Homeಮುಖಪುಟಒಂದೇ ಮನೆಯಲ್ಲಿ 4271 ಮತದಾರರು!..ಮಹದೇವಪುರ ಬಳಿಕ ಮತ್ತೊಂದು ಭಾರೀ ಮತಗಳ್ಳತನ ಆರೋಪ

ಒಂದೇ ಮನೆಯಲ್ಲಿ 4271 ಮತದಾರರು!..ಮಹದೇವಪುರ ಬಳಿಕ ಮತ್ತೊಂದು ಭಾರೀ ಮತಗಳ್ಳತನ ಆರೋಪ

- Advertisement -
- Advertisement -

ಉತ್ತರ ಪ್ರದೇಶದ ಮತದಾರರ ಪಟ್ಟಿಯಲ್ಲಿ ದೊಡ್ಡ ಪ್ರಮಾಣದ ಅಕ್ರಮಗಳು ನಡೆದಿವೆ ಎಂದು ಆಮ್ ಆದ್ಮಿ ಪಕ್ಷದ (ಎಎಪಿ) ರಾಜ್ಯಸಭಾ ಸಂಸದ ಸಂಜಯ್ ಸಿಂಗ್ ಮಂಗಳವಾರ (ಸೆ.16) ಆರೋಪಿಸಿದ್ದು, ಮಹೋಬಾ ಜಿಲ್ಲೆಯ ಒಂದೇ ಮನೆಯಲ್ಲಿ 4,271 ಮತದಾರರು ದಾಖಲಾಗಿರುವುದು ಕಂಡುಬಂದಿದೆ ಎಂದಿದ್ದಾರೆ.

ನವದೆಹಲಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಂಜಯ್ ಸಿಂಗ್, “ನಿನ್ನೆ ನಾನು ಮಹೋಬಾ ಜಿಲ್ಲೆಯ ಎರಡು ಮನೆಗಳ ಬಗ್ಗೆ ತಿಳಿಸಿದ್ದೆ, ಅಲ್ಲಿ ಕ್ರಮವಾಗಿ 243 ಮತ್ತು 185 ಮತದಾರರಿದ್ದರು. ಇದು ಆಶ್ಚರ್ಯಕರವಾಗಿತ್ತು. ಆದರೆ, ಇಂದು ಒಂದೇ ಮನೆಯಲ್ಲಿ 4,271 ಮತದಾರರನ್ನು ದಾಖಲಿಸಿರುವ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಒಂದು ಮನೆಯಲ್ಲಿ 4,271 ಮತದಾರರಿದ್ದರೆ, ಆ ಕುಟುಂಬದಲ್ಲಿ ಸುಮಾರು 12,000 ಸದಸ್ಯರಿರಬೇಕು. ಇಂತಹ ದೊಡ್ಡ ಕುಟುಂಬವನ್ನು ಯಾರಾದರೂ ಹುಡುಕಬೇಕಿದೆ” ಎಂದು ವ್ಯಂಗ್ಯವಾಗಿ ಹೇಳಿದ್ದಾರೆ.

ಉತ್ತರ ಪ್ರದೇಶದಲ್ಲಿ ಬಿಜೆಪಿ ಮತ್ತು ಚುನಾವಣಾ ಆಯೋಗದ ಶಾಮೀಲಿನಿಂದ ‘ಮತಗಳ್ಳತನ’ ಪ್ರಾರಂಭವಾಯಿತು ಎಂದು ಸಿಂಗ್ ಆರೋಪಿಸಿದ್ದಾರೆ.

“4,271 ಮತದಾರರಿರುವ ಮಹೋಬಾದ ಆ ಮನೆಯ ಮಾಲೀಕರಿಗೆ ನಾನು ಹೇಳಲು ಬಯಸುವುದೇನೆಂದರೆ ನೀವು ಗ್ರಾಮ ಪಂಚಾಯತ್ ಚುನಾವಣೆಗೆ ಸ್ಪರ್ಧಿಸಿದರೆ ಸುಲಭವಾಗಿ ಗೆಲ್ಲುತ್ತೀರಿ. ನಿಮ್ಮ ಮನೆಯವರೇ ಮತ ಚಲಾಯಿಸಿದರೆ ಸಾಕು” ಎಂದು ಸಂಜಯ್ ಸಿಂಗ್ ವ್ಯಂಗ್ಯವಾಗಿ ಹೇಳಿದ್ದಾರೆ.

4,271 ಮತದಾರರನ್ನು ಹೊಂದಿರುವ ಆ ಮನೆ ಇರುವ ಗ್ರಾಮದಲ್ಲಿ ಒಟ್ಟು ಸುಮಾರು 16,000 ಮತದಾರರಿದ್ದಾರೆ ಎಂದು ಸಿಂಗ್ ಹೇಳಿಕೊಂಡಿದ್ದು, ಇದು ಮತ್ತಷ್ಟು ಚುನಾವಣಾ ಅಕ್ರಮದ ಅನುಮಾನ ಹುಟ್ಟು ಹಾಕಿದೆ.

ಬಿಹಾರದ ಭಾಗಲ್ಪುರದ ಭೂ ಹಂಚಿಕೆಗೆ ಸಂಬಂಧಿಸಿದಂತೆ ಆಡಳಿತಾರೂಢ ಬಿಜೆಪಿ-ಜೆಡಿ(ಯು) ಮೈತ್ರಿಕೂಟದ ವಿರುದ್ದ ವಾಗ್ದಾಳಿ ನಡೆಸಿದ ಸಂಜಯ್ ಸಿಂಗ್, ರಾಜ್ಯ ಸರ್ಕಾರ ಕೈಗಾರಿಕೋದ್ಯಮಿ ಗೌತಮ್ ಅದಾನಿ ಅವರ ಕಂಪನಿ ಸಮೂಹದ ಮೂರು ವಿದ್ಯುತ್ ಸ್ಥಾವರಗಳಿಗೆ 1,050 ಎಕರೆ ಭೂಮಿಯನ್ನು ಎಕರೆಗೆ 1 ರೂಪಾಯಿಯಂತೆ 25 ವರ್ಷಕ್ಕೆ ನೀಡಿದೆ ಎಂದು ಆರೋಪಿಸಿದ್ದಾರೆ.

“ಒಂದು ರೂಪಾಯಿಗೆ ಭೂಮಿ ನೀಡಿದ್ದು ಮಾತ್ರವಲ್ಲದೆ, ನೀವು ಉತ್ಪಾದಿಸುವ ಯಾವುದೇ ವಿದ್ಯುತ್ ಅನ್ನು ಮುಂದಿನ 25 ವರ್ಷಗಳವರೆಗೆ ಪ್ರತಿ ಯೂನಿಟ್‌ಗೆ 7 ರೂಪಾಯಿ ನೀಡಿ ಖರೀದಿಸಲಾಗುವುದು ಎಂಬ ಖಾತರಿಯನ್ನೂ ಅದಾನಿ ಸಮೂಹಕ್ಕೆ ಸರ್ಕಾರ ನೀಡಿದೆ. ಪ್ರತಿ ಯೂನಿಟ್‌ಗೆ 10,11 ಅಥವಾ 12 ರೂಪಾಯಿ ನೀಡಿ ವಿದ್ಯುತ್ ಖರೀದಿಸಲು ಜನರಿಗೆ ಸಾಧ್ಯವೇ? ಎಂಬುವುದು ಸರ್ಕಾರಕ್ಕೆ ಮುಖ್ಯವಲ್ಲ. ಪ್ರಧಾನ ಮಂತ್ರಿಯ ಸ್ನೇಹಿತನಿಗೆ ಯಾವುದೇ ತೊಂದರೆಯಾಗಬಾರದು” ಎಂದು ಸಿಂಗ್ ಟೀಕಿಸಿದ್ದಾರೆ.

“2012 ಮತ್ತು 2013ರ ನಡುವೆ, ಅಂದಿನ ಬಿಜೆಪಿ-ಜೆಡಿ (ಯು) ಸರ್ಕಾರ ಭೂಮಿಯನ್ನು ಸ್ವಾಧೀನಪಡಿಸಿಕೊಂಡಿತ್ತು ಮತ್ತು ಸಾರ್ವಜನಿಕ ಖಜಾನೆಯಿಂದ ರೈತರಿಗೆ ಪರಿಹಾರವನ್ನೂ ಪಾವತಿಸಿತ್ತು. ಅಂತಹ ಭೂಮಿಯನ್ನು ಸರ್ಕಾರ ಆದಾಯ ಗಳಿಸಲು ಹೆಚ್ಚಿನ ಬೆಲೆಗೆ ಮಾರಾಟ ಮಾಡಬಹುದಿತ್ತು. ಆದರೆ, ಅದಾನಿಗೆ ಎಕರೆಗೆ 1 ರೂ.ಗೆ 25 ವರ್ಷಕ್ಕೆ ನೀಡಲಾಗಿದೆ” ಎಂದು ಸಿಂಗ್ ಹೇಳಿದ್ದಾರೆ.

ಮತಗಳ್ಳತನದ ಬಗ್ಗೆ ಜುಲೈ 24ರಂದು ಸಂಸತ್ ಮುಂದೆ ಮೊದಲ ಹೇಳಿಕೆ ಕೊಟ್ಟಿದ್ದ ರಾಹುಲ್ ಗಾಂಧಿ, ಆಗಸ್ಟ್ 7ರಂದು ನವದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿ ತನ್ನ ಆರೋಪದ ಕುರಿತು ದಾಖಲೆ ಬಿಡುಗಡೆ ಮಾಡಿದ್ದರು.

ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ 2024ರ ಲೋಕಸಭೆ ಚುನಾವಣೆಯ ವೇಳೆ ಬರೋಬ್ಬರಿ 1 ಲಕ್ಷಕ್ಕೂ (1,00, 250) ಹೆಚ್ಚು ಮತಗಳ್ಳತನ ನಡೆದಿದೆ ಎಂದಿದ್ದರು. ಮಹದೇವಪುರದ ಮುನಿರೆಡ್ಡಿ ಗಾರ್ಡನ್‌ನಲ್ಲಿರುವ ಮನೆ ಸಂಖ್ಯೆ 35ರಲ್ಲಿ 80 ಮತದಾರರನ್ನು ನೋಂದಾಯಿಸಲಾಗಿದೆ ಎಂದು ನಿರ್ದಿಷ್ಟವಾಗಿ ಉಲ್ಲೇಖಿಸಿದ್ದರು.

ಮತಗಳ್ಳತನ ಆರೋಪ: ಚು. ಆಯೋಗ ರಾಹುಲ್ ಗಾಂಧಿ ವಿರುದ್ಧ ಕಿರುಚಾಡುವ ಬದಲು ತನಿಖೆಗೆ ಆದೇಶಿಸಬೇಕು: ಮಾಜಿ ಚು. ಆಯುಕ್ತ ಎಸ್. ವೈ ಖುರೈಶಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ರೈತರ ವಿಚಾರದಲ್ಲಿ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಆದರೆ.., ಸಂಯುಕ್ತ ಹೋರಾಟ ಸಮಿತಿಯ ಎಚ್ಚರಿಕೆಯ ಮಾತು

ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಬಲವಂತವಾಗಿ ಯಾವುದೇ ರೈತರ ಭೂಮಿ ಕಿತ್ತುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳುತ್ತಿರುವುದು ಕೇವಲ ಮಾತಿನ ಜಾಣ್ಮೆಯಷ್ಟೇ. ಬಿಡದಿ ಭಾಗದ ಮೂರು ಗ್ರಾಮಗಳಿಗೆ ಹೊರಡಿಸಲಾಗಿರುವ ಭೂಸ್ವಾಧೀನದ ಅಂತಿಮ ಅಧಿಸೂಚನೆಯನ್ನು ಸಂಪೂರ್ಣವಾಗಿ...

“8.5 ಕೆಜಿ ತೂಕ ಇಳಿಸಿಕೊಂಡ ಸೋನಮ್ ವಾಂಗ್‌ಚುಕ್ ಜೀವಕ್ಕೆ ಅಪಾಯ: ಬಲವಂತ ಆಹಾರ ನೀಡುವಂತೆ ದೆಹಲಿ ಹೈಕೋರ್ಟ್‌ನಲ್ಲಿ ಪಿಐಎಲ್”

ದೇಶದ ಶೈಕ್ಷಣಿಕ ವ್ಯವಸ್ಥೆಯ ಭವಿಷ್ಯವನ್ನು ಗಾಳಿಗೆ ತೂರಿರುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಸಾಲು ಸಾಲು ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದು, ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪ್ರಖ್ಯಾತ ಹವಾಮಾನ ಮತ್ತು...

ಇನ್‌ಸ್ಟಾಮಾರ್ಟ್‌ನಲ್ಲಿ ಸಿಗಲಿದೆ ಎಲ್‌ಪಿಜಿ ಸಿಲಿಂಡರ್: ಬೆಂಗಳೂರಿನಲ್ಲಿ ಹೊಸ ಸೇವೆ ಆರಂಭ!

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಗ್ರಾಹಕರು ಇನ್ನು ಮುಂದೆ ಪ್ರಮುಖ ಕ್ವಿಕ್ ಕಾಮರ್ಸ್ ಸಂಸ್ಥೆಯಾದ 'ಇನ್‌ಸ್ಟಾಮಾರ್ಟ್' (Instamart) ಆ್ಯಪ್ ಮೂಲಕವೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್...

ಬಿಡದಿ ರೈತರ ಹೋರಾಟಕ್ಕೆ ಜಯ: ಬಲವಂತವಾಗಿ ಒಬ್ಬೇ ಒಬ್ಬ ರೈತರ ಜಮೀನನ್ನೂ ಪಡೆಯಲ್ಲ ಸಿಎಂ ಡಿ.ಕೆ.ಶಿವಕುಮಾರ್

"ಬಿಡದಿ ಸ್ಮಾರ್ಟ್ ಸಿಟಿ/ಟೌನ್ ಶಿಪ್ ಯೋಜನೆಯ ಹೆಸರಿನಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ ಅಥವಾ ರೈತ ಮಹಿಳೆಯರ ಜಮೀನನ್ನು ನಮ್ಮ ಸರ್ಕಾರ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ," ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿ ಟೌನ್‌ಶಿಪ್...

ಪಶ್ಚಿಮ ಬಂಗಾಳ: TMC ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿಗೆ ವಿಪಕ್ಷ ಸ್ಥಾನ ನೀಡಿದ್ದಕ್ಕೆ ನ್ಯಾಯಾಧೀಶರ ತೀವ್ರ ಆಕ್ಷೇಪ

ತೃಣಮೂಲ ಕಾಂಗ್ರೆಸ್‌ನ ಬಂಡಾಯ ಬಣದ ಮುಖ್ಯಸ್ಥ ರಿತಬ್ರತ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಲ್ಲಿ ಸ್ಪೀಕರ್ ರತೀಂದ್ರ ಬೋಸ್ ತೋರಿರುವ "ತರಾತುರಿ"ಯನ್ನು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ...

ಎರಡು ವರ್ಷಗಳಲ್ಲಿ 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ; ಇವರಲ್ಲಿ 193 ಮಂದಿ ವಿದೇಶಿಯರೆಂದು ಘೋಷಿತರು: ಅಸ್ಸಾಂ ಸರ್ಕಾರ

ಗುವಾಹಟಿ: ಕಳೆದ ಎರಡು ವರ್ಷಗಳ ಅವಧಿಯಲ್ಲಿ ಗಡೀಪಾರು, ಗಡಿಯಿಂದ ಆಚೆಗೆ ತಳ್ಳುವಿಕೆ (ಪುಶ್‌ಬ್ಯಾಕ್) ಅಥವಾ ಉಚ್ಚಾಟನೆ ಪ್ರಕ್ರಿಯೆಯ ಮೂಲಕ ಒಟ್ಟು 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ ಎಂದು ಅಸ್ಸಾಂ ಸರ್ಕಾರ ರಾಜ್ಯ ವಿಧಾನಸಭೆಗೆ...

17 ದಿನ, 9 ಕೆಜಿ ತೂಕ ಇಳಿಕೆ, ಸೋನಮ್ ವಾಂಗ್‌ಚುಕ್ ಆರೋಗ್ಯ ಸ್ಥಿತಿ ಗಂಭೀರ: ಉಪವಾಸ ಕೈಬಿಡುವಂತೆ ಅಖಿಲೇಶ್-ಕೇಜ್ರಿವಾಲ್ ಮನವಿ

ದೇಶದ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಭ್ರಷ್ಟಾಚಾರವನ್ನು ವಿರೋಧಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಖ್ಯಾತ ಪರಿಸರ ಕಾರ್ಯಕರ್ತ ಸೋನಮ್...

ಎನ್‌ಸಿಪಿಯ ಎರಡೂ ಬಣಗಳಲ್ಲೂ ಬಿರುಸಿನ ಬೆಳವಣಿಗೆ : ಬಿಜೆಪಿ ತೆಕ್ಕೆಗೆ ಮತ್ತೊಂದು ಪಕ್ಷ?

ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿಯ (ಎನ್‌ಸಿಪಿ) ಎರಡೂ ಬಣಗಳ ಮುಖ್ಯ ನಾಯಕರು ಮಂಗಳವಾರ (ಜು.14) ರಾತ್ರಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಈ ಸಭೆಯು ಶರದ್ ಪವಾರ್ ಅವರ...

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...