Homeಮುಖಪುಟವಿಚಾರಣಾಧೀನ ಕೈದಿಗಳಲ್ಲಿ 42% ಜನರು ಯುಪಿ, ಬಿಹಾರ, ಮಹಾರಾಷ್ಟ್ರದಲ್ಲೆ ಇದ್ದಾರೆ - ವರದಿ

ವಿಚಾರಣಾಧೀನ ಕೈದಿಗಳಲ್ಲಿ 42% ಜನರು ಯುಪಿ, ಬಿಹಾರ, ಮಹಾರಾಷ್ಟ್ರದಲ್ಲೆ ಇದ್ದಾರೆ – ವರದಿ

- Advertisement -
- Advertisement -

ಡಿಸೆಂಬರ್ 2022 ರ ಹೊತ್ತಿಗೆ ದೇಶದಾದ್ಯಂತ ಇರುವ ವಿಚಾರಣಾಧೀನ ಕೈದಿಗಳಲ್ಲಿ 42% ಜನರು ಉತ್ತರ ಪ್ರದೇಶ, ಬಿಹಾರ ಮತ್ತು ಮಹಾರಾಷ್ಟ್ರಗಳಲ್ಲಿದ್ದಾರೆ ಎಂದು ಇಂಡಿಯಾ ಜಸ್ಟೀಸ್ ರಿಪೋರ್ಟ್-2025 ವರದಿ ಹಳೇಇದೆ.

ಉತ್ತರ ಪ್ರದೇಶದಲ್ಲಿ ಅತಿ ಹೆಚ್ಚು ವಿಚಾರಣಾಧೀನ ಕೈದಿಗಳಿದ್ದಾರೆ ಎಂದು ವರದಿ ಹೇಳಿದೆ. ಯುಪಿಯಲ್ಲಿ 94,000 ಕ್ಕೂ ಹೆಚ್ಚು ವಿಚಾರಣಾಧೀನ ಕೈದಿಗಳು ಇದ್ದು, ಇದು ದೇಶದಾದ್ಯಂತ ಇರುವ ವಿಚಾರಾಧೀನ ಕೈದಿಗಳಲ್ಲಿ ಸುಮಾರು 22% ರಷ್ಟು ಆಗುತ್ತದೆ ಎಂದು ವರದಿ ಹೇಳಿದೆ.

ಸೆಂಟರ್ ಫಾರ್ ಸೋಶಿಯಲ್ ಜಸ್ಟೀಸ್, ಕಾಮನ್ ಕಾಸ್, ಕಾಮನ್ವೆಲ್ತ್ ಹ್ಯೂಮನ್ ರೈಟ್ಸ್ ಇನಿಶಿಯೇಟಿವ್, ದಕ್ಷ, ಟಾಟಾ ಇನ್ಸ್ಟಿಟ್ಯೂಟ್ ಆಫ್ ಸೋಶಿಯಲ್ ಸೈನ್ಸಸ್-ಪ್ರಯಾಸ್, ವಿಧಿ ಸೆಂಟರ್ ಫಾರ್ ಲೀಗಲ್ ಪಾಲಿಸಿ ಮತ್ತು ಹೌ ಇಂಡಿಯಾ ಲೈವ್ಸ್ ಸೇರಿದಂತೆ ಸರ್ಕಾರೇತರ ಸಂಸ್ಥೆಗಳು ಮತ್ತು ನಾಗರಿಕ ಹಕ್ಕುಗಳ ಗುಂಪುಗಳು ಈ ವರದಿಯನ್ನು ಸಿದ್ಧಪಡಿಸಿದೆ.

ದೊಡ್ಡ ರಾಜ್ಯಗಳಾದ ಬಿಹಾರದಲ್ಲಿ ತನಿಖೆ ಅಥವಾ ವಿಚಾರಣೆ ಪೂರ್ಣಗೊಳ್ಳಲು ಕಾಯುತ್ತಿರುವ ಕೈದಿಗಳು 89% ರಷ್ಟಿದ್ದರೆ, ನಂತರ ಒಡಿಶಾದಲ್ಲಿ 85% ರಷ್ಟಿದ್ದಾರೆ ಎಂದು ವರದಿ ಹೇಳಿದೆ. ಜೈಲುಗಳಲ್ಲಿ ಹೆಚ್ಚಿನ ಜನದಟ್ಟಣೆಗೆ ವಿಚಾರಣೆಗಾಗಿ ಕಾಯುತ್ತಿರುವ ಕೈದಿಗಳೇ ಕಾರಣ ಎಂದು ಅಧ್ಯಯನವು ಹೇಳಿದೆ.

ಸರಾಸರಿಯಾಗಿ, ವಿಚಾರಣಾಧೀನ ಕೈದಿಗಳು ಮೊದಲಿಗಿಂತ ಹೆಚ್ಚು ಸಮಯವನ್ನು ಕಂಬಿಗಳ ಹಿಂದೆ ಕಳೆಯುತ್ತಿದ್ದಾರೆ ಎಂದು ವರದಿ ಹೇಳಿದ್ದು, 2022 ರ ಅಂತ್ಯದ ವೇಳೆಗೆ, ಐದು ವರ್ಷ ಅಥವಾ ಅದಕ್ಕಿಂತ ಹೆಚ್ಚು ಕಾಲ ಬಂಧನದಲ್ಲಿದ್ದ ವಿಚಾರಣಾಧೀನ ಕೈದಿಗಳ ಸಂಖ್ಯೆ 11,448 ಆಗಿದ್ದು, ಇದು 2019 ರಲ್ಲಿ 5,011 ಮತ್ತು 2012 ರಲ್ಲಿ 2,028 ರಷ್ಟಿತ್ತು ಎಂದು ಹೇಳಿದೆ.

2022 ರ ಅಂತ್ಯದ ವೇಳೆಗೆ, ಉತ್ತರ ಪ್ರದೇಶವೊಂದರಲ್ಲೇ ಐದು ವರ್ಷಗಳಿಗೂ ಹೆಚ್ಚು ಕಾಲ ಜೈಲಿನಲ್ಲಿದ್ದ ಸುಮಾರು 40% ವಿಚಾರಣಾಧೀನ ಕೈದಿಗಳು ಇದ್ದರು.

ಭಾರತದಲ್ಲಿ, ತನಿಖೆ ಅಥವಾ ವಿಚಾರಣೆ ನಡೆಯುತ್ತಿರುವಾಗ ಜೈಲು ಶಿಕ್ಷೆಗೆ ಬದಲಾಗಿ ಜಾಮೀನು ಹೆಚ್ಚಾಗಿ ಬಳಸಲ್ಪಡುತ್ತದೆ ಎಂದು ಅಧ್ಯಯನವು ಹೇಳಿದೆ. ಆದಾಗ್ಯೂ, ನ್ಯಾಯಾಧೀಶರು ಕಡಿಮೆ-ಅಪಾಯದ ಅಪರಾಧಿಗಳಿಗೆ ಸಂಬಂಧಿಸಿದಂತೆ ಕಸ್ಟಡಿಯೇತರ ಕ್ರಮಗಳನ್ನು ಜೈಲು ಶಿಕ್ಷೆಗೆ ಪರ್ಯಾಯವಾಗಿ ಬಳಸುವ ಅಧಿಕಾರವನ್ನು ಹೊಂದಿದ್ದಾರೆ ಎಂದು ಅದು ಹೇಳಿದೆ.

2012 ಮತ್ತು 2022 ರ ನಡುವೆ, ಒಟ್ಟಾರೆ ಜೈಲು ವಾಸದ ದರಗಳು 112% ರಿಂದ 132% ಕ್ಕೆ ಏರಿದೆ. ಅದೇ ಅವಧಿಯಲ್ಲಿ ದೇಶಾದ್ಯಂತ ಜೈಲು ಜನಸಂಖ್ಯೆಯು 3.8 ಲಕ್ಷದಿಂದ 5.7 ಲಕ್ಷಕ್ಕೆ ಅಂದರೆ 49% ರಷ್ಟು ಹೆಚ್ಚಾಗಿದೆ ಎಂದು ಅಧ್ಯಯನವು ತಿಳಿಸಿದೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಸಗಣಿ ಬಳಿದ ಪ್ರಕರಣ: ಪ್ರಾಂಶುಪಾಲೆಯ ಕಚೇರಿ ಗೋಡೆಗೆ ಸಗಣಿ ಬಳಿದು ಪ್ರತಿಭಟಿಸಿದ ವಿದ್ಯಾರ್ಥಿ ಒಕ್ಕೂಟ; ವೀಡಿಯೋ ವೈರಲ್

ಸಗಣಿ ಬಳಿದ ಪ್ರಕರಣ: ಪ್ರಾಂಶುಪಾಲೆಯ ಕಚೇರಿ ಗೋಡೆಗೆ ಸಗಣಿ ಬಳಿದು ಪ್ರತಿಭಟಿಸಿದ ವಿದ್ಯಾರ್ಥಿ ಒಕ್ಕೂಟ; ವೀಡಿಯೋ ವೈರಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉಮರ್ ಖಾಲಿದ್ ಬಂಧನ ನಿರಂಕುಶ; ಕಾನೂನು ಆಧಾರವಿಲ್ಲ: ವಿಶ್ವಸಂಸ್ಥೆ ಕಾರ್ಯಪಡೆ

"ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) ವಿದ್ಯಾರ್ಥಿ ಕಾರ್ಯಕರ್ತ ಮತ್ತು ಸಂಶೊಧನಾ ವಿದ್ಯಾರ್ಥಿ ಉಮರ್ ಖಾಲಿದ್ ಅವರ ಬಂಧನವು ನಿರಂಕುಶವಾಗಿದೆ, ಅದಕ್ಕೆ ಯಾವುದೇ ಕಾನೂನು ಆಧಾರವಿಲ್ಲ" ಎಂದು ವಿಶ್ವಸಂಸ್ಥೆಯ ಸಮಿತಿ ಹೇಳಿದೆ. ಸಾಮಾಜಿಕ ಕಾರ್ಯಕರ್ತರ...

ಮಹಾರಾಷ್ಟ್ರ | ಲೈಂಗಿಕ ದೌರ್ಜನ್ಯ ಆರೋಪ : ಸ್ವಯಂ ಘೋಷಿತ ದೇವಮಾನವನ ಬಂಧನ

ಮಹಿಳೆಯರನ್ನು ಅಸಭ್ಯವಾಗಿ ಚಿತ್ರೀಕರಿಸಿ, ಆ ವಿಡಿಯೋಗಳನ್ನು ಇಟ್ಟುಕೊಂಡು ಲೈಂಗಿಕವಾಗಿ ಶೋಷಣೆ ಮಾಡುತ್ತಿದ್ದ ಆರೋಪದ ಮೇಲೆ ಸ್ವಯಂಘೋಷಿತ ದೇವಮಾನವ ಮತ್ತು ಜ್ಯೋತಿಷಿ ಕ್ಯಾಪ್ಟನ್ ಅಶೋಕ್ ಖಾರಟ್‌ನನ್ನು ಮಹಾರಾಷ್ಟ್ರದ ನಾಸಿಕ್ ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ....

‘ಕಾಂಗ್ರೆಸ್ ಜೊತೆ ಬಲವಂತದ ಮದುವೆ ಆಗಿತ್ತು’: ಖರ್ಗೆ ಅವರ ‘ಮೋದಿ ಜೊತೆ ಮದುವೆ’ ಟೀಕೆಗೆ ದೇವೇಗೌಡ ತಿರುಗೇಟು

ಸಂಸತ್ತಿನಲ್ಲಿ ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಅವರ 'ಮದುವೆ' ಮತ್ತು 'ಪ್ರೀತಿ' ಹೇಳಿಕೆಗೆ ಮಾಜಿ ಪ್ರಧಾನಿ ಮತ್ತು ರಾಜ್ಯಸಭಾ ಸಂಸದ ಎಚ್‌ಡಿ ದೇವೇಗೌಡ ಪ್ರತಿಕ್ರಿಯಿಸಿದ್ದಾರೆ. ದೇವೇಗೌಡರು ಕಾಂಗ್ರೆಸ್ ಅನ್ನು "ಪ್ರೀತಿಸಿದರು" ಆದರೆ ಮೋದಿ (ಬಿಜೆಪಿ)...

ರಾಹುಲ್ ಗಾಂಧಿಯನ್ನು ‘ಟಪೋರಿ’ ಎಂದು ಕರೆದ ಬಿಜೆಪಿ ಸಂಸದೆ ಕಂಗನಾ ರಣಾವತ್

ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿರುವ ಬಿಜೆಪಿ ಸಂಸದೆ - ನಟಿ ಕಂಗನಾ ರನೌತ್, ಅವರನ್ನು ಟಪೋರಿ ಎಂದು ಕರೆದಿದ್ದಾರೆ. ಅವರ ನಡವಳಿಕೆಯು ಮಹಿಳೆಯರಿಗೆ ಅನಾನುಕೂಲವನ್ನುಂಟು ಮಾಡುತ್ತದೆ ಎಂದು...

ಎಸ್‌ಬಿಐಗೆ ವಂಚನೆ ಪ್ರಕರಣ : ಅನಿಲ್ ಅಂಬಾನಿ ವಿಚಾರಣೆ ನಡೆಸಿದ ಸಿಬಿಐ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ದೂರಿನ ಮೇರೆಗೆ ರಿಲಯನ್ಸ್ ಕಮ್ಯುನಿಕೇಷನ್ಸ್ ಲಿಮಿಟೆಡ್ ವಿರುದ್ಧ ದಾಖಲಾಗಿರುವ 2,929 ಕೋಟಿ ರೂಪಾಯಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗುರುವಾರ (ಮಾ.19) ಕೈಗಾರಿಕೋದ್ಯಮಿ ಅನಿಲ್ ಅಂಬಾನಿ ಅವರನ್ನು ಕೇಂದ್ರ...

ಬೆಂಗಳೂರಿನಲ್ಲಿ 2ನೇ ವಿಮಾನ ನಿಲ್ದಾಣಕ್ಕೆ ಕೇಂದ್ರದಿಂದ ಬೆಂಬಲ, ಭರವಸೆ: ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್

ನವದೆಹಲಿ: ರಾಜ್ಯದಿಂದ ಕಾರ್ಯಸಾಧ್ಯತಾ ವರದಿ ಬಂದ ನಂತರ, ಬೆಂಗಳೂರಿನ ಎರಡನೇ ವಿಮಾನ ನಿಲ್ದಾಣಕ್ಕೆ ಅಗತ್ಯವಿರುವ ಎಲ್ಲಾ ಅನುಮತಿಗಳನ್ನು ಕೇಂದ್ರವು ನೀಡಲಿದೆ ಎಂದು ಕೇಂದ್ರ ನಾಗರಿಕ ವಿಮಾನಯಾನ ಸಚಿವ ಕಿಂಜರಪು ರಾಮ್ ಮೋಹನ್ ನಾಯ್ಡು...

ಮಧ್ಯಪ್ರದೇಶ| ಪ್ರಬಲಜಾತಿ ಗುಂಪಿನಿಂದ ಹಲ್ಲೆ-ಜಾತಿನಿಂದನೆ; ನ್ಯಾಯ ಸಿಗದಿದ್ದರೆ ಸಾಮೂಹಿಕ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ ಎಂದ ದಲಿತ ಕುಟುಂಬ

ಮಧ್ಯಪ್ರದೇಶದ ನೀಮಚ್ ಜಿಲ್ಲೆಯ ದಲಿತ ಕುಟುಂಬವೊಂದರ ಮೇಲೆ ಗ್ರಾಮದ ಪ್ರಬಲಜಾತಿ ಗುಂಪೊಂದು ಜಾತಿ ಆಧಾರಿತ ನಿಂದನೆ ಮಾಡಿ ಹಲ್ಲೆ ನಡೆಸಿದ್ದಾರೆ. ದೂರ ನೀಡಿದರೂ ಕ್ರಮ ತಗೆದುಕೊಂಡಿದ್ದ ಎಂದು ಆರೋಪಿಸಿರುವ ಕುಟುಂಬ, ಪೊಲೀಸರು ನಿಷ್ಕ್ರಿಯತೆ...

ವಿಶ್ವದ ಅತಿದೊಡ್ಡ ಎಲ್‌ಎನ್‌ಜಿ ಹಬ್ ಖತಾರ್‌ನ ರಾಸ್ ಲಫನ್ ಇಂಡಸ್ಟ್ರಿಯಲ್ ಸಿಟಿ ಮೇಲೆ ಇರಾನ್ ಕ್ಷಿಪಣಿ ದಾಳಿ

ವಿಶ್ವದ ಅತಿದೊಡ್ಡ ಲಿಕ್ವಿಫೈಡ್ ನ್ಯಾಚುರಲ್ ಗ್ಯಾಸ್ (ಎಲ್‌ಎನ್‌ಜಿ) ರಫ್ತು ಕೇಂದ್ರಗಳಲ್ಲಿ ಒಂದಾದ ಖತಾರ್‌ನ ರಾಸ್ ಲಫನ್ ಇಂಡಸ್ಟ್ರಿಯಲ್ ಸಿಟಿ ಮೇಲೆ ಇರಾನ್ ಕ್ಷಿಪಣಿ ದಾಳಿ ನಡೆಸಿದೆ. ಈ ದಾಳಿಯಿಂದಾಗಿ ಅಲ್ಲಿನ ಅನಿಲ ಸೌಲಭ್ಯಗಳಲ್ಲಿ...

ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ : ತನಿಖಾ ವರದಿ ಸಲ್ಲಿಸಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ನಿರ್ದೇಶನ

ಧರ್ಮಸ್ಥಳ ಗ್ರಾಮದಲ್ಲಿ 1990ರಿಂದ 2021ರ ನಡುವೆ ಸಂಭವಿಸಿದೆ ಎನ್ನಲಾದ 74 ಅಸಹಜ ಸಾವಿನ ಪ್ರಕರಣಗಳಿಗೆ ಸಂಬಂಧಿಸಿದಂತೆ ವರದಿ ಸಲ್ಲಿಸಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ಬುಧವಾರ (ಮಾ.18) ನಿರ್ದೇಶಿಸಿದೆ ಎಂದು barandbench.com ವರದಿ ಮಾಡಿದೆ....

ಛತ್ತೀಸ್‌ಗಢ| ಕ್ರಿಶ್ಚಿಯನ್ ಯುವಕನ ಮೇಲೆ ಹಿಂದುತ್ವವಾದಿ ಗುಂಪಿನಿಂದ ಹಲ್ಲೆ; ‘ಜೈ ಶ್ರೀ ರಾಮ್’ ಕೂಗುವಂತೆ ಒತ್ತಾಯ

ಛತ್ತೀಸ್‌ಗಢದ ಜಂಜ್‌ಗೀರ್-ಚಂಪಾ ಜಿಲ್ಲೆಯಲ್ಲಿ ಕ್ರಿಶ್ಚಿಯನ್ ಯುವಕನ ಮೇಲೆ ಹಿಂದುತ್ವವಾದಿಗಳ ಗುಂಪೊಂದು ಹಲ್ಲೆ ನಡೆಸಿ, ಜೈಶ್ರೀರಾಮ್ ಎಂದು ಘೋಷಣೆಗಳನ್ನು ಕೂಗುವಂತೆ ಒತ್ತಾಯಿಸಿದೆ ಎಂಬ ಆರೋಪ ಕೇಳಿಬಂದಿದೆ. ಇಂದು (ಮಾ.18) ನಡೆದಿದೆ ಎನ್ನಲಾದ ಈ ಘಟನೆಯ...