಬಳಸುತ್ತೀರಿ” ಎಂದಿದೆ.

ಅವರು ಸ್ಥಳಾಂತರಗೊಂಡಾಗ ಅಲ್ಲಿ ಬತ್ತಿದ ಕೊಳವಿತ್ತು ಎಂದು ಗಂಗಾರಾಮ್ ಹೇಳುತ್ತಾರೆ. ಆದಾಗ್ಯೂ ನಗರ ಪಾಲಿಕೆ ಅಧಿಕಾರಿಗಳು ಅದನ್ನು ಮುಚ್ಚಿಸಿ ಅಲ್ಲಿಗೆ ನಮ್ಮನ್ನು ಸ್ಥಳಾಂತರಿಸಲು ಸಹಾಯ ಮಾಡಿದರು ಎಂದು ಅವರು ಹೇಳುತ್ತಾರೆ.

ಮತ್ತೊಬ್ಬ ನಿವಾಸಿ ಕಮಲಾ ಅವರು, “ಅವರು (ಅಧಿಕಾರಿಗಳು) ತಾವು ಮಾಡಬೇಕಾದ್ದನ್ನು ಮಾಡಿದ್ದೇವೆ ಎಂದು ನಮಗೆ ಹೇಳಿದರು, ಮತ್ತು ಈಗ ನಮಗೆ ಸಾಧ್ಯವಾದದ್ದನ್ನು ಮಾಡುವುದು ನಮ್ಮ ಜವಾಬ್ದಾರಿಯಾಗಿದೆ… ನಮಗೆ ನಿದ್ರೆ ಬರುತ್ತಿಲ್ಲ, ನಮ್ಮ ಉಳಿತಾಯದ ಎಲ್ಲಾ ಹಣವನ್ನು ನಮ್ಮ ಮನೆಗಳನ್ನು ನಿರ್ಮಿಸಲು ಬಳಸಿದ್ದೇವೆ. ಈಗ ನಾವು ಎಲ್ಲಿಗೆ ಹೋಗುಬೇಕು” ಎಂದು ಪ್ರಶ್ನಿಸುತ್ತಾರೆ.

ಹಣ, ಹೆಂಡಕ್ಕೆ ಮತ ನೀಡಿದರೆ ಮುಂದಿನ ಜನ್ಮದಲ್ಲಿ ನಾಯಿ, ಬೆಕ್ಕುಗಳಾಗಿ ಹುಟ್ಟುತ್ತೀರಿ: ಬಿಜೆಪಿ ಶಾಸಕಿ ಉಷಾ ಠಾಕೂರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಂಗ್ರೆಸ್ ನಿಂದ ಏಪ್ರಿಲ್ 12ರಂದು ‘ರನ್ ಫಾರ್ ಅಂಬೇಡ್ಕರ್, ರನ್ ಫಾರ್ ಕಾನ್ಸ್ಟಿಟ್ಯೂಷನ್’ ಮ್ಯಾರಥಾನ್ ಆಯೋಜನೆ

ನವದೆಹಲಿ: ಬಿ.ಆರ್. ಅಂಬೇಡ್ಕರ್ ಅವರ ಜನ್ಮ ದಿನಾಚರಣೆಯ ಅಂಗವಾಗಿ ಕಾಂಗ್ರೆಸ್ ಭಾನುವಾರ 'ಅಂಬೇಡ್ಕರ್‌ಗಾಗಿ ಓಟ, ಸಂವಿಧಾನಕ್ಕಾಗಿ ಓಟ' ಮ್ಯಾರಥಾನ್ ಆಯೋಜಿಸಿದೆ. ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಇಲ್ಲಿನ ಮಂಡಿ ಹೌಸ್‌ನಿಂದ ಮ್ಯಾರಥಾನ್‌ಗೆ...

ಮುಖ್ಯವಾಹಿನಿಗೆ ಬಂದ 42 ಕೇಡರ್‌ಗಳು; ರಾಜ್ಯದಲ್ಲಿ’ಮಾವೋವಾದಿ ಕಾರ್ಯಾಚರಣೆ’ ಅಂತ್ಯವಾಗಿದೆ ಎಂದ ತೆಲಂಗಾಣ ಪೊಲೀಸರು

ರಾಜ್ಯದಲ್ಲಿ ಸಿಪಿಐ (ಮಾವೋವಾದಿ) ಸಂಘಟನೆಯ ಕಾರ್ಯಚರಣೆ ಅಂತಿಮವಾಗಿದೆ ಎಂದು ತೆಲಂಗಾಣ ಪೊಲೀಸರು ಘೋಷಣೆ ಮಾಡಿದ್ದಾರೆ. ಬೆಟಾಲಿಯನ್ ಕಮಾಂಡರ್ ಮತ್ತು ಎರಡು ಪ್ರಮುಖ ಗುಂಪುಗಳ ಹಿರಿಯ ನಾಯಕತ್ವ ಸೇರಿದಂತೆ ನಿಷೇಧಿತ ಸಂಘಟನೆಯ 42 ಕೇಡರ್‌ಗಳು...

‘ಹಿಂದಿ ನಿರ್ಮೂಲನೆ ಮಾಡುತ್ತೇವೆ’ ಎಂದು ಸಚಿವರು ಹೇಳಿಲ್ಲ; ಹಿಂದಿ ಪರ ಅರ್ಜಿ ವಜಾ; ₹1 ಲಕ್ಷ ದಂಡ ವಿಧಿಸಿದ ಹೈಕೋರ್ಟ್‌

ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ಹಿಂದಿ ಸೇರಿದಂತೆ ತೃತೀಯ ಭಾಷಾ ವಿಷಯಗಳ ಮೌಲ್ಯಮಾಪನ ಸಂಬಂಧ ರಾಜ್ಯ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ನೀಡಿದ ಹೇಳಿಕೆಯ ವಿರುದ್ಧ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯನ್ನು (ಪಿಐಎಲ್) ಕರ್ನಾಟಕ...

ದೆಹಲಿ| ಮುಸ್ಲಿಮರ ಮೇಲಿನ ದ್ವೇಷಕ್ಕೆ ಜೀವಂತ ಹಂದಿಗಳನ್ನು ಪೂಜಿಸುತ್ತಿರುವ ಹಿಂದೂಗಳು

ಹಳೆಯ ದೆಹಲಿಯ ಹಿಂದೂ-ಮುಸ್ಲಿಂ ಜನರು ವಾಸಿಸುವ ತ್ರನಗರದ ನೆರೆಹೊರೆಯಲ್ಲಿ ಹಿಂದೂ ಕುಟುಂಬಗಳು ಜೀವಂತ ಹಂದಿಗಳನ್ನು ಪೂಜಿಸುತ್ತಿದ್ದಾರೆ. ಮುಸ್ಲಿಮರ ಮೇಲಿನ ದ್ವೇಷಕ್ಕೆ ಮನೆಯ ಮುಂಭಾಗ ಅಲಂಕೃತ ಹಂದಿ (ವರಹಾಸ್ವಾಮಿ) ಚಿತ್ರಗಳನ್ನು ಅಳವಡಿಸಿದ್ದಾರೆ ಎಂದು 'ದಿ...

ಪ. ಬಂಗಾಳ: ಮಹಿಳೆಯರಿಗೆ ₹3,000 ರಿಂದ 6 ತಿಂಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ ಸೇರಿದಂತೆ ಹಲವು ಭರವಸೆ ನೀಡಿದ ಬಿಜೆಪಿ 

ಕೋಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಪ್ರಚಾರ ಆರಂಭವಾಗಿದ್ದು, ಮೊದಲ ಹಂತದ ಮತದಾನಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ಕೇಂದ್ರ ಗೃಹ ಸಚಿವ ಅಮಿತ್ ಶಾ ಶುಕ್ರವಾರ ಪಶ್ಚಿಮ ಬಂಗಾಳದ ಬಿಜೆಪಿ...

ಹಾಸನ| ರೈತ ಮುಖಂಡ ವಾಸುದೇವ ಕಲ್ಕೆರೆ ಮೇಲೆ ಹಲ್ಲೆ; ದುಷ್ಕರ್ಮಿಗಳ ಬಂಧನಕ್ಕೆ ಕೆಪಿಆರ್‌ಎಸ್‌ ಆಗ್ರಹ

ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನ ಕರ್ನಾಟಕ ಪ್ರಾಂತ ರೈತ ಸಂಘದ (ಕೆಪಿಆರ್‌ಎಸ್‌) ಕಾರ್ಯದರ್ಶಿ ಹಾಗೂ ಕಲ್ಕೆರೆ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ, ಡಿವೈಎಫ್‌ಐ ಜಿಲ್ಲಾಧ್ಯಕ್ಷ ವಾಸುದೇವ ಕಲ್ಕೆರೆ ಮೇಲೆ ಹಲ್ಲೆ-ದೌರ್ಜನ್ಯ ನಡೆಸಿರುವ ಗೂಂಡಾಗಳನ್ನು...

ಉತ್ತರ ಪ್ರದೇಶ| ಡಿಜಿಟಲ್ ಬಂಧನದಿಂದ ಪೋಷಕರನ್ನು ರಕ್ಷಿಸಿದ 8ನೇ ತರಗತಿ ವಿದ್ಯಾರ್ಥಿ

ಸುಮಾರು 10 ಗಂಟೆಗಳ ಕಾಲ ವೀಡಿಯೊ ಕರೆ ಮೂಲಕ ಡಿಜಿಟಲ್ ಬಂಧನಕ್ಕೆ ಒಳಗಾಗಿದ್ದ ತನ್ನ ಹೆತ್ತವರು ಹಣ ಕಳೆದುಕೊಳ್ಳದಂತೆ 8ನೇ ತರಗತಿಯ ಬಾಲಕನೊಬ್ಬ ರಕ್ಷಿಸಿರುವ ಘಟನೆ ಬೆಳಕಿಗೆ ಬಂದಿದೆ. ಉತ್ತರ ಪ್ರದೇಶದ ಬರೇಲಿಯಲ್ಲಿ...

ಅಸ್ಸಾಂ: ಪವನ್ ಖೇರಾ ವಿರುದ್ಧದ ಪ್ರಕರಣದಲ್ಲಿ ಒಂದು ವಾರದ ನಿರೀಕ್ಷಣ ಜಾಮೀನು ನೀಡಿದ ತೆಲಂಗಾಣ ಹೈಕೋರ್ಟ್

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರು ಸಲ್ಲಿಸಿದ ಎಫ್‌ಐಆರ್‌ಗೆ ಸಂಬಂಧಿಸಿದಂತೆ ತೆಲಂಗಾಣ ಹೈಕೋರ್ಟ್ ಶುಕ್ರವಾರ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರಿಗೆ ಒಂದು ವಾರದ...

ನಿವಾಸದಲ್ಲಿ ನಗದು ಪತ್ತೆ ಪ್ರಕರಣದಲ್ಲಿ ಸಿಲುಕಿದ್ದ ನ್ಯಾಯಮೂರ್ತಿ ಯಶವಂತ್ ವರ್ಮಾ ರಾಜೀನಾಮೆ

ತಮ್ಮ ನಿವಾಸದಲ್ಲಿ ನಗದು ಪತ್ತೆ ಆರೋಪದ ಕೇಂದ್ರಬಿಂದುವಾಗಿದ್ದ ಅಲಹಾಬಾದ್ ಹೈಕೋರ್ಟ್ ನ್ಯಾಯಾಧೀಶ ನ್ಯಾಯಮೂರ್ತಿ ಯಶವಂತ್ ವರ್ಮಾ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ತಮ್ಮ ರಾಜೀನಾಮೆಯನ್ನು ಸಲ್ಲಿಸಿದ್ದಾರೆ. ಕಳೆದ ವರ್ಷ ಏಪ್ರಿಲ್ 5...

ಆಂಧ್ರಪ್ರದೇಶ: ಬೇಸಿಗೆ ವಿಹಾರಕ್ಕೆಂದು ತೆರಳಿದ್ದ ಮೂವರು ಅಪ್ರಾಪ್ತ ಬಾಲಕಿಯರು ಅನಂತಗಿರಿ ಜಲಪಾತದಲ್ಲಿ ಮುಳುಗಿ ಸಾವು 

ಅನಂತಗಿರಿ: ಬೇಸಿಗೆ ವಿಹಾಕ್ಕೆಂದು ತೆರಳಿದ್ದ ಮೂವರು ಅಪ್ರಾಪ್ತ ಬಾಲಕಿಯರು ಅನಂತಗಿರಿ ಜಲಪಾತದಲ್ಲಿ ಸೆಲ್ಫಿ ತೆಗೆದುಕೊಳ್ಳಲು ಜಲಪಾತಕ್ಕೆ ಇಳಿದು ನೀರಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಅಲ್ಲೂರಿ ಸೀತಾರಾಮರಾಜು ಮೂಲಗುಮ್ಮಿ ಗ್ರಾಮದಲ್ಲಿ ನಾಲ್ವರು...