Homeಮುಖಪುಟಒಂದೇ ಮನೆಯಲ್ಲಿ 4271 ಮತದಾರರು!..ಮಹದೇವಪುರ ಬಳಿಕ ಮತ್ತೊಂದು ಭಾರೀ ಮತಗಳ್ಳತನ ಆರೋಪ

ಒಂದೇ ಮನೆಯಲ್ಲಿ 4271 ಮತದಾರರು!..ಮಹದೇವಪುರ ಬಳಿಕ ಮತ್ತೊಂದು ಭಾರೀ ಮತಗಳ್ಳತನ ಆರೋಪ

- Advertisement -
- Advertisement -

ಉತ್ತರ ಪ್ರದೇಶದ ಮತದಾರರ ಪಟ್ಟಿಯಲ್ಲಿ ದೊಡ್ಡ ಪ್ರಮಾಣದ ಅಕ್ರಮಗಳು ನಡೆದಿವೆ ಎಂದು ಆಮ್ ಆದ್ಮಿ ಪಕ್ಷದ (ಎಎಪಿ) ರಾಜ್ಯಸಭಾ ಸಂಸದ ಸಂಜಯ್ ಸಿಂಗ್ ಮಂಗಳವಾರ (ಸೆ.16) ಆರೋಪಿಸಿದ್ದು, ಮಹೋಬಾ ಜಿಲ್ಲೆಯ ಒಂದೇ ಮನೆಯಲ್ಲಿ 4,271 ಮತದಾರರು ದಾಖಲಾಗಿರುವುದು ಕಂಡುಬಂದಿದೆ ಎಂದಿದ್ದಾರೆ.

ನವದೆಹಲಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಂಜಯ್ ಸಿಂಗ್, “ನಿನ್ನೆ ನಾನು ಮಹೋಬಾ ಜಿಲ್ಲೆಯ ಎರಡು ಮನೆಗಳ ಬಗ್ಗೆ ತಿಳಿಸಿದ್ದೆ, ಅಲ್ಲಿ ಕ್ರಮವಾಗಿ 243 ಮತ್ತು 185 ಮತದಾರರಿದ್ದರು. ಇದು ಆಶ್ಚರ್ಯಕರವಾಗಿತ್ತು. ಆದರೆ, ಇಂದು ಒಂದೇ ಮನೆಯಲ್ಲಿ 4,271 ಮತದಾರರನ್ನು ದಾಖಲಿಸಿರುವ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಒಂದು ಮನೆಯಲ್ಲಿ 4,271 ಮತದಾರರಿದ್ದರೆ, ಆ ಕುಟುಂಬದಲ್ಲಿ ಸುಮಾರು 12,000 ಸದಸ್ಯರಿರಬೇಕು. ಇಂತಹ ದೊಡ್ಡ ಕುಟುಂಬವನ್ನು ಯಾರಾದರೂ ಹುಡುಕಬೇಕಿದೆ” ಎಂದು ವ್ಯಂಗ್ಯವಾಗಿ ಹೇಳಿದ್ದಾರೆ.

ಉತ್ತರ ಪ್ರದೇಶದಲ್ಲಿ ಬಿಜೆಪಿ ಮತ್ತು ಚುನಾವಣಾ ಆಯೋಗದ ಶಾಮೀಲಿನಿಂದ ‘ಮತಗಳ್ಳತನ’ ಪ್ರಾರಂಭವಾಯಿತು ಎಂದು ಸಿಂಗ್ ಆರೋಪಿಸಿದ್ದಾರೆ.

“4,271 ಮತದಾರರಿರುವ ಮಹೋಬಾದ ಆ ಮನೆಯ ಮಾಲೀಕರಿಗೆ ನಾನು ಹೇಳಲು ಬಯಸುವುದೇನೆಂದರೆ ನೀವು ಗ್ರಾಮ ಪಂಚಾಯತ್ ಚುನಾವಣೆಗೆ ಸ್ಪರ್ಧಿಸಿದರೆ ಸುಲಭವಾಗಿ ಗೆಲ್ಲುತ್ತೀರಿ. ನಿಮ್ಮ ಮನೆಯವರೇ ಮತ ಚಲಾಯಿಸಿದರೆ ಸಾಕು” ಎಂದು ಸಂಜಯ್ ಸಿಂಗ್ ವ್ಯಂಗ್ಯವಾಗಿ ಹೇಳಿದ್ದಾರೆ.

4,271 ಮತದಾರರನ್ನು ಹೊಂದಿರುವ ಆ ಮನೆ ಇರುವ ಗ್ರಾಮದಲ್ಲಿ ಒಟ್ಟು ಸುಮಾರು 16,000 ಮತದಾರರಿದ್ದಾರೆ ಎಂದು ಸಿಂಗ್ ಹೇಳಿಕೊಂಡಿದ್ದು, ಇದು ಮತ್ತಷ್ಟು ಚುನಾವಣಾ ಅಕ್ರಮದ ಅನುಮಾನ ಹುಟ್ಟು ಹಾಕಿದೆ.

ಬಿಹಾರದ ಭಾಗಲ್ಪುರದ ಭೂ ಹಂಚಿಕೆಗೆ ಸಂಬಂಧಿಸಿದಂತೆ ಆಡಳಿತಾರೂಢ ಬಿಜೆಪಿ-ಜೆಡಿ(ಯು) ಮೈತ್ರಿಕೂಟದ ವಿರುದ್ದ ವಾಗ್ದಾಳಿ ನಡೆಸಿದ ಸಂಜಯ್ ಸಿಂಗ್, ರಾಜ್ಯ ಸರ್ಕಾರ ಕೈಗಾರಿಕೋದ್ಯಮಿ ಗೌತಮ್ ಅದಾನಿ ಅವರ ಕಂಪನಿ ಸಮೂಹದ ಮೂರು ವಿದ್ಯುತ್ ಸ್ಥಾವರಗಳಿಗೆ 1,050 ಎಕರೆ ಭೂಮಿಯನ್ನು ಎಕರೆಗೆ 1 ರೂಪಾಯಿಯಂತೆ 25 ವರ್ಷಕ್ಕೆ ನೀಡಿದೆ ಎಂದು ಆರೋಪಿಸಿದ್ದಾರೆ.

“ಒಂದು ರೂಪಾಯಿಗೆ ಭೂಮಿ ನೀಡಿದ್ದು ಮಾತ್ರವಲ್ಲದೆ, ನೀವು ಉತ್ಪಾದಿಸುವ ಯಾವುದೇ ವಿದ್ಯುತ್ ಅನ್ನು ಮುಂದಿನ 25 ವರ್ಷಗಳವರೆಗೆ ಪ್ರತಿ ಯೂನಿಟ್‌ಗೆ 7 ರೂಪಾಯಿ ನೀಡಿ ಖರೀದಿಸಲಾಗುವುದು ಎಂಬ ಖಾತರಿಯನ್ನೂ ಅದಾನಿ ಸಮೂಹಕ್ಕೆ ಸರ್ಕಾರ ನೀಡಿದೆ. ಪ್ರತಿ ಯೂನಿಟ್‌ಗೆ 10,11 ಅಥವಾ 12 ರೂಪಾಯಿ ನೀಡಿ ವಿದ್ಯುತ್ ಖರೀದಿಸಲು ಜನರಿಗೆ ಸಾಧ್ಯವೇ? ಎಂಬುವುದು ಸರ್ಕಾರಕ್ಕೆ ಮುಖ್ಯವಲ್ಲ. ಪ್ರಧಾನ ಮಂತ್ರಿಯ ಸ್ನೇಹಿತನಿಗೆ ಯಾವುದೇ ತೊಂದರೆಯಾಗಬಾರದು” ಎಂದು ಸಿಂಗ್ ಟೀಕಿಸಿದ್ದಾರೆ.

“2012 ಮತ್ತು 2013ರ ನಡುವೆ, ಅಂದಿನ ಬಿಜೆಪಿ-ಜೆಡಿ (ಯು) ಸರ್ಕಾರ ಭೂಮಿಯನ್ನು ಸ್ವಾಧೀನಪಡಿಸಿಕೊಂಡಿತ್ತು ಮತ್ತು ಸಾರ್ವಜನಿಕ ಖಜಾನೆಯಿಂದ ರೈತರಿಗೆ ಪರಿಹಾರವನ್ನೂ ಪಾವತಿಸಿತ್ತು. ಅಂತಹ ಭೂಮಿಯನ್ನು ಸರ್ಕಾರ ಆದಾಯ ಗಳಿಸಲು ಹೆಚ್ಚಿನ ಬೆಲೆಗೆ ಮಾರಾಟ ಮಾಡಬಹುದಿತ್ತು. ಆದರೆ, ಅದಾನಿಗೆ ಎಕರೆಗೆ 1 ರೂ.ಗೆ 25 ವರ್ಷಕ್ಕೆ ನೀಡಲಾಗಿದೆ” ಎಂದು ಸಿಂಗ್ ಹೇಳಿದ್ದಾರೆ.

ಮತಗಳ್ಳತನದ ಬಗ್ಗೆ ಜುಲೈ 24ರಂದು ಸಂಸತ್ ಮುಂದೆ ಮೊದಲ ಹೇಳಿಕೆ ಕೊಟ್ಟಿದ್ದ ರಾಹುಲ್ ಗಾಂಧಿ, ಆಗಸ್ಟ್ 7ರಂದು ನವದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿ ತನ್ನ ಆರೋಪದ ಕುರಿತು ದಾಖಲೆ ಬಿಡುಗಡೆ ಮಾಡಿದ್ದರು.

ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ 2024ರ ಲೋಕಸಭೆ ಚುನಾವಣೆಯ ವೇಳೆ ಬರೋಬ್ಬರಿ 1 ಲಕ್ಷಕ್ಕೂ (1,00, 250) ಹೆಚ್ಚು ಮತಗಳ್ಳತನ ನಡೆದಿದೆ ಎಂದಿದ್ದರು. ಮಹದೇವಪುರದ ಮುನಿರೆಡ್ಡಿ ಗಾರ್ಡನ್‌ನಲ್ಲಿರುವ ಮನೆ ಸಂಖ್ಯೆ 35ರಲ್ಲಿ 80 ಮತದಾರರನ್ನು ನೋಂದಾಯಿಸಲಾಗಿದೆ ಎಂದು ನಿರ್ದಿಷ್ಟವಾಗಿ ಉಲ್ಲೇಖಿಸಿದ್ದರು.

ಮತಗಳ್ಳತನ ಆರೋಪ: ಚು. ಆಯೋಗ ರಾಹುಲ್ ಗಾಂಧಿ ವಿರುದ್ಧ ಕಿರುಚಾಡುವ ಬದಲು ತನಿಖೆಗೆ ಆದೇಶಿಸಬೇಕು: ಮಾಜಿ ಚು. ಆಯುಕ್ತ ಎಸ್. ವೈ ಖುರೈಶಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....