HomeUncategorized41 ದಲಿತ ಕುಟುಂಬಗಳಿಗೆ ಸರಕಾರವೇ ಪುನರ್ವಸತಿ ಕಲ್ಪಿಸಿದ ಸ್ಥಳದಿಂದ ಜಾಗ ಖಾಲಿ ಮಾಡಲು ನೋಟಿಸ್

41 ದಲಿತ ಕುಟುಂಬಗಳಿಗೆ ಸರಕಾರವೇ ಪುನರ್ವಸತಿ ಕಲ್ಪಿಸಿದ ಸ್ಥಳದಿಂದ ಜಾಗ ಖಾಲಿ ಮಾಡಲು ನೋಟಿಸ್

- Advertisement -
- Advertisement -

ಉತ್ತರಪ್ರದೇಶದ ಹಾರ್ಪುರದ ಇಂದ್ರನಗರ ಕಾಲೋನಿಯಲ್ಲಿ 1986ರಿಂದ ವಾಸಿಸುತ್ತಿರುವ ದಲಿತ ಸಮುದಾಯಕ್ಕೆ ಸೇರಿದ 41 ಕುಟುಂಬಗಳಿಗೆ ನೀವು ಈ ಸ್ಥಳದಲ್ಲಿ ಅಕ್ರಮವಾಗಿ ವಾಸಿಸುತ್ತಿದ್ದೀರಿ, ಜಾಗ ಖಾಲಿ ಮಾಡಿ ಎಂದು ಪುರಸಭೆಯಿಂದ ನೋಟಿಸ್ ಜಾರಿಗೊಳಿಸಲಾಗಿದೆ.

ಇಲ್ಲಿ ದಲಿತರಿಗೆ ಸೇರಿದ 41 ಮನೆಗಳಲ್ಲಿ ನಲವತ್ತು ಮನೆಗಳನ್ನು ಪ್ರಧಾನ ಮಂತ್ರಿ ಆವಾಸ್ ಯೋಜನೆ (PMAY) ಅಡಿಯಲ್ಲಿ ನಿರ್ಮಿಸಲಾಗಿತ್ತು ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

2022ರ ವೇಳೆಗೆ “ಎಲ್ಲರಿಗೂ ವಸತಿ” ಒದಗಿಸುವ ಉದ್ದೇಶದಿಂದ ಆವಾಸ್ ಯೋಜನೆಯನ್ನು 2016ರಲ್ಲಿ ಪ್ರಾರಂಭಿಸಲಾಯಿತು. ಗ್ರಾಮೀಣ ಪ್ರದೇಶಗಳಲ್ಲಿ ಮನೆಗಳ ನಿರ್ಮಾಣವನ್ನು ಬೆಂಬಲಿಸುವ ಯೋಜನೆಯನ್ನು ಪ್ರಧಾನ ಮಂತ್ರಿ ಆವಾಸ್ ಯೋಜನೆ – ಗ್ರಾಮೀಣ (PMAY-G) ಎಂದು ಕರೆಯಲಾಗುತ್ತದೆ ಮತ್ತು ನಗರ ಪ್ರದೇಶಗಳಿಗೆ ಇದನ್ನು ಪ್ರಧಾನ ಮಂತ್ರಿ ಆವಾಸ್ ಯೋಜನೆ – ನಗರ (PMAY-U) ಎಂದು ಕರೆಯಲಾಗುತ್ತದೆ.

ಇದೇ ಏಪ್ರಿಲ್ 8 ರಂದು ನೀಡಲಾದ ನೋಟಿಸ್‌ನಲ್ಲಿ ದಲಿತರು ಮನೆಗಳನ್ನು ನಿರ್ಮಿಸಿರುವ ಭೂಮಿ ಸರ್ಕಾರಕ್ಕೆ ಸೇರಿದ್ದು ಮತ್ತು ಅದು ಹಿಂದೆ ಕೊಳವಾಗಿತ್ತು ಎಂದು ಹೇಳಿದೆ.

ಗರ್ಮುಕ್ತೇಶ್ವರ ಪುರಸಭೆಯ ಕಾರ್ಯನಿರ್ವಾಹಕ ಅಧಿಕಾರಿ ಮುಕ್ತಾ ಸಿಂಗ್ ಅವರು ನೀಡಿದ ನೋಟಿಸ್‌ನಲ್ಲಿ, “ನೀವು ನಗರ ಪಾಲಿಕೆಯ ಭೂಮಿಯನ್ನು ಅಕ್ರಮವಾಗಿ ಆಕ್ರಮಿಸಿಕೊಂಡು ಅದರಲ್ಲಿ ಮನೆ ಕಟ್ಟಿದ್ದೀರಿ ಮತ್ತು ಈ ಮನೆಗಳನ್ನು ತೆರವು ಮಾಡಲು ನೀವು ಬಯಸುತ್ತಿಲ್ಲವಾದ್ದರಿಂದ, ನಿಮ್ಮ ವಿರುದ್ಧ ಕಾನೂನು ಕ್ರಮಗಳನ್ನು ಪ್ರಾರಂಭಿಸುವುದು ಮುಖ್ಯವಾಗಿದೆ. ಈ ನೋಟಿಸ್ ಸ್ವೀಕರಿಸಿದ 15 ದಿನಗಳಲ್ಲಿ, ಭೂಮಿಯಲ್ಲಿರುವ ನಿಮಗೆ ಸಂಬಂಧಿಸಿದ ವಸ್ತುಗಳನ್ನು ತೆಗೆದುಹಾಕಿ ಮತ್ತು ಭೂಮಿಯನ್ನು ನಗರ ಪಾಲಿಕೆಗೆ ಒಪ್ಸಿಪಿ, ಇಲ್ಲದಿದ್ದರೆ ನಿಮ್ಮ ವಿರುದ್ಧದ ಪ್ರಕರಣಕ್ಕೆ ನೀವೇ ಜವಾಬ್ದಾರರಾಗಿರುತ್ತೀರಿ” ಎಂದು ಬರೆದಿದ್ದಾರೆ.

ನಿವಾಸಿಗಳಿಗೆ ಹಲವಾರು ಬಾರಿ ಮೌಖಿಕವಾಗಿ ಎಚ್ಚರಿಕೆ ನೀಡಲಾಗಿದ್ದರೂ, “ಅವರ ಅಹಂಕಾರದಿಂದಾಗಿ” ಅವರು ಪುರಸಭೆಯ ಆದೇಶಗಳನ್ನು ಪಾಲಿಸಿಲ್ಲ ಎಂದು ನೋಟಿಸ್‌ನಲ್ಲಿ ಆರೋಪಿಸಲಾಗಿದೆ.

“ನಗರಸಭೆಯ ಅಧಿಕಾರಿಗಳು ನಿಮಗೆ ಭೂಮಿಯನ್ನು ಖಾಲಿ ಮಾಡುವಂತೆ ಹಲವಾರು ಬಾರಿ ಮೌಖಿಕವಾಗಿ ಆದೇಶ ನೀಡಲಾಗಿದ್ದರೂ, ಶಾಸನಬದ್ಧ ನಿಬಂಧನೆಗಳನ್ನು ಪಾಲಿಸದೆ ನೀವು ಭೂಮಿಯನ್ನು ಖಾಲಿ ಮಾಡಲು ನಿರಾಕರಿಸುತ್ತಿದ್ದೀರಿ ಮತ್ತು ನಿಮ್ಮ ಭೂ ದಾಖಲೆಗಳಲ್ಲಿ ಸದರಿ ಭೂಮಿಯನ್ನು ಸರಕಾರವು ತಮಗೆ ನೀಡಿದೆ ಮತ್ತು ದಾಖಲೆಗಳನ್ನು ನೀಡಿದೆ ಎಂದು ನೀವು ಹೇಳುತ್ತೀರಿ. ಸದರಿ ಭೂಮಿಯಲ್ಲಿ ಯಾವುದೇ ವಸತಿ ಪ್ಲಾಟ್‌ಗಳ ದಾಖಲೆಗಳಿಲ್ಲ ಮತ್ತು ಯಾವುದೇ ಸಂದರ್ಭದಲ್ಲಿ ಯಾರ ಹೆಸರಿನಲ್ಲಿ ಭೂ ದಾಖಲೆಗಳನ್ನು ಹೊಂದಿದ್ದರೆ ಅದನ್ನು ರದ್ದುಗೊಳಿಸಲಾಗಿದೆ.” ಎಂದು ಅವರು ಹೇಳಿದ್ದಾರೆ.

ಪ್ರಕಟಣೆಯೊಂದಿಗೆ ಮಾತನಾಡಿದ ಜಿಲ್ಲಾ ಮ್ಯಾಜಿಸ್ಟ್ರೇಟ್ ಪ್ರೇರಣಾ ಶರ್ಮಾ, “ನಾವು ಈ ವಿಷಯವನ್ನು ಪರಿಶೀಲಿಸುತ್ತಿದ್ದೇವೆ. ಇದನ್ನು ಮಂಗಳವಾರ ನಮ್ಮ ಗಮನಕ್ಕೆ ತರಲಾಗಿದೆ. ಜನರ ಹಕ್ಕುಗಳು ಸರಿಯಾಗಿದ್ದರೆ, ನಾವು ತನಿಖೆ ಮಾಡುತ್ತೇವೆ. PMAY ಯೋಜನೆಯಡಿಯಲ್ಲಿ ಭೂ ದಾಖಲೆಗಳ ದೃಢೀಕರಣವನ್ನು ನಾವು ಪರಿಶೀಲಿಸುವುದಿಲ್ಲ, ದಸ್ತಾವೇಜಿನ ಪ್ರಕಾರ ವ್ಯಕ್ತಿಯು ಸರಿಯಾದ ಮಾಲೀಕರೇ ಎಂಬುದನ್ನು ಮಾತ್ರ ನಾವು ಪರಿಶೀಲಿಸುತ್ತೇವೆ. ನಾವು ಹಕ್ಕುಗಳನ್ನು ಪರಿಶೀಲಿಸಬೇಕಾಗಿದೆ” ಎಂದು ವಿವರಿಸಿದ್ದಾರೆ.

ಆದಾಗ್ಯೂ ನೋಟಿಸ್‌ನಲ್ಲಿ ಬಳಸಲಾದ ಸ್ವರ ಮತ್ತು ಭಾಷೆಯ ಬಗ್ಗೆ ಕೇಳಿದಾಗ, ಅಧಿಕಾರಿಗಳು ಪ್ರತಿಕ್ರಿಯಿಸಲು ನಿರಾಕರಿಸಿದರು. ನೋಟಿಸ್ ಸ್ವೀಕರಿಸಿದ ನಂತರ ಹಲವಾರು ನಿವಾಸಿಗಳು ಕಾರ್ಯನಿರ್ವಾಹಕ ಅಧಿಕಾರಿಯನ್ನು ಭೇಟಿಯಾಗಿದ್ದಾರೆ.

ವರದಿಯ ಪ್ರಕಾರ 58 ವರ್ಷದ ಗಂಗಾರಾಮ್, “ನಾನು 4ನೇ ತರಗತಿಯವರೆಗೆ ಮಾತ್ರ ಓದಿದ್ದೇನೆ ಮತ್ತು ನನ್ನ ಹೆಸರನ್ನು ಮಾತ್ರ ಓದಬಲ್ಲೆ. ಕಾಲೋನಿಯಲ್ಲಿರುವ ಇತರರು ನನ್ನ ಮನೆಯನ್ನು ಖಾಲಿ ಮಾಡಬೇಕೆಂದು ನನಗೆ ವಿವರಿಸಿದರು. ನಮ್ಮ ಕಾಲೋನಿ ಅಕ್ರಮ ಎಂದು ಅಧಿಕಾರಿಗಳು ನಮಗೆ ಹೇಳಿದರು. ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಲು ಅವರು ನಮಗೆ ಹೇಳಿದರು. ನಾವು ಬಡವರು, ನಾವು ದೂರು ನೀಡಬಹುದು.” ಎಂದು ಆವಲತ್ತುಕೊಂಡಿದ್ದಾರೆ.

PMAY ಯೋಜನೆಯಡಿಯಲ್ಲಿ ಇಲ್ಲಿ ಮನೆ ನಿರ್ಮಾಣಕ್ಕೆ ಮೊದಲ COVID-19 ಲಾಕ್‌ಡೌನ್ ನಂತರ ನಾನು ಮೂರು ಕಂತುಗಳನ್ನು ಪಡೆದೆನು. ತಲಾ 1 ಲಕ್ಷ ರೂ. ಮತ್ತು ಮುಂದಿನ ಕಂತುಗಳಲ್ಲಿ ತಲಾ 50,000 ರೂ. ಪಡೆದೆನು. ಆಳಿದುಳಿದ ಮನೆ ನಿರ್ಮಾಣವನ್ನು ಪೂರ್ಣಗೊಳಿಸಲು ಹೆಚ್ಚುವರಿಯಾಗಿ ತಮ್ಮ ಉಳಿತಾಯದಿಂದ 1.5 ಲಕ್ಷ ರೂ.ಗಳನ್ನು ಬಳಕೆ ಮಾಡಿದೆ ಎಂದು ಅವರು ಹೇಳಿದರು.

1986ರಲ್ಲಿ ಗಾಜಿಯಾಬಾದ್ ಜಿಲ್ಲೆಯ ಭಾಗವಾಗಿದ್ದ ಗರ್ಮುಕ್ತೇಶ್ವರದ ಚುಪ್ಲಾದಿಂದ ಸರಕಾರವು ಆ ಪ್ರದೇಶಕ್ಕೆ ತಮ್ಮನ್ನು ಸ್ಥಳಾಂತರಿಸಲಾಗಿದೆ ಎಂದು ನಿವಾಸಿಗಳು ಹೇಳಿದರು.

ಆ ಸಮಯದಲ್ಲಿ ಹೊರಡಿಸಲಾದ ನೋಟಿಸ್‌ನಲ್ಲಿ, “ಪುನರ್ವಸತಿ ಉದ್ದೇಶಕ್ಕಾಗಿ, ಸಾಮೂಹಿಕ ಅರ್ಜಿ ಪತ್ರವನ್ನು ಪರಿಗಣಿಸಿ, ಪುನರ್ವಸತಿ ಸಮಸ್ಯೆ ಬಗೆಹರಿಯಲು 100 ಗಜ ಭೂಮಿಯನ್ನು ನಿಮಗೆ ನೀಡಲು ನಾವು ನಿರ್ಧರಿಸಿದ್ದೇವೆ. ಭೂಮಿಯನ್ನು ಮಾರಾಟ ಮಾಡುವ ಮತ್ತು ವರ್ಗಾಯಿಸುವ ಹಕ್ಕು ನಿಮಗೆ ಇರುವುದಿಲ್ಲ. ನೀವು ಮತ್ತು ನಿಮ್ಮ ಕುಟುಂಬ ಸದಸ್ಯರು ವಸತಿ ಉದ್ದೇಶಗಳಿಗಾಗಿ ಭೂಮಿಯನ್ನು ಬಳಸುತ್ತೀರಿ” ಎಂದಿದೆ.

ಅವರು ಸ್ಥಳಾಂತರಗೊಂಡಾಗ ಅಲ್ಲಿ ಬತ್ತಿದ ಕೊಳವಿತ್ತು ಎಂದು ಗಂಗಾರಾಮ್ ಹೇಳುತ್ತಾರೆ. ಆದಾಗ್ಯೂ ನಗರ ಪಾಲಿಕೆ ಅಧಿಕಾರಿಗಳು ಅದನ್ನು ಮುಚ್ಚಿಸಿ ಅಲ್ಲಿಗೆ ನಮ್ಮನ್ನು ಸ್ಥಳಾಂತರಿಸಲು ಸಹಾಯ ಮಾಡಿದರು ಎಂದು ಅವರು ಹೇಳುತ್ತಾರೆ.

ಮತ್ತೊಬ್ಬ ನಿವಾಸಿ ಕಮಲಾ ಅವರು, “ಅವರು (ಅಧಿಕಾರಿಗಳು) ತಾವು ಮಾಡಬೇಕಾದ್ದನ್ನು ಮಾಡಿದ್ದೇವೆ ಎಂದು ನಮಗೆ ಹೇಳಿದರು, ಮತ್ತು ಈಗ ನಮಗೆ ಸಾಧ್ಯವಾದದ್ದನ್ನು ಮಾಡುವುದು ನಮ್ಮ ಜವಾಬ್ದಾರಿಯಾಗಿದೆ… ನಮಗೆ ನಿದ್ರೆ ಬರುತ್ತಿಲ್ಲ, ನಮ್ಮ ಉಳಿತಾಯದ ಎಲ್ಲಾ ಹಣವನ್ನು ನಮ್ಮ ಮನೆಗಳನ್ನು ನಿರ್ಮಿಸಲು ಬಳಸಿದ್ದೇವೆ. ಈಗ ನಾವು ಎಲ್ಲಿಗೆ ಹೋಗುಬೇಕು” ಎಂದು ಪ್ರಶ್ನಿಸುತ್ತಾರೆ.

ಹಣ, ಹೆಂಡಕ್ಕೆ ಮತ ನೀಡಿದರೆ ಮುಂದಿನ ಜನ್ಮದಲ್ಲಿ ನಾಯಿ, ಬೆಕ್ಕುಗಳಾಗಿ ಹುಟ್ಟುತ್ತೀರಿ: ಬಿಜೆಪಿ ಶಾಸಕಿ ಉಷಾ ಠಾಕೂರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...