HomeUncategorized41 ದಲಿತ ಕುಟುಂಬಗಳಿಗೆ ಸರಕಾರವೇ ಪುನರ್ವಸತಿ ಕಲ್ಪಿಸಿದ ಸ್ಥಳದಿಂದ ಜಾಗ ಖಾಲಿ ಮಾಡಲು ನೋಟಿಸ್

41 ದಲಿತ ಕುಟುಂಬಗಳಿಗೆ ಸರಕಾರವೇ ಪುನರ್ವಸತಿ ಕಲ್ಪಿಸಿದ ಸ್ಥಳದಿಂದ ಜಾಗ ಖಾಲಿ ಮಾಡಲು ನೋಟಿಸ್

- Advertisement -
- Advertisement -

ಉತ್ತರಪ್ರದೇಶದ ಹಾರ್ಪುರದ ಇಂದ್ರನಗರ ಕಾಲೋನಿಯಲ್ಲಿ 1986ರಿಂದ ವಾಸಿಸುತ್ತಿರುವ ದಲಿತ ಸಮುದಾಯಕ್ಕೆ ಸೇರಿದ 41 ಕುಟುಂಬಗಳಿಗೆ ನೀವು ಈ ಸ್ಥಳದಲ್ಲಿ ಅಕ್ರಮವಾಗಿ ವಾಸಿಸುತ್ತಿದ್ದೀರಿ, ಜಾಗ ಖಾಲಿ ಮಾಡಿ ಎಂದು ಪುರಸಭೆಯಿಂದ ನೋಟಿಸ್ ಜಾರಿಗೊಳಿಸಲಾಗಿದೆ.

ಇಲ್ಲಿ ದಲಿತರಿಗೆ ಸೇರಿದ 41 ಮನೆಗಳಲ್ಲಿ ನಲವತ್ತು ಮನೆಗಳನ್ನು ಪ್ರಧಾನ ಮಂತ್ರಿ ಆವಾಸ್ ಯೋಜನೆ (PMAY) ಅಡಿಯಲ್ಲಿ ನಿರ್ಮಿಸಲಾಗಿತ್ತು ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

2022ರ ವೇಳೆಗೆ “ಎಲ್ಲರಿಗೂ ವಸತಿ” ಒದಗಿಸುವ ಉದ್ದೇಶದಿಂದ ಆವಾಸ್ ಯೋಜನೆಯನ್ನು 2016ರಲ್ಲಿ ಪ್ರಾರಂಭಿಸಲಾಯಿತು. ಗ್ರಾಮೀಣ ಪ್ರದೇಶಗಳಲ್ಲಿ ಮನೆಗಳ ನಿರ್ಮಾಣವನ್ನು ಬೆಂಬಲಿಸುವ ಯೋಜನೆಯನ್ನು ಪ್ರಧಾನ ಮಂತ್ರಿ ಆವಾಸ್ ಯೋಜನೆ – ಗ್ರಾಮೀಣ (PMAY-G) ಎಂದು ಕರೆಯಲಾಗುತ್ತದೆ ಮತ್ತು ನಗರ ಪ್ರದೇಶಗಳಿಗೆ ಇದನ್ನು ಪ್ರಧಾನ ಮಂತ್ರಿ ಆವಾಸ್ ಯೋಜನೆ – ನಗರ (PMAY-U) ಎಂದು ಕರೆಯಲಾಗುತ್ತದೆ.

ಇದೇ ಏಪ್ರಿಲ್ 8 ರಂದು ನೀಡಲಾದ ನೋಟಿಸ್‌ನಲ್ಲಿ ದಲಿತರು ಮನೆಗಳನ್ನು ನಿರ್ಮಿಸಿರುವ ಭೂಮಿ ಸರ್ಕಾರಕ್ಕೆ ಸೇರಿದ್ದು ಮತ್ತು ಅದು ಹಿಂದೆ ಕೊಳವಾಗಿತ್ತು ಎಂದು ಹೇಳಿದೆ.

ಗರ್ಮುಕ್ತೇಶ್ವರ ಪುರಸಭೆಯ ಕಾರ್ಯನಿರ್ವಾಹಕ ಅಧಿಕಾರಿ ಮುಕ್ತಾ ಸಿಂಗ್ ಅವರು ನೀಡಿದ ನೋಟಿಸ್‌ನಲ್ಲಿ, “ನೀವು ನಗರ ಪಾಲಿಕೆಯ ಭೂಮಿಯನ್ನು ಅಕ್ರಮವಾಗಿ ಆಕ್ರಮಿಸಿಕೊಂಡು ಅದರಲ್ಲಿ ಮನೆ ಕಟ್ಟಿದ್ದೀರಿ ಮತ್ತು ಈ ಮನೆಗಳನ್ನು ತೆರವು ಮಾಡಲು ನೀವು ಬಯಸುತ್ತಿಲ್ಲವಾದ್ದರಿಂದ, ನಿಮ್ಮ ವಿರುದ್ಧ ಕಾನೂನು ಕ್ರಮಗಳನ್ನು ಪ್ರಾರಂಭಿಸುವುದು ಮುಖ್ಯವಾಗಿದೆ. ಈ ನೋಟಿಸ್ ಸ್ವೀಕರಿಸಿದ 15 ದಿನಗಳಲ್ಲಿ, ಭೂಮಿಯಲ್ಲಿರುವ ನಿಮಗೆ ಸಂಬಂಧಿಸಿದ ವಸ್ತುಗಳನ್ನು ತೆಗೆದುಹಾಕಿ ಮತ್ತು ಭೂಮಿಯನ್ನು ನಗರ ಪಾಲಿಕೆಗೆ ಒಪ್ಸಿಪಿ, ಇಲ್ಲದಿದ್ದರೆ ನಿಮ್ಮ ವಿರುದ್ಧದ ಪ್ರಕರಣಕ್ಕೆ ನೀವೇ ಜವಾಬ್ದಾರರಾಗಿರುತ್ತೀರಿ” ಎಂದು ಬರೆದಿದ್ದಾರೆ.

ನಿವಾಸಿಗಳಿಗೆ ಹಲವಾರು ಬಾರಿ ಮೌಖಿಕವಾಗಿ ಎಚ್ಚರಿಕೆ ನೀಡಲಾಗಿದ್ದರೂ, “ಅವರ ಅಹಂಕಾರದಿಂದಾಗಿ” ಅವರು ಪುರಸಭೆಯ ಆದೇಶಗಳನ್ನು ಪಾಲಿಸಿಲ್ಲ ಎಂದು ನೋಟಿಸ್‌ನಲ್ಲಿ ಆರೋಪಿಸಲಾಗಿದೆ.

“ನಗರಸಭೆಯ ಅಧಿಕಾರಿಗಳು ನಿಮಗೆ ಭೂಮಿಯನ್ನು ಖಾಲಿ ಮಾಡುವಂತೆ ಹಲವಾರು ಬಾರಿ ಮೌಖಿಕವಾಗಿ ಆದೇಶ ನೀಡಲಾಗಿದ್ದರೂ, ಶಾಸನಬದ್ಧ ನಿಬಂಧನೆಗಳನ್ನು ಪಾಲಿಸದೆ ನೀವು ಭೂಮಿಯನ್ನು ಖಾಲಿ ಮಾಡಲು ನಿರಾಕರಿಸುತ್ತಿದ್ದೀರಿ ಮತ್ತು ನಿಮ್ಮ ಭೂ ದಾಖಲೆಗಳಲ್ಲಿ ಸದರಿ ಭೂಮಿಯನ್ನು ಸರಕಾರವು ತಮಗೆ ನೀಡಿದೆ ಮತ್ತು ದಾಖಲೆಗಳನ್ನು ನೀಡಿದೆ ಎಂದು ನೀವು ಹೇಳುತ್ತೀರಿ. ಸದರಿ ಭೂಮಿಯಲ್ಲಿ ಯಾವುದೇ ವಸತಿ ಪ್ಲಾಟ್‌ಗಳ ದಾಖಲೆಗಳಿಲ್ಲ ಮತ್ತು ಯಾವುದೇ ಸಂದರ್ಭದಲ್ಲಿ ಯಾರ ಹೆಸರಿನಲ್ಲಿ ಭೂ ದಾಖಲೆಗಳನ್ನು ಹೊಂದಿದ್ದರೆ ಅದನ್ನು ರದ್ದುಗೊಳಿಸಲಾಗಿದೆ.” ಎಂದು ಅವರು ಹೇಳಿದ್ದಾರೆ.

ಪ್ರಕಟಣೆಯೊಂದಿಗೆ ಮಾತನಾಡಿದ ಜಿಲ್ಲಾ ಮ್ಯಾಜಿಸ್ಟ್ರೇಟ್ ಪ್ರೇರಣಾ ಶರ್ಮಾ, “ನಾವು ಈ ವಿಷಯವನ್ನು ಪರಿಶೀಲಿಸುತ್ತಿದ್ದೇವೆ. ಇದನ್ನು ಮಂಗಳವಾರ ನಮ್ಮ ಗಮನಕ್ಕೆ ತರಲಾಗಿದೆ. ಜನರ ಹಕ್ಕುಗಳು ಸರಿಯಾಗಿದ್ದರೆ, ನಾವು ತನಿಖೆ ಮಾಡುತ್ತೇವೆ. PMAY ಯೋಜನೆಯಡಿಯಲ್ಲಿ ಭೂ ದಾಖಲೆಗಳ ದೃಢೀಕರಣವನ್ನು ನಾವು ಪರಿಶೀಲಿಸುವುದಿಲ್ಲ, ದಸ್ತಾವೇಜಿನ ಪ್ರಕಾರ ವ್ಯಕ್ತಿಯು ಸರಿಯಾದ ಮಾಲೀಕರೇ ಎಂಬುದನ್ನು ಮಾತ್ರ ನಾವು ಪರಿಶೀಲಿಸುತ್ತೇವೆ. ನಾವು ಹಕ್ಕುಗಳನ್ನು ಪರಿಶೀಲಿಸಬೇಕಾಗಿದೆ” ಎಂದು ವಿವರಿಸಿದ್ದಾರೆ.

ಆದಾಗ್ಯೂ ನೋಟಿಸ್‌ನಲ್ಲಿ ಬಳಸಲಾದ ಸ್ವರ ಮತ್ತು ಭಾಷೆಯ ಬಗ್ಗೆ ಕೇಳಿದಾಗ, ಅಧಿಕಾರಿಗಳು ಪ್ರತಿಕ್ರಿಯಿಸಲು ನಿರಾಕರಿಸಿದರು. ನೋಟಿಸ್ ಸ್ವೀಕರಿಸಿದ ನಂತರ ಹಲವಾರು ನಿವಾಸಿಗಳು ಕಾರ್ಯನಿರ್ವಾಹಕ ಅಧಿಕಾರಿಯನ್ನು ಭೇಟಿಯಾಗಿದ್ದಾರೆ.

ವರದಿಯ ಪ್ರಕಾರ 58 ವರ್ಷದ ಗಂಗಾರಾಮ್, “ನಾನು 4ನೇ ತರಗತಿಯವರೆಗೆ ಮಾತ್ರ ಓದಿದ್ದೇನೆ ಮತ್ತು ನನ್ನ ಹೆಸರನ್ನು ಮಾತ್ರ ಓದಬಲ್ಲೆ. ಕಾಲೋನಿಯಲ್ಲಿರುವ ಇತರರು ನನ್ನ ಮನೆಯನ್ನು ಖಾಲಿ ಮಾಡಬೇಕೆಂದು ನನಗೆ ವಿವರಿಸಿದರು. ನಮ್ಮ ಕಾಲೋನಿ ಅಕ್ರಮ ಎಂದು ಅಧಿಕಾರಿಗಳು ನಮಗೆ ಹೇಳಿದರು. ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಲು ಅವರು ನಮಗೆ ಹೇಳಿದರು. ನಾವು ಬಡವರು, ನಾವು ದೂರು ನೀಡಬಹುದು.” ಎಂದು ಆವಲತ್ತುಕೊಂಡಿದ್ದಾರೆ.

PMAY ಯೋಜನೆಯಡಿಯಲ್ಲಿ ಇಲ್ಲಿ ಮನೆ ನಿರ್ಮಾಣಕ್ಕೆ ಮೊದಲ COVID-19 ಲಾಕ್‌ಡೌನ್ ನಂತರ ನಾನು ಮೂರು ಕಂತುಗಳನ್ನು ಪಡೆದೆನು. ತಲಾ 1 ಲಕ್ಷ ರೂ. ಮತ್ತು ಮುಂದಿನ ಕಂತುಗಳಲ್ಲಿ ತಲಾ 50,000 ರೂ. ಪಡೆದೆನು. ಆಳಿದುಳಿದ ಮನೆ ನಿರ್ಮಾಣವನ್ನು ಪೂರ್ಣಗೊಳಿಸಲು ಹೆಚ್ಚುವರಿಯಾಗಿ ತಮ್ಮ ಉಳಿತಾಯದಿಂದ 1.5 ಲಕ್ಷ ರೂ.ಗಳನ್ನು ಬಳಕೆ ಮಾಡಿದೆ ಎಂದು ಅವರು ಹೇಳಿದರು.

1986ರಲ್ಲಿ ಗಾಜಿಯಾಬಾದ್ ಜಿಲ್ಲೆಯ ಭಾಗವಾಗಿದ್ದ ಗರ್ಮುಕ್ತೇಶ್ವರದ ಚುಪ್ಲಾದಿಂದ ಸರಕಾರವು ಆ ಪ್ರದೇಶಕ್ಕೆ ತಮ್ಮನ್ನು ಸ್ಥಳಾಂತರಿಸಲಾಗಿದೆ ಎಂದು ನಿವಾಸಿಗಳು ಹೇಳಿದರು.

ಆ ಸಮಯದಲ್ಲಿ ಹೊರಡಿಸಲಾದ ನೋಟಿಸ್‌ನಲ್ಲಿ, “ಪುನರ್ವಸತಿ ಉದ್ದೇಶಕ್ಕಾಗಿ, ಸಾಮೂಹಿಕ ಅರ್ಜಿ ಪತ್ರವನ್ನು ಪರಿಗಣಿಸಿ, ಪುನರ್ವಸತಿ ಸಮಸ್ಯೆ ಬಗೆಹರಿಯಲು 100 ಗಜ ಭೂಮಿಯನ್ನು ನಿಮಗೆ ನೀಡಲು ನಾವು ನಿರ್ಧರಿಸಿದ್ದೇವೆ. ಭೂಮಿಯನ್ನು ಮಾರಾಟ ಮಾಡುವ ಮತ್ತು ವರ್ಗಾಯಿಸುವ ಹಕ್ಕು ನಿಮಗೆ ಇರುವುದಿಲ್ಲ. ನೀವು ಮತ್ತು ನಿಮ್ಮ ಕುಟುಂಬ ಸದಸ್ಯರು ವಸತಿ ಉದ್ದೇಶಗಳಿಗಾಗಿ ಭೂಮಿಯನ್ನು ಬಳಸುತ್ತೀರಿ” ಎಂದಿದೆ.

ಅವರು ಸ್ಥಳಾಂತರಗೊಂಡಾಗ ಅಲ್ಲಿ ಬತ್ತಿದ ಕೊಳವಿತ್ತು ಎಂದು ಗಂಗಾರಾಮ್ ಹೇಳುತ್ತಾರೆ. ಆದಾಗ್ಯೂ ನಗರ ಪಾಲಿಕೆ ಅಧಿಕಾರಿಗಳು ಅದನ್ನು ಮುಚ್ಚಿಸಿ ಅಲ್ಲಿಗೆ ನಮ್ಮನ್ನು ಸ್ಥಳಾಂತರಿಸಲು ಸಹಾಯ ಮಾಡಿದರು ಎಂದು ಅವರು ಹೇಳುತ್ತಾರೆ.

ಮತ್ತೊಬ್ಬ ನಿವಾಸಿ ಕಮಲಾ ಅವರು, “ಅವರು (ಅಧಿಕಾರಿಗಳು) ತಾವು ಮಾಡಬೇಕಾದ್ದನ್ನು ಮಾಡಿದ್ದೇವೆ ಎಂದು ನಮಗೆ ಹೇಳಿದರು, ಮತ್ತು ಈಗ ನಮಗೆ ಸಾಧ್ಯವಾದದ್ದನ್ನು ಮಾಡುವುದು ನಮ್ಮ ಜವಾಬ್ದಾರಿಯಾಗಿದೆ… ನಮಗೆ ನಿದ್ರೆ ಬರುತ್ತಿಲ್ಲ, ನಮ್ಮ ಉಳಿತಾಯದ ಎಲ್ಲಾ ಹಣವನ್ನು ನಮ್ಮ ಮನೆಗಳನ್ನು ನಿರ್ಮಿಸಲು ಬಳಸಿದ್ದೇವೆ. ಈಗ ನಾವು ಎಲ್ಲಿಗೆ ಹೋಗುಬೇಕು” ಎಂದು ಪ್ರಶ್ನಿಸುತ್ತಾರೆ.

ಹಣ, ಹೆಂಡಕ್ಕೆ ಮತ ನೀಡಿದರೆ ಮುಂದಿನ ಜನ್ಮದಲ್ಲಿ ನಾಯಿ, ಬೆಕ್ಕುಗಳಾಗಿ ಹುಟ್ಟುತ್ತೀರಿ: ಬಿಜೆಪಿ ಶಾಸಕಿ ಉಷಾ ಠಾಕೂರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...