Homeಮುಖಪುಟಒಂದೇ ಮನೆಯಲ್ಲಿ 4271 ಮತದಾರರು!..ಮಹದೇವಪುರ ಬಳಿಕ ಮತ್ತೊಂದು ಭಾರೀ ಮತಗಳ್ಳತನ ಆರೋಪ

ಒಂದೇ ಮನೆಯಲ್ಲಿ 4271 ಮತದಾರರು!..ಮಹದೇವಪುರ ಬಳಿಕ ಮತ್ತೊಂದು ಭಾರೀ ಮತಗಳ್ಳತನ ಆರೋಪ

- Advertisement -
- Advertisement -

ಉತ್ತರ ಪ್ರದೇಶದ ಮತದಾರರ ಪಟ್ಟಿಯಲ್ಲಿ ದೊಡ್ಡ ಪ್ರಮಾಣದ ಅಕ್ರಮಗಳು ನಡೆದಿವೆ ಎಂದು ಆಮ್ ಆದ್ಮಿ ಪಕ್ಷದ (ಎಎಪಿ) ರಾಜ್ಯಸಭಾ ಸಂಸದ ಸಂಜಯ್ ಸಿಂಗ್ ಮಂಗಳವಾರ (ಸೆ.16) ಆರೋಪಿಸಿದ್ದು, ಮಹೋಬಾ ಜಿಲ್ಲೆಯ ಒಂದೇ ಮನೆಯಲ್ಲಿ 4,271 ಮತದಾರರು ದಾಖಲಾಗಿರುವುದು ಕಂಡುಬಂದಿದೆ ಎಂದಿದ್ದಾರೆ.

ನವದೆಹಲಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಂಜಯ್ ಸಿಂಗ್, “ನಿನ್ನೆ ನಾನು ಮಹೋಬಾ ಜಿಲ್ಲೆಯ ಎರಡು ಮನೆಗಳ ಬಗ್ಗೆ ತಿಳಿಸಿದ್ದೆ, ಅಲ್ಲಿ ಕ್ರಮವಾಗಿ 243 ಮತ್ತು 185 ಮತದಾರರಿದ್ದರು. ಇದು ಆಶ್ಚರ್ಯಕರವಾಗಿತ್ತು. ಆದರೆ, ಇಂದು ಒಂದೇ ಮನೆಯಲ್ಲಿ 4,271 ಮತದಾರರನ್ನು ದಾಖಲಿಸಿರುವ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಒಂದು ಮನೆಯಲ್ಲಿ 4,271 ಮತದಾರರಿದ್ದರೆ, ಆ ಕುಟುಂಬದಲ್ಲಿ ಸುಮಾರು 12,000 ಸದಸ್ಯರಿರಬೇಕು. ಇಂತಹ ದೊಡ್ಡ ಕುಟುಂಬವನ್ನು ಯಾರಾದರೂ ಹುಡುಕಬೇಕಿದೆ” ಎಂದು ವ್ಯಂಗ್ಯವಾಗಿ ಹೇಳಿದ್ದಾರೆ.

ಉತ್ತರ ಪ್ರದೇಶದಲ್ಲಿ ಬಿಜೆಪಿ ಮತ್ತು ಚುನಾವಣಾ ಆಯೋಗದ ಶಾಮೀಲಿನಿಂದ ‘ಮತಗಳ್ಳತನ’ ಪ್ರಾರಂಭವಾಯಿತು ಎಂದು ಸಿಂಗ್ ಆರೋಪಿಸಿದ್ದಾರೆ.

“4,271 ಮತದಾರರಿರುವ ಮಹೋಬಾದ ಆ ಮನೆಯ ಮಾಲೀಕರಿಗೆ ನಾನು ಹೇಳಲು ಬಯಸುವುದೇನೆಂದರೆ ನೀವು ಗ್ರಾಮ ಪಂಚಾಯತ್ ಚುನಾವಣೆಗೆ ಸ್ಪರ್ಧಿಸಿದರೆ ಸುಲಭವಾಗಿ ಗೆಲ್ಲುತ್ತೀರಿ. ನಿಮ್ಮ ಮನೆಯವರೇ ಮತ ಚಲಾಯಿಸಿದರೆ ಸಾಕು” ಎಂದು ಸಂಜಯ್ ಸಿಂಗ್ ವ್ಯಂಗ್ಯವಾಗಿ ಹೇಳಿದ್ದಾರೆ.

4,271 ಮತದಾರರನ್ನು ಹೊಂದಿರುವ ಆ ಮನೆ ಇರುವ ಗ್ರಾಮದಲ್ಲಿ ಒಟ್ಟು ಸುಮಾರು 16,000 ಮತದಾರರಿದ್ದಾರೆ ಎಂದು ಸಿಂಗ್ ಹೇಳಿಕೊಂಡಿದ್ದು, ಇದು ಮತ್ತಷ್ಟು ಚುನಾವಣಾ ಅಕ್ರಮದ ಅನುಮಾನ ಹುಟ್ಟು ಹಾಕಿದೆ.

ಬಿಹಾರದ ಭಾಗಲ್ಪುರದ ಭೂ ಹಂಚಿಕೆಗೆ ಸಂಬಂಧಿಸಿದಂತೆ ಆಡಳಿತಾರೂಢ ಬಿಜೆಪಿ-ಜೆಡಿ(ಯು) ಮೈತ್ರಿಕೂಟದ ವಿರುದ್ದ ವಾಗ್ದಾಳಿ ನಡೆಸಿದ ಸಂಜಯ್ ಸಿಂಗ್, ರಾಜ್ಯ ಸರ್ಕಾರ ಕೈಗಾರಿಕೋದ್ಯಮಿ ಗೌತಮ್ ಅದಾನಿ ಅವರ ಕಂಪನಿ ಸಮೂಹದ ಮೂರು ವಿದ್ಯುತ್ ಸ್ಥಾವರಗಳಿಗೆ 1,050 ಎಕರೆ ಭೂಮಿಯನ್ನು ಎಕರೆಗೆ 1 ರೂಪಾಯಿಯಂತೆ 25 ವರ್ಷಕ್ಕೆ ನೀಡಿದೆ ಎಂದು ಆರೋಪಿಸಿದ್ದಾರೆ.

“ಒಂದು ರೂಪಾಯಿಗೆ ಭೂಮಿ ನೀಡಿದ್ದು ಮಾತ್ರವಲ್ಲದೆ, ನೀವು ಉತ್ಪಾದಿಸುವ ಯಾವುದೇ ವಿದ್ಯುತ್ ಅನ್ನು ಮುಂದಿನ 25 ವರ್ಷಗಳವರೆಗೆ ಪ್ರತಿ ಯೂನಿಟ್‌ಗೆ 7 ರೂಪಾಯಿ ನೀಡಿ ಖರೀದಿಸಲಾಗುವುದು ಎಂಬ ಖಾತರಿಯನ್ನೂ ಅದಾನಿ ಸಮೂಹಕ್ಕೆ ಸರ್ಕಾರ ನೀಡಿದೆ. ಪ್ರತಿ ಯೂನಿಟ್‌ಗೆ 10,11 ಅಥವಾ 12 ರೂಪಾಯಿ ನೀಡಿ ವಿದ್ಯುತ್ ಖರೀದಿಸಲು ಜನರಿಗೆ ಸಾಧ್ಯವೇ? ಎಂಬುವುದು ಸರ್ಕಾರಕ್ಕೆ ಮುಖ್ಯವಲ್ಲ. ಪ್ರಧಾನ ಮಂತ್ರಿಯ ಸ್ನೇಹಿತನಿಗೆ ಯಾವುದೇ ತೊಂದರೆಯಾಗಬಾರದು” ಎಂದು ಸಿಂಗ್ ಟೀಕಿಸಿದ್ದಾರೆ.

“2012 ಮತ್ತು 2013ರ ನಡುವೆ, ಅಂದಿನ ಬಿಜೆಪಿ-ಜೆಡಿ (ಯು) ಸರ್ಕಾರ ಭೂಮಿಯನ್ನು ಸ್ವಾಧೀನಪಡಿಸಿಕೊಂಡಿತ್ತು ಮತ್ತು ಸಾರ್ವಜನಿಕ ಖಜಾನೆಯಿಂದ ರೈತರಿಗೆ ಪರಿಹಾರವನ್ನೂ ಪಾವತಿಸಿತ್ತು. ಅಂತಹ ಭೂಮಿಯನ್ನು ಸರ್ಕಾರ ಆದಾಯ ಗಳಿಸಲು ಹೆಚ್ಚಿನ ಬೆಲೆಗೆ ಮಾರಾಟ ಮಾಡಬಹುದಿತ್ತು. ಆದರೆ, ಅದಾನಿಗೆ ಎಕರೆಗೆ 1 ರೂ.ಗೆ 25 ವರ್ಷಕ್ಕೆ ನೀಡಲಾಗಿದೆ” ಎಂದು ಸಿಂಗ್ ಹೇಳಿದ್ದಾರೆ.

ಮತಗಳ್ಳತನದ ಬಗ್ಗೆ ಜುಲೈ 24ರಂದು ಸಂಸತ್ ಮುಂದೆ ಮೊದಲ ಹೇಳಿಕೆ ಕೊಟ್ಟಿದ್ದ ರಾಹುಲ್ ಗಾಂಧಿ, ಆಗಸ್ಟ್ 7ರಂದು ನವದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿ ತನ್ನ ಆರೋಪದ ಕುರಿತು ದಾಖಲೆ ಬಿಡುಗಡೆ ಮಾಡಿದ್ದರು.

ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ 2024ರ ಲೋಕಸಭೆ ಚುನಾವಣೆಯ ವೇಳೆ ಬರೋಬ್ಬರಿ 1 ಲಕ್ಷಕ್ಕೂ (1,00, 250) ಹೆಚ್ಚು ಮತಗಳ್ಳತನ ನಡೆದಿದೆ ಎಂದಿದ್ದರು. ಮಹದೇವಪುರದ ಮುನಿರೆಡ್ಡಿ ಗಾರ್ಡನ್‌ನಲ್ಲಿರುವ ಮನೆ ಸಂಖ್ಯೆ 35ರಲ್ಲಿ 80 ಮತದಾರರನ್ನು ನೋಂದಾಯಿಸಲಾಗಿದೆ ಎಂದು ನಿರ್ದಿಷ್ಟವಾಗಿ ಉಲ್ಲೇಖಿಸಿದ್ದರು.

ಮತಗಳ್ಳತನ ಆರೋಪ: ಚು. ಆಯೋಗ ರಾಹುಲ್ ಗಾಂಧಿ ವಿರುದ್ಧ ಕಿರುಚಾಡುವ ಬದಲು ತನಿಖೆಗೆ ಆದೇಶಿಸಬೇಕು: ಮಾಜಿ ಚು. ಆಯುಕ್ತ ಎಸ್. ವೈ ಖುರೈಶಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...