HomeUncategorized41 ದಲಿತ ಕುಟುಂಬಗಳಿಗೆ ಸರಕಾರವೇ ಪುನರ್ವಸತಿ ಕಲ್ಪಿಸಿದ ಸ್ಥಳದಿಂದ ಜಾಗ ಖಾಲಿ ಮಾಡಲು ನೋಟಿಸ್

41 ದಲಿತ ಕುಟುಂಬಗಳಿಗೆ ಸರಕಾರವೇ ಪುನರ್ವಸತಿ ಕಲ್ಪಿಸಿದ ಸ್ಥಳದಿಂದ ಜಾಗ ಖಾಲಿ ಮಾಡಲು ನೋಟಿಸ್

- Advertisement -
- Advertisement -

ಉತ್ತರಪ್ರದೇಶದ ಹಾರ್ಪುರದ ಇಂದ್ರನಗರ ಕಾಲೋನಿಯಲ್ಲಿ 1986ರಿಂದ ವಾಸಿಸುತ್ತಿರುವ ದಲಿತ ಸಮುದಾಯಕ್ಕೆ ಸೇರಿದ 41 ಕುಟುಂಬಗಳಿಗೆ ನೀವು ಈ ಸ್ಥಳದಲ್ಲಿ ಅಕ್ರಮವಾಗಿ ವಾಸಿಸುತ್ತಿದ್ದೀರಿ, ಜಾಗ ಖಾಲಿ ಮಾಡಿ ಎಂದು ಪುರಸಭೆಯಿಂದ ನೋಟಿಸ್ ಜಾರಿಗೊಳಿಸಲಾಗಿದೆ.

ಇಲ್ಲಿ ದಲಿತರಿಗೆ ಸೇರಿದ 41 ಮನೆಗಳಲ್ಲಿ ನಲವತ್ತು ಮನೆಗಳನ್ನು ಪ್ರಧಾನ ಮಂತ್ರಿ ಆವಾಸ್ ಯೋಜನೆ (PMAY) ಅಡಿಯಲ್ಲಿ ನಿರ್ಮಿಸಲಾಗಿತ್ತು ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

2022ರ ವೇಳೆಗೆ “ಎಲ್ಲರಿಗೂ ವಸತಿ” ಒದಗಿಸುವ ಉದ್ದೇಶದಿಂದ ಆವಾಸ್ ಯೋಜನೆಯನ್ನು 2016ರಲ್ಲಿ ಪ್ರಾರಂಭಿಸಲಾಯಿತು. ಗ್ರಾಮೀಣ ಪ್ರದೇಶಗಳಲ್ಲಿ ಮನೆಗಳ ನಿರ್ಮಾಣವನ್ನು ಬೆಂಬಲಿಸುವ ಯೋಜನೆಯನ್ನು ಪ್ರಧಾನ ಮಂತ್ರಿ ಆವಾಸ್ ಯೋಜನೆ – ಗ್ರಾಮೀಣ (PMAY-G) ಎಂದು ಕರೆಯಲಾಗುತ್ತದೆ ಮತ್ತು ನಗರ ಪ್ರದೇಶಗಳಿಗೆ ಇದನ್ನು ಪ್ರಧಾನ ಮಂತ್ರಿ ಆವಾಸ್ ಯೋಜನೆ – ನಗರ (PMAY-U) ಎಂದು ಕರೆಯಲಾಗುತ್ತದೆ.

ಇದೇ ಏಪ್ರಿಲ್ 8 ರಂದು ನೀಡಲಾದ ನೋಟಿಸ್‌ನಲ್ಲಿ ದಲಿತರು ಮನೆಗಳನ್ನು ನಿರ್ಮಿಸಿರುವ ಭೂಮಿ ಸರ್ಕಾರಕ್ಕೆ ಸೇರಿದ್ದು ಮತ್ತು ಅದು ಹಿಂದೆ ಕೊಳವಾಗಿತ್ತು ಎಂದು ಹೇಳಿದೆ.

ಗರ್ಮುಕ್ತೇಶ್ವರ ಪುರಸಭೆಯ ಕಾರ್ಯನಿರ್ವಾಹಕ ಅಧಿಕಾರಿ ಮುಕ್ತಾ ಸಿಂಗ್ ಅವರು ನೀಡಿದ ನೋಟಿಸ್‌ನಲ್ಲಿ, “ನೀವು ನಗರ ಪಾಲಿಕೆಯ ಭೂಮಿಯನ್ನು ಅಕ್ರಮವಾಗಿ ಆಕ್ರಮಿಸಿಕೊಂಡು ಅದರಲ್ಲಿ ಮನೆ ಕಟ್ಟಿದ್ದೀರಿ ಮತ್ತು ಈ ಮನೆಗಳನ್ನು ತೆರವು ಮಾಡಲು ನೀವು ಬಯಸುತ್ತಿಲ್ಲವಾದ್ದರಿಂದ, ನಿಮ್ಮ ವಿರುದ್ಧ ಕಾನೂನು ಕ್ರಮಗಳನ್ನು ಪ್ರಾರಂಭಿಸುವುದು ಮುಖ್ಯವಾಗಿದೆ. ಈ ನೋಟಿಸ್ ಸ್ವೀಕರಿಸಿದ 15 ದಿನಗಳಲ್ಲಿ, ಭೂಮಿಯಲ್ಲಿರುವ ನಿಮಗೆ ಸಂಬಂಧಿಸಿದ ವಸ್ತುಗಳನ್ನು ತೆಗೆದುಹಾಕಿ ಮತ್ತು ಭೂಮಿಯನ್ನು ನಗರ ಪಾಲಿಕೆಗೆ ಒಪ್ಸಿಪಿ, ಇಲ್ಲದಿದ್ದರೆ ನಿಮ್ಮ ವಿರುದ್ಧದ ಪ್ರಕರಣಕ್ಕೆ ನೀವೇ ಜವಾಬ್ದಾರರಾಗಿರುತ್ತೀರಿ” ಎಂದು ಬರೆದಿದ್ದಾರೆ.

ನಿವಾಸಿಗಳಿಗೆ ಹಲವಾರು ಬಾರಿ ಮೌಖಿಕವಾಗಿ ಎಚ್ಚರಿಕೆ ನೀಡಲಾಗಿದ್ದರೂ, “ಅವರ ಅಹಂಕಾರದಿಂದಾಗಿ” ಅವರು ಪುರಸಭೆಯ ಆದೇಶಗಳನ್ನು ಪಾಲಿಸಿಲ್ಲ ಎಂದು ನೋಟಿಸ್‌ನಲ್ಲಿ ಆರೋಪಿಸಲಾಗಿದೆ.

“ನಗರಸಭೆಯ ಅಧಿಕಾರಿಗಳು ನಿಮಗೆ ಭೂಮಿಯನ್ನು ಖಾಲಿ ಮಾಡುವಂತೆ ಹಲವಾರು ಬಾರಿ ಮೌಖಿಕವಾಗಿ ಆದೇಶ ನೀಡಲಾಗಿದ್ದರೂ, ಶಾಸನಬದ್ಧ ನಿಬಂಧನೆಗಳನ್ನು ಪಾಲಿಸದೆ ನೀವು ಭೂಮಿಯನ್ನು ಖಾಲಿ ಮಾಡಲು ನಿರಾಕರಿಸುತ್ತಿದ್ದೀರಿ ಮತ್ತು ನಿಮ್ಮ ಭೂ ದಾಖಲೆಗಳಲ್ಲಿ ಸದರಿ ಭೂಮಿಯನ್ನು ಸರಕಾರವು ತಮಗೆ ನೀಡಿದೆ ಮತ್ತು ದಾಖಲೆಗಳನ್ನು ನೀಡಿದೆ ಎಂದು ನೀವು ಹೇಳುತ್ತೀರಿ. ಸದರಿ ಭೂಮಿಯಲ್ಲಿ ಯಾವುದೇ ವಸತಿ ಪ್ಲಾಟ್‌ಗಳ ದಾಖಲೆಗಳಿಲ್ಲ ಮತ್ತು ಯಾವುದೇ ಸಂದರ್ಭದಲ್ಲಿ ಯಾರ ಹೆಸರಿನಲ್ಲಿ ಭೂ ದಾಖಲೆಗಳನ್ನು ಹೊಂದಿದ್ದರೆ ಅದನ್ನು ರದ್ದುಗೊಳಿಸಲಾಗಿದೆ.” ಎಂದು ಅವರು ಹೇಳಿದ್ದಾರೆ.

ಪ್ರಕಟಣೆಯೊಂದಿಗೆ ಮಾತನಾಡಿದ ಜಿಲ್ಲಾ ಮ್ಯಾಜಿಸ್ಟ್ರೇಟ್ ಪ್ರೇರಣಾ ಶರ್ಮಾ, “ನಾವು ಈ ವಿಷಯವನ್ನು ಪರಿಶೀಲಿಸುತ್ತಿದ್ದೇವೆ. ಇದನ್ನು ಮಂಗಳವಾರ ನಮ್ಮ ಗಮನಕ್ಕೆ ತರಲಾಗಿದೆ. ಜನರ ಹಕ್ಕುಗಳು ಸರಿಯಾಗಿದ್ದರೆ, ನಾವು ತನಿಖೆ ಮಾಡುತ್ತೇವೆ. PMAY ಯೋಜನೆಯಡಿಯಲ್ಲಿ ಭೂ ದಾಖಲೆಗಳ ದೃಢೀಕರಣವನ್ನು ನಾವು ಪರಿಶೀಲಿಸುವುದಿಲ್ಲ, ದಸ್ತಾವೇಜಿನ ಪ್ರಕಾರ ವ್ಯಕ್ತಿಯು ಸರಿಯಾದ ಮಾಲೀಕರೇ ಎಂಬುದನ್ನು ಮಾತ್ರ ನಾವು ಪರಿಶೀಲಿಸುತ್ತೇವೆ. ನಾವು ಹಕ್ಕುಗಳನ್ನು ಪರಿಶೀಲಿಸಬೇಕಾಗಿದೆ” ಎಂದು ವಿವರಿಸಿದ್ದಾರೆ.

ಆದಾಗ್ಯೂ ನೋಟಿಸ್‌ನಲ್ಲಿ ಬಳಸಲಾದ ಸ್ವರ ಮತ್ತು ಭಾಷೆಯ ಬಗ್ಗೆ ಕೇಳಿದಾಗ, ಅಧಿಕಾರಿಗಳು ಪ್ರತಿಕ್ರಿಯಿಸಲು ನಿರಾಕರಿಸಿದರು. ನೋಟಿಸ್ ಸ್ವೀಕರಿಸಿದ ನಂತರ ಹಲವಾರು ನಿವಾಸಿಗಳು ಕಾರ್ಯನಿರ್ವಾಹಕ ಅಧಿಕಾರಿಯನ್ನು ಭೇಟಿಯಾಗಿದ್ದಾರೆ.

ವರದಿಯ ಪ್ರಕಾರ 58 ವರ್ಷದ ಗಂಗಾರಾಮ್, “ನಾನು 4ನೇ ತರಗತಿಯವರೆಗೆ ಮಾತ್ರ ಓದಿದ್ದೇನೆ ಮತ್ತು ನನ್ನ ಹೆಸರನ್ನು ಮಾತ್ರ ಓದಬಲ್ಲೆ. ಕಾಲೋನಿಯಲ್ಲಿರುವ ಇತರರು ನನ್ನ ಮನೆಯನ್ನು ಖಾಲಿ ಮಾಡಬೇಕೆಂದು ನನಗೆ ವಿವರಿಸಿದರು. ನಮ್ಮ ಕಾಲೋನಿ ಅಕ್ರಮ ಎಂದು ಅಧಿಕಾರಿಗಳು ನಮಗೆ ಹೇಳಿದರು. ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಲು ಅವರು ನಮಗೆ ಹೇಳಿದರು. ನಾವು ಬಡವರು, ನಾವು ದೂರು ನೀಡಬಹುದು.” ಎಂದು ಆವಲತ್ತುಕೊಂಡಿದ್ದಾರೆ.

PMAY ಯೋಜನೆಯಡಿಯಲ್ಲಿ ಇಲ್ಲಿ ಮನೆ ನಿರ್ಮಾಣಕ್ಕೆ ಮೊದಲ COVID-19 ಲಾಕ್‌ಡೌನ್ ನಂತರ ನಾನು ಮೂರು ಕಂತುಗಳನ್ನು ಪಡೆದೆನು. ತಲಾ 1 ಲಕ್ಷ ರೂ. ಮತ್ತು ಮುಂದಿನ ಕಂತುಗಳಲ್ಲಿ ತಲಾ 50,000 ರೂ. ಪಡೆದೆನು. ಆಳಿದುಳಿದ ಮನೆ ನಿರ್ಮಾಣವನ್ನು ಪೂರ್ಣಗೊಳಿಸಲು ಹೆಚ್ಚುವರಿಯಾಗಿ ತಮ್ಮ ಉಳಿತಾಯದಿಂದ 1.5 ಲಕ್ಷ ರೂ.ಗಳನ್ನು ಬಳಕೆ ಮಾಡಿದೆ ಎಂದು ಅವರು ಹೇಳಿದರು.

1986ರಲ್ಲಿ ಗಾಜಿಯಾಬಾದ್ ಜಿಲ್ಲೆಯ ಭಾಗವಾಗಿದ್ದ ಗರ್ಮುಕ್ತೇಶ್ವರದ ಚುಪ್ಲಾದಿಂದ ಸರಕಾರವು ಆ ಪ್ರದೇಶಕ್ಕೆ ತಮ್ಮನ್ನು ಸ್ಥಳಾಂತರಿಸಲಾಗಿದೆ ಎಂದು ನಿವಾಸಿಗಳು ಹೇಳಿದರು.

ಆ ಸಮಯದಲ್ಲಿ ಹೊರಡಿಸಲಾದ ನೋಟಿಸ್‌ನಲ್ಲಿ, “ಪುನರ್ವಸತಿ ಉದ್ದೇಶಕ್ಕಾಗಿ, ಸಾಮೂಹಿಕ ಅರ್ಜಿ ಪತ್ರವನ್ನು ಪರಿಗಣಿಸಿ, ಪುನರ್ವಸತಿ ಸಮಸ್ಯೆ ಬಗೆಹರಿಯಲು 100 ಗಜ ಭೂಮಿಯನ್ನು ನಿಮಗೆ ನೀಡಲು ನಾವು ನಿರ್ಧರಿಸಿದ್ದೇವೆ. ಭೂಮಿಯನ್ನು ಮಾರಾಟ ಮಾಡುವ ಮತ್ತು ವರ್ಗಾಯಿಸುವ ಹಕ್ಕು ನಿಮಗೆ ಇರುವುದಿಲ್ಲ. ನೀವು ಮತ್ತು ನಿಮ್ಮ ಕುಟುಂಬ ಸದಸ್ಯರು ವಸತಿ ಉದ್ದೇಶಗಳಿಗಾಗಿ ಭೂಮಿಯನ್ನು ಬಳಸುತ್ತೀರಿ” ಎಂದಿದೆ.

ಅವರು ಸ್ಥಳಾಂತರಗೊಂಡಾಗ ಅಲ್ಲಿ ಬತ್ತಿದ ಕೊಳವಿತ್ತು ಎಂದು ಗಂಗಾರಾಮ್ ಹೇಳುತ್ತಾರೆ. ಆದಾಗ್ಯೂ ನಗರ ಪಾಲಿಕೆ ಅಧಿಕಾರಿಗಳು ಅದನ್ನು ಮುಚ್ಚಿಸಿ ಅಲ್ಲಿಗೆ ನಮ್ಮನ್ನು ಸ್ಥಳಾಂತರಿಸಲು ಸಹಾಯ ಮಾಡಿದರು ಎಂದು ಅವರು ಹೇಳುತ್ತಾರೆ.

ಮತ್ತೊಬ್ಬ ನಿವಾಸಿ ಕಮಲಾ ಅವರು, “ಅವರು (ಅಧಿಕಾರಿಗಳು) ತಾವು ಮಾಡಬೇಕಾದ್ದನ್ನು ಮಾಡಿದ್ದೇವೆ ಎಂದು ನಮಗೆ ಹೇಳಿದರು, ಮತ್ತು ಈಗ ನಮಗೆ ಸಾಧ್ಯವಾದದ್ದನ್ನು ಮಾಡುವುದು ನಮ್ಮ ಜವಾಬ್ದಾರಿಯಾಗಿದೆ… ನಮಗೆ ನಿದ್ರೆ ಬರುತ್ತಿಲ್ಲ, ನಮ್ಮ ಉಳಿತಾಯದ ಎಲ್ಲಾ ಹಣವನ್ನು ನಮ್ಮ ಮನೆಗಳನ್ನು ನಿರ್ಮಿಸಲು ಬಳಸಿದ್ದೇವೆ. ಈಗ ನಾವು ಎಲ್ಲಿಗೆ ಹೋಗುಬೇಕು” ಎಂದು ಪ್ರಶ್ನಿಸುತ್ತಾರೆ.

ಹಣ, ಹೆಂಡಕ್ಕೆ ಮತ ನೀಡಿದರೆ ಮುಂದಿನ ಜನ್ಮದಲ್ಲಿ ನಾಯಿ, ಬೆಕ್ಕುಗಳಾಗಿ ಹುಟ್ಟುತ್ತೀರಿ: ಬಿಜೆಪಿ ಶಾಸಕಿ ಉಷಾ ಠಾಕೂರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘2026 ರಲ್ಲಿ ಸಮುದ್ರವನ್ನು ಪ್ರಾಬಲ್ಯಗೊಳಿಸುತ್ತೇವೆ’: ಪಹಲ್ಗಾಮ್ ದಾಳಿಯ ಮಾಸ್ಟರ್ ಮೈಂಡ್ ಸೈಫುಲ್ಲಾ ಕಸೂರಿಯಿಂದ ಭಾರತಕ್ಕೆ ಬಹಿರಂಗ ಬೆದರಿಕೆ

2008ರ ಮುಂಬೈ ದಾಳಿಯ ಭೀಕರತೆಯನ್ನು ಪ್ರತಿಧ್ವನಿಸುವ ಕಟು ಬೆದರಿಕೆಯಲ್ಲಿ, ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೊಯ್ಬಾ (LeT) ಭಾರತದಲ್ಲಿ ಮತ್ತೊಮ್ಮೆ ಸಮುದ್ರ ಮಾರ್ಗವನ್ನು ಬಳಸಿಕೊಂಡು 26/11 ಮಾದರಿಯ ದಾಳಿಯನ್ನು ನಡೆಸುವುದಾಗಿ ಬೆದರಿಕೆ ಹಾಕಿದೆ...

ಕೇರಳ ಹೆಸರು ಇನ್ನು ಮುಂದೆ ‘ಕೇರಳಂ’; ಕೇಂದ್ರ ಸಚಿವ ಸಂಪುಟ ಅನುಮೋದನೆ

ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಹೊತ್ತಿನಲ್ಲಿ ಮಹತ್ವದ ಬೆಳವಣಿಗೆಯೊಂದರಲ್ಲಿ, ರಾಜ್ಯದ ಹೆಸರನ್ನು ಕೇರಳಂ ಎಂದು ಬದಲಾಯಿಸುವ ಪ್ರಸ್ತಾವನೆಗೆ ಕೇಂದ್ರ ಸಚಿವ ಸಂಪುಟ ಮಂಗಳವಾರ ಅನುಮೋದನೆ ನೀಡಿದೆ. "ಕೇರಳವನ್ನು ಕೇರಳಂ ಎಂದು ಮರುನಾಮಕರಣ ಮಾಡಲು ಕೇಂದ್ರ...

ನಾಡೋಜ ಗೌರವ ತಿರಸ್ಕರಿಸಿದ ಹಿರಿಯ ಚಿಂತಕ ಡಾ ಜಿ. ರಾಮಕೃಷ್ಣ; ರಾಜ್ಯಪಾಲರಿಂದ ಗೌರವ ಸ್ವೀಕರಿಸದಿರಲು ನಿರ್ಧಾರ

ಹಿರಿಯ ಚಿಂತಕ ಡಾ.ಜಿ.ರಾಮಕೃಷ್ಣ ಅವರು ಹಂಪಿ ಕನ್ನಡ ವಿಶ್ವವಿದ್ಯಾಲಯ ಕೊಡಮಾಡುವ ನಾಡೋಜ ಪ್ರಶಸ್ತಿಯನ್ನು ರಾಜ್ಯಪಾಲರಿಂದ ಸ್ವೀಕರಿಸಲು ನಿರಾಕರಿಸಿದ್ದಾರೆ. ಹಂಪಿ ಕನ್ನಡ ವಿಶ್ವವಿದ್ಯಾಲಯದ ವಿದ್ಯಾರಣ್ಯ ಕ್ಯಾಂಪಸ್‌ನ ‘ನವರಂಗ’ ಬಯಲು ರಂಗಮಂದಿರದಲ್ಲಿ ಮಂಗಳವಾರ ನಡೆಯುವ 34ನೇ ನುಡಿಹಬ್ಬದಲ್ಲಿ...

‘ಕೇರಳ ಸಂಪೂರ್ಣ ಸಾಮರಸ್ಯದಿಂದ ಬದುಕುತ್ತಿದೆ, ಸಿನಿಮಾದಲ್ಲಿ ತಪ್ಪು ಚಿತ್ರಣವಿದೆ’: ‘ದಿ ಕೇರಳ ಸ್ಟೋರಿ 2’ ಕುರಿತು ಕೇರಳ ಹೈಕೋರ್ಟ್

ವಿವಾದಾತ್ಮಕ 'ದಿ ಕೇರಳ ಸ್ಟೋರಿ 2 -ಗೋಸ್ ಬಿಯಾಂಡ್' ಸಿನಿಮಾಗೆ ಸರ್ಟಿಫಿಕೇಟ್ ನೀಡಿರುವ ಕುರಿತು ಕೇರಳ ಹೈಕೋರ್ಟ್ ಮಂಗಳವಾರ (ಫೆ.24) ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿಯನ್ನು (ಸಿಬಿಎಫ್‌ಸಿ) ಪ್ರಶ್ನಿಸಿದೆ ಎಂದು ಕಾನೂನು ಸುದ್ದಿ...

‘ಸರ್ವಾಧಿಕಾರಿ ಪ್ರವೃತ್ತಿ, ಹೇಡಿತನಕ್ಕೆ ಸಾಕ್ಷಿ’ : ಯುವ ಕಾಂಗ್ರೆಸ್‌ ನಾಯಕರ ಬಂಧನ ಖಂಡಿಸಿದ ರಾಹುಲ್ ಗಾಂಧಿ

ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಉದಯ್ ಭಾನು ಚಿಬ್ ಮತ್ತು ಪಕ್ಷದ ಇತರ ಸದಸ್ಯರ ಬಂಧನವನ್ನು ತೀವ್ರವಾಗಿ ಖಂಡಿಸಿರುವ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, "ಇದು ಸರ್ವಾಧಿಕಾರಿ ಪ್ರವೃತ್ತಿ ಮತ್ತು...

‘ಸ್ವಾತಂತ್ರ್ಯದ 75 ವರ್ಷಗಳ ನಂತರವೂ ಭಾರತದ ಸಾಮಾಜಿಕ ರಚನೆಯಲ್ಲಿ ಬಿರುಕುಗಳು ಆಳವಾಗಿ ಅಡಗಿದೆ’; ನ್ಯಾಯಮೂರ್ತಿ ಉಜ್ವಲ್  ಭೂಯಾನ್

ಹೊಸದಿಲ್ಲಿ: ಭಾರತದ ಸಂವಿಧಾನವು ಪ್ರತಿಯೊಬ್ಬರಿಗೂ ಸಮಾನತೆ ಮತ್ತು ಘನತೆಯ ಭರವಸೆ ನೀಡುತ್ತದೆ. ಆದರೆ ಸ್ವಾತಂತ್ರ್ಯದ 75 ವರ್ಷಗಳ ನಂತರವೂ ಭಾರತದ ಸಾಮಾಜಿಕ ರಚನೆಯಲ್ಲಿ ಬಿರುಕುಗಳು ಆಳವಾಗಿ ಅಡಗಿದೆ ಎಂದು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ...

ಹೈದರಾಬಾದ್ ವಿಶ್ವವಿದ್ಯಾಲಯದಲ್ಲಿ ದಲಿತ ವಿದ್ಯಾರ್ಥಿಯ ಮೇಲೆ ಹಲ್ಲೆ ಆರೋಪ; ಎಎಸ್ಎ ಪ್ರತಿಭಟನೆ

ದಲಿತ ವಿದ್ಯಾರ್ಥಿಯ ಮೇಲೆ ಜಾತಿ ಆಧಾರಿತ ಹಲ್ಲೆ ನಡೆದಿದ್ದರೂ ಪ್ರಕರಣದಲ್ಲಿ ಹೈದರಾಬಾದ್ ವಿಶ್ವವಿದ್ಯಾಲಯದ (ಯುಒಎಚ್) ಆಡಳಿತಾತ್ಮಕ ನಿಷ್ಕ್ರಿಯತೆ ಇದೆ ಎಂದು ಆರೋಪಿಸಿ, ಅಂಬೇಡ್ಕರ್ ವಿದ್ಯಾರ್ಥಿ ಸಂಘ (ಎಎಸ್ಎ) ಸೋಮವಾರ (ಫೆ.23) ಪ್ರತಿಭಟನೆ ನಡೆಸಿತು...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಉದಯ್ ಭಾನು ಬಂಧನ

ಭಾರತೀಯ ಯುವ ಕಾಂಗ್ರೆಸ್ (ಐವೈಸಿ) ರಾಷ್ಟ್ರೀಯ ಅಧ್ಯಕ್ಷ ಉದಯ್ ಭಾನು ಚಿಬ್ ಅವರನ್ನು ದೆಹಲಿ ಪೊಲೀಸರು ಮಂಗಳವಾರ (ಫೆ. 24) ಮುಂಜಾನೆ ಸುಮಾರು 4:30ಕ್ಕೆ ಬಂಧಿಸಿದ್ದಾರೆ. ಕಳೆದ ವಾರ ದೆಹಲಿಯ ಭಾರತ್ ಮಂಟಪದಲ್ಲಿ ನಡೆದ...

ಭೂ ವಿವಾದದಲ್ಲಿ ಸಹೋದರರ ಹತ್ಯೆ; ಒಂದೇ ಕುಟುಂಬದ 13 ಮಂದಿಗೆ ಜೀವಾವಧಿ ಶಿಕ್ಷೆ

ಭೂ ವಿವಾದಕ್ಕೆ ಸಂಬಂಧಿಸಿದಂತೆ ಸುಮಾರು 10 ವರ್ಷಗಳ ಹಿಂದೆ ಇಬ್ಬರು ಸಹೋದರರನ್ನು ಹತ್ಯೆಗೈದ ಪ್ರಕರಣದಲ್ಲಿ ಒಂದೇ ಕುಟುಂಬದ 13 ಮಂದಿಗೆ ಉತ್ತರ ಪ್ರದೇಶದ ಸಹರಾನ್‌ಪುರದ ಸ್ಥಳೀಯ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ ಎಂದು...

ಉತ್ತರ ಪ್ರದೇಶ: ಬಜರಂಗದಳ ದೂರಿನ ಮೇರೆಗೆ ಮತಾಂತರ ವಿರೋಧಿ ಕಾನೂನಿನಡಿಯಲ್ಲಿ ಕೇರಳ ಮೂಲದ ಪಾದ್ರಿಯ ಬಂಧನ

ಬಜರಂಗದಳ ಸದಸ್ಯರು ನೀಡಿದ ದೂರಿನ ಮೇರೆಗೆ ಧಾರ್ಮಿಕ ಮತಾಂತರದ ಆರೋಪದ ಮೇಲೆ ಕೇರಳದ ಪಾದ್ರಿಯೊಬ್ಬರನ್ನು ಉತ್ತರ ಪ್ರದೇಶದಲ್ಲಿ ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ತಿರುವನಂತಪುರಂ ಮೂಲದ ಪಾದ್ರಿ ಜೋಸ್ ಥಾಮಸ್,...