Homeಮುಖಪುಟವಿಚಾರಣಾಧೀನ ಕೈದಿಗಳಲ್ಲಿ 42% ಜನರು ಯುಪಿ, ಬಿಹಾರ, ಮಹಾರಾಷ್ಟ್ರದಲ್ಲೆ ಇದ್ದಾರೆ - ವರದಿ

ವಿಚಾರಣಾಧೀನ ಕೈದಿಗಳಲ್ಲಿ 42% ಜನರು ಯುಪಿ, ಬಿಹಾರ, ಮಹಾರಾಷ್ಟ್ರದಲ್ಲೆ ಇದ್ದಾರೆ – ವರದಿ

- Advertisement -
- Advertisement -

ಡಿಸೆಂಬರ್ 2022 ರ ಹೊತ್ತಿಗೆ ದೇಶದಾದ್ಯಂತ ಇರುವ ವಿಚಾರಣಾಧೀನ ಕೈದಿಗಳಲ್ಲಿ 42% ಜನರು ಉತ್ತರ ಪ್ರದೇಶ, ಬಿಹಾರ ಮತ್ತು ಮಹಾರಾಷ್ಟ್ರಗಳಲ್ಲಿದ್ದಾರೆ ಎಂದು ಇಂಡಿಯಾ ಜಸ್ಟೀಸ್ ರಿಪೋರ್ಟ್-2025 ವರದಿ ಹಳೇಇದೆ.

ಉತ್ತರ ಪ್ರದೇಶದಲ್ಲಿ ಅತಿ ಹೆಚ್ಚು ವಿಚಾರಣಾಧೀನ ಕೈದಿಗಳಿದ್ದಾರೆ ಎಂದು ವರದಿ ಹೇಳಿದೆ. ಯುಪಿಯಲ್ಲಿ 94,000 ಕ್ಕೂ ಹೆಚ್ಚು ವಿಚಾರಣಾಧೀನ ಕೈದಿಗಳು ಇದ್ದು, ಇದು ದೇಶದಾದ್ಯಂತ ಇರುವ ವಿಚಾರಾಧೀನ ಕೈದಿಗಳಲ್ಲಿ ಸುಮಾರು 22% ರಷ್ಟು ಆಗುತ್ತದೆ ಎಂದು ವರದಿ ಹೇಳಿದೆ.

ಸೆಂಟರ್ ಫಾರ್ ಸೋಶಿಯಲ್ ಜಸ್ಟೀಸ್, ಕಾಮನ್ ಕಾಸ್, ಕಾಮನ್ವೆಲ್ತ್ ಹ್ಯೂಮನ್ ರೈಟ್ಸ್ ಇನಿಶಿಯೇಟಿವ್, ದಕ್ಷ, ಟಾಟಾ ಇನ್ಸ್ಟಿಟ್ಯೂಟ್ ಆಫ್ ಸೋಶಿಯಲ್ ಸೈನ್ಸಸ್-ಪ್ರಯಾಸ್, ವಿಧಿ ಸೆಂಟರ್ ಫಾರ್ ಲೀಗಲ್ ಪಾಲಿಸಿ ಮತ್ತು ಹೌ ಇಂಡಿಯಾ ಲೈವ್ಸ್ ಸೇರಿದಂತೆ ಸರ್ಕಾರೇತರ ಸಂಸ್ಥೆಗಳು ಮತ್ತು ನಾಗರಿಕ ಹಕ್ಕುಗಳ ಗುಂಪುಗಳು ಈ ವರದಿಯನ್ನು ಸಿದ್ಧಪಡಿಸಿದೆ.

ದೊಡ್ಡ ರಾಜ್ಯಗಳಾದ ಬಿಹಾರದಲ್ಲಿ ತನಿಖೆ ಅಥವಾ ವಿಚಾರಣೆ ಪೂರ್ಣಗೊಳ್ಳಲು ಕಾಯುತ್ತಿರುವ ಕೈದಿಗಳು 89% ರಷ್ಟಿದ್ದರೆ, ನಂತರ ಒಡಿಶಾದಲ್ಲಿ 85% ರಷ್ಟಿದ್ದಾರೆ ಎಂದು ವರದಿ ಹೇಳಿದೆ. ಜೈಲುಗಳಲ್ಲಿ ಹೆಚ್ಚಿನ ಜನದಟ್ಟಣೆಗೆ ವಿಚಾರಣೆಗಾಗಿ ಕಾಯುತ್ತಿರುವ ಕೈದಿಗಳೇ ಕಾರಣ ಎಂದು ಅಧ್ಯಯನವು ಹೇಳಿದೆ.

ಸರಾಸರಿಯಾಗಿ, ವಿಚಾರಣಾಧೀನ ಕೈದಿಗಳು ಮೊದಲಿಗಿಂತ ಹೆಚ್ಚು ಸಮಯವನ್ನು ಕಂಬಿಗಳ ಹಿಂದೆ ಕಳೆಯುತ್ತಿದ್ದಾರೆ ಎಂದು ವರದಿ ಹೇಳಿದ್ದು, 2022 ರ ಅಂತ್ಯದ ವೇಳೆಗೆ, ಐದು ವರ್ಷ ಅಥವಾ ಅದಕ್ಕಿಂತ ಹೆಚ್ಚು ಕಾಲ ಬಂಧನದಲ್ಲಿದ್ದ ವಿಚಾರಣಾಧೀನ ಕೈದಿಗಳ ಸಂಖ್ಯೆ 11,448 ಆಗಿದ್ದು, ಇದು 2019 ರಲ್ಲಿ 5,011 ಮತ್ತು 2012 ರಲ್ಲಿ 2,028 ರಷ್ಟಿತ್ತು ಎಂದು ಹೇಳಿದೆ.

2022 ರ ಅಂತ್ಯದ ವೇಳೆಗೆ, ಉತ್ತರ ಪ್ರದೇಶವೊಂದರಲ್ಲೇ ಐದು ವರ್ಷಗಳಿಗೂ ಹೆಚ್ಚು ಕಾಲ ಜೈಲಿನಲ್ಲಿದ್ದ ಸುಮಾರು 40% ವಿಚಾರಣಾಧೀನ ಕೈದಿಗಳು ಇದ್ದರು.

ಭಾರತದಲ್ಲಿ, ತನಿಖೆ ಅಥವಾ ವಿಚಾರಣೆ ನಡೆಯುತ್ತಿರುವಾಗ ಜೈಲು ಶಿಕ್ಷೆಗೆ ಬದಲಾಗಿ ಜಾಮೀನು ಹೆಚ್ಚಾಗಿ ಬಳಸಲ್ಪಡುತ್ತದೆ ಎಂದು ಅಧ್ಯಯನವು ಹೇಳಿದೆ. ಆದಾಗ್ಯೂ, ನ್ಯಾಯಾಧೀಶರು ಕಡಿಮೆ-ಅಪಾಯದ ಅಪರಾಧಿಗಳಿಗೆ ಸಂಬಂಧಿಸಿದಂತೆ ಕಸ್ಟಡಿಯೇತರ ಕ್ರಮಗಳನ್ನು ಜೈಲು ಶಿಕ್ಷೆಗೆ ಪರ್ಯಾಯವಾಗಿ ಬಳಸುವ ಅಧಿಕಾರವನ್ನು ಹೊಂದಿದ್ದಾರೆ ಎಂದು ಅದು ಹೇಳಿದೆ.

2012 ಮತ್ತು 2022 ರ ನಡುವೆ, ಒಟ್ಟಾರೆ ಜೈಲು ವಾಸದ ದರಗಳು 112% ರಿಂದ 132% ಕ್ಕೆ ಏರಿದೆ. ಅದೇ ಅವಧಿಯಲ್ಲಿ ದೇಶಾದ್ಯಂತ ಜೈಲು ಜನಸಂಖ್ಯೆಯು 3.8 ಲಕ್ಷದಿಂದ 5.7 ಲಕ್ಷಕ್ಕೆ ಅಂದರೆ 49% ರಷ್ಟು ಹೆಚ್ಚಾಗಿದೆ ಎಂದು ಅಧ್ಯಯನವು ತಿಳಿಸಿದೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಸಗಣಿ ಬಳಿದ ಪ್ರಕರಣ: ಪ್ರಾಂಶುಪಾಲೆಯ ಕಚೇರಿ ಗೋಡೆಗೆ ಸಗಣಿ ಬಳಿದು ಪ್ರತಿಭಟಿಸಿದ ವಿದ್ಯಾರ್ಥಿ ಒಕ್ಕೂಟ; ವೀಡಿಯೋ ವೈರಲ್

ಸಗಣಿ ಬಳಿದ ಪ್ರಕರಣ: ಪ್ರಾಂಶುಪಾಲೆಯ ಕಚೇರಿ ಗೋಡೆಗೆ ಸಗಣಿ ಬಳಿದು ಪ್ರತಿಭಟಿಸಿದ ವಿದ್ಯಾರ್ಥಿ ಒಕ್ಕೂಟ; ವೀಡಿಯೋ ವೈರಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತಕ್ಕಿಂತ ಯಾವುದೇ ಪಾಲುದಾರ ದೇಶ ಮುಖ್ಯವಲ್ಲ, ವ್ಯಾಪಾರ ಮಾತುಕತೆ ಪುನರಾರಂಭ: ಅಮೆರಿಕ ರಾಯಭಾರಿ ಸೆರ್ಗಿಯೊ ಗೋರ್

"ವಾಷಿಂಗ್ಟನ್‌ಗೆ ಭಾರತಕ್ಕಿಂತ ಅಗತ್ಯವಾದ ದೇಶ ಇನ್ನೊಂದಿಲ್ಲ ಮತ್ತು ಎರಡೂ ಕಡೆಯವರು ವ್ಯಾಪಾರ ಒಪ್ಪಂದವನ್ನು ದೃಢೀಕರಿಸುವಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ" ಎಂದು ಅಮೆರಿಕದ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್ ಸೋಮವಾರ ಹೇಳಿದ್ದಾರೆ. ಅಮೆರಿಕ ರಾಯಭಾರ ಕಚೇರಿಯ ನೌಕರರು...

ಬಿಷಪ್ ಫ್ರಾಂಕೊ ಮುಲಕ್ಕಲ್ ಅತ್ಯಾಚಾರ ಪ್ರಕರಣ : ಒಂಬತ್ತು ವರ್ಷಗಳ ಬಳಿಕ ಮೌನ ಮುರಿದ ಸಂತ್ರಸ್ತೆ, ಕಾನೂನು ಹೋರಾಟ ಮುಂದುವರಿಸುವುದಾಗಿ ಹೇಳಿಕೆ

ಬಿಷಪ್ ಫ್ರಾಂಕೊ ಮುಲಕ್ಕಲ್ ವಿರುದ್ದದ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಕ್ರೈಸ್ತ ಸನ್ಯಾಸಿನಿ ಒಂಬತ್ತು ವರ್ಷಗಳ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಮಾತನಾಡಿದ್ದು, ಫ್ರಾಂಕೊ ಮುಲಕ್ಕಲ್ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿದ್ದಕ್ಕೆ ನಾನು ದಂಗಾಗಿದ್ದೇನೆ. ನ್ಯಾಯಕ್ಕಾಗಿ...

‘ವೆನೆಜುವೆಲಾದ ಹಂಗಾಮಿ ಅಧ್ಯಕ್ಷ’ ಎಂದು ಘೋಷಿಸಿಕೊಂಡ ಡೊನಾಲ್ಡ್ ಟ್ರಂಪ್ 

ಸೋಮವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ರುತ್ ಸೋಶಿಯಲ್‌ನಲ್ಲಿ ತಮ್ಮದೇ ಆದ ವಿಕಿಪೀಡಿಯಾ ಪುಟದ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ, ಅದರಲ್ಲಿ "ವೆನೆಜುವೆಲಾದ ಹಂಗಾಮಿ ಅಧ್ಯಕ್ಷ" ಎಂಬ ಹುದ್ದೆಯನ್ನು ಹೊಂದಿರುವ ಅವರ ಚಿತ್ರವಿದೆ. ಪೋಸ್ಟ್‌ನಲ್ಲಿ ಟ್ರಂಪ್...

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...