Homeಮುಖಪುಟಒಂದೇ ಮನೆಯಲ್ಲಿ 4271 ಮತದಾರರು!..ಮಹದೇವಪುರ ಬಳಿಕ ಮತ್ತೊಂದು ಭಾರೀ ಮತಗಳ್ಳತನ ಆರೋಪ

ಒಂದೇ ಮನೆಯಲ್ಲಿ 4271 ಮತದಾರರು!..ಮಹದೇವಪುರ ಬಳಿಕ ಮತ್ತೊಂದು ಭಾರೀ ಮತಗಳ್ಳತನ ಆರೋಪ

- Advertisement -
- Advertisement -

ಉತ್ತರ ಪ್ರದೇಶದ ಮತದಾರರ ಪಟ್ಟಿಯಲ್ಲಿ ದೊಡ್ಡ ಪ್ರಮಾಣದ ಅಕ್ರಮಗಳು ನಡೆದಿವೆ ಎಂದು ಆಮ್ ಆದ್ಮಿ ಪಕ್ಷದ (ಎಎಪಿ) ರಾಜ್ಯಸಭಾ ಸಂಸದ ಸಂಜಯ್ ಸಿಂಗ್ ಮಂಗಳವಾರ (ಸೆ.16) ಆರೋಪಿಸಿದ್ದು, ಮಹೋಬಾ ಜಿಲ್ಲೆಯ ಒಂದೇ ಮನೆಯಲ್ಲಿ 4,271 ಮತದಾರರು ದಾಖಲಾಗಿರುವುದು ಕಂಡುಬಂದಿದೆ ಎಂದಿದ್ದಾರೆ.

ನವದೆಹಲಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಂಜಯ್ ಸಿಂಗ್, “ನಿನ್ನೆ ನಾನು ಮಹೋಬಾ ಜಿಲ್ಲೆಯ ಎರಡು ಮನೆಗಳ ಬಗ್ಗೆ ತಿಳಿಸಿದ್ದೆ, ಅಲ್ಲಿ ಕ್ರಮವಾಗಿ 243 ಮತ್ತು 185 ಮತದಾರರಿದ್ದರು. ಇದು ಆಶ್ಚರ್ಯಕರವಾಗಿತ್ತು. ಆದರೆ, ಇಂದು ಒಂದೇ ಮನೆಯಲ್ಲಿ 4,271 ಮತದಾರರನ್ನು ದಾಖಲಿಸಿರುವ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಒಂದು ಮನೆಯಲ್ಲಿ 4,271 ಮತದಾರರಿದ್ದರೆ, ಆ ಕುಟುಂಬದಲ್ಲಿ ಸುಮಾರು 12,000 ಸದಸ್ಯರಿರಬೇಕು. ಇಂತಹ ದೊಡ್ಡ ಕುಟುಂಬವನ್ನು ಯಾರಾದರೂ ಹುಡುಕಬೇಕಿದೆ” ಎಂದು ವ್ಯಂಗ್ಯವಾಗಿ ಹೇಳಿದ್ದಾರೆ.

ಉತ್ತರ ಪ್ರದೇಶದಲ್ಲಿ ಬಿಜೆಪಿ ಮತ್ತು ಚುನಾವಣಾ ಆಯೋಗದ ಶಾಮೀಲಿನಿಂದ ‘ಮತಗಳ್ಳತನ’ ಪ್ರಾರಂಭವಾಯಿತು ಎಂದು ಸಿಂಗ್ ಆರೋಪಿಸಿದ್ದಾರೆ.

“4,271 ಮತದಾರರಿರುವ ಮಹೋಬಾದ ಆ ಮನೆಯ ಮಾಲೀಕರಿಗೆ ನಾನು ಹೇಳಲು ಬಯಸುವುದೇನೆಂದರೆ ನೀವು ಗ್ರಾಮ ಪಂಚಾಯತ್ ಚುನಾವಣೆಗೆ ಸ್ಪರ್ಧಿಸಿದರೆ ಸುಲಭವಾಗಿ ಗೆಲ್ಲುತ್ತೀರಿ. ನಿಮ್ಮ ಮನೆಯವರೇ ಮತ ಚಲಾಯಿಸಿದರೆ ಸಾಕು” ಎಂದು ಸಂಜಯ್ ಸಿಂಗ್ ವ್ಯಂಗ್ಯವಾಗಿ ಹೇಳಿದ್ದಾರೆ.

4,271 ಮತದಾರರನ್ನು ಹೊಂದಿರುವ ಆ ಮನೆ ಇರುವ ಗ್ರಾಮದಲ್ಲಿ ಒಟ್ಟು ಸುಮಾರು 16,000 ಮತದಾರರಿದ್ದಾರೆ ಎಂದು ಸಿಂಗ್ ಹೇಳಿಕೊಂಡಿದ್ದು, ಇದು ಮತ್ತಷ್ಟು ಚುನಾವಣಾ ಅಕ್ರಮದ ಅನುಮಾನ ಹುಟ್ಟು ಹಾಕಿದೆ.

ಬಿಹಾರದ ಭಾಗಲ್ಪುರದ ಭೂ ಹಂಚಿಕೆಗೆ ಸಂಬಂಧಿಸಿದಂತೆ ಆಡಳಿತಾರೂಢ ಬಿಜೆಪಿ-ಜೆಡಿ(ಯು) ಮೈತ್ರಿಕೂಟದ ವಿರುದ್ದ ವಾಗ್ದಾಳಿ ನಡೆಸಿದ ಸಂಜಯ್ ಸಿಂಗ್, ರಾಜ್ಯ ಸರ್ಕಾರ ಕೈಗಾರಿಕೋದ್ಯಮಿ ಗೌತಮ್ ಅದಾನಿ ಅವರ ಕಂಪನಿ ಸಮೂಹದ ಮೂರು ವಿದ್ಯುತ್ ಸ್ಥಾವರಗಳಿಗೆ 1,050 ಎಕರೆ ಭೂಮಿಯನ್ನು ಎಕರೆಗೆ 1 ರೂಪಾಯಿಯಂತೆ 25 ವರ್ಷಕ್ಕೆ ನೀಡಿದೆ ಎಂದು ಆರೋಪಿಸಿದ್ದಾರೆ.

“ಒಂದು ರೂಪಾಯಿಗೆ ಭೂಮಿ ನೀಡಿದ್ದು ಮಾತ್ರವಲ್ಲದೆ, ನೀವು ಉತ್ಪಾದಿಸುವ ಯಾವುದೇ ವಿದ್ಯುತ್ ಅನ್ನು ಮುಂದಿನ 25 ವರ್ಷಗಳವರೆಗೆ ಪ್ರತಿ ಯೂನಿಟ್‌ಗೆ 7 ರೂಪಾಯಿ ನೀಡಿ ಖರೀದಿಸಲಾಗುವುದು ಎಂಬ ಖಾತರಿಯನ್ನೂ ಅದಾನಿ ಸಮೂಹಕ್ಕೆ ಸರ್ಕಾರ ನೀಡಿದೆ. ಪ್ರತಿ ಯೂನಿಟ್‌ಗೆ 10,11 ಅಥವಾ 12 ರೂಪಾಯಿ ನೀಡಿ ವಿದ್ಯುತ್ ಖರೀದಿಸಲು ಜನರಿಗೆ ಸಾಧ್ಯವೇ? ಎಂಬುವುದು ಸರ್ಕಾರಕ್ಕೆ ಮುಖ್ಯವಲ್ಲ. ಪ್ರಧಾನ ಮಂತ್ರಿಯ ಸ್ನೇಹಿತನಿಗೆ ಯಾವುದೇ ತೊಂದರೆಯಾಗಬಾರದು” ಎಂದು ಸಿಂಗ್ ಟೀಕಿಸಿದ್ದಾರೆ.

“2012 ಮತ್ತು 2013ರ ನಡುವೆ, ಅಂದಿನ ಬಿಜೆಪಿ-ಜೆಡಿ (ಯು) ಸರ್ಕಾರ ಭೂಮಿಯನ್ನು ಸ್ವಾಧೀನಪಡಿಸಿಕೊಂಡಿತ್ತು ಮತ್ತು ಸಾರ್ವಜನಿಕ ಖಜಾನೆಯಿಂದ ರೈತರಿಗೆ ಪರಿಹಾರವನ್ನೂ ಪಾವತಿಸಿತ್ತು. ಅಂತಹ ಭೂಮಿಯನ್ನು ಸರ್ಕಾರ ಆದಾಯ ಗಳಿಸಲು ಹೆಚ್ಚಿನ ಬೆಲೆಗೆ ಮಾರಾಟ ಮಾಡಬಹುದಿತ್ತು. ಆದರೆ, ಅದಾನಿಗೆ ಎಕರೆಗೆ 1 ರೂ.ಗೆ 25 ವರ್ಷಕ್ಕೆ ನೀಡಲಾಗಿದೆ” ಎಂದು ಸಿಂಗ್ ಹೇಳಿದ್ದಾರೆ.

ಮತಗಳ್ಳತನದ ಬಗ್ಗೆ ಜುಲೈ 24ರಂದು ಸಂಸತ್ ಮುಂದೆ ಮೊದಲ ಹೇಳಿಕೆ ಕೊಟ್ಟಿದ್ದ ರಾಹುಲ್ ಗಾಂಧಿ, ಆಗಸ್ಟ್ 7ರಂದು ನವದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿ ತನ್ನ ಆರೋಪದ ಕುರಿತು ದಾಖಲೆ ಬಿಡುಗಡೆ ಮಾಡಿದ್ದರು.

ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ 2024ರ ಲೋಕಸಭೆ ಚುನಾವಣೆಯ ವೇಳೆ ಬರೋಬ್ಬರಿ 1 ಲಕ್ಷಕ್ಕೂ (1,00, 250) ಹೆಚ್ಚು ಮತಗಳ್ಳತನ ನಡೆದಿದೆ ಎಂದಿದ್ದರು. ಮಹದೇವಪುರದ ಮುನಿರೆಡ್ಡಿ ಗಾರ್ಡನ್‌ನಲ್ಲಿರುವ ಮನೆ ಸಂಖ್ಯೆ 35ರಲ್ಲಿ 80 ಮತದಾರರನ್ನು ನೋಂದಾಯಿಸಲಾಗಿದೆ ಎಂದು ನಿರ್ದಿಷ್ಟವಾಗಿ ಉಲ್ಲೇಖಿಸಿದ್ದರು.

ಮತಗಳ್ಳತನ ಆರೋಪ: ಚು. ಆಯೋಗ ರಾಹುಲ್ ಗಾಂಧಿ ವಿರುದ್ಧ ಕಿರುಚಾಡುವ ಬದಲು ತನಿಖೆಗೆ ಆದೇಶಿಸಬೇಕು: ಮಾಜಿ ಚು. ಆಯುಕ್ತ ಎಸ್. ವೈ ಖುರೈಶಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ಚಿಂತಕ ಪರಕಾಲ ಪ್ರಭಾಕರ್‌ಗೆ ಚುನಾವಣಾ ಆಯೋಗದಿಂದ ನೋಟಿಸ್

ಅರ್ಥಶಾಸ್ತ್ರಜ್ಞ, ರಾಜಕೀಯ ವಿಶ್ಲೇಷಕ ಡಾ. ಪರಕಾಲ ಪ್ರಭಾಕರ್ ಅವರಿಗೂ ಈಗ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯಡಿ ಚುನಾವಣಾ ಆಯೋಗದ ನೋಟಿಸ್ ಜಾರಿಯಾಗಿದೆ. ವೋಟರ್ ಐಡಿ ಪರಿಶೀಲನೆಯಲ್ಲಿ ‘Logical Discrepancy’ (ತಾರ್ಕಿಕ ಅಸಂಗತತೆ)...

ಕರ್ನಾಟಕ ಎಸ್‌ಐಆರ್: ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬರಿಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಮಂಗಳೂರು: ಶೈಕ್ಷಣಿಕ ಕ್ಷೇತ್ರದಲ್ಲಿ ತಮ್ಮ ವಿಶಿಷ್ಟ ಸೇವೆಯ ಮೂಲಕ ದೇಶ-ವಿದೇಶಗಳಲ್ಲಿ ಗುರುತಿಸಿಕೊಂಡಿರುವ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಅವರಿಗೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗದ...

SIR ಸೂತ್ರದಿಂದ ಬದಲಾಗುತ್ತಾ ಬೆಂಗಳೂರಿನ 28 ಕ್ಷೇತ್ರಗಳ ಗೆಲುವಿನ ಸಮೀಕರಣ?

ರಾಜ್ಯ ರಾಜಕೀಯದ ಶಕ್ತಿಕೇಂದ್ರವಾದ ಬೆಂಗಳೂರಿನ 28 ವಿಧಾನಸಭಾ ಕ್ಷೇತ್ರಗಳಲ್ಲಿ ‘ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR)’ ಪ್ರಕ್ರಿಯೆಯು ಮಹತ್ವದ ರಾಜಕೀಯ ಮತ್ತು ಆಡಳಿತಾತ್ಮಕ ಚರ್ಚೆಯನ್ನು ಹುಟ್ಟುಹಾಕಿದೆ. ಎಸ್‌ಐಆರ್‌ಗೂ ಮುನ್ನ ನಗರದಲ್ಲಿದ್ದ ಸುಮಾರು 1.03...

ಮಣಿಪುರದಲ್ಲಿ ಹಿಂಸಾಚಾರಕ್ಕೆ 306 ಬಲಿ, 49 ಮಂದಿ ನಾಪತ್ತೆ: ವಿಧಾನಸಭೆಯಲ್ಲಿ ಗೃಹ ಸಚಿವರ ಸ್ಪಷ್ಟನೆ

ಇಂಫಾಲ್: ಮಣಿಪುರದಲ್ಲಿ 2023ರ ಮೇ ತಿಂಗಳಲ್ಲಿ ಭುಗಿಲೆದ್ದ ಜನಾಂಗೀಯ ಹಿಂಸಾಚಾರಕ್ಕೆ ಮೂರು ವರ್ಷಗಳಿಗೂ ಹೆಚ್ಚು ಕಾಲ ಕಳೆದಿದ್ದರೂ, ಅದರ ಪರಿಣಾಮದಿಂದ ರಾಜ್ಯ ಸಂಪೂರ್ಣವಾಗಿ ಹೊರಬಂದಿಲ್ಲ. ಹಿಂಸಾಚಾರ ಆರಂಭವಾದ ಬಳಿಕ ಇದುವರೆಗೆ ಕನಿಷ್ಠ 306...

ದಲಿತರ ಅಭಿವೃದ್ಧಿಗೆ ಮೀಸಲಿಟ್ಟ ನಿಧಿ ದುರ್ಬಳಕೆ; ಜನವಸತಿಯೇ ಇಲ್ಲದ ಜಾಗದಲ್ಲಿ ರೂ. 50 ಲಕ್ಷದ ಸಿ.ಸಿ. ರಸ್ತೆ ನಿರ್ಮಾಣ!

ಸಮಾಜ ಕಲ್ಯಾಣ ಇಲಾಖೆಯ 'ಪ್ರಗತಿ ಕಾಲೋನಿ' ಯೋಜನೆಯ ನಿಧಿ ದುರ್ಬಳಕೆಯಾಗಿರುವ ಆರೋಪ ಕೇಳಿಬಂದಿದ್ದು, ಜನವಸತಿಯೇ ಇಲ್ಲದ ಜಾಗದಲ್ಲಿ ರೂ. 50 ಲಕ್ಷ ವೆಚ್ಚದಲ್ಲಿ ಸಿಸಿ ರಸ್ತೆ ನಿರ್ಮಾಣ ಮಾಡಿರುವ ಪ್ರಕರಣ ಬೆಂಗಳೂರು...

SIR: ‘ಚುನಾವಣಾ ಆಯೋಗದಿಂದ ನೋಟಿಸ್‌’ ಇಲ್ಲದಿರುವ ದಾಖಲೆಗಳನ್ನು ಎಲ್ಲಿಂದಾ ತರೋದು? ಸಾರ್ವಜನಿಕರ ಪ್ರಶ್ನೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಚುನಾವಣಾ ಆಯೋಗವು ಬಳಸುತ್ತಿರುವ 'Logical Discrepancy' (ತಾರ್ಕಿಕ ವ್ಯತ್ಯಾಸ) ಎಂಬ ಸಾಫ್ಟ್‌ವೇರ್ ಆಧಾರಿತ ಪರಿಶೀಲನೆಯು ತಾಂತ್ರಿಕವಾಗಿ ದೋಷರಹಿತವೆಂದು ತೋರಿದರೂ, ವಾಸ್ತವದಲ್ಲಿ ಲಕ್ಷಾಂತರ ನೈಜ...

SIR ರಗಳೆ: ಕೊನೆಗೂ 43.81 ಲಕ್ಷ ಮತದಾರರ ನೋಟಿಸ್ ಪಟ್ಟಿ ಬಹಿರಂಗಪಡಿಸಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ಭಾರಿ ಸದ್ದು ಮಾಡುತ್ತಿರುವ 'ವಿಶೇಷ ತೀವ್ರ ಪರಿಷ್ಕರಣೆ' (SIR) ಪ್ರಕ್ರಿಯೆಯಲ್ಲಿ ನೋಟಿಸ್‌ಗೆ ಗುರಿಯಾಗಿರುವ 43.81 ಲಕ್ಷ ಮತದಾರರ ಪಟ್ಟಿಯನ್ನು ರಾಜ್ಯ ಮುಖ್ಯ ಚುನಾವಣಾಧಿಕಾರಿ ಕಚೇರಿ ಕೊನೆಗೂ ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ...

‘ಆರ್‌ಎಸ್‌ಎಸ್‌ ಅಡಗಿಕೊಂಡಿದೆ’: ಮೋಹನ್ ಭಾಗವತ್‌ ಯುಕೆ ಭೇಟಿ ವಿರೋಧಿಸಿ ಲಂಡನ್‌ನಲ್ಲಿ ಪ್ರತಿಭಟನೆ

ಲಂಡನ್: ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರ ಯುನೈಟೆಡ್ ಕಿಂಗ್‌ಡಮ್‌ ಭೇಟಿಯನ್ನು ವಿರೋಧಿಸಿ ಲಂಡನ್‌ನ ಪಾರ್ಲಿಮೆಂಟ್ ಸ್ಕ್ವೇರ್‌ನಲ್ಲಿ ನೂರಾರು ಜನರು ಪ್ರತಿಭಟನೆ ನಡೆಸಿದ್ದಾರೆ. ಭಾಗವತ್ ಅವರ ಯುಕೆ ಪ್ರವಾಸದ...

ಪಂಚಾಯಿತಿಯಲ್ಲಿ ಅಸ್ಪೃಶ್ಯತೆ ಆಚರಣೆ-ಪ್ರತ್ಯೇಕ ಟೀ ಲೋಟ; ಆತ್ಮಹತ್ಯೆಗೆ ಯತ್ನಿಸಿದ ಪೌರಕಾರ್ಮಿಕ ಮಹಿಳೆ

ಕೆಲಸದ ಸ್ಥಳದಲ್ಲಿ ನಡೆಯುತ್ತಿದ್ದ ಅಸ್ಪೃಶ್ಯತೆ ಆಚರಣೆಯಿಂದ ಮನನೊಂದ 37 ವರ್ಷದ ದಲಿತ ನೈರ್ಮಲ್ಯ ಕಾರ್ಮಿಕರೊಬ್ಬರು ಕ್ರಿಮಿನಾಶಕ ಸೇವಿಸಿ ಆತ್ಮತ್ಯೆಗೆ ಯತ್ನಿಸಿರುವ ಘಟನೆ ತಮಿಳುನಾಡಿನ ಮೇಲೂರು ಸಮೀಪದ ಕಂಬೂರ್ ಪಂಚಾಯತ್‌ನಲ್ಲಿ ಬೆಳಕಿಗೆ ಬಂದಿದೆ. ...

ಗೌರಿ, ಗಾಂಧಿಯನ್ನು ಕೊಂದದ್ದು ಬರೀ ಬುಲೆಟ್‌ಗಳಲ್ಲ, ಕೋಮುವಾದಿ ಸಿದ್ಧಾಂತ: ವಿದ್ಯಾರ್ಥಿ ನಾಯಕಿ ದಾನಿಶ್ ಅಲಿ

"ಗಾಂಧಿ, ಗೌರಿಯನ್ನು ಕೊಂದಿದ್ದು ಬರೀ ಬುಲೆಟ್‌ಗಳಲ್ಲ, ಅದು ಸಿದ್ಧಾಂತ ಎಂಬುದನ್ನು ನಾವು ನೆನಪಿಡಬೇಕು. ಈ ಸಿದ್ಧಾಂತಗಳ ವಿರುದ್ಧವಾಗಿ ನಾವು ಇಂದು ಹೋರಾಡಬೇಕಿದೆ” ಎಂದು ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (JNU) ವಿದ್ಯಾರ್ಥಿ ನಾಯಕಿ...