Homeಮುಖಪುಟಒಂದೇ ಮನೆಯಲ್ಲಿ 4271 ಮತದಾರರು!..ಮಹದೇವಪುರ ಬಳಿಕ ಮತ್ತೊಂದು ಭಾರೀ ಮತಗಳ್ಳತನ ಆರೋಪ

ಒಂದೇ ಮನೆಯಲ್ಲಿ 4271 ಮತದಾರರು!..ಮಹದೇವಪುರ ಬಳಿಕ ಮತ್ತೊಂದು ಭಾರೀ ಮತಗಳ್ಳತನ ಆರೋಪ

- Advertisement -
- Advertisement -

ಉತ್ತರ ಪ್ರದೇಶದ ಮತದಾರರ ಪಟ್ಟಿಯಲ್ಲಿ ದೊಡ್ಡ ಪ್ರಮಾಣದ ಅಕ್ರಮಗಳು ನಡೆದಿವೆ ಎಂದು ಆಮ್ ಆದ್ಮಿ ಪಕ್ಷದ (ಎಎಪಿ) ರಾಜ್ಯಸಭಾ ಸಂಸದ ಸಂಜಯ್ ಸಿಂಗ್ ಮಂಗಳವಾರ (ಸೆ.16) ಆರೋಪಿಸಿದ್ದು, ಮಹೋಬಾ ಜಿಲ್ಲೆಯ ಒಂದೇ ಮನೆಯಲ್ಲಿ 4,271 ಮತದಾರರು ದಾಖಲಾಗಿರುವುದು ಕಂಡುಬಂದಿದೆ ಎಂದಿದ್ದಾರೆ.

ನವದೆಹಲಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಂಜಯ್ ಸಿಂಗ್, “ನಿನ್ನೆ ನಾನು ಮಹೋಬಾ ಜಿಲ್ಲೆಯ ಎರಡು ಮನೆಗಳ ಬಗ್ಗೆ ತಿಳಿಸಿದ್ದೆ, ಅಲ್ಲಿ ಕ್ರಮವಾಗಿ 243 ಮತ್ತು 185 ಮತದಾರರಿದ್ದರು. ಇದು ಆಶ್ಚರ್ಯಕರವಾಗಿತ್ತು. ಆದರೆ, ಇಂದು ಒಂದೇ ಮನೆಯಲ್ಲಿ 4,271 ಮತದಾರರನ್ನು ದಾಖಲಿಸಿರುವ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಒಂದು ಮನೆಯಲ್ಲಿ 4,271 ಮತದಾರರಿದ್ದರೆ, ಆ ಕುಟುಂಬದಲ್ಲಿ ಸುಮಾರು 12,000 ಸದಸ್ಯರಿರಬೇಕು. ಇಂತಹ ದೊಡ್ಡ ಕುಟುಂಬವನ್ನು ಯಾರಾದರೂ ಹುಡುಕಬೇಕಿದೆ” ಎಂದು ವ್ಯಂಗ್ಯವಾಗಿ ಹೇಳಿದ್ದಾರೆ.

ಉತ್ತರ ಪ್ರದೇಶದಲ್ಲಿ ಬಿಜೆಪಿ ಮತ್ತು ಚುನಾವಣಾ ಆಯೋಗದ ಶಾಮೀಲಿನಿಂದ ‘ಮತಗಳ್ಳತನ’ ಪ್ರಾರಂಭವಾಯಿತು ಎಂದು ಸಿಂಗ್ ಆರೋಪಿಸಿದ್ದಾರೆ.

“4,271 ಮತದಾರರಿರುವ ಮಹೋಬಾದ ಆ ಮನೆಯ ಮಾಲೀಕರಿಗೆ ನಾನು ಹೇಳಲು ಬಯಸುವುದೇನೆಂದರೆ ನೀವು ಗ್ರಾಮ ಪಂಚಾಯತ್ ಚುನಾವಣೆಗೆ ಸ್ಪರ್ಧಿಸಿದರೆ ಸುಲಭವಾಗಿ ಗೆಲ್ಲುತ್ತೀರಿ. ನಿಮ್ಮ ಮನೆಯವರೇ ಮತ ಚಲಾಯಿಸಿದರೆ ಸಾಕು” ಎಂದು ಸಂಜಯ್ ಸಿಂಗ್ ವ್ಯಂಗ್ಯವಾಗಿ ಹೇಳಿದ್ದಾರೆ.

4,271 ಮತದಾರರನ್ನು ಹೊಂದಿರುವ ಆ ಮನೆ ಇರುವ ಗ್ರಾಮದಲ್ಲಿ ಒಟ್ಟು ಸುಮಾರು 16,000 ಮತದಾರರಿದ್ದಾರೆ ಎಂದು ಸಿಂಗ್ ಹೇಳಿಕೊಂಡಿದ್ದು, ಇದು ಮತ್ತಷ್ಟು ಚುನಾವಣಾ ಅಕ್ರಮದ ಅನುಮಾನ ಹುಟ್ಟು ಹಾಕಿದೆ.

ಬಿಹಾರದ ಭಾಗಲ್ಪುರದ ಭೂ ಹಂಚಿಕೆಗೆ ಸಂಬಂಧಿಸಿದಂತೆ ಆಡಳಿತಾರೂಢ ಬಿಜೆಪಿ-ಜೆಡಿ(ಯು) ಮೈತ್ರಿಕೂಟದ ವಿರುದ್ದ ವಾಗ್ದಾಳಿ ನಡೆಸಿದ ಸಂಜಯ್ ಸಿಂಗ್, ರಾಜ್ಯ ಸರ್ಕಾರ ಕೈಗಾರಿಕೋದ್ಯಮಿ ಗೌತಮ್ ಅದಾನಿ ಅವರ ಕಂಪನಿ ಸಮೂಹದ ಮೂರು ವಿದ್ಯುತ್ ಸ್ಥಾವರಗಳಿಗೆ 1,050 ಎಕರೆ ಭೂಮಿಯನ್ನು ಎಕರೆಗೆ 1 ರೂಪಾಯಿಯಂತೆ 25 ವರ್ಷಕ್ಕೆ ನೀಡಿದೆ ಎಂದು ಆರೋಪಿಸಿದ್ದಾರೆ.

“ಒಂದು ರೂಪಾಯಿಗೆ ಭೂಮಿ ನೀಡಿದ್ದು ಮಾತ್ರವಲ್ಲದೆ, ನೀವು ಉತ್ಪಾದಿಸುವ ಯಾವುದೇ ವಿದ್ಯುತ್ ಅನ್ನು ಮುಂದಿನ 25 ವರ್ಷಗಳವರೆಗೆ ಪ್ರತಿ ಯೂನಿಟ್‌ಗೆ 7 ರೂಪಾಯಿ ನೀಡಿ ಖರೀದಿಸಲಾಗುವುದು ಎಂಬ ಖಾತರಿಯನ್ನೂ ಅದಾನಿ ಸಮೂಹಕ್ಕೆ ಸರ್ಕಾರ ನೀಡಿದೆ. ಪ್ರತಿ ಯೂನಿಟ್‌ಗೆ 10,11 ಅಥವಾ 12 ರೂಪಾಯಿ ನೀಡಿ ವಿದ್ಯುತ್ ಖರೀದಿಸಲು ಜನರಿಗೆ ಸಾಧ್ಯವೇ? ಎಂಬುವುದು ಸರ್ಕಾರಕ್ಕೆ ಮುಖ್ಯವಲ್ಲ. ಪ್ರಧಾನ ಮಂತ್ರಿಯ ಸ್ನೇಹಿತನಿಗೆ ಯಾವುದೇ ತೊಂದರೆಯಾಗಬಾರದು” ಎಂದು ಸಿಂಗ್ ಟೀಕಿಸಿದ್ದಾರೆ.

“2012 ಮತ್ತು 2013ರ ನಡುವೆ, ಅಂದಿನ ಬಿಜೆಪಿ-ಜೆಡಿ (ಯು) ಸರ್ಕಾರ ಭೂಮಿಯನ್ನು ಸ್ವಾಧೀನಪಡಿಸಿಕೊಂಡಿತ್ತು ಮತ್ತು ಸಾರ್ವಜನಿಕ ಖಜಾನೆಯಿಂದ ರೈತರಿಗೆ ಪರಿಹಾರವನ್ನೂ ಪಾವತಿಸಿತ್ತು. ಅಂತಹ ಭೂಮಿಯನ್ನು ಸರ್ಕಾರ ಆದಾಯ ಗಳಿಸಲು ಹೆಚ್ಚಿನ ಬೆಲೆಗೆ ಮಾರಾಟ ಮಾಡಬಹುದಿತ್ತು. ಆದರೆ, ಅದಾನಿಗೆ ಎಕರೆಗೆ 1 ರೂ.ಗೆ 25 ವರ್ಷಕ್ಕೆ ನೀಡಲಾಗಿದೆ” ಎಂದು ಸಿಂಗ್ ಹೇಳಿದ್ದಾರೆ.

ಮತಗಳ್ಳತನದ ಬಗ್ಗೆ ಜುಲೈ 24ರಂದು ಸಂಸತ್ ಮುಂದೆ ಮೊದಲ ಹೇಳಿಕೆ ಕೊಟ್ಟಿದ್ದ ರಾಹುಲ್ ಗಾಂಧಿ, ಆಗಸ್ಟ್ 7ರಂದು ನವದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿ ತನ್ನ ಆರೋಪದ ಕುರಿತು ದಾಖಲೆ ಬಿಡುಗಡೆ ಮಾಡಿದ್ದರು.

ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ 2024ರ ಲೋಕಸಭೆ ಚುನಾವಣೆಯ ವೇಳೆ ಬರೋಬ್ಬರಿ 1 ಲಕ್ಷಕ್ಕೂ (1,00, 250) ಹೆಚ್ಚು ಮತಗಳ್ಳತನ ನಡೆದಿದೆ ಎಂದಿದ್ದರು. ಮಹದೇವಪುರದ ಮುನಿರೆಡ್ಡಿ ಗಾರ್ಡನ್‌ನಲ್ಲಿರುವ ಮನೆ ಸಂಖ್ಯೆ 35ರಲ್ಲಿ 80 ಮತದಾರರನ್ನು ನೋಂದಾಯಿಸಲಾಗಿದೆ ಎಂದು ನಿರ್ದಿಷ್ಟವಾಗಿ ಉಲ್ಲೇಖಿಸಿದ್ದರು.

ಮತಗಳ್ಳತನ ಆರೋಪ: ಚು. ಆಯೋಗ ರಾಹುಲ್ ಗಾಂಧಿ ವಿರುದ್ಧ ಕಿರುಚಾಡುವ ಬದಲು ತನಿಖೆಗೆ ಆದೇಶಿಸಬೇಕು: ಮಾಜಿ ಚು. ಆಯುಕ್ತ ಎಸ್. ವೈ ಖುರೈಶಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ಕೇಂದ್ರ ಸರ್ಕಾರದ SIRಗೆ ಕೌಂಟರ್‌, ಮಹತ್ವದ ಆದೇಶಗಳನ್ನು ಹೊರಡಿಸಿದ ಕರ್ನಾಟಕ ಸರ್ಕಾರ

ಕೇಂದ್ರ ಸರ್ಕಾರ ಚುನಾವಣಾ ಆಯೋಗದ ಮೂಲಕ ನಡೆಸುತ್ತಿರುವ ವಿಶೇಷ ಮತದಾರ ಪಟ್ಟಿ ಪರಿಷ್ಕರಣೆ ಕುರಿತಂತೆ ದೇಶದಾದ್ಯಂತ ಭಾರೀ ವಿರೋಧ ವ್ಯಕ್ತವಾಗಿದ್ದವು. ಸುಪ್ರೀಂ ಕೋರ್ಟ್‌ ಆ ಪ್ರಕ್ರಿಯೆಯನ್ನು ಮಾನ್ಯ ಮಾಡಿತ್ತು. ಕರ್ನಾಟಕದಲ್ಲಿ ನಾಳೆಯಿಂದ (ಜೂನ್.30)‌...

ರಾಮಮಂದಿರದ ದೇಣಿಗೆ ಕಳ್ಳತನ: ಆರೋಪಿಗಳ ಪರ ಯಾವುದೇ ವಕೀಲರು ವಾದಿಸುವಂತಿಲ್ಲ , ವಾದಿಸಿದರೆ ರೂ. 5ಲಕ್ಷ ದಂಡ

ರಾಮಮಂದಿರದ ದೇಣಿಗೆ ಕಳ್ಳತನ ಪ್ರಕರಣದಲ್ಲಿ ಬಂಧಿತರಾಗಿರುವ ಆರೋಪಿಗಳ ಪರವಾಗಿ ಯಾವುದೇ ವಕೀಲರು ನ್ಯಾಯಾಲಯದಲ್ಲಿ ವಕಾಲತ್ತು ವಹಿಸಬಾರದು ಎಂದು ಅಯೋಧ್ಯೆ ಬಾರ್ ಅಸೋಸಿಯೇಷನ್ ಮಹತ್ವದ ನಿರ್ಧಾರ ಕೈಗೊಂಡಿದೆ. ಒಂದು ವೇಳೆ ಸಂಘದ ಈ ತೀರ್ಮಾನವನ್ನು...

ವೋಟರ್ ಲಿಸ್ಟ್‌ನಿಂದ ಹೆಸರು ಡಿಲೀಟ್: ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ಬ್ರೇಕ್! ಬಂಗಾಳ ಸಿಎಂ ಗೆ ಪತ್ರ ಬರೆದ ಕೇರಳ ಸಿಎಂ

ಹಿರಿಯ ಪತ್ರಕರ್ತ ಮತ್ತು ‘ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ರಾಮದಾಸ್ ಅವರ ಪಾಸ್‌ಪೋರ್ಟ್ ನವೀಕರಣ ವಿವಾದವು ಸೋಮವಾರ ಮತ್ತಷ್ಟು ತೀವ್ರಗೊಂಡಿದೆ. ಈ ಸಮಸ್ಯೆಯನ್ನು ತಕ್ಷಣವೇ ಬಗೆಹರಿಸಲು ಮಧ್ಯಪ್ರವೇಶಿಸಬೇಕು ಎಂದು ಕೋರಿ...

ರಾಮ ಮಂದಿರ ದೇಣಿಗೆ ಹಗರಣ: ಅರ್ಜಿ ವಿಚಾರಣೆ ಕೆಲ ದಿನ ತಡವಾದರೆ ‘ಆಕಾಶವೇನೂ ಉರುಳಿ ಬೀಳುವುದಿಲ್ಲ’ ಎಂದ ಸುಪ್ರೀಂ ಕೋರ್ಟ್

ಅಯೋಧ್ಯೆಯ ರಾಮ ಮಂದಿರಕ್ಕೆ ಭಕ್ತರಿಂದ ಬಂದ ದೇಣಿಗೆ ಹಣ ದುರುಪಯೋಗ ಆಗಿರುವ ಕುರಿತು ಸಿಬಿಐ ನೇತೃತ್ವದ ಬಹು-ಸಂಸ್ಥೆಗಳ ಜಂಟಿ ತನಿಖೆಗೆ ಆದೇಶಿಸಬೇಕೆಂದು ಕೋರಿ ಸಲ್ಲಿಕೆಯಾಗಿದ್ದ ಅರ್ಜಿಗಳ ತುರ್ತು ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸೋಮವಾರ...

ಕಾಕ್ರೋಚ್ ಪಾರ್ಟಿ ಧರಣಿ : ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ ಸೋನಮ್ ವಾಂಗ್‌ಚುಕ್

ನೀಟ್ ಸೇರಿದಂತೆ ವಿವಿಧ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ, ಹಲವು ಅಕ್ರಮ, ಶೈಕ್ಷಣಿಕ ಅವ್ಯವಸ್ಥೆಗಳ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಕಾಕ್ರೋಚ್ ಜನತಾ...

SIR ವೇಳೆ ಮತಪಟ್ಟಿಯಿಂದ ಹೆಸರು ಡಿಲೀಟ್: ‘ದಿ ಟೆಲಿಗ್ರಾಫ್’ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ತಡೆ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ವೇಳೆ ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಿದ ಕಾರಣ ಪಾಸ್‌ಪೋರ್ಟ್ ನವೀಕರಿಸಲು ಆಗುತ್ತಿಲ್ಲ ಎಂದು ದೇಶದ ಖ್ಯಾತ ಇಂಗ್ಲಿಷ್ ದಿನಪತ್ರಿಕೆ ‘ದಿ ಟೆಲಿಗ್ರಾಫ್’ನ ಮಾಜಿ ಸಂಪಾದಕ ಆರ್. ರಾಜಗೋಪಾಲ್...

‘ಈಗಲೂ ಮಮತಾ ಬ್ಯಾನರ್ಜಿಯೇ ನಮ್ಮ ನಾಯಕಿ’ : ಟಿಎಂಸಿ ಬಂಡಾಯ ಬಣದ ಅಧ್ಯಕ್ಷ ಅರೂಪ್ ರಾಯ್ ಹೇಳಿಕೆ

"ಮಮತಾ ಬ್ಯಾನರ್ಜಿ ಅವರೇ ಇಂದಿಗೂ ನಮ್ಮ ನಾಯಕಿ. ಅವರೇ ಈ ಪಕ್ಷವನ್ನು ಸ್ಥಾಪಿಸಿದವರು. ಅವರೇ ನಮ್ಮ ಪಕ್ಷದ ಕಾಂದಾರಿ (ಮಾರ್ಗದರ್ಶಕರು ಅಥವಾ ಪಕ್ಷವನ್ನು ಮುನ್ನಡೆಸುವವರು). ಮಮತಾ ಬ್ಯಾನರ್ಜಿ ಅವರಿಂದಾಗಿಯೇ ನಾವು ಈ ಪಕ್ಷವನ್ನು...

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...