Homeಮುಖಪುಟವಿಚಾರಣಾಧೀನ ಕೈದಿಗಳಲ್ಲಿ 42% ಜನರು ಯುಪಿ, ಬಿಹಾರ, ಮಹಾರಾಷ್ಟ್ರದಲ್ಲೆ ಇದ್ದಾರೆ - ವರದಿ

ವಿಚಾರಣಾಧೀನ ಕೈದಿಗಳಲ್ಲಿ 42% ಜನರು ಯುಪಿ, ಬಿಹಾರ, ಮಹಾರಾಷ್ಟ್ರದಲ್ಲೆ ಇದ್ದಾರೆ – ವರದಿ

- Advertisement -
- Advertisement -

ಡಿಸೆಂಬರ್ 2022 ರ ಹೊತ್ತಿಗೆ ದೇಶದಾದ್ಯಂತ ಇರುವ ವಿಚಾರಣಾಧೀನ ಕೈದಿಗಳಲ್ಲಿ 42% ಜನರು ಉತ್ತರ ಪ್ರದೇಶ, ಬಿಹಾರ ಮತ್ತು ಮಹಾರಾಷ್ಟ್ರಗಳಲ್ಲಿದ್ದಾರೆ ಎಂದು ಇಂಡಿಯಾ ಜಸ್ಟೀಸ್ ರಿಪೋರ್ಟ್-2025 ವರದಿ ಹಳೇಇದೆ.

ಉತ್ತರ ಪ್ರದೇಶದಲ್ಲಿ ಅತಿ ಹೆಚ್ಚು ವಿಚಾರಣಾಧೀನ ಕೈದಿಗಳಿದ್ದಾರೆ ಎಂದು ವರದಿ ಹೇಳಿದೆ. ಯುಪಿಯಲ್ಲಿ 94,000 ಕ್ಕೂ ಹೆಚ್ಚು ವಿಚಾರಣಾಧೀನ ಕೈದಿಗಳು ಇದ್ದು, ಇದು ದೇಶದಾದ್ಯಂತ ಇರುವ ವಿಚಾರಾಧೀನ ಕೈದಿಗಳಲ್ಲಿ ಸುಮಾರು 22% ರಷ್ಟು ಆಗುತ್ತದೆ ಎಂದು ವರದಿ ಹೇಳಿದೆ.

ಸೆಂಟರ್ ಫಾರ್ ಸೋಶಿಯಲ್ ಜಸ್ಟೀಸ್, ಕಾಮನ್ ಕಾಸ್, ಕಾಮನ್ವೆಲ್ತ್ ಹ್ಯೂಮನ್ ರೈಟ್ಸ್ ಇನಿಶಿಯೇಟಿವ್, ದಕ್ಷ, ಟಾಟಾ ಇನ್ಸ್ಟಿಟ್ಯೂಟ್ ಆಫ್ ಸೋಶಿಯಲ್ ಸೈನ್ಸಸ್-ಪ್ರಯಾಸ್, ವಿಧಿ ಸೆಂಟರ್ ಫಾರ್ ಲೀಗಲ್ ಪಾಲಿಸಿ ಮತ್ತು ಹೌ ಇಂಡಿಯಾ ಲೈವ್ಸ್ ಸೇರಿದಂತೆ ಸರ್ಕಾರೇತರ ಸಂಸ್ಥೆಗಳು ಮತ್ತು ನಾಗರಿಕ ಹಕ್ಕುಗಳ ಗುಂಪುಗಳು ಈ ವರದಿಯನ್ನು ಸಿದ್ಧಪಡಿಸಿದೆ.

ದೊಡ್ಡ ರಾಜ್ಯಗಳಾದ ಬಿಹಾರದಲ್ಲಿ ತನಿಖೆ ಅಥವಾ ವಿಚಾರಣೆ ಪೂರ್ಣಗೊಳ್ಳಲು ಕಾಯುತ್ತಿರುವ ಕೈದಿಗಳು 89% ರಷ್ಟಿದ್ದರೆ, ನಂತರ ಒಡಿಶಾದಲ್ಲಿ 85% ರಷ್ಟಿದ್ದಾರೆ ಎಂದು ವರದಿ ಹೇಳಿದೆ. ಜೈಲುಗಳಲ್ಲಿ ಹೆಚ್ಚಿನ ಜನದಟ್ಟಣೆಗೆ ವಿಚಾರಣೆಗಾಗಿ ಕಾಯುತ್ತಿರುವ ಕೈದಿಗಳೇ ಕಾರಣ ಎಂದು ಅಧ್ಯಯನವು ಹೇಳಿದೆ.

ಸರಾಸರಿಯಾಗಿ, ವಿಚಾರಣಾಧೀನ ಕೈದಿಗಳು ಮೊದಲಿಗಿಂತ ಹೆಚ್ಚು ಸಮಯವನ್ನು ಕಂಬಿಗಳ ಹಿಂದೆ ಕಳೆಯುತ್ತಿದ್ದಾರೆ ಎಂದು ವರದಿ ಹೇಳಿದ್ದು, 2022 ರ ಅಂತ್ಯದ ವೇಳೆಗೆ, ಐದು ವರ್ಷ ಅಥವಾ ಅದಕ್ಕಿಂತ ಹೆಚ್ಚು ಕಾಲ ಬಂಧನದಲ್ಲಿದ್ದ ವಿಚಾರಣಾಧೀನ ಕೈದಿಗಳ ಸಂಖ್ಯೆ 11,448 ಆಗಿದ್ದು, ಇದು 2019 ರಲ್ಲಿ 5,011 ಮತ್ತು 2012 ರಲ್ಲಿ 2,028 ರಷ್ಟಿತ್ತು ಎಂದು ಹೇಳಿದೆ.

2022 ರ ಅಂತ್ಯದ ವೇಳೆಗೆ, ಉತ್ತರ ಪ್ರದೇಶವೊಂದರಲ್ಲೇ ಐದು ವರ್ಷಗಳಿಗೂ ಹೆಚ್ಚು ಕಾಲ ಜೈಲಿನಲ್ಲಿದ್ದ ಸುಮಾರು 40% ವಿಚಾರಣಾಧೀನ ಕೈದಿಗಳು ಇದ್ದರು.

ಭಾರತದಲ್ಲಿ, ತನಿಖೆ ಅಥವಾ ವಿಚಾರಣೆ ನಡೆಯುತ್ತಿರುವಾಗ ಜೈಲು ಶಿಕ್ಷೆಗೆ ಬದಲಾಗಿ ಜಾಮೀನು ಹೆಚ್ಚಾಗಿ ಬಳಸಲ್ಪಡುತ್ತದೆ ಎಂದು ಅಧ್ಯಯನವು ಹೇಳಿದೆ. ಆದಾಗ್ಯೂ, ನ್ಯಾಯಾಧೀಶರು ಕಡಿಮೆ-ಅಪಾಯದ ಅಪರಾಧಿಗಳಿಗೆ ಸಂಬಂಧಿಸಿದಂತೆ ಕಸ್ಟಡಿಯೇತರ ಕ್ರಮಗಳನ್ನು ಜೈಲು ಶಿಕ್ಷೆಗೆ ಪರ್ಯಾಯವಾಗಿ ಬಳಸುವ ಅಧಿಕಾರವನ್ನು ಹೊಂದಿದ್ದಾರೆ ಎಂದು ಅದು ಹೇಳಿದೆ.

2012 ಮತ್ತು 2022 ರ ನಡುವೆ, ಒಟ್ಟಾರೆ ಜೈಲು ವಾಸದ ದರಗಳು 112% ರಿಂದ 132% ಕ್ಕೆ ಏರಿದೆ. ಅದೇ ಅವಧಿಯಲ್ಲಿ ದೇಶಾದ್ಯಂತ ಜೈಲು ಜನಸಂಖ್ಯೆಯು 3.8 ಲಕ್ಷದಿಂದ 5.7 ಲಕ್ಷಕ್ಕೆ ಅಂದರೆ 49% ರಷ್ಟು ಹೆಚ್ಚಾಗಿದೆ ಎಂದು ಅಧ್ಯಯನವು ತಿಳಿಸಿದೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಸಗಣಿ ಬಳಿದ ಪ್ರಕರಣ: ಪ್ರಾಂಶುಪಾಲೆಯ ಕಚೇರಿ ಗೋಡೆಗೆ ಸಗಣಿ ಬಳಿದು ಪ್ರತಿಭಟಿಸಿದ ವಿದ್ಯಾರ್ಥಿ ಒಕ್ಕೂಟ; ವೀಡಿಯೋ ವೈರಲ್

ಸಗಣಿ ಬಳಿದ ಪ್ರಕರಣ: ಪ್ರಾಂಶುಪಾಲೆಯ ಕಚೇರಿ ಗೋಡೆಗೆ ಸಗಣಿ ಬಳಿದು ಪ್ರತಿಭಟಿಸಿದ ವಿದ್ಯಾರ್ಥಿ ಒಕ್ಕೂಟ; ವೀಡಿಯೋ ವೈರಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...