Homeಮುಖಪುಟವಿಚಾರಣಾಧೀನ ಕೈದಿಗಳಲ್ಲಿ 42% ಜನರು ಯುಪಿ, ಬಿಹಾರ, ಮಹಾರಾಷ್ಟ್ರದಲ್ಲೆ ಇದ್ದಾರೆ - ವರದಿ

ವಿಚಾರಣಾಧೀನ ಕೈದಿಗಳಲ್ಲಿ 42% ಜನರು ಯುಪಿ, ಬಿಹಾರ, ಮಹಾರಾಷ್ಟ್ರದಲ್ಲೆ ಇದ್ದಾರೆ – ವರದಿ

- Advertisement -
- Advertisement -

ಡಿಸೆಂಬರ್ 2022 ರ ಹೊತ್ತಿಗೆ ದೇಶದಾದ್ಯಂತ ಇರುವ ವಿಚಾರಣಾಧೀನ ಕೈದಿಗಳಲ್ಲಿ 42% ಜನರು ಉತ್ತರ ಪ್ರದೇಶ, ಬಿಹಾರ ಮತ್ತು ಮಹಾರಾಷ್ಟ್ರಗಳಲ್ಲಿದ್ದಾರೆ ಎಂದು ಇಂಡಿಯಾ ಜಸ್ಟೀಸ್ ರಿಪೋರ್ಟ್-2025 ವರದಿ ಹಳೇಇದೆ.

ಉತ್ತರ ಪ್ರದೇಶದಲ್ಲಿ ಅತಿ ಹೆಚ್ಚು ವಿಚಾರಣಾಧೀನ ಕೈದಿಗಳಿದ್ದಾರೆ ಎಂದು ವರದಿ ಹೇಳಿದೆ. ಯುಪಿಯಲ್ಲಿ 94,000 ಕ್ಕೂ ಹೆಚ್ಚು ವಿಚಾರಣಾಧೀನ ಕೈದಿಗಳು ಇದ್ದು, ಇದು ದೇಶದಾದ್ಯಂತ ಇರುವ ವಿಚಾರಾಧೀನ ಕೈದಿಗಳಲ್ಲಿ ಸುಮಾರು 22% ರಷ್ಟು ಆಗುತ್ತದೆ ಎಂದು ವರದಿ ಹೇಳಿದೆ.

ಸೆಂಟರ್ ಫಾರ್ ಸೋಶಿಯಲ್ ಜಸ್ಟೀಸ್, ಕಾಮನ್ ಕಾಸ್, ಕಾಮನ್ವೆಲ್ತ್ ಹ್ಯೂಮನ್ ರೈಟ್ಸ್ ಇನಿಶಿಯೇಟಿವ್, ದಕ್ಷ, ಟಾಟಾ ಇನ್ಸ್ಟಿಟ್ಯೂಟ್ ಆಫ್ ಸೋಶಿಯಲ್ ಸೈನ್ಸಸ್-ಪ್ರಯಾಸ್, ವಿಧಿ ಸೆಂಟರ್ ಫಾರ್ ಲೀಗಲ್ ಪಾಲಿಸಿ ಮತ್ತು ಹೌ ಇಂಡಿಯಾ ಲೈವ್ಸ್ ಸೇರಿದಂತೆ ಸರ್ಕಾರೇತರ ಸಂಸ್ಥೆಗಳು ಮತ್ತು ನಾಗರಿಕ ಹಕ್ಕುಗಳ ಗುಂಪುಗಳು ಈ ವರದಿಯನ್ನು ಸಿದ್ಧಪಡಿಸಿದೆ.

ದೊಡ್ಡ ರಾಜ್ಯಗಳಾದ ಬಿಹಾರದಲ್ಲಿ ತನಿಖೆ ಅಥವಾ ವಿಚಾರಣೆ ಪೂರ್ಣಗೊಳ್ಳಲು ಕಾಯುತ್ತಿರುವ ಕೈದಿಗಳು 89% ರಷ್ಟಿದ್ದರೆ, ನಂತರ ಒಡಿಶಾದಲ್ಲಿ 85% ರಷ್ಟಿದ್ದಾರೆ ಎಂದು ವರದಿ ಹೇಳಿದೆ. ಜೈಲುಗಳಲ್ಲಿ ಹೆಚ್ಚಿನ ಜನದಟ್ಟಣೆಗೆ ವಿಚಾರಣೆಗಾಗಿ ಕಾಯುತ್ತಿರುವ ಕೈದಿಗಳೇ ಕಾರಣ ಎಂದು ಅಧ್ಯಯನವು ಹೇಳಿದೆ.

ಸರಾಸರಿಯಾಗಿ, ವಿಚಾರಣಾಧೀನ ಕೈದಿಗಳು ಮೊದಲಿಗಿಂತ ಹೆಚ್ಚು ಸಮಯವನ್ನು ಕಂಬಿಗಳ ಹಿಂದೆ ಕಳೆಯುತ್ತಿದ್ದಾರೆ ಎಂದು ವರದಿ ಹೇಳಿದ್ದು, 2022 ರ ಅಂತ್ಯದ ವೇಳೆಗೆ, ಐದು ವರ್ಷ ಅಥವಾ ಅದಕ್ಕಿಂತ ಹೆಚ್ಚು ಕಾಲ ಬಂಧನದಲ್ಲಿದ್ದ ವಿಚಾರಣಾಧೀನ ಕೈದಿಗಳ ಸಂಖ್ಯೆ 11,448 ಆಗಿದ್ದು, ಇದು 2019 ರಲ್ಲಿ 5,011 ಮತ್ತು 2012 ರಲ್ಲಿ 2,028 ರಷ್ಟಿತ್ತು ಎಂದು ಹೇಳಿದೆ.

2022 ರ ಅಂತ್ಯದ ವೇಳೆಗೆ, ಉತ್ತರ ಪ್ರದೇಶವೊಂದರಲ್ಲೇ ಐದು ವರ್ಷಗಳಿಗೂ ಹೆಚ್ಚು ಕಾಲ ಜೈಲಿನಲ್ಲಿದ್ದ ಸುಮಾರು 40% ವಿಚಾರಣಾಧೀನ ಕೈದಿಗಳು ಇದ್ದರು.

ಭಾರತದಲ್ಲಿ, ತನಿಖೆ ಅಥವಾ ವಿಚಾರಣೆ ನಡೆಯುತ್ತಿರುವಾಗ ಜೈಲು ಶಿಕ್ಷೆಗೆ ಬದಲಾಗಿ ಜಾಮೀನು ಹೆಚ್ಚಾಗಿ ಬಳಸಲ್ಪಡುತ್ತದೆ ಎಂದು ಅಧ್ಯಯನವು ಹೇಳಿದೆ. ಆದಾಗ್ಯೂ, ನ್ಯಾಯಾಧೀಶರು ಕಡಿಮೆ-ಅಪಾಯದ ಅಪರಾಧಿಗಳಿಗೆ ಸಂಬಂಧಿಸಿದಂತೆ ಕಸ್ಟಡಿಯೇತರ ಕ್ರಮಗಳನ್ನು ಜೈಲು ಶಿಕ್ಷೆಗೆ ಪರ್ಯಾಯವಾಗಿ ಬಳಸುವ ಅಧಿಕಾರವನ್ನು ಹೊಂದಿದ್ದಾರೆ ಎಂದು ಅದು ಹೇಳಿದೆ.

2012 ಮತ್ತು 2022 ರ ನಡುವೆ, ಒಟ್ಟಾರೆ ಜೈಲು ವಾಸದ ದರಗಳು 112% ರಿಂದ 132% ಕ್ಕೆ ಏರಿದೆ. ಅದೇ ಅವಧಿಯಲ್ಲಿ ದೇಶಾದ್ಯಂತ ಜೈಲು ಜನಸಂಖ್ಯೆಯು 3.8 ಲಕ್ಷದಿಂದ 5.7 ಲಕ್ಷಕ್ಕೆ ಅಂದರೆ 49% ರಷ್ಟು ಹೆಚ್ಚಾಗಿದೆ ಎಂದು ಅಧ್ಯಯನವು ತಿಳಿಸಿದೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಸಗಣಿ ಬಳಿದ ಪ್ರಕರಣ: ಪ್ರಾಂಶುಪಾಲೆಯ ಕಚೇರಿ ಗೋಡೆಗೆ ಸಗಣಿ ಬಳಿದು ಪ್ರತಿಭಟಿಸಿದ ವಿದ್ಯಾರ್ಥಿ ಒಕ್ಕೂಟ; ವೀಡಿಯೋ ವೈರಲ್

ಸಗಣಿ ಬಳಿದ ಪ್ರಕರಣ: ಪ್ರಾಂಶುಪಾಲೆಯ ಕಚೇರಿ ಗೋಡೆಗೆ ಸಗಣಿ ಬಳಿದು ಪ್ರತಿಭಟಿಸಿದ ವಿದ್ಯಾರ್ಥಿ ಒಕ್ಕೂಟ; ವೀಡಿಯೋ ವೈರಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...